ಫೆ.1ರಂದು ಪುತ್ತೂರಿನಲ್ಲಿ ದ್ವಾರಕೋತ್ಸವ–2026; ಸನ್ಮಾನ, ಸಾಂಸ್ಕೃತಿಕ ವೈಭವ
ಪುತ್ತೂರು: ದ್ವಾರಕಾ ಪ್ರತಿಷ್ಠಾನ ಪುತ್ತೂರು ಇದರ ವತಿಯಿಂದ ದ್ವಾರಕೋತ್ಸವ-೨೦೨೬ ಕಾರ್ಯಕ್ರಮವು ಫೆ.೧ ರಂದು ಮುಕ್ರಂಪಾಡಿ ಗೋಕುಲ ಬಡಾವಣೆಯಲ್ಲಿ ನಡೆಯಲಿದೆ ಎಂದು ದವಾರಕಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಾರಕೋತ್ಸವವು ವರ್ಷಂಪ್ರತಿ ಆಚರಿಸುತ್ತಿರುವ ಗ್ರಾಹಕರ ಹಾಗೂ ಸಮಾಜದ ಸಕಲ ಬಂಧುಗಳ ಸಮ್ಮಿಲನ ದ್ವಾರಕೋತ್ಸವದಲ್ಲಿ ಸಾಧಕರಿಗೆ ಸನ್ಮಾನ, ಕಲಾಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ, ಬೆಂಗಳೂರಿನ ಭಾರತ ಸಂಸ್ಕೃತಿ ಪ್ರತಿಷ್ಠಾನ ನಡೆಸುತ್ತಿರುವ ಎಳೆಯರ ರಾಮಾಯಣ, ಕಿಶೋರ ಭಾರತ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನದೊಂದಿಗೆ ನಡೆಯಲಿದೆ…