ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಮತ್ತೋರ್ವ ಪ್ರಮುಖ ಆರೋಪಿಗೆ ಮಧ್ಯಂತರ ಜಾಮೀನು

ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಝಾಕೀರ್ ಸವಣೂರು (35) ಜಾಮೀನು ಪಡೆದ ಆರೋಪಿಯಾಗಿದ್ದು, ಪ್ರಕರಣದ 18ನೇ ಆರೋಪಿಯಾಗಿ ಗುರುತಿಸಲಾಗಿದ್ದಾನೆ. ಪ್ರವೀಣ್ ನೆಟ್ಟಾರ್ ಹತ್ಯೆ ಸಂಚಿನಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪಿಗಳ ಪೈಕಿ ಈತನೂ ಒಬ್ಬನಾಗಿದ್ದಾನೆ. ಪ್ರಕರಣದ ತನಿಖೆ ಆರಂಭವಾದ ಸಂದರ್ಭದಲ್ಲೇ ಬಂಧಿಸಲ್ಪಟ್ಟ ಪ್ರಮುಖ ಶಂಕಿತರಲ್ಲಿ ಝಾಕೀರ್ ಸವಣೂರು ಕೂಡ ಸೇರಿದ್ದ. 2022ರ ಜುಲೈ 28ರಂದು ಬೆಳ್ಳಾರೆಯ ಶಫೀಕ್ ಜೊತೆ…

Read More

ಕಾಸರಗೋಡಿನ ಮಣ್ಣಿನ ಮಗನಿಗೆ ಜಿಲ್ಲೆಯ ‘ಖಾಕಿ’ ಕಿರೀಟ: ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಪಿ. ನಿತಿನ್ ರಾಜ್

ಕಾಸರಗೋಡು: ಕಾಸರಗೋಡು ಜಿಲ್ಲೆ ರಚನೆಯಾಗಿ 44 ವರ್ಷಗಳ ಸುದೀರ್ಘ ಅವಧಿಯ ನಂತರ, ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಕಾಸರಗೋಡಿನವರೇ ಆದ ಐಪಿಎಸ್ ಅಧಿಕಾರಿಯೊಬ್ಬರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಅಪರೂಪದ ವಿದ್ಯಮಾನ ಕಾಸರಗೋಡಿನ ಜನತೆಯಲ್ಲಿ ವಿಶೇಷ ಸಂಭ್ರಮ ಹಾಗೂ ಹೆಮ್ಮೆಯನ್ನು ಮೂಡಿಸಿದೆ. ​ಕಾಞಂಗಾಡಿನ ರಾವಣೇಶ್ವರಂನ ಕಳರಿಕಾಲ್ ನಿವಾಸಿ ಪಿ. ನಿತಿನ್ ರಾಜ್, ಈಗ ಕಾಸರಗೋಡಿನ ನೂತನ ಪೊಲೀಸ್ ಮುಖ್ಯಸ್ಥ. 2018ರ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ 210ನೇ ರ‍್ಯಾಂಕ್ ಗಳಿಸಿ ಐಪಿಎಸ್ ಪಡೆದ ಇವರು, ಈ…

Read More

ತಮಿಳುನಾಡು ಸಿಎಂ ವಿಜಯ್‌ಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ: ಕರವೇ ಕಾರ್ಯಕರ್ತರ ವಶ

ಉಡುಪಿ: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಕಾರ್ಯಕರ್ತರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದರು. ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಕೊಲ್ಲೂರು ಭೇಟಿ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಬಲಾಯಿಪಾದೆ ಪ್ರದೇಶದಲ್ಲಿ ಕರವೇ ಉಡುಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದರು. ಆದರೆ ವಿಜಯ್…

Read More

ರೂಪೇಶ್ ಶೆಟ್ಟಿ ಅಭಿನಯದ ಹೊಸ ಕನ್ನಡ ಸಿನಿಮಾ “ಹಲ್ಕಾ ಡಾನ್‌”

ಕರಾವಳಿಯ ನಗುಮೊಗದ ಹೀರೋ ರಾಕ್ ಸ್ಟಾರ್ ರೂಪೇಶ್‌ ಶೆಟ್ಟಿ ಅವರು ಬಿಗ್‌ಬಾಸ್‌ ವಿನ್ನರ್‌ ಆದ ಬಳಿಕ ಬಹುಬೇಡಿಕೆಯ ನಟ, ನಿರೂಪಕರಾಗಿ ಗುರುತಿಸಿಕೊಂಡಿದ್ದು, ತಾನು ಕೈಯಾಡಿಸಿದ ಪ್ರತಿಯೊಂದರಲ್ಲೂ ಸಕ್ಸಸ್‌ ಆಗುತ್ತಿರುವುದು ಅವರ ಪ್ರತಿಭೆಗೆ ಸಾಕ್ಷಿ. ಐಪಿಎಲ್‌ ಸಂದರ್ಭದಲ್ಲೂ ಟೀವಿ ಚಾನೆಲ್‌ನಲ್ಲಿ ಕಾಮೆಂಟರರ್‌ ಆಗಿ ಬ್ಯುಸಿಯಾಗಿದ್ದ ರೂಪೇಶ್‌ ಶೆಟ್ಟಿ, ಈಗ ಸುಲಭದಲ್ಲಿ ಯಾರ ಕೈಗೂ ಸಿಗದಷ್ಟು ಕೆಲಸಕಾರ್ಯಗಳಲ್ಲಿ ವ್ಯಸ್ತರಾಗಿದ್ದಾರೆ. ಅವರ ನಟನೆಯ “ಜೈ” ಸಿನಿಮಾವಂತೂ ಸೂಪರ್‌ ಹಿಟ್‌ ಆಗಿ, ನೂರು ದಿನಗಳನ್ನು ಪೂರೈಸಿ ನಿರ್ಮಾಪಕರಿಗೆ ಖುಷಿ ಕೊಟ್ಟಿದೆ. ಒಂದು ಹೊಸ…

Read More

ಧರ್ಮಸ್ಥಳ ಪ್ರಕರಣ: ಗಾಳಿಮಾತುಗಳನ್ನು ನಂಬದಿರಿ, ಶೀಘ್ರದಲ್ಲೇ ಸ್ಪಷ್ಟನೆ ನೀಡುತ್ತೇನೆ – ಪ್ರಕಾಶ್ ರಾಜ್

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರು ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆಯಲ್ಲಿ ಬಹುಭಾಷಾ ನಟ Prakash Raj ಪ್ರತಿಕ್ರಿಯೆ ನೀಡಿದ್ದು, ಗಾಳಿಮಾತುಗಳು ಹಾಗೂ ದುರುದ್ದೇಶಪೂರ್ವಕವಾಗಿ ಹರಡಲಾಗುತ್ತಿರುವ ಊಹಾಪೋಹಗಳನ್ನು ನಂಬದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಗ್ಗೆ ಕೆಲವು ಸುದ್ದಿಗಳು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ. “ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಕೋಟ್ಯಂತರ ಭಕ್ತರ ನಂಬಿಕೆಗೆ ಸಂಬಂಧಿಸಿದ…

Read More

ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ

ಮಳೆಗಾಲದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳು ಹಾಗೂ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾಡಳಿತ ಮಹತ್ವದ ಕ್ರಮ ಕೈಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ವ್ಯಾಪ್ತಿಯ ಆಗುಂಬೆ ಘಾಟಿ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಹೇರಿದೆ. ಜೂನ್ 15ರಿಂದ ಜಾರಿಗೆ ಬರುವಂತೆ ಮಳೆಗಾಲ ಮುಗಿಯುವವರೆಗೆ ಜಲ್ಲಿ, ಕಲ್ಲು ಹಾಗೂ ಬೃಹತ್ ಸರಕು ಸಾಗಣೆ ಮಾಡುವ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶದಲ್ಲಿ ತಿಳಿಸಿದ್ದಾರೆ. ನಿಷೇಧಿತ ವಾಹನಗಳು ಪರ್ಯಾಯ ಮಾರ್ಗಗಳನ್ನು…

Read More

ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್: ಮಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಗುರುವಾರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದರು. ಕೊಲ್ಲೂರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲು ವಿಜಯ್ ಆಗಮಿಸಿದ್ದು, ಅವರ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ತಮಿಳುನಾಡಿನ ರಾಜಕೀಯ ಹಾಗೂ ಸಿನಿರಂಗದ ಪ್ರಮುಖ ವ್ಯಕ್ತಿಗಳಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು ಬಹುಕಾಲದಿಂದಲೂ ಆಕರ್ಷಣೀಯ ಧಾರ್ಮಿಕ ಕೇಂದ್ರವಾಗಿದ್ದು,…

Read More

ಪೂಜಾ ಆಚಾರ್ಯ–ಕೃಷ್ಣ ಜೆ. ರಾವ್ ವಿವಾದಕ್ಕೆ ಸಂಧಾನದ ನಿರೀಕ್ಷೆ: ಜೂನ್ 19ರ ಮಧ್ಯಸ್ಥಿಕೆ ಸಭೆಯಲ್ಲಿ ಸುಖಾಂತ್ಯದ ವಿಶ್ವಾಸ

ಮಂಗಳೂರು, ಜೂ.12: ಪೂಜಾ ಆಚಾರ್ಯ ಹಾಗೂ ಕೃಷ್ಣ ಜೆ. ರಾವ್ ನಡುವಿನ ವಿವಾದಿತ ಪ್ರಕರಣಕ್ಕೆ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳುವ ಪ್ರಯತ್ನಗಳು ನಡೆಯುತ್ತಿದ್ದು, ಜೂನ್ 19ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯಲಿರುವ ಮಧ್ಯಸ್ಥಿಕೆ (ಮೀಡಿಯೇಶನ್) ಸಭೆಯ ಮೂಲಕ ಪ್ರಕರಣ ಸುಖಾಂತ್ಯ ಕಾಣುವ ವಿಶ್ವಾಸವಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆ.ಪಿ. ನಂಜುಂಡಿ ತಿಳಿಸಿದ್ದಾರೆ. ಅಂದೇ ಮಗುವಿನ ನಾಮಕರಣ ಕಾರ್ಯಕ್ರಮ ನಡೆಯುವ ಸಾಧ್ಯತೆಯೂ ಇದೆ ಎಂದು ಅವರು ಹೇಳಿದ್ದಾರೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮದುವೆಗೆ…

Read More

ಉಚಿತ ಬಸ್ ಸೇವೆ ಮಂಜೇಶ್ವರ ವ್ಯಾಪ್ತಿಗೆ ಇಲ್ಲ: ಶಾಸಕರ ವಿರುದ್ಧ ಬಿಜೆಪಿ ವಾಗ್ದಾಳಿ

ಮಿಯಪದವು, ಜೂ.12: ಕೇರಳ ಸರ್ಕಾರದ ಉಚಿತ ಬಸ್ ಸೇವೆ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಜನರಿಗೆ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ ಎಂದು ಆರೋಪಿಸಿರುವ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸ್ಥಳೀಯ ಶಾಸಕರು ಬೇಜವಾಬ್ದಾರಿ ತೋರಿದ್ದಾರೆ ಎಂದು ಟೀಕಿಸಿದೆ. ಮಂಡಲ ಸಭೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ಅಧಿಕಾರಕ್ಕೆ ಬರಲು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಶಾಸಕರು ವಿಫಲರಾಗಿದ್ದು, ಮಂಜೇಶ್ವರ ಜನತೆಗೆ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ ಎಂದು ಆರೋಪಿಸಿದರು. ಪ್ರಾದೇಶಿಕ ಬಸ್‌ಗಳಲ್ಲಿ ಮಾತ್ರ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಾಸರಗೋಡು–ಮಂಗಳೂರು…

Read More

ಜೂನ್ 13ರವರೆಗೆ ಶ್ರೀ ಗ್ರಂಥರಾಜ ಜ್ಞಾನೇಶ್ವರಿ ಸಾಮುದಾಯಿಕ ಪಾರಾಯಣ ಹಾಗೂ ಅಖಂಡ ಹರಿನಾಮ ಸಪ್ತಾಹ…. !

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದಲ್ಲಿರುವ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದಲ್ಲಿ ಜೂನ್ 13ರವರೆಗೆ ನಡೆಯಲಿರುವ ಶ್ರೀ ಗ್ರಂಥರಾಜ ಜ್ಞಾನೇಶ್ವರಿ ಸಾಮುದಾಯಿಕ ಪಾರಾಯಣ ಹಾಗೂ ಅಖಂಡ ಹರಿನಾಮ ಸಪ್ತಾಹಕ್ಕೆ ಬಹಳ ವಿಜೃಂಣೆಯಿಂದ ನಡೆಯುತ್ತಿದೆ . ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರ ಸಾನ್ನಿಧ್ಯದಲ್ಲಿ, ಪಂಡರಾಪುರದ ಶ್ರೀ ಚೈತನ್ಯ ಸದ್ಗುರು ಹರಿಪ್ರಸಾದ ಶರದಸ್ವಾಮಿ ಶಿವೂರಕರ ಅವರ ನೇತೃತ್ವದಲ್ಲಿ ಅಧಿಕ ಮಾಸದ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ…

Read More
error: Content is protected !!