ಮಂಜೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಪರ ರಾಜೇಶ್ ನಾಯ್ಕ್ ಮನೆಮನೆಗೆ ಮತಯಾಚನೆ

ಮಂಜೇಶ್ವರ, ಎಪ್ರಿಲ್ 9ರಂದು ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು Bharatiya Janata Party (ಬಿಜೆಪಿ) ಪರ ಪ್ರಚಾರ ಚಟುವಟಿಕೆಗಳು ತೀವ್ರಗೊಂಡಿವೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಕೆ. ಅವರ ಪರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಪುತ್ತಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಗಡಿಮುಗೇರು ಮತ್ತು ದೇಲಂಪಾಡಿ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಮತಯಾಚನೆ ನಡೆಸಿದರು. ಈ ವೇಳೆ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, “ಈ ಬಾರಿ ನಿಮ್ಮ ಮತವನ್ನು ಬದಲಾಯಿಸಿ ನೋಡಿ, ಬದಲಾವಣೆಯ ಹೊಸ…

Read More

ಜನವಿರೋಧಿ ನೀತಿಗೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಬೈಂದೂರು, ಏಪ್ರಿಲ್ 3: ರಾಜ್ಯ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ Bharatiya Janata Party (ಬಿಜೆಪಿ) ಕಾರ್ಯಕರ್ತರು ಗುರುವಾರ ಗ್ರಾಮ ಪಂಚಾಯತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸರ್ಕಾರವು ಜನವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಬೈಂದೂರು ಮಂಡಲದ ವತಿಯಿಂದ ನಡೆದ ಪ್ರತಿಭಟನೆಯನ್ನು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ನೇತೃತ್ವ ವಹಿಸಿದ್ದರು. ಈ ವೇಳೆ ಪಿಡಿಒ ಮೂಲಕ…

Read More

ರಸ್ತೆ ಬದಿ ತ್ಯಾಜ್ಯ ಎಸೆಯುವವರಿಗೆ ದಂಡ, ತಪ್ಪಿದ್ದಲ್ಲಿ ಎಫ್.ಐ.ಆರ್: ಜಿ.ಪಂ ಸಿಇಒ ಸೂಚನೆ

ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವೀಡಿಯೋ ಸಭೆ ನಡೆಯಿತು. ಗ್ರಾಮ ಪಂಚಾಯತ್‍ಗಳÀ ವ್ಯಾಪ್ತಿಯ ರಸ್ತೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವ ಮತ್ತು ಸುಡುವ ಪ್ರಕರಣಗಳನ್ನು ಗುರುತಿಸಿ ದಂಡ ವಿಧಿಸಬೇಕು. ದಂಡ ಪಾವತಿಸದೇ ಇದ್ದಲ್ಲಿ ಸ್ಥಳೀಯ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲು ಸೂಚಿಸಿದರು….

Read More

ಕನ್ನಡದ ಸಾಮರಸ್ಯದ ನೆಲೆಗಳು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರಿಂದ ಭವ್ಯ ಲೋಕಾರ್ಪಣೆ – ಮಂಗಳೂರಿನಲ್ಲಿ ಪೂರ್ವ ಸಿದ್ಧತಾ ಸಭೆ ಯಶಸ್ವಿ

ದಿನಾಂಕ 13/04/2026 ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ “ಕನ್ನಡದ ಸಾಮರಸ್ಯದ ನೆಲೆಗಳು” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾಗುತ್ತಿರುವ ಮಹತ್ವದ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಭವ್ಯವಾಗಿ ನಡೆಯಲಿದೆ. ಈ ಪುಸ್ತಕಗಳು ಕರ್ನಾಟಕದ ಸಾಮರಸ್ಯ ಸಂಸ್ಕೃತಿ, ಬಹುಮುಖ ಪರಂಪರೆ ಹಾಗೂ ವೈವಿಧ್ಯತೆಯೊಳಗಿನ ಏಕತೆಯನ್ನು ಪ್ರತಿಬಿಂಬಿಸುವ ಅಮೂಲ್ಯ ಕೃತಿಗಳಾಗಿವೆ. ಈ ಮಹತ್ವದ ಕಾರ್ಯಕ್ರಮದ ಸಿದ್ಧತೆಗಳ ಅಂಗವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯು ಪ್ರಾಧಿಕಾರದ ಅಧ್ಯಕ್ಷರಾದ ಡಾ‌. ಪುರುಷೋತ್ತಮ ಬಿಳಿಮಲೆ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಯಶಸ್ವಿಯಾಗಿ…

Read More

ಮಂಗಳೂರಿನಲ್ಲಿ CITU ರಾಜ್ಯ ಮಟ್ಟದ ಕಾರ್ಯಾಗಾರಕ್ಕೆ ನಾಳೆ ಚಾಲನೆ

ದೇಶದ ಬಲಿಷ್ಠ ಕೇಂದ್ರ ಕಾರ್ಮಿಕ ಸಂಘಟನೆಯಾದ CITUನ ರಾಜ್ಯ ಪದಾಧಿಕಾರಿಗಳ ಸಭೆ ಹಾಗೂ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವು ನಾಳೆಯಿಂದ ಮೂರು ದಿನಗಳ ಕಾಲ ಮಂಗಳೂರಿನ ಸಂದೇಶ ಸಂಸ್ಥೆಯಲ್ಲಿ ಜರುಗಲಿದ್ದು,ಈ ಹಿನ್ನೆಲೆಯಲ್ಲಿ CITUನ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು CITU ಪ್ರಕಟಣೆಯೊಂದರಲ್ಲಿ ತಿಳಿಸಿದೆ. CITU ರಾಷ್ಟ್ರೀಯ ಕಾರ್ಯದರ್ಶಿಗಳಾದ ಕೆ ಎನ್ ಉಮೇಶ್,ರಾಷ್ಟ್ರೀಯ ಉಪಾಧ್ಯಕ್ಷರಾದ ಮೀನಾಕ್ಷಿ ಸುಂದರಂ,ಎಸ್ ವರಲಕ್ಷ್ಮಿ,ರಾಜ್ಯದ ಕಾರ್ಮಿಕ ಚಳುವಳಿಯ ಹಿರಿಯ ನಾಯಕರಾದ ವಿಜೆಕೆ ನಾಯರ್, ರಾಜ್ಯದ ನಾಯಕರಾದ ಕೆ ಮಹಾಂತೇಶ್,ಸೈಯ್ಯದ್ ಮುಜೀಬ್,ಪ್ರತಾಪ್…

Read More

ಮಂಜೇಶ್ವರದಲ್ಲಿ ಬಿಜೆಪಿ ಪರ ಚುನಾವಣಾ ಅಖಾಡಕ್ಕಿಳಿದ ಶಾಸಕ ಕಾಮತ್

ಕೇರಳ ವಿಧಾನಸಭಾ ಚುನಾವಣೆಯ ಅಂಗವಾಗಿ ಗಡಿಭಾಗದ ಪ್ರತಿಷ್ಠಿತ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ರವರ ಗೆಲುವಿಗಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅವರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಮಂಜೇಶ್ವರದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಮದನಂತೇಶ್ವರ ದೇವಸ್ಥಾನ ಹಾಗೂ ಕೀರ್ತೇಶ್ವರ ಪರಿಸರ, ಕುಂಬ್ಳೆ ಪಂಚಾಯತ್ ವ್ಯಾಪ್ತಿಯ ಕುಂಟಗೇರಡ್ಕದ ಪರಿಶಿಷ್ಟ ಪಂಗಡ ಕಾಲೋನಿ, ಗುಡ್ಡೆಕೇರಿ, ಬಡಾಜೆ ಪ್ರದೇಶಗಳು ಸೇರಿದಂತೆ ಹಲವು ಮನೆಗಳಿಗೆ ಕಾರ್ಯಕರ್ತರೊಂದಿಗೆ ಭೇಟಿ ನೀಡಿದರು. ನರೇಂದ್ರ ಮೋದಿ…

Read More

ಹನುಮಗಿರಿ ಬ್ರಹ್ಮಕಲಶಕ್ಕೆ ಪಂದಳ ಮಹಾರಾಜರಿಗೆ ಆಹ್ವಾನ

ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ದಿವ್ಯ ಆಭರಣಗಳನ್ನು(ತಿರುವಾಭರಣ) ಹೊಂದಿರುವ ಪಂದಳ ರಾಜ ಮನೆತನದ ಮಹಾರಾಜಾ ಪುಣರ್ತಂ ನಾರಾಯಣ ವರ್ಮಾ ಅವರಿಗೆ ಹನುಮಗಿರಿಯ ಬ್ರಹ್ಮಕಲಶದ ಆಹ್ವಾನವನ್ನು ಕೇರಳದ ಪಂದಳ ಅರಮನೆಯಲ್ಲಿ ಫಲ ತಾಂಬೂಲ ನೀಡಿ ಶಾಲು ಅರ್ಪಿಸಿ ಆಮಂತ್ರಣ ಪತ್ರ ನೀಡಿ ಕ್ಷೇತ್ರದ ಬ್ರಹ್ಮಕಲಶ ಪ್ತಧಾನ ಕಾರ್ಯದರ್ಶಿಗಳಾದ ಆರ್ ಸಿ ನಾರಾಯಣ ರೆಂಜ ಹಾಗೂ ಸುಬ್ಬಪ್ಪ ಪಾಟಾಳಿ ಪಟ್ಟೆ ಹನುಮಾಗಿರಿಗೆ ಆಹ್ವಾನಿಸಿದರು. ಮಕರವಿಳಕ್ಕು ಉತ್ಸವಕ್ಕೆ 3 ದಿನಗಳ ಮುನ್ನ, ಅಯ್ಯಪ್ಪನ ಆಭರಣಗಳನ್ನು ಇಲ್ಲಿಂದ ಮೆರವಣಿಗೆಯಲ್ಲಿ ಶಬರಿಮಲೆಗೆ ಕೊಂಡೊಯ್ಯಲಾಗುತ್ತದೆ.ಅಂತಹ ಪವಿತ್ರ ಕ್ಷೇತ್ರದ…

Read More

ಹಾಡಹಗಲೇ ಬೈಕ್ ಕಳ್ಳರ ಅಟ್ಟಹಾಸ: ಪೇಟೆ ಮಧ್ಯೆಯೇ ಪಲ್ಸರ್ ಎಗರಿಸಿದ ಖದೀಮ

​ ಮಂಜೇಶ್ವರ: ಜನನಿಬಿಡ ಕುಂಬಳೆ ಪೇಟೆಯಲ್ಲಿ ಕಳ್ಳರ ಕೈಚಳಕ ಮಿತಿಮೀರಿದ್ದು, ಹೋಟೆಲ್‌ಗೆ ಊಟಕ್ಕೆ ಹೋದ ವ್ಯಕ್ತಿಯ ಬೈಕ್ ನಾಪತ್ತೆಯಾದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕಂಚಿಕಟ್ಟೆ ನಿವಾಸಿ ಅಜಿತ್ ಕುಮಾರ್ ಎಂಬವರು ಕಳೆದ ಶನಿವಾರ ಮಧ್ಯಾಹ್ನ ಬಸ್ ನಿಲ್ದಾಣದ ಹಿಂಭಾಗದ ಹೋಟೆಲ್‌ವೊಂದರ ಎದುರು ತಮ್ಮ ‘ಪಲ್ಸರ್’ ಬೈಕ್ ನಿಲ್ಲಿಸಿ ಊಟಕ್ಕೆ ತೆರಳಿದ್ದರು. ಕೇವಲ 15 ನಿಮಿಷಗಳ ಅಂತರದಲ್ಲಿ ಹೊರಬಂದಾಗ ಬೈಕ್ ಮಾಯವಾಗಿರುವುದು ಕಂಡುಬಂದಿದೆ. ​ಬೈಕ್ ಕಳ್ಳರ ಈ ದುಸ್ಸಾಹಸ ಕುಂಬಳೆ ಪೊಲೀಸರಿಗೆ ಸವಾಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು…

Read More

ಮಂಗಳೂರು: ರಾಜ್ಯ ಪೊಲೀಸ್ ಧ್ವಜ ಮತ್ತು ಕಲ್ಯಾಣ ದಿನಾಚರಣೆ – ಪೊಲೀಸ್ ಸಿಬ್ಬಂದಿಗೆ ಕರ್ತವ್ಯನಿಷ್ಠೆಗೆ ಕರೆ

ಮಂಗಳೂರು: ಮಂಗಳೂರು ನಗರ ಪೊಲೀಸ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ವಿಶೇಷ ಕಾರ್ಯಪಡೆ ಘಟಕ ಹಾಗೂ ಕೆಎಸ್‌ಆರ್‌ಪಿ 7ನೇ ಬೆಟಾಲಿಯನ್ ಮಂಗಳೂರು ಘಟಕದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಮತ್ತು ಕಲ್ಯಾಣ ದಿನಾಚರಣೆ ಕಾರ್ಯಕ್ರಮ ಗುರುವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ Sudheer Kumar Reddy ಅವರು, ಪೊಲೀಸ್ ಸಿಬ್ಬಂದಿ ಸಮಾಜದಲ್ಲಿ ಅನುಕರಣೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟುವ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ತಿಳಿಸಿದರು. ಘಟನೆಗಳು ಸಂಭವಿಸಿದಲ್ಲಿ ಅವುಗಳನ್ನು ಸಮರ್ಥವಾಗಿ…

Read More

ಮಂಜೇಶ್ವರ: ತ್ಯಾಜ್ಯ ಸಮಸ್ಯೆ ತೀವ್ರ – ಸಾರ್ವಜನಿಕರ ಆಕ್ರೋಶ, ಚುನಾವಣಾ ಬಹಿಷ್ಕಾರ ಎಚ್ಚರಿಕೆ

ಮಂಜೇಶ್ವರ: ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳು ತ್ಯಾಜ್ಯದ ಕೂಪಗಳಾಗಿ ಮಾರ್ಪಟ್ಟಿದ್ದು, ಇಡೀ ಪರಿಸರ ದುರ್ವಾಸನೆಯಿಂದ ನರಳುತ್ತಿದೆ. ಮಳೆಗಾಲ ಆರಂಭಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ತ್ಯಾಜ್ಯ ನಿರ್ವಹಣೆಗೆ ಯಾವುದೇ ಶಾಶ್ವತ ಪರಿಹಾರ ಕಾಣದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಮುಖ ರಸ್ತೆ ಬದಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿಗಳು ಗುಡ್ಡದಂತೆ ಜಮಾಯಿಸಿದ್ದು, ಪ್ಲಾಸ್ಟಿಕ್ ಚೀಲಗಳು, ಕೊಳೆತ ಆಹಾರ ಪದಾರ್ಥಗಳು ಮತ್ತು ಮೃತ ಪ್ರಾಣಿಗಳ ಅವಶೇಷಗಳಿಂದ ಪರಿಸರ ಅಸ್ವಚ್ಛವಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ…

Read More
error: Content is protected !!