ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು, 2026-27ನೇ ಶೈಕ್ಷಣಿಕ ಸಾಲಿಗೆ ಮಂಗಳೂರಿನ ಬೊಂದೇಲ್‌ನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ವಿವಿಧ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಈ ಸಂಸ್ಥೆಯಲ್ಲಿ ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗಗಳಲ್ಲಿ ಲ್ಯಾಟರಲ್ ಎಂಟ್ರಿ ಯೋಜನೆಯಡಿ ದ್ವಿತೀಯ ವರ್ಷದ (ಮೂರನೇ ಸೆಮಿಸ್ಟರ್) ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುತ್ತಿದೆ. ಎರಡು ವರ್ಷಗಳ ಐಟಿಐ, ದ್ವಿತೀಯ ಪಿಯುಸಿ (ವಿಜ್ಞಾನ) ಅಥವಾ ದ್ವಿತೀಯ ಪಿಯುಸಿ (ತಾಂತ್ರಿಕ ವಿಷಯಗಳು) ಉತ್ತೀರ್ಣರಾಗಿರುವ ಅರ್ಹ…

Read More

ಮೋದಿ ನೇತೃತ್ವದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ: ಪುತ್ತೂರಿನಲ್ಲಿ ಬಿಜೆಪಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಕಿಶೋರ್ ಕುಮಾರ್ ಹೇಳಿಕೆ

ಪುತ್ತೂರು, ಜೂ.12: ಕಾಂಗ್ರೆಸ್ ಆಡಳಿತವು ಭ್ರಷ್ಟಾಚಾರದ ಆಡಳಿತವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 12 ವರ್ಷಗಳಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಸ್ವಚ್ಛ ರಾಜಕಾರಣದ ಮಾದರಿಯನ್ನು ದೇಶಕ್ಕೆ ತೋರಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 12ನೇ ವರ್ಷದ ಸೇವೆ, ಸುಶಾಸನ ಮತ್ತು ಜನಕಲ್ಯಾಣ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಪುತ್ತೂರು ಗ್ರಾಮಾಂತರ ಹಾಗೂ ನಗರ…

Read More

ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ ಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿ ಪ್ರದಾನ

ಕಾಸರಗೋಡು/ಬೆಂಗಳೂರು, ಜೂ.12: ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಮೂರುವರೆ ದಶಕಕ್ಕೂ ಹೆಚ್ಚು ಕಾಲ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಅಧ್ಯಕ್ಷ ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ “ಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿ” ಪ್ರದಾನ ಮಾಡಲಾಗಿದೆ. ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಜೂನ್ 8ರಿಂದ 10ರವರೆಗೆ ವಿ.ಕೆ.ಎಂ. ಕಲಾವಿದರು (ರಿ.) ಬೆಂಗಳೂರು ನೇತೃತ್ವದಲ್ಲಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

Read More

ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸೂಚನೆ

ಮಂಗಳೂರು, ಜೂನ್ 21ರಂದು ನಡೆಯಲಿರುವ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರಾಜು ಕೆ. ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಗವು ದೇಹ ಮತ್ತು ಮನಸ್ಸಿನ ನಡುವಿನ ಸಮತೋಲನವನ್ನು ಕಾಪಾಡುವ ಮಹತ್ವದ ಸಾಧನವಾಗಿದ್ದು, ಅದರ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕು…

Read More

ಶಾಲೆ, ಅಂಗನವಾಡಿಗಳ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಸಿಇಒ ಸೂಚನೆ

ಮಂಗಳೂರು, ಜೂ.12: ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟಲು ಎಲ್ಲಾ ನೀರಿನ ಮೂಲಗಳನ್ನು ನಿರಂತರವಾಗಿ ಪರೀಕ್ಷೆಗೆ ಒಳಪಡಿಸುವುದು…

Read More

ಮುಂಗಾರು ಅಬ್ಬರಕ್ಕೆ ಮುನ್ನೆಚ್ಚರಿಕೆ: ರಸ್ತೆ ಡಿವೈಡರ್‌ಗಳ ಫ್ಲೆಕ್ಸ್, ಬ್ಯಾನರ್‌ಗಳನ್ನು ತುರ್ತಾಗಿ ತೆರವುಗೊಳಿಸಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು, ಜೂ.11: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಡಿವೈಡರ್‌ಗಳಿಗೆ ಅಳವಡಿಸಲಾಗಿರುವ ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್‌ಗಳನ್ನು ತುರ್ತಾಗಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬಿರುಗಾಳಿ ಹಾಗೂ ಮಳೆಯ ಪರಿಣಾಮದಿಂದ ರಸ್ತೆ ಬದಿಗಳು ಮತ್ತು ಮಧ್ಯದ ಡಿವೈಡರ್‌ಗಳಲ್ಲಿ ಅಳವಡಿಸಲಾದ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳು ಕಳಚಿ ವಾಹನಗಳು ಮತ್ತು ಪಾದಚಾರಿಗಳ ಮೇಲೆ ಬೀಳುವ ಸಾಧ್ಯತೆ ಇರುವುದರಿಂದ ಅಪಘಾತ ಹಾಗೂ ಜೀವಹಾನಿ ಸಂಭವಿಸುವ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಎಲ್ಲಾ…

Read More

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ವಿಜಯ್ ಭೇಟಿ: ಅರ್ಧ ಗಂಟೆ ಸಾರ್ವಜನಿಕ ದರ್ಶನಕ್ಕೆ ತಾತ್ಕಾಲಿಕ ನಿರ್ಬಂಧ

ಕೊಲ್ಲೂರು, ಜೂನ್ 12: ತಮಿಳುನಾಡಿನ ರಾಜಕೀಯ ನಾಯಕ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್ ಅವರು ಜೂನ್ 12ರಂದು ಮಧ್ಯಾಹ್ನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ವಿಜಯ್ ಅವರ ಭೇಟಿಯ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ಮಧ್ಯಾಹ್ನ 3 ಗಂಟೆಯಿಂದ 3.30 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದ್ದು, ಈ ಅವಧಿಯಲ್ಲಿ ಭಕ್ತರಿಗೆ ದೇವಸ್ಥಾನ ಪ್ರವೇಶ…

Read More

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ಔಷಧ ವಿಭಾಗದ ಮುಖ್ಯಸ್ಥನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ, ಜೂನ್ 12: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಔಷಧ ವಿಭಾಗದ ಮುಖ್ಯಸ್ಥರಾಗಿರುವ ಚಂದ್ರಶೇಖರ್ ವಿರುದ್ಧ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆಸ್ಪತ್ರೆಯ ಮಹಿಳಾ ಸಿಬ್ಬಂದಿಯೊಬ್ಬರಿಗೆ ಔಷಧಾಲಯದ ಉಗ್ರಾಣದಲ್ಲಿ ಲೈಂಗಿಕ ಕಿರುಕುಳ ನೀಡಿರುವುದಲ್ಲದೆ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮಹಿಳಾ ಸಿಬ್ಬಂದಿಯ ದೂರಿನ ಆಧಾರದಲ್ಲಿ ಗುರುವಾರ ಪ್ರಕರಣ ದಾಖಲಿಸಲಾಗಿದೆ. ಮೂಲತಃ ಬೆಳ್ತಂಗಡಿ…

Read More

ಗ್ಯಾಸ್ ಬೆಲೆ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್‌ಮೆಂಟ್ ಪ್ರತಿಭಟನೆ

ಬಿಸಿ ರೋಡ್, ಜೂನ್ 12: ಗ್ಯಾಸ್ ಸಿಲಿಂಡರ್‌ಗಳ ನಿರಂತರ ಬೆಲೆ ಏರಿಕೆ ಹಾಗೂ ವಿತರಣೆಯಲ್ಲಿ ಉಂಟಾಗುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ, ವಿಮೆನ್ ಇಂಡಿಯಾ ಮೂವ್‌ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಬಿಸಿ ರೋಡ್ ಫ್ಲೈಓವರ್ ಕೆಳಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿ, ಗೃಹಬಳಕೆಯ ಗ್ಯಾಸ್ ದರವನ್ನು ಕಡಿಮೆಗೊಳಿಸುವಂತೆ ಹಾಗೂ ಗ್ರಾಹಕರಿಗೆ ಸಮಯಕ್ಕೆ ಸರಿಯಾಗಿ ಸಿಲಿಂಡರ್ ವಿತರಣೆ ಮಾಡುವಂತೆ ಆಗ್ರಹಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ವಿಮೆನ್ ಇಂಡಿಯಾ…

Read More

ಮುಂಗಾರು ಅಬ್ಬರ: ದಕ್ಷಿಣ ಕನ್ನಡದ ಬೀಚ್‌ಗಳಲ್ಲಿ ಹೈ ಅಲರ್ಟ್ – ವಾಟರ್ ಸ್ಪೋರ್ಟ್ಸ್‌ಗೆ ತಾತ್ಕಾಲಿಕ ನಿಷೇಧ

ಮಂಗಳೂರು, ಜೂ.12: ಕರಾವಳಿಯಲ್ಲಿ ಮುಂಗಾರು ಮಳೆ ತೀವ್ರಗೊಳ್ಳುತ್ತಿದ್ದಂತೆ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಾಗಿದ್ದು, ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿವೆ. ಜಿಲ್ಲೆಯ ಪ್ರಮುಖ ಬೀಚ್‌ಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸಮುದ್ರ ಆಧಾರಿತ ಎಲ್ಲಾ ಸಾಹಸ ಹಾಗೂ ಮನರಂಜನಾ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರವಾಸಿಗರ ನೆಚ್ಚಿನ ತಾಣಗಳಾದ ಪಣಂಬೂರು, ತಣ್ಣೀರುಬಾವಿ, ಸೋಮೇಶ್ವರ ಸೇರಿದಂತೆ ಜಿಲ್ಲೆಯ ಎಲ್ಲಾ ಬೀಚ್‌ಗಳಲ್ಲಿ ಮುಂಗಾರು ಅವಧಿ ಮುಗಿಯುವವರೆಗೆ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳಿಗೆ ಸಂಪೂರ್ಣ ನಿರ್ಬಂಧ…

Read More
error: Content is protected !!