ಓವರ್‌ಟೇಕ್ ದುರಂತ: ಬೈಕ್ ಸವಾರ ಟಿಪ್ಪರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

ಮಂಗಳೂರು:ಓವರ್ ಟೇಕ್ ಮಾಡುವ ಭರದಲ್ಲಿ ತನ್ನ ಪಾಡಿಗೆ ಹೋಗುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಮೈನ್ಸ್ ಒಯ್ಯುತ್ತಿದ್ದ ಭಾರೀ ಗಾತ್ರದ ಟಿಪ್ಪರ್ ಗೆ ಬಡಿದು ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂತೂರು ಬಳಿ ನಡೆದಿದೆ. ತಾರಾಯಿತೋಟ ಎಂಬಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ಮಧ್ಯ ವಯಸ್ಕ ಛಾಯಾಗ್ರಾಹಕರಾಗಿದ್ದ ವ್ಯಕ್ತಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾರೆ. ಭೀಕರ ಘಟನೆಯ ದೃಶ್ಯವು ಟೆಂಪೋವೊಂದರ ಡ್ಯಾಷ್ ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಧರ್ಮಸ್ಥಳ ಕಾರ್ಯತಡ್ಕ ನಿವಾಸಿ ಗೋಪಾಲಕೃಷ್ಣ (27) ಮೃತ…

Read More

ಕಾನಿಪ ಸಂಘದ 40ನೇ ರಾಜ್ಯ ಸಮ್ಮೇಳನಕ್ಕೆ ತೆರೆ

ಪತ್ರಕರ್ತರು ಸತ್ಯದ ಪರವಾಗಿರಬೇಕು: ಸಭಾಧ್ಯಕ್ಷ ಯು ಟಿ ಖಾದರ್ ಸಲಹೆ ಬೀದರ :ಪತ್ರಿಕೋದ್ಯಮವು ಸಾಮಾಜಿಕ ಜವಾಬ್ದಾರಿಯ ಪ್ರತೀಕವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್ ಅವರು ಹೇಳಿದರು.ಬೀದರ ಜಿಲ್ಲೆಯಲ್ಲಿ ಕರ್ನಾಟಕ ಕಾರ್ಯನಿರತ‌ ಪತ್ರಕರ್ತರ ಸಂಘ ಬೀದರ ಜಿಲ್ಲಾ ಘಟಕದಿಂದ ನಗರದ ಝೀರಾ ಕನ್ವೆನ್ಶನ್ ಹಾಲನಲ್ಲಿಏಪ್ರಿಲ್ 12ರಂದು ನಡೆದ 40ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜ, ದೇಶ ಕಟ್ಟುವಲ್ಲಿ ಮಹತ್ವದ ಪಾತ್ರ ವಹಿಸುವ ಪತ್ರಕರ್ತರ ಪೆನ್ನು ಸದಾಕಾಲ ಸತ್ಯದ ಪರವಾಗಿರಬೇಕು ಎಂದು…

Read More

ಕನ್ನಡ ಭವನದ ರೂವಾರಿ ಸಂಧ್ಯಾರಾಣಿ ಟೀಚರಿಗೆ “ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ. 2026

ಕಾಸರಗೋಡು :ಕಥಾಬಿಂದು ಪ್ರಕಾಶನ, ಉಡುಪಿ ಶಿರೂರು ಶ್ರೀ ಮಠ, ಉಡುಪಿ ಶ್ರೀ ಕೃಷ್ಣ ಮಠ ಸಹಯೋಗದಲ್ಲಿ ನಡೆದ “ಕಥಾಬಿಂದು ಸಾಹಿತ್ಯ ಸಮ್ಮೇಳನ “ಉಡುಪಿ ಶ್ರೀ ಮಠದ ರಾಜಾ0ಗಣದಲ್ಲಿ 12.4.2026 ರಂದು ಉಡುಪಿ ಶ್ರೀ ಮಠದ ಶ್ರೀ ರಮಣ ಆಚಾರ್ಯ ಅವರ ಸರ್ವಾಧ್ಯಕ್ಷತೆಯಲ್ಲಿ, ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ರಾಜ್ಯಾಧ್ಯಕ್ಷ, ಧರ್ಮದರ್ಶಿ, ಡಾ. ಹರಿಕೃಷ್ಣ ಪುನಃರೂರು, ಕ. ಸಾ. ಪ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಅಧ್ಯಕ್ಷ, ಕಲ್ಕೂರ ಪ್ರತಿಷ್ಠಾನ ರೂವಾರಿ ಪ್ರದೀಪ್ ಕುಮಾರ್ ಕಲ್ಕೂರ, ಕಿನ್ನಿಗೋಳಿ…

Read More

ಬೆಜ್ಜ ಶ್ರೀ ಧೂಮಾವತಿ ಬಂಟ ದೈವಗಳ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರೋತ್ಸವ ಸಂಪನ್ನ

ಮಂಜೇಶ್ವರ : ಬೆಜ್ಜ ಶ್ರೀ ಧೂಮಾವತಿ ಬಂಟ ದೈವಗಳ ಕ್ಷೇತ್ರದಲ್ಲಿ ನಡೆದ ವಾರ್ಷಿಕ ಜಾತ್ರೋತ್ಸವ ಭಕ್ತಿಭಾವದ ನಡುವೆ ಭವ್ಯವಾಗಿ ಸಂಪನ್ನಗೊಂಡಿತು .ಏಪ್ರಿಲ್ 1ರಂದು ಉತ್ಸವದ ಗೊನೆ ಮುಹೂರ್ತ, ಕೋಳಿಗೂಟ ಹಾಗೂ ಉತ್ಸವದ ಚೆಂಡು ಕಾರ್ಯಕ್ರಮಗಳೊಂದಿಗೆ ಜಾತ್ರೆಗೆ ಚಾಲನೆ ನೀಡಲಾಗಿತ್ತು. ಏಪ್ರಿಲ್ 6ರಿಂದ 9ರವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು. ಏಪ್ರಿಲ್ 6ರಂದು ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆದಿದ್ದು, ಶಾರದಾ ಆರ್ಟ್ಸ್ ತಂಡದಿಂದ ತುಳು ಹಾಸ್ಯಮಯ ನಾಟಕ “ಒಂತೆ ಲೇಟಾ0ಡ್…

Read More

ಎಸ್‌ಎಸ್‌ವಿಪಿ ಮಂಗಳೂರು ಸೆಂಟ್ರಲ್ ಕೌನ್ಸಿಲ್‌ನ ಅಧ್ಯಕ್ಷೆಯಾಗಿ ಮೊದಲ ಮಹಿಳೆ ಪ್ರಮಾಣ ವಚನ ಸ್ವೀಕಾರ

ಸೇಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ, ಮಂಗಳೂರು ಸೆಂಟ್ರಲ್ ಕೌನ್ಸಿಲ್ (SSVP), ತನ್ನ 66 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಐತಿಹಾಸಿಕ ಮೈಲಿಗಲ್ಲನ್ನು ಆಚರಿಸಿತು. ಬೆಂದೂರು ಕಾನ್ಫರೆನ್ಸ್‌ಗೆ ಸೇರಿದ ಪ್ರೀತಾ ಲೋಬೊ ಅವರಿಗೆ ಆಧ್ಯಾತ್ಮಿಕ ಸಲಹೆಗಾರರಾದ ರೆ. ಫ್ಲೇವಿಯನ್ ಲೋಬೊ ಅವರು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಆಧ್ಯಾತ್ಮಿಕ ಸಲಹೆಗಾರ ರೆ. ಫ್ರಾನ್ಸಿಸ್ ಡಿಸೋಜಾ ಮತ್ತು ಬೆಂದೂರು ಚರ್ಚ್‌ನ ಧರ್ಮಗುರು ರೆ. ವಾಲ್ಟರ್ ಡಿಸೋಜಾ…

Read More

ಶತಾಯುಷಿ ಕುಜುಂಬ ಅಜಿಲ ನಿಧನ — ಗ್ರಾಮದಲ್ಲಿ ಸಂತಾಪ

ಕಡಬ, ಏಪ್ರಿಲ್:ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ನಾಡೋಳಿ ನಿವಾಸಿಯಾದ ಶತಾಯುಷಿ ಕುಜುಂಬ ಅಜಿಲ (105) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಸಂಜೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ದೈವನರ್ತಕರಾಗಿ ಗುರುತಿಸಿಕೊಂಡಿದ್ದು, ತಮ್ಮ ಜೀವನವನ್ನು ಸಂಪ್ರದಾಯ ಹಾಗೂ ಸೇವೆಗೆ ಅರ್ಪಿಸಿಕೊಂಡಿದ್ದರು. ಶತಾಯುಷಿಯಾಗಿ ದೀರ್ಘಾಯುಷ್ಯ ಹೊಂದಿದ್ದ ಅವರು ಸ್ಥಳೀಯ ಸಮಾಜದಲ್ಲಿ ಗೌರವಾನ್ವಿತರಾಗಿದ್ದರು. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಬಳಗ ಹಾಗೂ ಗ್ರಾಮಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

Read More

ಉದಯಗಿರಿ ವಿಷ್ಣುಮೂರ್ತಿ ಒತ್ತೆಕೋಲಂ: ನಾಲ್ಕು ವರ್ಷಗಳ ಬಳಿಕ ಭಕ್ತರಿಗೆ ದರ್ಶನ ಸೌಭಾಗ್ಯ

ಕಾಸರಗೋಡು, ಜಿಲ್ಲೆಯಲ್ಲೇ ಅತಿ ಬೃಹತ್ ಒತ್ತೆಕೋಲಂ ಎಂದು ಪ್ರಸಿದ್ಧಿಯಾಗಿರುವ ಉದಯಗಿರಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಲ್ಕು ವರ್ಷಗಳ ವಿರಾಮದ ಬಳಿಕ ಭಕ್ತರಿಗೆ ಮತ್ತೆ ದರ್ಶನ ಸೌಭಾಗ್ಯ ಲಭಿಸಿದೆ. ನಿನ್ನೆ ನಡೆದ ಒತ್ತೆಕೋಲ ಮಹೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ ಭಾವದಿಂದ ಅದ್ದೂರಿಯಾಗಿ ನೆರವೇರಿತು. ತೆಯ್ಯಮ್ ಆರಾಧನೆಯಲ್ಲಿ ವಿಶಿಷ್ಟ ಸ್ಥಾನ ಹೊಂದಿರುವ ಈ ಒತ್ತೆಕೋಲ ಆಚರಣೆ, ಉಳಿದ ತೆಯ್ಯಮ್‌ಗಳಿಗಿಂತ ಭಿನ್ನವಾಗಿದೆ. ಶ್ರೀ ವಿಷ್ಣುಮೂರ್ತಿ ದೈವವು ಉರಿಯುತ್ತಿರುವ ಬೃಹತ್ ಕೆಂಡದ ರಾಶಿಗೆ ಹಾರುವ ದೃಶ್ಯವು ಭಕ್ತರ ಮನದಲ್ಲಿ ಭಕ್ತಿ ಮತ್ತು…

Read More

ಸಮಾಜ ಸೇವೆಯಲ್ಲಿ ಮಾದರಿಯಾದ ಚಿರಂಜೀವಿ ಕ್ಲಬ್: ಬಡ ಕುಟುಂಬಗಳಿಗೆ ವೈದ್ಯಕೀಯ ನೆರವು

ಕುಂಬಳೆಯ ಚಿರಂಜೀವಿ (ರಿ) ಕ್ಲಬ್ಬಿನ ಮಾಸಿಕ ಸಭೆ ಭಾನುವಾರ ಸಂಜೆ 4 ಗಂಟೆಗೆ ಕ್ಲಬ್ಬಿನ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಗಟ್ಟಿ ಕೋಟೆಕಾರ್ ಹಾಗೂ ಉಪಾಧ್ಯಕ್ಷರಾದ ಕೆ.ಸಿ. ಮೋಹನ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಭೆಯನ್ನು ವಿಭಿನ್ನ ರೀತಿಯಲ್ಲಿ ಸಮಾಜ ಸೇವಾ ಕಾರ್ಯಕ್ರಮಗಳ ಮೂಲಕ ಆಯೋಜಿಸಲಾಯಿತು. ಚಿರಂಜೀವಿ ಕ್ಲಬ್ ಮತ್ತು ಸಂಜೀವಿನಿ ಟ್ರಸ್ಟ್‌ನ ಜಂಟಿ ಆಶ್ರಯದಲ್ಲಿ ಕುಂಬಳೆ ಸಮೀಪದ ಎರಡು ಬಡ ಕುಟುಂಬಗಳಿಗೆ ವೈದ್ಯಕೀಯ ನೆರವು ನೀಡಲಾಯಿತು. ಶಾಂತಿಪಳ್ಳದ ಶ್ರೀ ಯಶವಂತ್ ಕುಮಾರ್ ಅವರು ಕರುಳು ಸಂಬಂಧಿ ಕಾಯಿಲೆಗೆ…

Read More

ದ್ವಿತೀಯ ಪಿಯುಸಿ ಫಲಿತಾಂಶ: ಮರಿಯಮ್ ಸಾಧನೆಗೆ ರಾಜ್ಯ ಮಟ್ಟದ ಮೆಚ್ಚುಗೆ

ಗಡಿನಾಡಿನ ವಿದ್ಯಾರ್ಥಿಗಳ ಪ್ರತಿಭೆ ಮತ್ತೊಮ್ಮೆ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದು, ಮಂಜೇಶ್ವರದ ಕುಂಜತ್ತೂರಿನ ವಿದ್ಯಾರ್ಥಿನಿ ಮರಿಯಮ್ ಅವರು 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರು ಒಟ್ಟು 600ರಲ್ಲಿ 576 ಅಂಕಗಳನ್ನು (96%) ಪಡೆದು ವಿಶಿಷ್ಟ ಸಾಧನೆಗೈದಿದ್ದಾರೆ. ಮರಿಯಮ್ ಅವರು ಮಂಗಳೂರಿನ ಬಬ್ಬುಕಟ್ಟೆಯ ಹಿರಾ ವಿಮೆನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದಾರೆ. ಕಠಿಣ ಪರಿಶ್ರಮ, ಶಿಸ್ತುಬದ್ಧ ಅಧ್ಯಯನ ಮತ್ತು ನಿರಂತರ ಪ್ರಯತ್ನದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ….

Read More

ಡೆಮ್ಮoಗರ ಮಸೀದಿಯಲ್ಲಿ ಜಲಾಲಿಯ್ಯ ರಾತೀಬ್

ಪುತ್ತೂರು /ಬೆಟ್ಟoಪಾಡಿ : K K ಮಸ್ಜಿದ್ & ಬುಸ್ತಾನುಲ್ ಉಲೂಮ್ ದರ್ಸ್ ಅಹ್ದಲಿಯ ನಗರ ಡೆಮ್ಮoಗರ, ಬೆಟ್ಟoಪಾಡಿ ಇದರ ಆಶ್ರಯದಲ್ಲಿ 3 ತಿಂಗಳಿಗೊಮ್ಮೆ ನಡೆಸಿಕೊoಡು ಬರುತ್ತಿರುವ ಜಲಾಲಿಯ್ಯ ರಾತೀಬ್ ಕಾರ್ಯಕ್ರಮವು ಬಹು | ಅಸ್ಸಯ್ಯದ್ ಮುಖ್ತಾರ್ ತಂಗಳ್ ಕುಂಬೋಲ್ ಇವರ ನೇತೃತ್ವದಲ್ಲಿ ನಡೆಯಿತು. ಬಹು | ಅಸ್ಸಯ್ಯದ್ ಹಾಶಿಮ್ ತಂಗಳ್ ಕೊರಿಂಗಿಲ, ಬಹು|ಅಬ್ಬಾಸ್ ಸಅದಿ ಮುದರ್ರಿಸ್ ಡೆಮ್ಮoಗರ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಕಛೇರಿ ಹಾಗೂ ಕಂಪ್ಯೂಟರ್ ಸೆಂಟರ್ ಉದ್ಘಾಟನೆ ಕಾರ್ಯಕ್ರಮವನ್ನು ಬಹು | ಅನ್ವರ್ ತಂಗಳ್…

Read More
error: Content is protected !!