ಹಿಂಸಾತ್ಮಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿದರೆ ಕಠಿಣ ಕ್ರಮ ಖಚಿತ: ದಿನೇಶ್ ಗುಂಡೂರಾವ್
ಮಂಗಳೂರು:ಯಾವುದೇ ಶಕ್ತಿ ಅಥವಾ ವ್ಯಕ್ತಿ ತಮ್ಮ ವೈಯಕ್ತಿಕ ಲಾಭಕ್ಕಾಗಿ ಇಲ್ಲಿನ ಯುವಕರನ್ನು ದಾರಿ ತಪ್ಪಿಸಿ ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗಲು ಪ್ರೋತ್ಸಾಹಿಸುವುದನ್ನು ಸರ್ಕಾರ ಸಹಿಸುವುದಿಲ್ಲ. ಇಂತಹ ಕೃತ್ಯಗಳು ಕಂಡುಬಂದಲ್ಲಿ ಅವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಯಾವುದೇ ಹಿಂಜರಿಕೆಯನ್ನು ತೋರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ನಗರದ ನೆಹರೂ ಮೈದಾನದಲ್ಲಿ ಇಂದು ಜಿಲ್ಲಾ ಮಟ್ಟದ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದ ಅವರು .ಪ್ರತಿಯೊಬ್ಬರೂ ತಮ್ಮ ತಮ್ಮ ಧರ್ಮಗಳ…