ಶಾಹುಲ್ ಹಮೀದ್ ತಂಗಳ್ ಸ್ಮರಣಾರ್ಥ ಪ್ರಾರ್ಥನಾ ಸಭೆ

ದುಬೈ ಮಲಬಾರ್ ಕಲಾಸಾಂಸ್ಕೃತಿಕ ವೇದಿಕೆ ವತಿಯಿಂದ ಕಾಸರಗೋಡು ಮೂಲದ ಖ್ಯಾತ ಸಮಾಜಸೇವಕ ಶಾಹುಲ್ ಹಮೀದ್ ತಂಗಳ್ ಅವರ ಸ್ಮರಣಾರ್ಥ ಪ್ರಾರ್ಥನಾ ಸಭೆಯನ್ನು ಕುಂಬಳೆ ರಾಯಲ್ ಖುಬಾ ರೆಸ್ಟೋರಂಟ್‌ನಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಮಾಜಿ ಶಾಸಕ ಎಂ.ಸಿ. ಕಮರುದ್ದೀನ್ ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಅವರು, ಕುಂಬಳ ಸಾರ್ವಜನಿಕ ಕ್ಷೇತ್ರದಲ್ಲಿ ಶಾಹುಲ್ ಹಮೀದ್ ತಂಗಳ್ ನಿಸ್ವಾರ್ಥ ಸೇವೆ ಸಲ್ಲಿಸಿದ ವ್ಯಕ್ತಿಯಾಗಿದ್ದು, ಅವರ ಅಕಾಲಿಕ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು. ಪ್ರಾರ್ಥನಾ ಸಭೆಗೆ ಸಯ್ಯಿದ್ ಯಾಹಿಯ ತಂಗಳ್…

Read More

ಕಾಸರಗೋಡಿನ ಕನ್ನಡ ಭವನ ಗದಗ ಘಟಕ ಪದಗ್ರಹಣ ಕಾರ್ಯಕ್ರಮ ಯಶಸ್ವಿ

ಕಾಸರಗೋಡಿನ ಕನ್ನಡ ಭವನ, ಗ್ರಂಥಾಲಯ (ರಿ) ಗದಗ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಶಿರಹಟ್ಟಿಯ ಫಕೀರೇಶ್ವರ ನಗರದ ಎಚ್.ಎಂ. ದೇವಗಿರಿ ಅವರ ನಿವಾಸದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಸಂಗಮೇಶ ತಮ್ಮನಗೌಡ್ರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹೊಸ ಪದಾಧಿಕಾರಿಗಳನ್ನು ಅಧಿಕೃತವಾಗಿ ಘೋಷಿಸಲಾಯಿತು. ಡಾ. ಸಂಗಮೇಶ ತಮ್ಮನಗೌಡ್ರ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಗೌರವಾಧ್ಯಕ್ಷರಾಗಿ ಪೂಜ್ಯಶ್ರೀ ಶಾಂತಲಿಂಗ ಮಹಾಸ್ವಾಮೀಜಿಗಳು ಹಾಗೂ ಪೂಜ್ಯಶ್ರೀ ರಮೇಶ ಮಹಾಸ್ವಾಮಿಗಳು ನೇಮಕಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ರತ್ನಾ ಗಿರೋಸಾ ಬದಿ, ಕಾರ್ಯದರ್ಶಿಯಾಗಿ ಸುಭಾಷ್…

Read More

ಮಂಜೇಶ್ವರ ಕ್ಷೇತ್ರದಲ್ಲಿ ಸುರೇಂದ್ರನ್ ಪರ ರಾಜೇಶ್ ನಾಯ್ಕ್ ಮತಯಾಚನೆ

ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಸುರೇಂದ್ರನ್ ಅವರ ಪರವಾಗಿ ಮತ ನೀಡುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾ.26 ರಂದು ಗುರುವಾರ ಬೆಳಿಗ್ಗೆಯಿಂದ ವರ್ಕಾಡಿ ಗ್ರಾ.ಪಂ‌.ವ್ಯಾಪ್ತಿಯಲ್ಲಿ ಮನೆಮನೆಗೆ ತೆರಳಿ ಮತಯಾಚಿಸಿದರು.ಬಂಟ್ವಾಳ ವಿಧಾನಸಭಾ ಕ್ಷೇತ್ರದ ಹತ್ತಿರದ ಕ್ಷೇತ್ರವಾಗಿರುವ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ವರ್ಕಾಡಿ ಗ್ರಾಮದಲ್ಲಿರುವ ವರ್ಕಾಡಿ ಬಿಜೆಪಿ ಕಚೇರಿಗೆ ಬೇಟಿ ನೀಡಿದ ಅವರು ಕಾರ್ಯಕರ್ತರ ಜೊತೆ ಚರ್ಚಿಸಿದರು. ಬಳಿಕ ಕಾರ್ಯಕರ್ತರ ಜೊತೆಗೆ ತೆರಳಿದ ಅವರು ಮತದಾರರ ಮನವೊಲಿಸಿ ಮತನೀಡುವಂತೆ ಮನವಿ ಮಾಡಿದರು. ಬಿಜೆಪಿ…

Read More

ಮಂಗಳೂರಿಗೆ ‘ಅಪೋಲೊ ಓಷಿಯನ್’ ಎಲ್‌ಪಿಜಿ ಟ್ಯಾಂಕರ್ ಆಗಮನ – ಇಂಧನ ಭದ್ರತೆಗೆ ಬಲ

ಮಂಗಳೂರಿನ ಇಂಧನ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಗುಜರಾತ್‌ನಿಂದ ಹೊರಟಿದ್ದ ‘ಅಪೋಲೊ ಓಷಿಯನ್’ ಬೃಹತ್ ಎಲ್‌ಪಿಜಿ ಟ್ಯಾಂಕರ್ ಬುಧವಾರ ರಾತ್ರಿ ನವ ಮಂಗಳೂರು ಬಂದರನ್ನು ತಲುಪಿದೆ. ಈ ಹಡಗು ಸುಮಾರು 17,600 ಮೆಟ್ರಿಕ್ ಟನ್ ಎಲ್‌ಪಿಜಿ ಅನಿಲವನ್ನು ಹೊತ್ತು ತಂದಿದ್ದು, ಈ ಸರಕು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮತ್ತು ಭಾರತ್ ಪೆಟ್ರೋಲಿಯಂ ಸಂಸ್ಥೆಗಳಿಗೆ ಸೇರಿದ್ದಾಗಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕ ವ್ಯಕ್ತವಾಗಿತ್ತು. ಆದರೆ ಇಂತಹ ಹಡಗುಗಳ ನಿರಂತರ…

Read More

28ರಂದು ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

ಕಾಸರಗೋಡು: ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ ಮಾರ್ಚ್ 28ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ಜರಗಲಿದೆ. ಅಪರಾಹ್ನ 2.30ಕ್ಕೆ ಚುಟುಕು ಸಾಹಿತ್ಯ ಪರಿಷತ್ ಕೇಂದ್ರಸಮಿತಿ ಪ್ರಧಾನ ಸಂಚಾಲಕ ಡಾ. ಎಂ.ಜಿ.ಆರ್ ಅರಸ್ ಮೈಸೂರು ಉದ್ಘಾಟಿಸುವರು. ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸುವರು. ರಾಧಾಕೃಷ್ಣ. ಕೆ. ಉಳಿಯತಡ್ಕ ದಿಕ್ಸೂಚಿ…

Read More

ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ರೌಡಿಶೀಟರ್ ಆರಿಫ್ ಹತ್ಯೆ

ಮಂಗಳೂರು ಸಮೀಪದ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಇಂದು ಮುಂಜಾನೆ ಭೀಕರ ಹತ್ಯೆ ಘಟನೆ ನಡೆದಿದೆ. ಕಿನ್ಯ ಅಜ್ಜಿನಡ್ಕ ನಿವಾಸಿಯಾಗಿರುವ ಆರಿಫ್ ಎಂಬ ರೌಡಿಶೀಟರ್ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದಾನೆ. ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದ ಆರಿಫ್, ಮುಂಜಾನೆ ಬೈಕ್‌ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದಾಗ ತೊಕ್ಕೊಟ್ಟು ಫ್ಲೈಓವರ್ ಬಳಿ ದುಷ್ಕರ್ಮಿಗಳು ಅವನನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳನ್ನು ಬಳಸಿ ಹಲ್ಲೆ ನಡೆಸಿದ ಪರಿಣಾಮ ಆರಿಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆರಿಫ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆ, ಈ ಹತ್ಯೆ ಹಳೆಯ ವೈಮನಸ್ಸಿನ ಪರಿಣಾಮವಾಗಿರಬಹುದೆಂದು…

Read More

ಬೆಂಗ್ರೆ ವಾರ್ಡ್‌ನಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 60ನೇ ಬೆಂಗ್ರೆ ವಾರ್ಡ್‌ನ ಪಡುಹೊಯ್ಗೆ ಮೊಗವೀರ ಗ್ರಾಮ ಸಭಾ ಬೆಂಗರೆ (ರಿ.) ವ್ಯಾಪ್ತಿಯ ಸ್ಯಾಂಡ್ ಪಿಟ್ ಬೆಂಗರೆ ಬಳಿ ವಿಶೇಷ ಅನುದಾನದಡಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗೆ ಇತ್ತೀಚೆಗೆ ಭೂಮಿ ಪೂಜೆ ನೆರವೇರಿತು. ಕಾರ್ಯಕ್ರಮಕ್ಕೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವ ವಹಿಸಿದ್ದರು. ಭೂಮಿ ಪೂಜೆ ಬಳಿಕ ಮಾತನಾಡಿದ ಅವರು, ಸ್ಥಳೀಯರ ಬಹುಕಾಲದ ಬೇಡಿಕೆಯನ್ನು ಪರಿಗಣಿಸಿ ಅಗತ್ಯ ಅನುದಾನವನ್ನು ಸಂಗ್ರಹಿಸಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ…

Read More

ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ-ಮಮತಾ ಗಟ್ಟಿ

ಮಂಗಳೂರು,ಮಾ.26; ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ,ಜಿಲ್ಲೆಯ ಮಹಿಳೆಯರು ತಮ್ಮ ಕುಟುಂಬದ ಆರ್ಥಿಕ ನಿರ್ವಹಣೆಯನ್ನು ಕಷ್ಟಪಟ್ಟು ಎಚ್ಚರಿಕೆ ಯಿಂದ ಮಾಡುತ್ತಾ ಬಂದಿದ್ದಾರೆ ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ.ಅವರು ಮಹಿಳಾ ದಿನಾಚರಣೆಯ ಅಂಗವಾಗಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಛೇರಿ ಸಭಾಂಗಣ ಗುರುವಾರ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ಮಂಗಳೂರುಇದರ ಸಂಯುಕ್ತ ಆಶ್ರಯ ದಲ್ಲಿಮಹಿಳಾ ದಿನಾಚರಣೆ ಮತ್ತುಮಹಿಳಾ…

Read More

ಮಂಗಳೂರಿನಲ್ಲಿ ಚಿರತೆ ಸೆರೆ: ಸ್ಥಳೀಯರಲ್ಲಿ ಆತಂಕಕ್ಕೆ ತೆರೆ

ಮಂಗಳೂರು: ನಗರದ ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಸಂಚರಿಸುತ್ತಿದ್ದ ಬೃಹತ್ ಗಾತ್ರದ ಚಿರತೆಯನ್ನು ಅರಣ್ಯ ಇಲಾಖೆಯವರು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಕೆಲರಾಯ್ ಕ್ರಾಸ್‌ನ ನೆಕ್ಕರೆ ಪದವು ಪ್ರದೇಶದಲ್ಲಿ ಬೋನು ಅಳವಡಿಸಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿರತೆಯ ಸಂಚಾರದ ಬಗ್ಗೆ ಆತಂಕಗೊಂಡ ಸ್ಥಳೀಯರು ಮಾಜಿ ಕಾರ್ಪೊರೇಟರ್ ಹಾಗೂ ಮಾಜಿ ಮೇಯರ್ ಭಾಸ್ಕರ್ ಕೆ. ಅವರಿಗೆ ಮಾಹಿತಿ ನೀಡಿದ್ದು, ಅವರು ತಕ್ಷಣ ಸ್ಪಂದಿಸಿ ಅರಣ್ಯ ಇಲಾಖೆಗೆ…

Read More

ಸಂವಿಧಾನ ಪೀಠಿಕೆ ಜಾಗೃತಿ: ಬ್ಯಾಂಕ್‌ಗಳು, ಸಹಕಾರ ಸಂಘಗಳಲ್ಲಿ ಬೋರ್ಡ್ ಅಳವಡಿಕೆ ಅಭಿಯಾನ

ಮಂಗಳೂರು: ನೇತಾಜಿ ಸುಭಾಸ್‌ಚಂದ್ರಬೋಸ್ ಗ್ರಾಮೀಣ ಸೇವಾ ಅಭಿವೃದ್ಧಿ ಸಂಸ್ಥೆ, ಹುಬ್ಬಳ್ಳಿ ವತಿಯಿಂದ ಮಂಗಳೂರು ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯ ವ್ಯವಸ್ಥಾಪಕ ಸಂಗೊಳ್ಳಿ ಸೋಮಣ್ಣ ಮಾತನಾಡಿ, ಸಹಕಾರ ಇಲಾಖೆ ಅಡಿಯಲ್ಲಿ ಬರುವ ಖಾಸಗಿ ಬ್ಯಾಂಕ್‌ಗಳು, ಪತ್ತಿನ ಸಹಕಾರ ಸಂಘಗಳು, ಕೋಆಪರೇಟಿವ್ ಸಂಸ್ಥೆಗಳು ಹಾಗೂ ಕೆಎಂಎಫ್ ಡೈರಿ ಮತ್ತು ಹಾಲು ಉತ್ಪಾದಕರ ಸಂಘಗಳಲ್ಲಿ ಭಾರತದ ಸಂವಿಧಾನದ ಪೀಠಿಕೆ ಬೋರ್ಡ್ ಅಳವಡಿಸಲು ಅನುಮತಿ ದೊರೆತಿದೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಸಂಸ್ಥೆ…

Read More
error: Content is protected !!