ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘ(ನೋಂ) ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜನವರಿ 28 ರಂದು ಸಾರ್ವತ್ರಿಕ ಮುಷ್ಕರ … !

ಮಂಗಳೂರು:ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘ(ನೋಂ) ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟ (ನೋಂ) ಸಂಘಟನೆಗಳ ಮುಖ್ಯಸ್ಥರು ಬುದ್ದಿಮಾಂದ್ಯತೆ, ಆಟಿಸಂ, ಮೆದುಳಿನ ಪಾಶ್ವ, ಬಹುವಿಧ ನ್ಯೂನತೆ, ನಿರ್ದಿಷ್ಟ ಕಲಿಕೆಯ ಸಮಸ್ಯೆ, ಶ್ರವಣ ದೋಷ ಹಾಗೂ ದೃಷ್ಟಿ ಮಾಂದ್ಯತೆ ಇರುವ ಮಕ್ಕಳಿಗಾಗಿ ವಿಶೇಷ ಶಾಲೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಸರಕಾರದಿಂದ ಸೂಕ್ತ ಸ್ಪಂದನೆ, ಹಾಗೂ ಕ್ಲಪ್ತ ಸಮಯಕ್ಕೆ ಅನುದಾನ ಬಾರದೆ ಸಮಸ್ಯೆಯನ್ನು ಈ ಶಾಲೆಗಳು ಎದುರಿಸುತ್ತಿದ್ದು ಈ ಬಗ್ಗೆ ಸರಕಾರ ಕೋರಿಕೆಗೆ ಈಡೇರಿಸಬೇಕ್ಕೆನ್ನುವ…

Read More

ಪ್ರಿಯಕರನೊಂದಿಗೆ ಸರಸದ ಜೀವನಕ್ಕಾಗಿ ಒಂದೂವರೆ ವರ್ಷದ ಕಂದಮ್ಮನನ್ನು ಸಮುದ್ರಕ್ಕೆ ಎಸೆದು ಕೊಂದ ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಕಣ್ಣೂರು:ಪ್ರಿಯಕರನೊಂದಿಗೆ ಮೋಜಿನ ಜೀವನ ಸಾಗಿಸುವ ಉದ್ದೇಶದಿಂದ ಒಂದೂವರೆ ವರ್ಷದ ಬಾಲಕನನ್ನು ಸಮುದ್ರಕ್ಕೆ ಎಸೆದು ಕೊಂದ ಪ್ರಕರಣದಲ್ಲಿ ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ತಳಿಪರಂಬ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಥೈಯಿಲ್ ಬೀಚ್ ನಿವಾಸಿ ಶರಣ್ಯಗೆ ಶಿಕ್ಷೆ ವಿಧಿಸಿದೆ. ಮಗುವನ್ನು ಕೊಂದ ಪ್ರಕರಣದಲ್ಲಿ ತಾಯಿ ತಪ್ಪಿತಸ್ಥೆ ಎಂದು ನ್ಯಾಯಾಲಯವು ಈ ಹಿಂದೆ ಘೋಷಿಸಿತ್ತು. ಪಿತೂರಿ ಮತ್ತು ಪ್ರಚೋದನೆಯನ್ನು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಶರಣ್ಯಳ ಸ್ನೇಹಿತ ನಿತಿನ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿತು. ಪೊಲೀಸರು ಮತ್ತು ಪ್ರಾಸಿಕ್ಯೂಷನ್ ಪುರಾವೆಗಳನ್ನು ಕಂಡುಹಿಡಿಯಲು ವಿಫಲವಾಗಿದೆ ಎಂದು…

Read More

ಕಾಸರಗೋಡು-ಮಂಗಳೂರು ಕೆ.ಎಸ್ಸಾರ್ಟಿಸಿ ಪ್ರಯಾಣಿಕರಿಗೆ ಟೋಲ್ ಬಿಸಿ ತಟ್ಟತೊಡಗಿದೆ. ಬಸ್ ದರ 7 ರೂ.ಹೆಚ್ಚಳ

ಮಂಗಳೂರು : ಕಾಸರಗೋಡು-ಮಂಗಳೂರು ಕೆ.ಎಸ್ಸಾರ್ಟಿಸಿ ಪ್ರಯಾಣಿಕರಿಗೆ ಟೋಲ್ ಬಿಸಿ ತಟ್ಟತೊಡಗಿದೆ. ಬಸ್ ದರ 7 ರೂ.ಹೆಚ್ಚಾಗಿದೆ .ಕುಂಬಳೆ ಅರಿಕ್ಕಾಡಿಯಲ್ಲಿ ಟೋಲ್ ಸಂಗ್ರಹ ಆರಂಭವಾದ ಹಿನ್ನೆಲೆಯಲ್ಲಿ ಕಾಸರಗೋಡು-ಮಂಗಳೂರು ನಡುವೆ ಸಂಚರಿಸುವ ಕರ್ನಾಟಕ ಸಾರಿಗೆ (KSRTC) ಬಸ್ ದರವನ್ನು ಹೆಚ್ಚಿಸಲಾಗಿದ್ದು, ಪ್ರಯಾಣಿಕರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಅಂತರರಾಜ್ಯ ಹೆದ್ದಾರಿಯ ಟೋಲ್ ಬೂತ್ ಮೂಲಕ ಹಾದುಹೋಗುವ ಪ್ರತಿ ಪ್ರಯಾಣಿಕರು ಈಗ ಮೂಲ ದರಕ್ಕಿಂತ ಹೆಚ್ಚುವರಿಯಾಗಿ 7 ರೂಪಾಯಿ ಪಾವತಿಸಬೇಕಾಗುತ್ತದೆ. ಈವರೆಗೆ ಕಾಸರಗೋಡಿನಿಂದ ಮಂಗಳೂರಿಗೆ 81 ರೂಪಾಯಿ ಇದ್ದ ಟಿಕೆಟ್ ದರವು ಇದೀಗ…

Read More

ಜನವರಿ 31 ರೊಳಗೆ ಮದುವೆ ಆಗುವಂತೆ ಜಗನ್ನಿವಾಸ್ ರಾವ್ ಮಗ ಕೃಷ್ಣ ಜೆ ರಾವ್ ಒಪ್ಪಿಗೆ : ಹಿಂದುಳಿದ ವರ್ಗಗಳ ಅಯೋಗದ ಸದಸ್ಯೆ ಪ್ರತಿಭಾ ಕುಳಾಯಿ

ಮಂಗಳೂರು : ಪುತ್ತೂರಿನಲ್ಲಿ ಬೆಳಕಿಗೆ ಬಂದಿರುವ ‘ಲವ್–ಸೆಕ್ಸ್–ಧೋಖಾ’ ಪ್ರಕರಣ ಸಂಧಾನ ಹಂತಕ್ಕೆ ಬಂದಿದ್ದು ಮದುವೆಯಾಗುವುದಾಗಿ ಕೃಷ್ಣನ ಕುಟುಂಬದವರು ಒಪ್ಪಿಗೆಯನ್ನು ಸೂಚಿಸಿದ್ದಾರೆ ಎಂಬುದಾಗಿ ಈಗಾಗಲೇ ತಿಳಿದು ಬಂದಿದೆ . ಕೃಷ್ಣ ಜಿ ರಾವ್ ಜನವರಿ 31ರೊಳಗೆ ಮದುವೆ ಆಗದಿದ್ದರೆ ಫೆಬ್ರವರಿ 7ರಂದು ನಾಮಕರಣ ಕಾರ್ಯಕ್ರಮ ನಡೆಯಲಿದೆ .ನಂತರ ಯಾವುದೇ ಸಂಧಾನ ಇಲ್ಲ ಎಂದು ಹಿಂದುಳಿದ ವರ್ಗಗಳ ಅಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಅವರು, ಜನವರಿ 24ರಂದು ಕಲ್ಲಡ್ಕದಲ್ಲಿ ಮಗುವಿಗೆ ನಾಮಕರಣಕ್ಕೆ ದಿನ ನಿಗದಿಪಡಿಸಲಾಗಿತ್ತು….

Read More

ವೇತನ ಪಾವತಿ ವಿಳಂಬ ಖಂಡಿಸಿ ಬಂಟ್ವಾಳ ಪುರಸಭೆ ಎದುರು ಕನಿಷ್ಠ ವೇತನ–ಹೊರಗುತ್ತಿಗೆ ನೌಕರರ ಮರು ಪ್ರತಿಭಟನೆ, ಕುಡಿಯುವ ನೀರಿಗೆ ಸಂಕಷ್ಟ

ಬಂಟ್ವಾಳ: ಬಂಟ್ವಾಳ ಪುರಸಭಾ ಕಾರ್ಯಾಲಯದಲ್ಲಿ 2025 ನವೆಂಬರ್ ಮತ್ತು ಡಿಸೆಂಬರ್ ತಿಂಗಳ ವೇತನ ಪಾವತಿಸದಿರುವ ಬಗ್ಗೆ ಕನಿಷ್ಠ ವೇತನ ಮತ್ತು ಹೊರಗುತ್ತಿಗೆ ನೌಕರರರಿಂದ ಪುರಸಭೆಯ ಬಾಗಿಲಿನಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.ಕಳೆದ ಜ.6 ರಂದು ಕಾರ್ಮಿಕರ ವೇತನ ಪಾವತಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು.ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯರುಗಳು ಪ್ರತಿಭಟನೆಗೆ ಸಾಥ್ ನೀಡಿದ್ದು, ಕಾರ್ಮಿಕರ ಪರವಾಗಿ ಪುರಸಭಾ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರ ಜೊತೆ ಮಾತುಕತೆ ನಡೆಸಿದರು.ಈ ವೇಳೆ ಕಾರ್ಮಿಕರಿಗೆ ವೇತನ ನೀಡುವ ಭರವಸೆಯನ್ನು ನೀಡಿದ್ದು,ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದಕ್ಕೆ,…

Read More

ಜನವರಿ 24ರಂದು : ಲಯನ್ಸ್ ಜಿಲ್ಲೆ 317D, ಪ್ರಾಂತ III ವತಿಯಿಂದ ‘ಪರಿಕ್ರಮ’ ಪ್ರಾಂತೀಯ ಸಮ್ಮೇಳನ*

ಮಂಗಳೂರು : ಲಯನ್ಸ್ ಜಿಲ್ಲೆ 317D, ಪ್ರಾಂತ್ಯ III, ಪ್ರಾಂತೀಯ ಸಮ್ಮೇಳನ ‘ಪರಿಕ್ರಮ’ ಸಮಾರಂಭವು ಜನವರಿ 24ರಂದು ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಇವರ ಆತಿಥ್ಯದಲ್ಲಿ ನಗರದ ಸುಲ್ತಾನ್ ಬತ್ತೇರಿ ಬಳಿ ಇರುವ ಸ್ವಸ್ತಿಕಾ ವಾಟರ್ ಫಂಟ್ ಇಲ್ಲಿ ಸಂಜೆ 3:30 ರಿಂದ ನಡೆಯಲಿದೆ ಎಂದು ಪ್ರಾಂತ್ಯ IIIರ ಪ್ರಾಂತೀಯ ಅಧ್ಯಕ್ಷೆ ಗಾಯತ್ರಿ ಅರವಿಂದ ರಾವ್ ಕೇದಿಗೆ ಹೇಳಿದರು. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್  200ಕ್ಕೂ ಹೆಚ್ಚು ದೇಶಗಳಲ್ಲಿ…

Read More

ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನ : ಎರಡು ತಿಂಗಳಲ್ಲಿ 14 ಕೋಟಿಗೂ ಮಿಕ್ಕಿ ಆದಾಯ

ಸುಬ್ರಹ್ಮಣ್ಯ : ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2025 ನವಂಬರ್ ಹಾಗೂ ಡಿಸೆಂಬರ್ ನ ಎರಡು ತಿಂಗಳಲ್ಲಿ ಒಟ್ಟು 14 ಕೋಟಿ 77 ಲಕ್ಷದ 80,000 ರೂ. ಆದಾಯ ಬಂದಿರುತ್ತದೆ.ನವೆಂಬರ್ ತಿಂಗಳಲ್ಲಿ ವಿವಿಧ ಸೇವೆಗಳಿಂದ 4,5621739 ಕೋಟಿರೂಪಾಯಿ ಹುಂಡಿಯಿಂದ 1,0976957 ಕೋಟಿ ರೂಪಾಯಿ ಹಾಗೂ ಅನ್ನದಾನ ನಿಧಿಯಿಂದ 8357769 ಲಕ್ಷ ರೂಪಾಯಿ ಆದಾಯ ಬಂದಿರುತ್ತದೆ. ಹಾಗೆಯೇ ಡಿಸೆಂಬರ್ ತಿಂಗಳ ವಿವಿಧ ಸೇವೆಗಳಿಂದ 5,3018923 ಕೋಟಿ ರೂಪಾಯಿ ಹುಂಡಿಯಿಂದ 1,9063518 ಕೋಟಿ…

Read More

ಡ್ರಗ್ಸ್ ಯುವ ಸಮಾಜ–ಕುಟುಂಬ ನಾಶಕ್ಕೆ ಕಾರಣ:ದೇಶ ಕಟ್ಟುವ ಶಕ್ತಿಗಳಾಗಿ ಯುವ ಸಮಾಜ ಬೆಳೆಯಬೇಕು‌ — ಶಾಸಕ ಡಾ. ಭರತ್ ಶೆಟ್ಟಿ

ಮಂಗಳೂರು:ಡ್ರಗ್ಸ್ ನಿಂದ ಜೀವನ, ಕುಟುಂಬ ನಾಶವಾಗುತ್ತದೆ ದೇಶ ಕಟ್ಟುವ ಶಕ್ತಿಗಳಾಗಿ ಯುವ ಸಮಾಜ ಬೆಳೆಯಬೇಕು‌ ಎಂದು‌ ವೈದ್ಯರೂ ಆಗಿರುವ ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ.ಭಾರತದ ಯುವ ಸಮಾಜವು ಸ್ವಾಮಿ ವಿವೇಕಾನಂದರ ರಾಷ್ಟ್ರೀಯತೆಯ ವಿಚಾರಧಾರೆಯನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಡ್ರಗ್ಸ್ ಮುಕ್ತರಾಗಿ ದೇಶ ಕಟ್ಟುವ ಕಾಯಕದಲ್ಲಿ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು. ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಪ್ರಯುಕ್ತ ಯೂಥ್ ಫಾರ್ ನೇಶನ್ ಯುವ ಸಂಘಟನೆ ವತಿಯಿಂದ ಸುರತ್ಕಲ್ ಗೋವಿಂದ ದಾಸ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಆಯೋಜಿಸಲಾದ…

Read More

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅ.ಕ್ರ: 60/2009, ಕಲಂ:420 ಐಪಿಸಿ ಪ್ರಕರಣದಲ್ಲಿ ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿದ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಾಸನ ಚನ್ನರಾಯಪಟ್ಟಣ ನಿವಾಸಿ S N ಚಂದ್ರೆಗೌಡ ಎಂಬಾತನನ್ನು, ಹಾಸನ ಚನ್ನರಾಯಪಟ್ಟಣದ ಬೆಳಗಿಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ದಿನಾಂಕ 20/01/2026 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Read More

ಉಡುಪಿ ಜಿಲ್ಲಾಧಿಕಾರಿಯ ಭಗವಾಧ್ವಜ ಪ್ರಕರಣಕ್ಕೆ ತೀವ್ರ ವಿರೋಧ: ದೇವಾಲಯಗಳಲ್ಲಿ ರಾಜಕೀಯ ಪತಾಕೆ ಬೇಡ — ರಮಾನಾಥ ರೈ

ಮಂಗಳೂರು:ಉಡುಪಿ ಜಿಲ್ಲಾಧಿಕಾರಿಯವರು ಭಗವಾದ್ವಜದ ಮೂಲಕ ಪರ್ಯಾಯಕ್ಕೆ ಚಾಲನೆ ನೀಡಿದ ಪ್ರಕರಣ ಈಗ ವಿವಾದಕ್ಕೆ ಕಾರಣವಾಗಿದೆ.ಮಂಗಳೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಹಾಗು ಕಾಂಗ್ರೆಸ್ ನಾಯಕ ರಮಾನಾಥ ರೈ ಅವರು ಜಿಲ್ಲಾಧಿಕಾರಿ ‌ಭಗವಾದ್ವಜ ಹಿಡಿದು ಚಾಲನೆ ನೀಡಿದುದನ್ನು ಖಂಡಿಸಿದ್ದಾರೆ .ಕೇಸರಿ ಧ್ವಜ ಹಿಡಿದುದನ್ನು ಎಲ್ಲಾ ಕಾಂಗ್ರೆಸಿಗರು ತಪ್ಪು ಅಂತ ಹೇಳಬೇಕು.ನೀವು ಯಾವುದೇ ಬಣ್ಣದ ಪತಾಕೆ ಹಾಕಬೇಡಿ.ದೇವಸ್ಥಾನದಲ್ಲಿ ಕಾಂಗ್ರೆಸ್ ಪತಾಕೆ, ಕೇಸರಿ, ಹಸಿರು ಯಾವುದೇ ಪತಾಕೆ ಹಾಕಬೇಡಿ ಎಂದವರು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ದೇವಸ್ಥಾನದ ಕಾರ್ಯಕ್ರಮ, ಎಲ್ಲರಿಗೂ ಸಮಾನವಾದ ಕಾರ್ಯಕ್ರಮ.ಯಾವುದೇ…

Read More
error: Content is protected !!