ಬಂಟ್ವಾಳದಲ್ಲಿ ಶ್ರೀರಾಮ ನವಮಿ ಅಂಗವಾಗಿ ಪೂಜೆ–ಯಾಗ ಕಾರ್ಯಕ್ರಮ
ಬಂಟ್ವಾಳ: ಶ್ರೀರಾಮ ನವಮಿ ಪ್ರಯುಕ್ತ ಶ್ರೀರಾಮ ಭಜನಾ ಮಂದಿರ ಟ್ರಸ್ಟ್ (ರಿ.) ಮತ್ತು ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆ, ಶಿವಾಜಿನಗರ–ಕಾಮಾಜೆ, ದೈಪಲ ವತಿಯಿಂದ 15ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶ್ರೀರಾಮ ತಾರಕ ಯಾಗ ಮಾ. 27ರಂದು ನಡೆಯಲಿದೆ ಎಂದು ಮಂದಿರದ ಅಧ್ಯಕ್ಷ ಕೇಶವ ದೈಪಲ ತಿಳಿಸಿದ್ದಾರೆ. ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೇದಮೂರ್ತಿ ಶ್ರೀ ರಾಜಗೋಪಾಲಾಚಾರ್ಯ ಅವರ ನೇತೃತ್ವದಲ್ಲಿ ಒಂದು ಲಕ್ಷ ಶ್ರೀರಾಮ ತಾರಕ ಜಪ ನಡೆಯಲಿದೆ ಎಂದರು. ರಾತ್ರಿ 8…