ಬಂಟ್ವಾಳದಲ್ಲಿ ಶ್ರೀರಾಮ ನವಮಿ ಅಂಗವಾಗಿ ಪೂಜೆ–ಯಾಗ ಕಾರ್ಯಕ್ರಮ

ಬಂಟ್ವಾಳ: ಶ್ರೀರಾಮ ನವಮಿ ಪ್ರಯುಕ್ತ ಶ್ರೀರಾಮ ಭಜನಾ ಮಂದಿರ ಟ್ರಸ್ಟ್ (ರಿ.) ಮತ್ತು ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆ, ಶಿವಾಜಿನಗರ–ಕಾಮಾಜೆ, ದೈಪಲ ವತಿಯಿಂದ 15ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶ್ರೀರಾಮ ತಾರಕ ಯಾಗ ಮಾ. 27ರಂದು ನಡೆಯಲಿದೆ ಎಂದು ಮಂದಿರದ ಅಧ್ಯಕ್ಷ ಕೇಶವ ದೈಪಲ ತಿಳಿಸಿದ್ದಾರೆ. ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೇದಮೂರ್ತಿ ಶ್ರೀ ರಾಜಗೋಪಾಲಾಚಾರ್ಯ ಅವರ ನೇತೃತ್ವದಲ್ಲಿ ಒಂದು ಲಕ್ಷ ಶ್ರೀರಾಮ ತಾರಕ ಜಪ ನಡೆಯಲಿದೆ ಎಂದರು. ರಾತ್ರಿ 8…

Read More

ಕೊಣಾಜೆಯಲ್ಲಿ ಬ್ಯಾರಿ ಜನಪದ–ವಚನ ಸಾಹಿತ್ಯ ಪ್ರಚಾರೋಪನ್ಯಾಸ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ, ನಡುಪದವಿನ ಪಿಎ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ‘ಬ್ಯಾರಿ ಜನಪದ ಮತ್ತು ವಚನ ಸಾಹಿತ್ಯ’ ಕುರಿತ ಪ್ರಚಾರೋಪನ್ಯಾಸ ಕಾರ್ಯಕ್ರಮ ಪೇಸ್ ನಾಲೆಜ್ ಸಿಟಿಯ ಮಲ್ಟಿಪರ್ಪಸ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಡಾ. ಧನಂಜಯ ಕುಂಬ್ಳೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭಾಷೆ, ಸಂಸ್ಕೃತಿ ಮತ್ತು ಜನಾಂಗದ ಕುರಿತ ಸಂಶೋಧನೆಗಳು ನಿರಂತರವಾಗಿರಬೇಕು. ಸಂಶೋಧನೆಗಳು ಏಕಮುಖವಾಗದೆ, ಪ್ರಶ್ನೆ–ಉಪಪ್ರಶ್ನೆಗಳ ಮೂಲಕ ಜ್ಞಾನ ವಿಸ್ತಾರಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಯೆನೆಪೋಯ ಇನ್‌ಸ್ಟಿಟ್ಯೂಟ್‌ನ ಸಹಾಯಕ ಪ್ರಾಧ್ಯಾಪಕ…

Read More

ನಂದಿಗುಡ್ಡೆಯ ‘ಹಲಸಿನ ಹಣ್ಣಿನ ಸರದಾರ’: ರೊನಾಲ್ಡ್ ಅವರ ಯಶೋಗಾಥೆ

ಮಂಗಳೂರು: ಪ್ರಕೃತಿಯ ಅಮೂಲ್ಯ ಕೊಡುಗೆಯಾದ ಹಲಸಿನ ಹಣ್ಣು ಸಾಮಾನ್ಯವಾಗಿ ಮಳೆಗಾಲದ ಆರಂಭದಲ್ಲಿ ಮಾತ್ರ ಲಭ್ಯವಾಗುತ್ತದೆ. ಆದರೆ ಮಂಗಳೂರಿನ ನಂದಿಗುಡ್ಡೆ–ಮಾರ್ನಮಿಕಟ್ಟೆ ರಸ್ತೆ ಬದಿಯಲ್ಲಿ ವರ್ಷಪೂರ್ತಿ ಸವಿಯಾದ ಹಲಸಿನ ಹಣ್ಣುಗಳನ್ನು ಒದಗಿಸುವ ಮೂಲಕ ಮುಡಿಪು ನಿವಾಸಿ ರೊನಾಲ್ಡ್ ಎಲ್ಲರ ಗಮನ ಸೆಳೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ವಿರಾಮವಿಲ್ಲದೆ ವ್ಯಾಪಾರ ನಡೆಸುತ್ತಿರುವ ರೊನಾಲ್ಡ್, ಹಲಸಿನ ಹಣ್ಣಿನ ಸೀಸನ್ ಮುಗಿದರೂ ಗ್ರಾಹಕರಿಗೆ ನಿರಂತರವಾಗಿ ಹಣ್ಣುಗಳನ್ನು ಒದಗಿಸುತ್ತಿದ್ದಾರೆ. ತಮಿಳುನಾಡು, ಆಂಧ್ರಪ್ರದೇಶ ಹಾಗೂ ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಪ್ರದೇಶಗಳಿಂದ ಹಣ್ಣುಗಳನ್ನು ತರಿಸಿ ಮಾರಾಟ ಮಾಡುವುದು…

Read More

ಅಶ್ರಫ್ ಪರ ಭಾರೀ ಬೆಂಬಲ: ಯುಡಿಎಫ್ ಸಮಾವೇಶದಲ್ಲಿ ಜನಸಾಗರ

ಮಂಜೇಶ್ವರ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆ, ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ ಅವರ ಗೆಲುವಿಗಾಗಿ ಆಯೋಜಿಸಲಾದ ‘ಯುಡಿಎಫ್ ಮಂಡಲ ಕನ್ವೆನ್ಷನ್’ ಮಂಗಳವಾರ ಭರ್ಜರಿಯಾಗಿ ನಡೆಯಿತು. ನಯಾಬಜಾರ್‌ನ ಫೆರೋ ಆಡಿಟೋರಿಯಂನಲ್ಲಿ ನಡೆದ ಈ ಬೃಹತ್ ಸಮಾವೇಶವು ಸಾವಿರಾರು ಕಾರ್ಯಕರ್ತರನ್ನು ಆಕರ್ಷಿಸಿ, ಕ್ಷೇತ್ರದಲ್ಲಿ ಚುನಾವಣಾ ಕಾವು ಹೆಚ್ಚಿಸಿದೆ. ಸಂಜೆ 3 ಗಂಟೆಗೆ ಆರಂಭವಾದ ಸಮಾವೇಶವನ್ನು ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಮಂಜೇಶ್ವರವು ಸೌಹಾರ್ದತೆಯ ನೆಲೆಬೀಡು. ಎ.ಕೆ.ಎಂ. ಅಶ್ರಫ್ ಅವರ ಗೆಲುವು ಕ್ಷೇತ್ರದ…

Read More

ಬಂಟ್ವಾಳ : ಉಳಿ ಭೂಮಿಕ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕಿನ ಉಳಿ ಭೂಮಿಕ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ವಿಶ್ವನಾಥ್ ಅವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಗಿರಿಯಪ್ಪ ನೆರವೇರಿಸಿದರು. ಬಳಿಕ ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಮಾತನಾಡಿ, ಗ್ರಾಮ ಅಭಿವೃದ್ಧಿ ಯೋಜನೆಯಿಂದ ಮಹಿಳೆಯರ ಸಬಲೀಕರಣಕ್ಕಾಗಿ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಾತೃಶ್ರೀ ಹೇಮಾವತಿ ಅಮ್ಮನವರ ಈ…

Read More

ಮಾಜಿ ಶಾಸಕ ರಘುಪತಿ ಧರಣಿಗೆ ಮಣಿದ ನಗರಾಭಿವೃದ್ಧಿ ಪ್ರಾಧಿಕಾರ; ಸಿಂಗಲ್ ಲೇಔಟ್ ಗೆ ಅನುಮತಿ ಪತ್ರ ಹಸ್ತಾಂತರ

ಭಟ್ಟರ ಬಡಾನಿಡಿಯೂರು ರೆಸಾರ್ಟ್ ನ ಏಕವಿನ್ಯಾಸ ನಕ್ಷೆಗೆ ಅನುಮೋದನೆ ನೀಡಿದ ನಗರಾಭಿವೃದ್ಧಿ ಪ್ರಾಧಿಕಾರ ಉಡುಪಿ: ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ವಿಳಂಬ ಖಂಡಿಸಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ಮಾಜಿ ಶಾಸಕ ರಘುಪತಿ ಭಟ್ ಅನಿರ್ದಿಷ್ಟಾವಧಿ ಧರಣಿ ಆರಂಭ ಮಾಡಿದ ಎರಡನೇ ದಿನಕ್ಕೆ ಯಶಸ್ಸು ಸಿಕ್ಕಿದೆ. ಕಳೆದ ಎರಡು ವರ್ಷಗಳಿಂದ ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಆದೇಶ ನೀಡದೆ ಸತಾಯಿಸುತ್ತಿದೆ ಎಂದು ಆರೋಪಿಸಿ ಮಾಜಿ ಶಾಸಕ ರಘುಪತಿ ಭಟ್ ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಪ್ರಾಧಿಕಾರದ ಕಚೇರಿ…

Read More

ದೌರ್ಜನ್ಯ ಪ್ರಕರಣ ಪರಿಹಾರ ತ್ವರಿತವಾಗಿ ವಿತರಿಸಲು ಜಿಲ್ಲಾಧಿಕಾರಿ ಸೂಚನೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ತ್ವರಿತವಾಗಿ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಹಾಗೂ ಎಸ್.ಸಿ.ಪಿ – ಟಿ.ಎಸ್.ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ದೌರ್ಜನ್ಯ ಪ್ರಕರಣಗಳ ಎಫ್.ಐ.ಆರ್ ದಾಖಲಾದ ನಂತರ ಪರಿಹಾರವನ್ನು ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು. ಸಂತ್ರಸ್ತರು ಅಗತ್ಯ ದಾಖಲೆಗಳನ್ನು ಹೊಂದಿಸಲು ಸಮಾಜ ಕಲ್ಯಾಣ ಇಲಾಖೆಯು ಸಹಕಾರ ನೀಡಬೇಕು ಎಂದು…

Read More

ಮಂಗಳೂರು ವಿ.ವಿ. ವಾರ್ಷಿಕ ಘಟಿಕೋತ್ಸವ ಮಾ. 28ರಂದು

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವವು ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

Read More

ಸಜೀಪಮಾಗಣೆ ಪಡೇರ ಮಾಡ ಕ್ಷೇತ್ರದಲ್ಲಿ ನೇಮೋತ್ಸವ: ಸಂಪ್ರದಾಯಬದ್ಧ ರಜತಪಲ್ಲಕ್ಕಿ ಸೇವೆ

ಸಜೀಪಮಾಗಣೆ: ಪಡೇರ ಮಾಡ ಕ್ಷೇತ್ರದಲ್ಲಿ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಶ್ರೀ ದೈವಗಳು ಹಾಗೂ ಶ್ರೀ ನಾಲ್ಕೈಥಾಯ ದೈವದ ನೇಮೋತ್ಸವದ ಅಂಗವಾಗಿ ಸಂಪ್ರದಾಯಬದ್ಧ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಪೂರ್ವಶಿಷ್ಟ ಸಂಪ್ರದಾಯದಂತೆ ಕಾಂತಡಿ ಗುತ್ತುವಿನಿಂದ ಸಂಕೇಶ ಬಂಡಾರದ ಮನೆಗೆ ಆಗಮಿಸಿದ ಶ್ರೀ ದೈವಗಳ ಕಿರುವಾಳು, ಆಭರಣಗಳು, ವಾದ್ಯ-ಬ್ಯಾಂಡು, ಕೊಂಬು ಸೇರಿದಂತೆ ಸಕಲ ಬಿರುದಾವಳಿಗಳೊಂದಿಗೆ ರಜತ ಪಲ್ಲಕ್ಕಿಯಲ್ಲಿ ಸುಮಾರು ಆರು ಕಿಲೋಮೀಟರ್ ಕಾಲ್ನಡಿಗೆಯಲ್ಲಿ ರಾತ್ರಿಯಿಡೀ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆ ಕಲ್ಲಾಡಿಗೋಳಿ, ದೇರಾಜೆ ಹಾಗೂ ಸಜೀಪ ಪೇಟೆಯ ಮೂಲಕ ಸಾಗುತ್ತಾ…

Read More

ಮಾಳದಲ್ಲಿ ಟಿಪ್ಪರ್–ಸ್ಕೂಟರ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾ. 24ರಂದು ಬೆಳಿಗ್ಗೆ ಮಾಳ ಮುಳ್ಳೂರು ಪ್ರದೇಶದಲ್ಲಿ ನಡೆದಿದೆ. ನವೀನ್ ಬಜಗೋಳಿ (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಅವರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ಜೊತೆಗೆ ಹಾವು ಹಿಡಿಯುವ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದರು. ಇಂದು ಬೆಳಿಗ್ಗೆ ಹಾವನ್ನು ಹಿಡಿದು ಕಾಡಿಗೆ ಬಿಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ನವೀನ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಕೂಟಿಯ…

Read More
error: Content is protected !!