ಕಾಸರಗೋಡು ಕನ್ನಡಿಗರ ಆತಿಥ್ಯ ಅವಿಸ್ಮರಣೀಯ: ನಾ. ನಾಗಚಂದ್ರ
ಕಾಸರಗೋಡು: ಗಡಿನಾಡು ಕಾಸರಗೋಡಿನ ಕನ್ನಡಿಗರು ತೋರಿಸುವ ಆತಿಥ್ಯ, ಪ್ರೀತ್ಯಾದರ ಹೃದಯಸ್ಪರ್ಶಿಯಾಗಿದ್ದು, ಅದನ್ನು ಮರೆಯಲು ಸಾಧ್ಯವಿಲ್ಲ ಎಂದು ರಂಗಭೂಮಿ ನಟ, ನಿರ್ದೇಶಕ ಹಾಗೂ ಸಾಹಿತಿ ನಾ. ನಾಗಚಂದ್ರ ಹೇಳಿದ್ದಾರೆ. ನುಳ್ಳಿಪ್ಪಾಡಿಯ ಡಾ. ವಾಮನ್ ರಾವ್ ಬೇಕಲ್ ಅವರ ಸಾರಥ್ಯದಲ್ಲಿ ನಡೆಯುವ ಕನ್ನಡ ಭವನ ಗ್ರಂಥಾಲಯದಲ್ಲಿ “ಕನ್ನಡ ಪಯಸ್ವಿನಿ ಪ್ರಶಸ್ತಿ” ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕದ ಹಲವಾರು ಭಾಗಗಳಿಗೆ ಭೇಟಿ ನೀಡಿದ ಅನುಭವದಲ್ಲಿಯೂ ಕಾಸರಗೋಡಿನಂತಹ ಪ್ರೀತಿ, ಗೌರವ ಎಲ್ಲಿಯೂ ಸಿಗಲಿಲ್ಲ ಎಂದು ಹೇಳಿದರು. ಯಕ್ಷಗಾನ ಪಿತಾಮಹ ಪಾರ್ತಿಸುಬ್ಬ, ರಾಷ್ಟ್ರಕವಿ ಮಂಜೇಶ್ವರ…