ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಅನಿತಾ ಕಾಸರಗೋಡು ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಹಾಗೂ ಬಂಟ್ಸ್ ಸಮುದಾಯಗಳ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್‌ಗಳನ್ನು ಪ್ರಕಟಿಸಿದ ಆರೋಪದಡಿ ಅನಿತಾ ಕಾಸರಗೋಡು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಮುದಾಯಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪೊಲೀಸರಿಗೆ ದೂರು ಸಲ್ಲಿಸಿದ್ದವು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿನ…

Read More

ಮಕ್ಕಳ ಹಕ್ಕುಗಳ ಆಯೋಗದ ನೇಮಕಾತಿ ರದ್ದುಪಡಿಸಲು ಆಗ್ರಹ: ಅರ್ಹತಾ ಮಾನದಂಡ ಉಲ್ಲಂಘನೆ ಆರೋಪ

ಮಂಗಳೂರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರಾಗಿ ನೇಮಕಗೊಂಡಿರುವ ಕೆಲವರು ನಿಗದಿತ ಅರ್ಹತಾ ಮಾನದಂಡಗಳನ್ನು ಹೊಂದಿಲ್ಲ. ಹೀಗಾಗಿ ಅವರ ನೇಮಕಾತಿ ಅಧಿಸೂಚನೆಯನ್ನು ತಕ್ಷಣ ಹಿಂಪಡೆದು, ಕಾನೂನಿನ ಪ್ರಕಾರ ಅರ್ಹ ವ್ಯಕ್ತಿಗಳನ್ನು ನೇಮಕ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳ ಹಕ್ಕುಗಳ ಪರವಾಗಿ ಕಾರ್ಯನಿರ್ವಹಿಸುವ ಸಮಾನಾಸಕ್ತ ಸಂಘಟನೆಗಳು ಆಗ್ರಹಿಸಿವೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಡಿ ಸಂಸ್ಥೆಯ ಸಂಚಾಲಕ ರೆನ್ನಿ ಡಿಸೋಜಾ, ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿಯಲ್ಲಿ…

Read More

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಗೆ ಖಾಸಗಿ ಬಸ್ ಮಾಲೀಕರ ವಿರೋಧ: ಮುಷ್ಕರದ ಎಚ್ಚರಿಕೆ

ತ್ರಿಶೂರ್: ಕೆಎಸ್‌ಆರ್‌ಟಿಸಿ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ ಖಾಸಗಿ ಬಸ್ ಮಾಲೀಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬಜೆಟ್‌ನಲ್ಲಿ ಖಾಸಗಿ ಬಸ್ ವಲಯಕ್ಕೆ ಸೂಕ್ತ ಪರಿಹಾರ ಘೋಷಿಸದಿದ್ದರೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಹಿಳಾ ಪ್ರಯಾಣಿಕರ ಸಂಖ್ಯೆಯೇ ಖಾಸಗಿ ಬಸ್‌ಗಳ ಆದಾಯದ ಪ್ರಮುಖ ಮೂಲವಾಗಿದ್ದು, ಉಚಿತ ಪ್ರಯಾಣ ಯೋಜನೆಯಿಂದ ಭಾರೀ ನಷ್ಟ ಉಂಟಾಗಲಿದೆ. ಇದರಿಂದ ಸೇವೆ ಮುಂದುವರಿಸುವುದು ಕಷ್ಟವಾಗಲಿದೆ ಎಂದು ಬಸ್ ಮಾಲೀಕರ ಸಂಘ ತಿಳಿಸಿದೆ. ಖಾಸಗಿ ಬಸ್‌ಗಳ ಸೇವೆ ಸ್ಥಗಿತಗೊಂಡರೆ…

Read More

ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಖಂಡಿಸಿ ಪ್ರತಿಭಟನೆ

ಮಂಗಳೂರು, ಜೂ.11: ಮಂಗಳೂರಿನ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಪ್ರಯತ್ನವನ್ನು ಖಂಡಿಸಿ ಹಾಗೂ ಸಾಂಪ್ರದಾಯಿಕ ಸಂಡೆ ಬಜಾರ್ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ (ರಿ), ಸಿಐಟಿಯು (CITU) ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ನಗರಪಾಲಿಕೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ದಾಳಿ ನಡೆಸಲು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿ ಪ್ರಸನ್ನ ರವಿ…

Read More

ಬಂಟ್ವಾಳ ಆಡಳಿತ ಸೌಧದ ಲಿಪ್ಟ್‌ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು: ತಪ್ಪಿದ ಭಾರೀ ಅನಾಹುತ

ಬಂಟ್ವಾಳ, ಜೂ.11: ಬಂಟ್ವಾಳ ಆಡಳಿತ ಸೌಧದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಅಳವಡಿಸಲಾಗಿರುವ ಲಿಪ್ಟ್‌ನಲ್ಲಿ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು ಆತಂಕದ ಕ್ಷಣಗಳನ್ನು ಅನುಭವಿಸಿದ ಘಟನೆ ಮಧ್ಯಾಹ್ನ ನಡೆದಿದೆ. ಆಡಳಿತ ಸೌಧದ ಮೇಲಿನ ಮೂರು ಅಂತಸ್ತುಗಳಿಗೆ ತೆರಳಲು ಸಾರ್ವಜನಿಕರು ಲಿಪ್ಟ್ ಬಳಸುತ್ತಿದ್ದು, ಮಧ್ಯಾಹ್ನ ಸುಮಾರು 12.45ರಿಂದ 1.30ರ ಅವಧಿಯಲ್ಲಿ ಕಚೇರಿ ಕೆಲಸಕ್ಕೆ ಬಂದಿದ್ದ ಇಬ್ಬರು ಲಿಪ್ಟ್ ಒಳಗೆ ಸಿಲುಕಿಕೊಂಡಿದ್ದರು. ಲಿಪ್ಟ್‌ನೊಳಗಿದ್ದ ವ್ಯಕ್ತಿಗಳು ಮೊಬೈಲ್ ಮೂಲಕ ತಮ್ಮ ಸ್ನೇಹಿತರಿಗೆ ಮಾಹಿತಿ ನೀಡಿದ್ದು, ಬಳಿಕ ಅವರು ತಹಶೀಲ್ದಾರ್ ಅವರನ್ನು…

Read More

ಕೊರಗ ಜನಾಂಗದ ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಆಗ್ರಹ: ತಹಶೀಲ್ದಾರ್ ಗೈರಿಗೆ ಸಭೆಯಲ್ಲಿ ಆಕ್ರೋಶ

ಬಂಟ್ವಾಳ, ಜೂ.11: ಆದಿವಾಸಿ ಕೊರಗ ಜನಾಂಗದವರ ತಾಲೂಕು ಮಟ್ಟದ ಅಭಿವೃದ್ಧಿ ಸಮಿತಿ ಸಭೆಯು ತಾ.ಪಂ. ಕಾರ್ಯನಿರ್ವಹಣಾಧಿಕಾರಿ (ಇ.ಒ.) ಸಚಿನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬಿಸಿರೋಡಿನ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ವಿನಯ ಕುಮಾರಿ ಅವರ ಉಪಸ್ಥಿತಿಯಲ್ಲಿ ವಿವಿಧ ಇಲಾಖೆಗಳ ಯೋಜನೆಗಳು ಮತ್ತು ಕೊರಗ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು. ಕೊರಗ ಜನಾಂಗಕ್ಕೆ ಸರ್ಕಾರದಿಂದ ಹಲವು ಯೋಜನೆಗಳಿದ್ದರೂ, ಮಾಹಿತಿ ಕೊರತೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವು ಕಟ್ಟಕಡೆಯ ಫಲಾನುಭವಿಗಳಿಗೂ…

Read More

ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬ

ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ ಮೋರೆಯಲ್ಲಿ ಶಾಲೆ ಕಡೆ ಹೆಜ್ಜೆ ಹಾಕುವ ಮಕ್ಕಳು ಶಾಲೆಯಲ್ಲಿ ಮತ್ತೆ ನಿತ್ಯದ ಪಾಠ ನೋಟ್ಸ್ ಗಳಲ್ಲಿ ಒಗ್ಗಿಕೊಳ್ಳಲು ಸ್ವಲ್ಪ ದಿನಗಳಾದರು ಬೇಕೆನ್ನುವುದು ಸಾಮಾನ್ಯ ಸಂಗತಿ. ಮಕ್ಕಳು ಸಂತಸದ ಕಲಿಕೆಯಲ್ಲಿ ಪಾಲ್ಗೊಳ್ಳುವಂತಾಗಬೇಕು ಮತ್ತು ಇಷ್ಟಪಟ್ಟು ಓದಿಕೊಳ್ಳುವಂತಾಗಬೇಕೆನ್ನುವ ಉದ್ದೇಶದಿಂದ ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಮಳೆ ಹಬ್ಬ…

Read More

ರಂಗೋತ್ಸವ ಸಂವಿಧಾನ ಶಿಲ್ಪಿಗೆ, ಹಸಿರು ಕ್ರಾಂತಿಯ ಹರಿಕಾರರಿಗೆ ನೀಡಿದ ಅಪೂರ್ವ ಗೌರವ: ಡಾ. ಸಿ. ಸೋಮಶೇಖರ್

ಬೆಂಗಳೂರು: ಕಳೆದ ನಾಲ್ಕೂವರೆ ದಶಕಗಳಿಂದ ವಿ .ಕೆ.ಎಂ ಕಲಾವಿದರು ಸಂಸ್ಥೆಯಿಂದ ಡಾ. ಬಿ. ಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಸ್ಮಾರಕ ನಾಟಕೋತ್ಸವ ಹಾಗೂ ಸಾಂಸ್ಕೃತಿಕ ಕಲಾಮೇಳವನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಇದು ಸಂವಿಧಾನ ಶಿಲ್ಪಿ ಹಾಗೂ ಹಸಿರು ಕ್ರಾಂತಿಯ ಹರಿಕಾರರಿಬ್ಬರಿಗೂ ನೀಡಿದ ಅಪೂರ್ವ ಗೌರವಾಗಿದೆ ಎಂದು ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಡಾ. ಸಿ ಸೋಮಶೇಖರ್ ಅಭಿಪ್ರಾಯಪಟ್ಟರು. ಬುಧವಾರ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ನಿರತರ 45 ನೇ ವರ್ಷದ ರಂಗೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ…

Read More

ಅಪಾಯದ ಸ್ಥಿತಿಯಲ್ಲಿದ್ದ ಶಾಲೆ, ಅಂಗನವಾಡಿ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಆದೇಶ

​ಮಂಜೇಶ್ವರ: ಅಪಾಯದ ಸ್ಥಿತಿಯಲ್ಲಿರುವ ಉದ್ಯಾವರ ತೊಟ್ಟ ಸರಕಾರಿ ಮುಸ್ಲಿಂ ಎಲ್.ಪಿ. ಶಾಲೆ ಮತ್ತು ಅಂಗನವಾಡಿಯ ಮಕ್ಕಳನ್ನು ಸುರಕ್ಷತೆಯ ದೃಷ್ಟಿಯಿಂದ ಸಮೀಪದ ಕಟ್ಟಡಕ್ಕೆ ಸ್ಥಳಾಂತರಿಸಿ, ಅಲ್ಲಿ ತರಗತಿಗಳನ್ನು ಪ್ರಾರಂಭಿಸಲು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರ ಅಧ್ಯಕ್ಷತೆಯಲ್ಲಿ ಶಾಲೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.ಈ ಬಗ್ಗೆ ಕೆಲ ದಿನಗಳ ಹಿಂದೆ ನಮ್ಮ ಮೀಡಿಯಾ ಸಮಗ್ರ ವರದಿಯನ್ನು ಬಿತ್ತರಿಸಿ ಸಂಬಂದಪಟ್ಟವರ ಗಮನ ಸೆಳೆಯುವ ಪ್ರಯತ್ನ ನಡೆಸಿತ್ತು. ​ಅಸುರಕ್ಷಿತ ಕಟ್ಟಡದಲ್ಲಿ ಶಾಲೆ ನಡೆಯುತ್ತಿರುವ ಕುರಿತಾದ ದೂರಿನ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ಶಿಕ್ಷಣ ಇಲಾಖೆಯಿಂದ ವರದಿ ಪಡೆದಿದ್ದರು….

Read More

ನಾಡೋಜ ಕವಿ ಡಾ. ಕಯ್ಯಾರ ಕಿನ್ಹಣ್ಣ ರೈ ಸ್ಮಾರಕ ಸಾಂಸ್ಕೃತಿಕ ಭವನ ವೀಕ್ಷಿಸಿದ ಶಾಸಕ ಕಲ್ಲಟ್ರ ಮಾಹಿನ್ ಹಾಜಿ

ಕಾಸರಗೋಡು, ಜೂ.11: ಕರ್ನಾಟಕ ಏಕೀಕರಣ ಹೋರಾಟಗಾರ, ನಾಡೋಜ ಕವಿ ಡಾ. ಕಯ್ಯಾರ ಕಿನ್ಹಣ್ಣ ರೈ ಅವರ ಸ್ಮರಣಾರ್ಥ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಕಾಸರಗೋಡು ಜಿಲ್ಲೆಯ ಪೆರಡಾಳದಲ್ಲಿ ನಿರ್ಮಿಸಿರುವ ಸಾಂಸ್ಕೃತಿಕ ಭವನಕ್ಕೆ ಕಾಸರಗೋಡಿನ ನೂತನ ಶಾಸಕ ಕಲ್ಲಟ್ರ ಮಾಹಿನ್ ಹಾಜಿ ಭೇಟಿ ನೀಡಿ ವೀಕ್ಷಿಸಿದರು. ಭವನದ ನಿರ್ಮಾಣ, ಸೌಲಭ್ಯಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪೂರಕವಾದ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದ ಶಾಸಕ ಕಲ್ಲಟ್ರ ಮಾಹಿನ್ ಹಾಜಿ, ಭವನದ ನಿರ್ಮಾಣ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ…

Read More
error: Content is protected !!