ಆಟೋ ಚಾಲಕರ ಸಮಸ್ಯೆಗೆ ಆಕ್ರೋಶ: ಮಂಗಳೂರಿನಲ್ಲಿ ಪ್ರತಿಭಟನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋರಿಕ್ಷಾ ಚಾಲಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಆಟೋ ರಿಕ್ಷಾ, ಟೂರಿಸ್ಟ್ ಮತ್ತು ಭಾರೀ ವಾಹನ ಚಾಲಕರ ಸಂಘ (ಎಐಸಿಸಿಟಿಯು) ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ವಾಹನಗಳ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದ ಆಟೋ ಚಾಲಕರು ಸಂಕಷ್ಟಕ್ಕೊಳಗಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಜೊತೆಗೆ ಮಂಗಳೂರು ನಗರದಲ್ಲಿ ರಿಕ್ಷಾ ಪಾರ್ಕಿಂಗ್ ಸಮಸ್ಯೆ, ಬೈಕ್ ಟ್ಯಾಕ್ಸಿಗಳು ಹಾಗೂ…