ಆಟೋ ಚಾಲಕರ ಸಮಸ್ಯೆಗೆ ಆಕ್ರೋಶ: ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋರಿಕ್ಷಾ ಚಾಲಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಆಟೋ ರಿಕ್ಷಾ, ಟೂರಿಸ್ಟ್ ಮತ್ತು ಭಾರೀ ವಾಹನ ಚಾಲಕರ ಸಂಘ (ಎಐಸಿಸಿಟಿಯು) ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ವಾಹನಗಳ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದ ಆಟೋ ಚಾಲಕರು ಸಂಕಷ್ಟಕ್ಕೊಳಗಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಜೊತೆಗೆ ಮಂಗಳೂರು ನಗರದಲ್ಲಿ ರಿಕ್ಷಾ ಪಾರ್ಕಿಂಗ್ ಸಮಸ್ಯೆ, ಬೈಕ್ ಟ್ಯಾಕ್ಸಿಗಳು ಹಾಗೂ…

Read More

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚಾಲನೆ: ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಚಿವರು

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭವಾಗಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು ಬೆಂಗಳೂರಿನ ಮಲ್ಲೇಶ್ವರಂನ 13ನೇ ಅಡ್ಡರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ (ಕೆಪಿಎಸ್) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅವರು ಆತ್ಮಸ್ಥೈರ್ಯ ತುಂಬಿ ಶುಭ ಹಾರೈಸಿದರು. ಈ ವರ್ಷ ರಾಜ್ಯಾದ್ಯಂತ ಒಟ್ಟು 8,65,988 ವಿದ್ಯಾರ್ಥಿಗಳು 2,870 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ವಿಶೇಷವಾಗಿ 16 ದೃಷ್ಟಿಮಾಂದ್ಯ ಮಕ್ಕಳು ಬರಹಗಾರರ ಸೌಲಭ್ಯ ಬಳಸದೆ,…

Read More

“ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರೈಸ್ತ ಅಲ್ಲ ಹಿಂದೂ!” ಸ್ಪಷ್ಟನೆ ನೀಡಿದ ಕುಟುಂಬ , ಡಾ ರತಿ ಹೇಳಿಕೆಗೆ ಕ್ಷಮೆಯಾಚೆನೆಗೆ ಪಟ್ಟು

“ಕಳೆದ ಮಾರ್ಚ್ 13 ರಂದು ಸುದ್ದಿಗೋಷ್ಠಿ ನಡೆಸಿದ್ದ ಡಾ.ರತಿ ಅವರು ಕರಾವಳಿಯಲ್ಲಿ ದೈವ ನರ್ತನ ಸೇವೆಯನ್ನು ಪಂಬದ, ಪಾಣಾರ ಸುಮಾರು 16 ಜಾತಿಗಳವರು ಮಾಡಬೇಕು ಆದರೆ ಮಂಗಳೂರಿನ ಬೋಳೂರಿನಲ್ಲಿ ಜಾರಂದಾಯ ದೈವಸ್ಥಾನದ ಬಂಟ ದೈವಕ್ಕೆ ಕ್ರಿಶ್ಚಿಯನ್ ಮಹಿಳೆಗೆ ಹುಟ್ಟಿದ ಯುವಕನಿಂದ ನರ್ತನ ಸೇವೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಅವರ ಈ ಆರೋಪಕ್ಕೆ ಬೇಕಾದ ಜಾತಿ ಪ್ರಮಾಣಪತ್ರ ನಮ್ಮಲ್ಲಿದ್ದು ನರ್ತನ ಸೇವೆ ಮಾಡಿರುವ ಸುಶಾಂತ್ ಬಂಗೇರ ಒಬ್ಬ ಹಿಂದೂ ಆಗಿದ್ದು ಪಂಬದ ಸಮಾಜಕ್ಕೆ ಸೇರಿದವನು“ ಎಂದು ದೈವನರ್ತಕ ಸೂರಜ್…

Read More

ಅಂಗಡಿಪದವಿನಲ್ಲಿ ಮಾರ್ಚ್ 22ರಂದು ಬೃಹತ್ ರಕ್ತದಾನ ಶಿಬಿರ

ಹೊಸಂಗಡಿ: ಅಂಗಡಿಪದವು, ಶ್ರೀ ಆದಿಶಕ್ತಿ ಭಜನ ಮಂಡಳಿ, ಆದಿಶಕ್ತಿ ತರವಾಡು ಕ್ಷೇತ್ರ, ಚೇತನ್ ನಗರ ಅಂಗಡಿಪದವು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಕಾರದೊಂದಿಗೆ ಈ ಶಿಬಿರ ನಡೆಯಲಿದೆ. ಮಾರ್ಚ್ 22ರಂದು ಆದಿತ್ಯವಾರ ಬೆಳಗ್ಗೆ 10.00 ಗಂಟೆಗೆ ನಡೆಯಲಿರುವ ಈ ಶಿಬಿರವು ದಿ. ಪ್ರಜ್ವಲ್ ಅವರ ದ್ವಿತೀಯ ವರ್ಷದ ಸ್ಮರಣಾರ್ಥವಾಗಿ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಶಿಬಿರವು ಆದಿಶಕ್ತಿ ತರವಾಡು ಕ್ಷೇತ್ರ, ಚೇತನ್ ನಗರ, ಅಂಗಡಿಪದವು ಪ್ರದೇಶದಲ್ಲಿ ನಡೆಯಲಿದ್ದು, ಸಾರ್ವಜನಿಕರು…

Read More

ಮಂಜೇಶ್ವರದಲ್ಲಿ ಎನ್‌ಡಿಎ ಪ್ರಚಾರಕ್ಕೆ ಚಾಲನೆ: ಸುರೇಶ್ ಗೋಪಿ ಗೋಡೆ ಬರಹ

ಮಂಜೇಶ್ವರ: ವಿಧಾನಸಭಾ ಚುನಾವಣೆಯನ್ನು ಹಿನ್ನೆಲೆ ಮಾಡಿಕೊಂಡು ಎನ್‌ಡಿಎ ಪ್ರಚಾರ ಚಟುವಟಿಕೆಗಳು ಮಂಜೇಶ್ವರ ಕ್ಷೇತ್ರದಲ್ಲಿ ವೇಗ ಪಡೆದುಕೊಂಡಿವೆ. ಇದರ ಭಾಗವಾಗಿ ಕೇಂದ್ರ ಸಚಿವರಾದ ಸುರೇಶ್ ಗೋಪಿ ಅವರು ಕುಂಬಳೆ ಪಟ್ಟಣದಲ್ಲಿ ಗೋಡೆ ಬರಹದ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಂಜೇಶ್ವರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ. ಸುರೇಂದ್ರನ್, ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ, ಎನ್‌ಡಿಎ ಸಂಯೋಜಕ ವಿಜಯ್ ಕುಮಾರ್ ರೈ ಸೇರಿದಂತೆ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು. ಇದೇ ವೇಳೆ ರಾಜ್ಯ…

Read More

ಶಿರಿಯ ಮುಸ್ಲಿಂ ಲೀಗ್ ವತಿಯಿಂದ ರoಝಾನ್ ನೆರವು ವಿತರಣೆ: ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಸಹಾಯ

ಶಿರಿಯ: ಪವಿತ್ರ ರoಝಾನ್ ತಿಂಗಳ ಅಂಗವಾಗಿ ಶಿರಿಯ ಮುಸ್ಲಿಂ ಲೀಗ್ ಸಮಿತಿಯ ವತಿಯಿಂದ ರಮಝಾನ್ ನೆರವು ವಿತರಣೆ ಕಾರ್ಯಕ್ರಮ ಭರ್ಜರಿಯಾಗಿ ನಡೆಯಿತು. ಮಂಗಲ್ಪಾಡಿ ಪಂಚಾಯತ್ ಅಧ್ಯಕ್ಷ ಗೋಲ್ಡನ್ ರಹ್ಮಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಅರ್ಹ ಕುಟುಂಬಗಳಿಗೆ ನೆರವು ಕಿಟ್‌ಗಳನ್ನು ಹಾಗೂ ಸುಮಾರು 50 ಮಕ್ಕಳಿಗೆ ಈದ್ ಹಬ್ಬದ ಉಡುಪುಗಳನ್ನು ವಿತರಿಸಲಾಯಿತು. ಮಂಗಲ್ಪಾಡಿ ಮುಸ್ಲಿಂ ಲೀಗ್ ಪಂಚಾಯತ್ ಅಧ್ಯಕ್ಷ ಶಾಹುಲ್ ಹಮೀದ್ ಬಂದಿಯೋಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸಾಮಾಜಿಕ ಸೇವಾ ಕಾರ್ಯಗಳ ಅಂಗವಾಗಿ ಕುಡಿಯುವ…

Read More

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಆರೋಪ: ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಮೂಡುಬಿದಿರೆ: ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಬಿ ಜಿ ಅವರನ್ನು ಅಮಾನತುಗೊಳಿಸಲಾಗಿದೆ. ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದಾಗಿ ಆರೋಪಿಸಿ ಆಡಿಯೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ತನಿಖೆ ನಡೆಸಲು ಮಂಗಳೂರು ಉತ್ತರ ಉಪವಿಭಾಗದ ಎಸಿಪಿಗೆ ಸೂಚಿಸಲಾಗಿತ್ತು. ಅವರಿಂದ ಸಲ್ಲಿಸಲಾದ ತನಿಖಾ ವರದಿಯ…

Read More

ಕಾಸರಗೋಡು ಜಿಲ್ಲೆ ಚುನಾವಣೆಗೆ ಸಜ್ಜು: ಎಲ್ಲಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ -ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಹೇಳಿಕೆ

ಕಾಸರಗೋಡು: ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಸರಗೋಡು ಜಿಲ್ಲೆಯಲ್ಲಿ ವ್ಯಾಪಕ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 11,00,036 ಮತದಾರರಿದ್ದು, ಇವರಲ್ಲಿ 5,57,163 ಮಹಿಳೆಯರು, 5,42,861 ಪುರುಷರು ಹಾಗೂ 12 ಟ್ರಾನ್ಸ್‌ಜೆಂಡರ್ ಮತದಾರರು ಸೇರಿದ್ದಾರೆ. ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 1,141 ಮತಗಟ್ಟೆಗಳು ಸ್ಥಾಪಿಸಲಾಗಿದ್ದು, ಮತದಾರರು ನಿರ್ಭೀತಿಯಿಂದ ಮತ ಚಲಾಯಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಅವರು ಹೇಳಿದರು. ಕ್ಷೇತ್ರವಾರು ಮತಗಟ್ಟೆಗಳ ವಿವರದಲ್ಲಿ ಮಂಜೇಶ್ವರ –…

Read More

ಉಡುಪಿ: ಅಸಹಾಯಕ ಸ್ಥಿತಿಯಲ್ಲಿದ್ದ ಕಾಡುಬೆಕ್ಕಿನ ರಕ್ಷಣೆ

ಗಾಯಗೊಂಡು ಅಸಹಾಯಕ ಸ್ಥಿತಿಯಲ್ಲಿ ಪತ್ತೆಯಾದ ಕಾಡುಬೆಕ್ಕನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಘಟನೆ ಉಡುಪಿ ಜಿಲ್ಲೆಯ ಕಲ್ಯಾಣಪುರ ಹಾಳೆಕಟ್ಟೆ ಪ್ರದೇಶದಲ್ಲಿ ನಡೆದಿದೆ. ಬೀದಿನಾಯಿಗಳ ದಾಳಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಕಾಡುಬೆಕ್ಕು ರಸ್ತೆಯ ಬದಿಯಲ್ಲಿ ಅಸಹಾಯಕವಾಗಿ ಪಡಕೊಂಡಿರುವುದನ್ನು ಸ್ಥಳೀಯರಾದ ರವಿ (ಮೆಸ್ಕಾಂ) ಗಮನಿಸಿ, ತಕ್ಷಣ ನಿತ್ಯಾನಂದ ಒಳಕಾಡು ಅವರ ಗಮನಕ್ಕೆ ತಂದರು. ಮಾಹಿತಿ ಪಡೆದ ಅವರು ಸ್ಥಳಕ್ಕೆ ಧಾವಿಸಿ ಕಾಡುಬೆಕ್ಕನ್ನು ಸುರಕ್ಷಿತವಾಗಿ ರಕ್ಷಿಸಿದರು. ನಂತರ ಅರಣ್ಯ ಇಲಾಖೆಗೆ ಹಸ್ತಾಂತರಿಸಲ್ಪಟ್ಟ ಕಾಡುಬೆಕ್ಕಿಗೆ ಗಸ್ತು ಅರಣ್ಯಪಾಲಕರು…

Read More

ಹೆಣ್ಣುಮಕ್ಕಳ ವಿರುದ್ಧ ಭೇದಭಾವ ತೊಡೆದುಹಾಕಿ: ಕಾರ್ಯಾಗಾರದಲ್ಲಿ ಕರೆ -ಡಾ. ಶಿವಪ್ರಕಾಶ್

ಮಂಗಳೂರು: ಲಿಂಗಾನುಪಾತ ಹದಗೆಡಲು ವರದಕ್ಷಿಣೆ ಎಂಬ ಸಾಮಾಜಿಕ ಪಿಡುಗು ಪ್ರಮುಖ ಕಾರಣವಾಗಿದ್ದು, ಈ ದುಷ್ಪ್ರಥೆಯನ್ನು ನಿರ್ಮೂಲನೆ ಮಾಡಬೇಕಾಗಿದೆ ಎಂದು ವೆನ್‍ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಪ್ರಕಾಶ್ ಅಭಿಪ್ರಾಯಪಟ್ಟರು. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ–1994 ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣು ಮಗು ಹುಟ್ಟಿದರೆ…

Read More
error: Content is protected !!