ಭೂ ವ್ಯವಹಾರ ತಕರಾರು: ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಿಂದ ಯುವಕನೋರ್ವ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ವ್ಯಕ್ತಿಯನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಗಾಯಗೊಂಡವರನ್ನು ಮೋಹನ್ ದಾಸ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿ ಮೊಹಮ್ಮದ್ ಶರೀಫ್ ಆಗಿದ್ದು, ಈತನ ತಂದೆ ಮಹಮ್ಮದ್ ಇಕ್ಬಾಲ್ ಜೊತೆಗೆ ಮೋಹನ್ ದಾಸ್ ಶೆಟ್ಟಿ ಅವರ ನಡುವೆ ಭೂ ವ್ಯವಹಾರ ನಡೆದಿದೆ. ಸುರತ್ಕಲ್‌ನ ಖಾನ ಮತ್ತು ವಾಮಂಜೂರು ಪ್ರದೇಶಗಳಲ್ಲಿ ಸುಮಾರು 2…

Read More

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಮಂಗಳೂರಲ್ಲಿ ಬಂಧನ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು Nawaz ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2014ರ ಅ.ಕ್ರ. 375/2014ರಡಿ ಐಪಿಸಿ ಕಲಂ 393, 398 ಹಾಗೂ 34ರಡಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವು ದಸ್ತಗಿರಿ ನಡೆಸಿದೆ. ಬಂಧಿತನನ್ನು ಮಂಗಳೂರು ನಗರದ 7ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು…

Read More

ಹೆದ್ದಾರಿ ಪಕ್ಕ ಪ್ಲೆಕ್ಸ್ ಹಾವಳಿ: ಅಪಘಾತ ಭೀತಿ ನಡುವೆ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಬಂಟ್ವಾಳ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಉದ್ದಕ್ಕೂ ವಿವಿಧ ಕಾರ್ಯಕ್ರಮಗಳಿಗೆ ಶುಭಕೋರುವ ಹೆಸರಿನಲ್ಲಿ ನೂರಾರು ಪ್ಲೆಕ್ಸ್ ಮತ್ತು ಬ್ಯಾನರ್‌ಗಳು ಅಕ್ರಮವಾಗಿ ಅಳವಡಿಕೆಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಪ್ಲಾಸ್ಟಿಕ್ ಪ್ಲೆಕ್ಸ್‌ಗಳಿಗೆ ಸರ್ಕಾರ ನಿಷೇಧ ಹೇರಿದ್ದರೂ, ಹೆದ್ದಾರಿ ಬದಿಯಲ್ಲಿ ಸಾಲುಸಾಲಾಗಿ ಬ್ಯಾನರ್‌ಗಳು ರಾರಾಜಿಸುತ್ತಿರುವುದು ಕಂಡುಬರುತ್ತಿದೆ. ವಿಶೇಷವಾಗಿ ಬಿಸಿರೋಡು ಪ್ರದೇಶದಲ್ಲಿ ರಸ್ತೆ ಅಂಚನ್ನು ಆಕ್ರಮಿಸಿಕೊಂಡು ಅಳವಡಿಸಿರುವ ಭಾರೀ ಗಾತ್ರದ ಬ್ಯಾನರ್‌ಗಳು ಯಾವ ಕ್ಷಣದಲ್ಲಾದರೂ ಕುಸಿದು ರಸ್ತೆ ಮೇಲೆ ಬೀಳುವ ಅಪಾಯ ಉಂಟಾಗಿದೆ. ಕೆಲವು ಬ್ಯಾನರ್‌ಗಳು ಈಗಾಗಲೇ ಸೊಂಟಮುರಿದು ರಸ್ತೆಯ ಕಡೆಗೆ ವಾಲಿ ನಿಂತಿದ್ದು,…

Read More

ಮಂಜೇಶ್ವರ ಬಿಜೆಪಿ ಬೆಳವಣಿಗೆಯ ಹಂತಗಳು – ತುಳುನಾಡ ಮಣ್ಣಿನ ಐತಿಹಾಸಿಕ ಕ್ಷಣಗಳು

ಮಂಜೇಶ್ವರ: ಮಂಜೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆಯ ಬೆಳವಣಿಗೆ ಹಲವು ಹಂತಗಳನ್ನು ದಾಟಿ ಇಂದು ಬಲಿಷ್ಠವಾಗುತ್ತಿದೆ. 2001ರಲ್ಲಿ ಕಾಸರಗೋಡು ಜಿಲ್ಲಾ ಚುನಾವಣಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದೇಶದ ಇಂದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಜೇಶ್ವರ ಕ್ಷೇತ್ರದ ಚುನಾವಣಾ ಕಾರ್ಯಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆ ಸಮಯದಲ್ಲಿ ಮಂಜೇಶ್ವರ ಚುನಾವಣಾ ಉಸ್ತುವಾರಿಯಾಗಿ ಕೆ. ಸುರೇಂದ್ರನ್ ಕೂಡ ಕಾರ್ಯನಿರ್ವಹಿಸುತ್ತಿದ್ದರು. ಆ ಸಭೆ ನಡೆಯುತ್ತಿದ್ದ ವೇಳೆ ನರೇಂದ್ರ ಮೋದಿ ಅವರಿಗೆ ತಕ್ಷಣ ಗುಜರಾತ್‌ಗೆ ಬರಬೇಕೆಂದು ಕರೆ ಬಂದಿತ್ತು. ಎರಡು ದಿನಗಳ ಬಳಿಕ ನರೇಂದ್ರ ಮೋದಿ…

Read More

ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದ ಅಧಿಕಾರಿಣಿ – ಬಂಧನ ತಪ್ಪಿಸಲು ಆತ್ಮಹತ್ಯೆ ಯತ್ನ ನಾಟಕ

ಮಹಿಳಾ ಅಧಿಕಾರಿಯೊಬ್ಬರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.ಮುಳ್ಳೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸ್ವಾಮಿ ಎಂಬವರು ಗ್ರಾಮದಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದರು. ಅವರು ನಿಧನರಾದ ನಂತರ, ಅವರ ಪುತ್ರ ಮಹದೇವ್ ಅವರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲಾಗಿತ್ತು. ಸ್ವಾಮಿ ಅವರು ಸೇವೆ ಸಲ್ಲಿಸಿದ ಅವಧಿಗೆ ಸಂಬಂಧಿಸಿದಂತೆ ಸುಮಾರು ಎರಡು ವರ್ಷದ ಬಾಕಿ ಸಂಬಳ, ಅಂದಾಜು ₹4 ಲಕ್ಷ ರೂಪಾಯಿ ಬಿಡುಗಡೆ ಆಗಬೇಕಿತ್ತು. ಈ ಬಾಕಿ ಸಂಬಳ…

Read More

ಉಳ್ಳಾಲದಲ್ಲಿ DYFI ಘಟಕ ಸಮ್ಮೇಳನ – ಸಮಾಜ ಕಟ್ಟಲು ಒಗ್ಗಟ್ಟಿನ ಕರೆ

ಉಳ್ಳಾಲ:ಡಿವೈಎಫ್‌ ಐ ಕುತ್ತಾರು ಬಟ್ಟೆದಡಿ ಘಟಕದ ಆಶ್ರಯದಲ್ಲಿ ಡಿವೈಎಫ್‌ ಐ ಘಟಕ ಸಮ್ಮೇಳನ ಹಾಗೂ ಬಹಿರಂಗ ಸಭೆ ಕುತ್ತಾರಿನ ಕಾಂ. ಯೋಗೀಶ ಕುತ್ತಾರು ವೇದಿಕೆಯಲ್ಲಿ ನಡೆಯಿತು. ಬಹಿರಂಗ ಸಭೆ ಯನ್ನು ಉದ್ದೇಶಿಸಿ ಪತ್ರಕರ್ತ ನವೀನ್‌ ಸೂರಿಂಜೆ ಮಾತನಾಡಿ ಸಾಹಿತಿಗಳು, ಬರಹಗಾರರು, ಚಳುವಳಿಗಾರರು, ಪತ್ರಕರ್ತರು ಒಗ್ಗಟ್ಟಾಗಬೇಕಿದೆ. ಸರಕಾರದ ತಪ್ಪುಗಳನ್ನು ತಿಳಿಸುವ ಕಾರ್ಯವನ್ನು ಮಾಡುವ ಮೂಲಕ ಸಮಾಜವನ್ನು ಕಟ್ಟಬೇಕಿದೆ ಎಂದು ಪತ್ರಕರ್ತ ನವೀನ್‌ ಸೂರಿಂಜೆ ಹೇಳಿದರು. ಕಾರ್ಯಕ್ರಮದಲ್ಲಿ ಪತ್ರಕರ್ತ ನವೀನ್ ಸೂರಿಂಜೆ, DYFI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಕಾರ್ಯದರ್ಶಿ…

Read More

ಉಡುಪಿ: ಅಪ್ರೆಂಟಿಶಿಪ್ ಮೇಳ, ಉದ್ಯೋಗ ಮೇಳಕ್ಕೆ ಚಾಲನೆ

ಉಡುಪಿ: ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗಿಯ ಕಚೇರಿ ಮೈಸೂರು ಇದರ ಸಹಯೋಗದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳವನ್ನು ನಗರದ ಅಮೃತ್ ಗಾರ್ಡನ್ ನಲ್ಲಿ ಇಂದು ಆಯೋಜಿಸಲಾಗಿತ್ತು. ಉದ್ಯೋಗ ಮೇಳಕ್ಕೆ‌ ಚಾಲನೆ ನೀಡಿ ಮಾತನಾಡಿದ ಮೂಡಬಿದಿರೆ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರು, 140 ಕೋಟಿಗಿಂತಲೂ ಹೆಚ್ಚು ಜನಸಂಖ್ಯೆ…

Read More

ಹಾರ್ಮುಝ್ ಮೂಲಕ 46,000 ಎಂಟಿ LPG: ‘ಶಿವಾಲಿಕ್’ ಹಡಗು ಮುಂದ್ರಾ ಬಂದರಿಗೆ ಆಗಮನ

ಹಾರ್ಮುಝ್ ಜಲಸಂಧಿಯ ಮೂಲಕ ಒಟ್ಟು 46,000 ಎಂಟಿ ಪ್ರಮಾಣದೊಂದಿಗೆ ಎಲ್‌ಪಿಜಿ ಹಡಗು ಶಿವಾಲಿಕ್ ಗುಜರಾತ್‌ನ ಮುಂದ್ರಾ ಬಂದರಿನ ಎಲ್‌ಪಿಜಿ ಟರ್ಮಿನಲ್‌ಗೆ ಆಗಮಿಸಿದೆ. 46,000 ಎಂಟಿ ಪ್ರಮಾಣ ಎಲ್‌ಪಿಜಿಯನ್ನು ಹಡಗು ಹೊತ್ತಿದೆ. ಈ ಪೈಕಿ 20,000 ಎಂಟಿಯಷ್ಟು ಗ್ಯಾಸ್‌ನ್ನು ಭಾರತದ ಅತಿದೊಡ್ಡ ಖಾಸಗಿ ಮತ್ತು ವಾಣಿಜ್ಯ ಬಂದರು ಮುಂದ್ರಾದಲ್ಲಿ ಒಟ್ಟು ಇಳಿಸಲಾಗುತ್ತದೆ ಹಾಗೂ 26,000 ಎಂಟಿ ಗ್ಯಾಸ್‌ನ್ನು ನವ ಮಂಗಳೂರು ಬಂದರಿನ ಸಿಂಗಲ್ ಪಾಯಿಂಟ್ ಮೂರಿಂಗ್ ಸೌಲಭ್ಯದಲ್ಲಿ ಇಳಿಸಲಾಗುವುದು.ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬುಕ್ ಮಾಡಿರುವ ಎಲ್‌ಪಿಜಿಯನ್ನು ಹಡಗು…

Read More

ಉಡುಪಿ: ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ- ಕಾರಣ ನಿಗೂಢ!

ಉಡುಪಿ: ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬರು ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪುತ್ತೂರು ನೆಲ್ಯಾಡಿ ನಿವಾಸಿ ಜಿನ್ಸನ್ ಪಿ. ಎಮ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಗರ ಪೋಲಿಸ್ ಠಾಣೆಯ‌ ಠಾಣಾಧಿಕಾರಿ ಭರತೇಶ್, ಪಿ ಎಸ್ ಐ ನಾರಾಯಣ, ಎ.ಎಸ್.ಐ ವಿಜಯ್ ಘಟನಾ ಸ್ಥಳದಲ್ಲಿದ್ದು, ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Read More

‘ಕೆಡಿ – ದಿ ಡೆವಿಲ್’ ಹಾಡಿಗೆ ವಿವಾದದ ಬೆಂಕಿ – ಡಬಲ್ ಮೀನಿಂಗ್‌ಗೆ ಕನ್ನಡಿಗರ ಆಕ್ರೋಶ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ – ದಿ ಡೆವಿಲ್’ ಚಿತ್ರದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಬಿಡುಗಡೆಯಾದ ಬೆನ್ನಲ್ಲೇ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ನಿರ್ದೇಶಕ ಜೋಗಿ ಪ್ರೇಮ್ ಅವರ ಕಲ್ಪನೆಯಲ್ಲಿ ಮೂಡಿಬಂದಿರುವ ಈ ಹಾಡಿನ ಸಾಹಿತ್ಯವು ಅತ್ಯಂತ ಅಸಭ್ಯತೆಯಿಂದ ಕೂಡಿದೆ ಮತ್ತು ದ್ವಂದ್ವಾರ್ಥ (Double Meaning) ನೀಡುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಧ್ರುವ ಸರ್ಜಾ ನಟನೆಯ ಈ ಚಿತ್ರದ ಹಾಡಿನಲ್ಲಿ ಬಳಸಲಾಗಿರುವ ಕೆಲವು ಪದಗಳು ಸಭ್ಯ ಸಮಾಜಕ್ಕೆ ಮುಜುಗರ…

Read More
error: Content is protected !!