ಮಂಜೇಶ್ವರದಲ್ಲಿ ಲೈಲತುಲ್ ಖದ್ರ್ ಆಚರಣೆ – ಮಸೀದಿಗಳಲ್ಲಿ ಭಕ್ತರ ಸಾಗರ

ಮಂಜೇಶ್ವರ: ಪವಿತ್ರ ರಂಜಾನ್ ಮಾಸದ 27ನೇ ರಾತ್ರಿಯಾದ ‘ಲೈಲತುಲ್ ಖದ್ರ್’ ಸಂದರ್ಭದಲ್ಲಿ ಮಂಜೇಶ್ವರದ ವಿವಿಧ ಮಸೀದಿಗಳಲ್ಲಿ ಭಕ್ತಿಭಾವದಿಂದ ಕೂಡಿದ ವಿಶೇಷ ಪ್ರಾರ್ಥನಾ ಸಭೆಗಳು ಮತ್ತು ಧಾರ್ಮಿಕ ಪ್ರಭಾಷಣಗಳು ನಡೆದವು. ಸಾವಿರ ತಿಂಗಳುಗಳಿಗಿಂತಲೂ ಶ್ರೇಷ್ಠವೆಂದು ಪರಿಗಣಿಸಲ್ಪಡುವ ಈ ರಾತ್ರಿಯ ಪುಣ್ಯವನ್ನು ಅರಸಿ ಸಾವಿರಾರು ವಿಶ್ವಾಸಿಗಳು ಮಸೀದಿಗಳಲ್ಲಿ ಜಮಾಯಿಸಿದ್ದರು. ​ಕುಂಜತ್ತೂರು ತೂಮಿನಾಡು ಮಸ್ಜಿದ್ ನೂರ್‌ನಲ್ಲಿ ನಡೆದ ವಿಶೇಷ ಸಮಾರಂಭವು ಭಕ್ತರ ಗಮನ ಸೆಳೆಯಿತು. ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಹಿರಿಯ ವಿದ್ವಾಂಸರಾದ ಕೆ.ಟಿ. ಸಿರಾಜ್ ಅವರು ಆಗಮಿಸಿದ್ದರು.ಕೆ.ಟಿ. ಸಿರಾಜ್ ಅವರು…

Read More

ಮಾರ್ಚ್ 24ರಂದು ಶ್ರೀ ಉಳ್ಳಾಲ್ತಿ ನಾಗಬ್ರಹ್ಮ ಕಾಳಿಚಾಮುಂಡಿ ದೈವಸ್ಥಾನದ ವರ್ಷಾವಧಿ ನೇಮೋತ್ಸವ

ಹೇರೂರು: ಶ್ರೀ ಉಳ್ಳಾಲ್ತಿ ನಾಗಬ್ರಹ್ಮ ಕಾಳಿಚಾಮುಂಡಿ ದೈವಸ್ಥಾನ ಹೇರೂರು ಇಲ್ಲಿ ನಾಗದೇವರ ಪ್ರತಿಷ್ಠಾ ದಿನಾಚರಣೆ ಹಾಗೂ ನಾಗತಂಬಿಲ ಸೇವೆ ಮತ್ತು ವರ್ಷಾವಧಿ ನೇಮೋತ್ಸವವು ಭಕ್ತಿಭಾವದಿಂದ ಜರುಗಲಿದೆ.ಮಾರ್ಚ್ 24ರಂದು ಆರಂಭವಾಗುವ ಈ ಧಾರ್ಮಿಕ ಕಾರ್ಯಕ್ರಮವು ಮಾರ್ಚ್ 25ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಬಡಾಜೆ ಬೂಡು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿವರ್ಯರ ಉಪಸ್ಥಿತಿಯಲ್ಲಿ ಪೂಜಾ ವಿಧಿವಿಧಾನಗಳು ನೆರವೇರಲಿವೆ.ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಗಣಹೋಮ, ನಾಗದೇವರಿಗೆ ನಾಗತಂಬಿಲ ಸೇವೆ, ಸಂಜೆ ಭಂಡಾರ ಏರಿಸುವುದು ಹಾಗೂ ವಿವಿಧ ದೈವಗಳ ನೇಮೋತ್ಸವಗಳು ನಡೆಯಲಿವೆ. ರಾತ್ರಿ ಉಳ್ಳಾಲ್ತಿ ದೈವ, ಬಿಲ್ಲಾರ,…

Read More

ಎಕ್ಸೈಸ್ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ಇಫ್ತಾರ್ ಕೂಟ : ಐಕ್ಯತೆಗೆ ಸಂದೇಶ

ಉಪ್ಪಳ: ಹೊಸಂಗಡಿ ಎಕ್ಸೈಸ್ ಚೆಕ್‌ಪೋಸ್ಟ್ ಸಮೀಪ ಗೋಟ್ಸ್ ಎಫ್‌ಸಿ ಸಂಘಟನೆಯ ವತಿಯಿಂದ ಸಾಮೂಹಿಕ ಇಫ್ತಾರ್ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ಹಾಗೂ ಸೌಹಾರ್ದತೆಯ ವಾತಾವರಣದಲ್ಲಿ ಆಯೋಜಿಸಲಾಯಿತು. ಪವಿತ್ರ ರಂಜಾನ್ ತಿಂಗಳ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳ ಗಣ್ಯರು ಭಾಗವಹಿಸಿ, ಪರಸ್ಪರ ಸೌಹಾರ್ದತೆಯನ್ನು ಬಲಪಡಿಸಿದರು. ಉಪವಾಸ ಮುರಿಯುವ ಮೊದಲು ಪ್ರಾರ್ಥನೆ ಸಲ್ಲಿಸಲಾಗಿದ್ದು, ನಂತರ ಎಲ್ಲರೂ ಒಂದೇ ಸ್ಥಳದಲ್ಲಿ ಕುಳಿತು ಇಫ್ತಾರ್ ಸ್ವೀಕರಿಸಿದರು. ಸಮಾಜದಲ್ಲಿ ಐಕ್ಯತೆ, ಶಾಂತಿ ಮತ್ತು ಪರಸ್ಪರ ವಿಶ್ವಾಸವನ್ನು ಕಾಪಾಡಿಕೊಳ್ಳಲು ಇಂತಹ…

Read More

ಲಾಲ್ಬಾಗ್–ಚಿಪ್ಪಾರ್–ಕುರುಡಪ್ಪದವು ರಸ್ತೆ ಕಾಮಗಾರಿ ವಿಳಂಬ: ಶೀಘ್ರ ಪೂರ್ಣಗೊಳಿಸಲು ಸಾರ್ವಜನಿಕರ ಒತ್ತಾಯ

ಉಪ್ಪಳ: ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಲಾಲ್ಬಾಗ್–ಚಿಪ್ಪಾರ್–ಕುರುಡಪ್ಪದವು ರಸ್ತೆ ನಿರ್ಮಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಅದನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕೆಂಬ ಬೇಡಿಕೆ ಸಾರ್ವಜನಿಕರಲ್ಲಿ ಹೆಚ್ಚುತ್ತಿದೆ. ಸಂಪೂರ್ಣ ಹಾಳಾಗಿರುವ ರಸ್ತೆಯಿಂದ ಜನರು ವರ್ಷಗಳ ಕಾಲ ತೀವ್ರ ತೊಂದರೆ ಅನುಭವಿಸಿದ್ದರೆ . ಈ ರಸ್ತೆಗೆ ಕೊನೆಗೂ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ದೊರೆತಿದ್ದರೂ, ರಸ್ತೆ ಅಗಲಪಡಿಸುವ ಕಾಮಗಾರಿ ಆರಂಭವಾಗಿ ಹಲವು ತಿಂಗಳು ಕಳೆದರೂ ಕಾರ್ಯ ನಿರೀಕ್ಷಿತ ವೇಗದಲ್ಲಿ ಮುಂದುವರಿಯುತ್ತಿಲ್ಲ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಈ ಕಾಮಗಾರಿ ಯಾವಾಗ ಪೂರ್ಣಗೊಳ್ಳುತ್ತದೆ ಎಂಬುದರ ಬಗ್ಗೆ ಸ್ಥಳೀಯರು…

Read More

ಉಪ್ಪಳದಲ್ಲಿ ಮದ್ರಸಾ ಶಿಕ್ಷಕರಿಗೆ ಸಮ್ಮಾನ, ಟಾಪ್ ಪ್ಲಸ್ ವಿದ್ಯಾರ್ಥಿಗಳಿಗೆ ಗೌರವ

ಉಪ್ಪಳ: ಸಮಸ್ತ ಮದ್ರಸಾ ನಿರ್ವಹಣಾ ಸಂಘದ ಉಪ್ಪಳ ರೇಂಜ್ ಸಮಿತಿಯ ವತಿಯಿಂದ ಮದ್ರಸಾ ಶಿಕ್ಷಕರಿಗೆ ಈದ್ ಹಬ್ಬದ ಅಂಗವಾಗಿ ಸ್ನೇಹ ಸಮ್ಮಾನ ವಿತರಣೆ ಹಾಗೂ ಟಾಪ್ ಪ್ಲಸ್ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಉಪ್ಪಳ ಪಟ್ಟಣದ ಬದ್ರಿಯಾ ಮದ್ರಸಾದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಶೀದ್ ಮಾಸ್ಟರ್ ಬೆಳಿಂಜಂ ಉದ್ಘಾಟಿಸಿದರು. ಉಪ್ಪಳ ರೇಂಜ್ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಪಳ್ಳಂ ಅಧ್ಯಕ್ಷತೆ ವಹಿಸಿದ್ದರು. ಕಳೆದ ನಾಲ್ಕು ವರ್ಷಗಳಿಂದ ಉಪ್ಪಳ ರೇಂಜ್ ಮದ್ರಸಾ ನಿರ್ವಹಣಾ ಸಂಘದ…

Read More

ಹೆಬ್ರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ

ಮಂಗಳೂರು: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ International Women’s Day ಪ್ರಯುಕ್ತ ಅಲಯನ್ಸ್ ಕ್ಲಬ್ ಹೆಬ್ರಿ ಮತ್ತು ಲೇಡೀಸ್ ಅಲಯನ್ಸ್ ಕ್ಲಬ್ ಹೆಬ್ರಿ ಸಿಟಿ ವತಿಯಿಂದ ಕಬ್ಬಿನಾಲೆ ಗ್ರಾಮದ ಮೆದಿಪು ನಿವಾಸಿ ನಾಟಿ ವೈದ್ಯೆ ಹಾಗೂ 2025ನೇ ಸಾಲಿನ ಕರ್ನಾಟಕ ಜಾನಪದ ಅಕಾಡಮಿಯ ವಾರ್ಷಿಕ ಜಾನಪದ ಗೌರವ ಪ್ರಶಸ್ತಿ ಪುರಸ್ಕೃತ Gulabi Gowdthi ಅವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು. ಅಲಯನ್ಸ್ ಕ್ಲಬ್ ಹೆಬ್ರಿಯ ಅಧ್ಯಕ್ಷ ಕೆ. ರಾಮಚಂದ್ರ ಭಟ್, ಕಾರ್ಯದರ್ಶಿ ಬಾಲಚಂದ್ರ ಎಂ., ಹಾಗೂ ಲೇಡೀಸ್ ಅಲಯನ್ಸ್…

Read More

ಮಂಜೇಶ್ವರದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ -ಕೆ ಸುರೇಂದ್ರನ್

ಕುಂಜತ್ತೂರು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ K. Surendran ಅವರಿಗೆ ತೂಮಿನಾಡು ಪ್ರದೇಶದಲ್ಲಿ ಬಿಜೆಪಿ ಮಂಜೇಶ್ವರ ಪಂಚಾಯತ್ ಸಮಿತಿ ವತಿಯಿಂದ ಭರ್ಜರಿ ಸ್ವಾಗತ ನೀಡಲಾಯಿತು. ಕಾರ್ಯಕ್ರಮಕ್ಕೆ ಹುಲಿ ವೇಷ ಮತ್ತು ತಾಸೆ ಮೇಳದೊಂದಿಗೆ ಸಂಭ್ರಮದ ಚಾಲನೆ ನೀಡಲಾಯಿತು. ಬಳಿಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸುರೇಂದ್ರನ್, ಮಂಜೇಶ್ವರದ ಸಮಗ್ರ ಅಭಿವೃದ್ಧಿ ಬಿಜೆಪಿ ಮೂಲಕ ಮಾತ್ರ ಸಾಧ್ಯವೆಂದು ಹೇಳಿದರು. ಕಳೆದ 40 ವರ್ಷಗಳಿಂದ ಕ್ಷೇತ್ರವನ್ನು ಪ್ರತಿನಿಧಿಸಿದವರು ಮಂಜೇಶ್ವರವನ್ನು ಅಭಿವೃದ್ಧಿಯಿಂದ ಹಿಂದೆ ಉಳಿಸಿದ್ದಾರೆ ಎಂದು ಆರೋಪಿಸಿದ…

Read More

ಮಂಗಳೂರು ಪಾಲಿಕೆಯಲ್ಲಿ ಜಾಹೀರಾತು ಟೆಂಡರ್ ಗೊಂದಲ – ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಾಹೀರಾತುಗಳ ಟೆಂಡರ್, ಟ್ರಾಫಿಕ್ ಪೊಲೀಸ್ ಬೂತ್ ಹೀಗೆ ಮೊದಲಾದ ವಿಷಯಗಳಲ್ಲಿ ಬೆಂಗಳೂರಿನಲ್ಲಿ ಕೂತವರು, ಪಾಲಿಕೆ ಅಧಿಕಾರಿಗಳು, ಪೊಲೀಸ್ ಇಲಾಖೆ, ಜನಪ್ರತಿನಿಧಿಗಳು, ಸೇರಿದಂತೆ ಯಾರಿಗೂ ಮಾಹಿತಿ ನೀಡದೇ ಏಕಪಕ್ಷೀಯವಾಗಿ ನಡೆದುಕೊಂಡು ತಮಿಳುನಾಡಿನ ವ್ಯಕ್ತಿಯೊಬ್ಬರಿಗೆ ಗುತ್ತಿಗೆ ನೀಡಿ ಕೈ ತೊಳೆದುಕೊಂಡಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನೀತಿ ನಿಯಮಗಳನ್ನೆಲ್ಲ ಗಾಳಿಗೆ ತೂರಿ, ತಮಗಿಷ್ಟ ಬಂದ ಹಾಗೆ ಅನ್ಯ ರಾಜ್ಯದವರಿಗೆ ಅನುಕೂಲ ಮಾಡಿಕೊಟ್ಟು, ಇಷ್ಟು…

Read More

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯ ಬಂಧನ

ಬಂಟ್ವಾಳ: ಕರ್ನಾಟಕ ರಾಜ್ಯದಿಂದ ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಪ್ರಕರಣದ ಅರೋಪಿಯಾಗಿದ್ದು, ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:166/2017, ಕಲಂ 379 r/w 34 IPC ನೇ ಪ್ರಕರಣದಲ್ಲಿ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಕೇರಳ ಮಲಪುರಂ ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್…

Read More

“ಕಾಸರಗೋಡು ಗೋ- ಕುಟೀರ”ದ ನಿರ್ಮಾಣಕ್ಕೆ ಗೋ- ಭಕ್ತರು,ಗೋ- ಪೋಷಕರು ದಾನಿಗಳಿಂದ ಸಹಕಾರದ ನಿರೀಕ್ಷೆಯಲ್ಲಿ.

ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ,ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ.ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ -ಕುಟೀರವನ್ನು ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವ ಉದ್ದೇಶದಿಂದ ಒಂದು ಧಾರ್ಮಿಕ ಶ್ರದ್ಧಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ದೈವಾರ್ಷಿಕ ಕಾರ್ಯ ಯೋಜನೆಯನ್ನು…

Read More
error: Content is protected !!