ಮಂಜೇಶ್ವರದಲ್ಲಿ ಲೈಲತುಲ್ ಖದ್ರ್ ಆಚರಣೆ – ಮಸೀದಿಗಳಲ್ಲಿ ಭಕ್ತರ ಸಾಗರ
ಮಂಜೇಶ್ವರ: ಪವಿತ್ರ ರಂಜಾನ್ ಮಾಸದ 27ನೇ ರಾತ್ರಿಯಾದ ‘ಲೈಲತುಲ್ ಖದ್ರ್’ ಸಂದರ್ಭದಲ್ಲಿ ಮಂಜೇಶ್ವರದ ವಿವಿಧ ಮಸೀದಿಗಳಲ್ಲಿ ಭಕ್ತಿಭಾವದಿಂದ ಕೂಡಿದ ವಿಶೇಷ ಪ್ರಾರ್ಥನಾ ಸಭೆಗಳು ಮತ್ತು ಧಾರ್ಮಿಕ ಪ್ರಭಾಷಣಗಳು ನಡೆದವು. ಸಾವಿರ ತಿಂಗಳುಗಳಿಗಿಂತಲೂ ಶ್ರೇಷ್ಠವೆಂದು ಪರಿಗಣಿಸಲ್ಪಡುವ ಈ ರಾತ್ರಿಯ ಪುಣ್ಯವನ್ನು ಅರಸಿ ಸಾವಿರಾರು ವಿಶ್ವಾಸಿಗಳು ಮಸೀದಿಗಳಲ್ಲಿ ಜಮಾಯಿಸಿದ್ದರು. ಕುಂಜತ್ತೂರು ತೂಮಿನಾಡು ಮಸ್ಜಿದ್ ನೂರ್ನಲ್ಲಿ ನಡೆದ ವಿಶೇಷ ಸಮಾರಂಭವು ಭಕ್ತರ ಗಮನ ಸೆಳೆಯಿತು. ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಹಿರಿಯ ವಿದ್ವಾಂಸರಾದ ಕೆ.ಟಿ. ಸಿರಾಜ್ ಅವರು ಆಗಮಿಸಿದ್ದರು.ಕೆ.ಟಿ. ಸಿರಾಜ್ ಅವರು…