ಬ್ಯಾಂಕ್ ಅಕ್ರಮ ದರೋಡೆಕೋರರಿಗೆ ಜೀವಾವಧಿ ಶಿಕ್ಷೆಗೂ ಅವಕಾಶ ಇದೆ: ನಗರ ಡಿಸಿಪಿ ರವಿಶಂಕರ್
ಮಂಗಳೂರು:ಇತ್ತೀಚಿನ ದಿನಗಳಲ್ಲಿ ಕೆಲವು ಬ್ಯಾಂಕ್ ಹಾಗೂ ಸಹಕಾರಿ ಸಂಸ್ಥೆಯ ಸಿಬ್ಬಂದಿಗಳೇ ಅಕ್ರಮ ಚಟುವಟಿಕೆಗಳಲ್ಲಿ ಶಾಮೀಲಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇಂತಹ ಗಂಭೀರ ಪ್ರಕರಣಗಳಿಗೆ ಕಠಿಣ ಶಿಕ್ಷೆಯ ಅಗತ್ಯ ಇದೆ ಎಂದು ಮಂಗಳೂರು ನಗರ ಡಿಸಿಪಿ ರವಿಶಂಕರ್ ಎಚ್ಚರಿಕೆ ನೀಡಿದ್ದಾರೆ. ಅವರು ಎಸ್ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಾಥಮಿಕ ಕೃಷಿ ಬ್ಯಾಂಕುಗಳು, ಕೃಷಿಯೇತರ ಬ್ಯಾಂಕುಗಳು ಹಾಗೂ ಪಟ್ಟಣ ಸಹಕಾರಿ ಬ್ಯಾಂಕುಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೈಬರ್ ಅಪರಾಧಗಳು ಮತ್ತು ಸಹಕಾರಿ ಸಂಸ್ಥೆಗಳ ಭದ್ರತೆ ಕುರಿತ ಮಾರ್ಗಸೂಚಿಗಳ ಪಾಲನೆ ವಿಷಯದ ಮಾಹಿತಿ ಕಾರ್ಯಾಗಾರವನ್ನು…