ಶ್ರೀರಾಮ–ಹನುಮ ಜ್ಯೋತಿ ಗ್ರಾಮದರ್ಶನ ಪೂರ್ಣ – ಹನುಮಗಿರಿಗೆ ಅದ್ಧೂರಿ ರಥಯಾತ್ರೆ

ಪುತ್ತೂರು: ಅಯೋಧ್ಯೆ ಮತ್ತು ಅಂಜನಾದ್ರಿ ಬೆಟ್ಟದಿಂದ ತರಲಾದ ಶ್ರೀರಾಮ–ಹನುಮ ಜ್ಯೋತಿ ಪುತ್ತೂರು ತಾಲೂಕಿನ ವಿವಿಧ ದೇವಸ್ಥಾನ, ದೈವಸ್ಥಾನ, ಭಜನಾಮಂದಿರಗಳು ಹಾಗೂ 60 ಗ್ರಾಮಗಳ ‘ಗ್ರಾಮದರ್ಶನ’ ನೆರವೇರಿಸಿಕೊಂಡು ಈಶ್ವರಮಂಗಲದ ಪಂಚಲಿಂಗೇಶ್ವರ ದೇವಳಕ್ಕೆ ಆಗಮಿಸಿತು. ಜ್ಯೋತಿಗೆ ಭಕ್ತರು ಅದ್ಧೂರಿ ಸ್ವಾಗತ ಕೋರಿದರು. ಪಂಚಲಿಂಗೇಶ್ವರ ದೇವಳದ ಬಳಿಯಿಂದ ಪಂಚಮುಖಿ ಆಂಜನೇಯ ಕ್ಷೇತ್ರ ಹನುಮಗಿರಿಗೆ ರಥಯಾತ್ರೆಗೆ ಚಾಲನೆ ನೀಡಲಾಯಿತು. ದೇವಳದ ಪವಿತ್ರಪಾಣಿ ಗೋಪಾಲಕೃಷ್ಣ ಕುಂಜತ್ತಾಯ ಅವರು ತೆಂಗಿನಕಾಯಿ ಒಡೆಯುವ ಮೂಲಕ ರಥಯಾತ್ರೆ ಆರಂಭಿಸಿದರು.ಈಶ್ವರಮಂಗಲದ ಉನ್ನಿಕೃಷ್ಣನ್ ವೃತ್ತದಿಂದ ಆರಂಭವಾದ ಮೆರವಣಿಗೆಯಲ್ಲಿ ಶ್ರೀರಾಮ, ಲಕ್ಷ್ಮಣ, ಸೀತಾ…

Read More

ಇತಿಹಾಸ ನಿರ್ಮಿಸಿದ ಮಂಜೇಶ್ವರ ಮತದಾನ – 13.5 ಗಂಟೆಗಳ ಹೊಸ ದಾಖಲೆ

​ಮಂಜೇಶ್ವರ: ಕೇರಳದ ಒಂದನೇ ವಿಧಾನಸಭಾ ಕ್ಷೇತ್ರವಾದ ಮಂಜೇಶ್ವರದಲ್ಲಿ ಈ ಬಾರಿ ನಡೆದ ಚುನಾವಣೆ ಕೇವಲ ಮತದಾನವಾಗಿ ಉಳಿಯದೆ, ಒಂದು ಚಾರಿತ್ರಿಕ ದಾಖಲೆಯಾಗಿ ಹೊರಹೊಮ್ಮಿದೆ. ಎಂದೂ ಕಾಣದ ಆವೇಶ, ಮತದಾರರ ಅದಮ್ಯ ಉತ್ಸಾಹ ಮತ್ತು ತಾಂತ್ರಿಕ ಸವಾಲುಗಳ ನಡುವೆ ನಡೆದ ಈ ಬಾರಿಯ ಮತಸಮರದಲ್ಲಿ ಬರೋಬ್ಬರಿ ಶೇ. 81.04 ಮತದಾನವಾಗುವ ಮೂಲಕ ಫಲಿತಾಂಶದ ಕುತೂಹಲವನ್ನು ಶಿಖರಕ್ಕೇರಿಸಿದೆ. ಮಂಜೇಶ್ವರದಲ್ಲಿ 2011ರ ವಿಧಾನಸಭಾ ಚುನಾವಣೆಯಲ್ಲಿ 75.21 ಶೇ ಮತದಾನವಾಗಿತ್ತು. ತದನಂತರ ಬಿಜೆಪಿ ಕೇವಲ 89 ಮತಗಳ ಅಂತರದಲ್ಲಿ ಸೋಲುಂಡ 2016 ರ…

Read More

ಗಲ್ಫ್ ರಾಷ್ಟ್ರಗಳಲ್ಲಿರುವ ಭಕ್ತರ ಕಲ್ಯಾಣಕ್ಕಾಗಿ ಬಲ್ಲಂಗುಡೆಲು ಭಂಡಾರ ನಿಲಯದಲ್ಲಿ ವಿಶೇಷ ದೀಪಾರಾಧನೆಯೊಂದಿಗೆ ಪ್ರಾರ್ಥನೆ

ಮಂಜೇಶ್ವರ: ಗಲ್ಫ್ ರಾಷ್ಟ್ರಗಳಲ್ಲಿ ಇರುವ ಭಕ್ತರ ಕಲ್ಯಾಣಕ್ಕಾಗಿ ಬಲ್ಲಂಗುಡೆಲು ಶ್ರೀ ಪಾಡಂಗರೆ ಭಗವತಿ ಕ್ಷೇತ್ರದ ಭಂಡಾರ ನಿಲಯದಲ್ಲಿ ವಿಶೇಷ ದೀಪಾರಾಧನೆ ಹಾಗೂ ಪ್ರಾರ್ಥನೆ ಕಾರ್ಯಕ್ರಮವು ಏಪ್ರಿಲ್ 10ರಂದು ಭಕ್ತಿಭಾವದಿಂದ ನೆರವೇರಿತು. ಈ ಕಾರ್ಯಕ್ರಮವನ್ನು ಶ್ರೀ ಪಾಡಂಗರೆ ಭಗವತಿ ಭಕ್ತವೃಂದ ಗಲ್ಫ್ ವತಿಯಿಂದ ಆಯೋಜಿಸಲಾಗಿತ್ತು. ಪ್ರಸ್ತುತ ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾದ ಭಕ್ತರ ಸುಖಶಾಂತಿ ಮತ್ತು ಉದ್ಯೋಗ ಭದ್ರತೆಗಾಗಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಉದ್ಯೋಗ ಕಳೆದುಕೊಳ್ಳದಂತೆ, ಈಗಾಗಲೇ ಕಳೆದುಕೊಂಡವರಿಗೆ ಮರು ಉದ್ಯೋಗ ದೊರಕಲೆಂದು ಹಾಗೂ ಯುದ್ಧ…

Read More

ಮಂಜೇಶ್ವರದಲ್ಲಿ ದಾಖಲೆ 81.04% ಮತದಾನ!ಕಾಸರಗೋಡು ಜಿಲ್ಲೆಯಲ್ಲೇ ಅತ್ಯಧಿಕ ಮತದಾನ

ಕಾಸರಗೋಡು: ನಿನ್ನೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಔದ್ಯೋಗಿಕ ಮಾಹಿತಿಯಂತೆ ಕಾಸರಗೋಡು ಜಿಲ್ಲೆಯಲ್ಲಿ 79. 11ಶೇ. ಮತದಾನವಾಗಿದೆ.ಐದು ವಿಧಾನಸಭಾ ಕ್ಷೇತ್ರಗಳ ಪೖಕಿ ಅತೀ ಹೆಚ್ಚು ಮತದಾನ ( 81.04 ಶೇ.) ಮಂಜೇಶ್ವರದಲ್ಲಿ ನಡೆದಿದ್ದು ಕುತೂಹಲ ಮೂಡಿಸಿದೆ. ಮಂಜೇಶ್ವರದ ಮತದಾನದ ಶೇಕಡಾವಾರು ಹೆಚ್ಚಳ ಯಾವ ಅಭ್ಯರ್ಥಿಗೆ ಅನುಕೂಲವಾಗಲಿದೆ ಎಂಬುದು ಕೌತುಕ ಮೂಡಿಸಿದೆ. ಮಂಜೇಶ್ವರದಲ್ಲಿ 2011ರ ವಿಧಾನಸಭಾ ಚುನಾವಣೆಯಲ್ಲಿ 75.21 ಶೇ ಮತದಾನವಾಗಿತ್ತು. ತದನಂತರ ಬಿಜೆಪಿ ಕೇವಲ 89 ಮತಗಳ ಅಂತರದಲ್ಲಿ ಸೋಲುಂಡ 2016 ರ ಚುನಾವಣೆಯಲ್ಲಿ 76.33 ಶೇ. ಮತದಾನ…

Read More

ಮೂಡಂಬೈಲ್ ನಲ್ಲಿ ಪಜಿಂಗಾರ್ ಸಾಲಿಯಾನ್ ಕುಟುಂಬದ ನೂತನ ತರವಾಡಿನ ಗ್ರಹಪ್ರವೇಶ , ಬ್ರಹ್ಮಕಲಶ ಪ್ರತಿಷ್ಠೆ ಹಾಗು ನೇಮೋತ್ಸವ

ಮಂಜೇಶ್ವರ: ಮೂಡಂಬೈಲ್ ಪಜಿಂಗಾರ್ ಸಾಲಿಯಾನ್ ಕುಟುಂಬದ ನೂತನ ತರವಾಡಿನ ಗ್ರಹಪ್ರವೇಶ, ಬ್ರಹ್ಮಕಲಶ ಪ್ರತಿಷ್ಠೆ ಹಾಗೂ ನೇಮೋತ್ಸವ ಕಾರ್ಯಕ್ರಮಗಳು ಏಪ್ರಿಲ್ 12 ಆದಿತ್ಯವಾರದಂದು ಭಕ್ತಿಭಾವದಿಂದ ನಡೆಯಲಿವೆ. ಇದರ ಪೂರ್ವಭಾವಿಯಾಗಿ ಏಪ್ರಿಲ್ 11ರಂದು ತಂತ್ರಿಗಳ ಉಪಸ್ಥಿತಿಯಲ್ಲಿ ಸ್ಥಳ ಶುದ್ಧಿ, ಪುಣ್ಯವಚನ, ಕಲಶಶುದ್ಧಿ, ವಾಸ್ತು ಹೋಮ ಮತ್ತು ವಾಸ್ತು ಬಲಿ ವಿಧಿವಿಧಾನಗಳು ನೆರವೇರಲಿವೆ. ಏಪ್ರಿಲ್ 12ರಂದು ಬ್ರಹ್ಮಶ್ರೀ ಬಡಾಜೆಬೀಡು ಗೋಪಾಲ ಕೃಷ್ಣ ತಂತ್ರಿಯವರ ಸಾನ್ನಿಧ್ಯದಲ್ಲಿ ಬೆಳಗ್ಗೆ 8:45ಕ್ಕೆ ಗ್ರಹಪ್ರವೇಶ ನಡೆಯಲಿದೆ. ಬಳಿಕ 9:10ರಿಂದ 10:19ರವರೆಗೆ ಪ್ರತಿಷ್ಠೆ, ಬ್ರಹ್ಮಕಲಶ, ಮುಡಿಪು ಸೇವೆ ಹಾಗೂ…

Read More

ಕೊರಗಜ್ಜನ ಆದಿಕ್ಷೇತ್ರಕ್ಕೆ ಪಾದಯಾತ್ರೆ ಎ.12ರಂದು

ಮಂಗಳೂರು: ಹಿಂದೂ ಸಮಾಜದ ಐಕ್ಯತೆ ಮತ್ತು ಲೋಕಕಲ್ಯಾಣಾರ್ಥವಾಗಿ 6ನೇ ವರ್ಷದ ಕೊರಗಜ್ಜನ ಆದಿಕ್ಷೇತ್ರಕ್ಕೆ ಪಾದಯಾತ್ರೆಯನ್ನು ಏಪ್ರಿಲ್ 12ರಂದು, ಆದಿತ್ಯವಾರ ಬೆಳಗ್ಗೆ 6 ಗಂಟೆಗೆ ಆಯೋಜಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ತಿಳಿಸಿದೆ. ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಿಂದ ಕುತ್ತಾರ್ ಕೊರಗಜ್ಜನ ಆದಿಕ್ಷೇತ್ರದವರೆಗೆ ಈ ಪಾದಯಾತ್ರೆ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಪಾದಯಾತ್ರೆಯ ಮೂಲಕ ಜನರಲ್ಲಿ ಆಸ್ತಿಕತೆಯನ್ನು ಬೆಳೆಸುವ ಹಾಗೂ ಧಾರ್ಮಿಕ ಚಿಂತನೆಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಸಾಮೂಹಿಕ ಪ್ರಾರ್ಥನೆ ಮತ್ತು…

Read More

ಡೀಸೆಲ್ ಕೊರತೆ: ಮೀನುಗಾರರಿಂದ ಆಕ್ರೋಶ

ಮೀನುಗಾರಿಕಾ ಧಕ್ಕೆಯಲ್ಲಿ ಕಾರ್ಯಾಚರಿಸುತ್ತಿರುವ ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಪ್ರಾಥಮಿಕ ಮೀನುಗಾರರ ಸಂಘದ ಪೆಟ್ರೋಲ್ ಪಂಪ್‌ನಲ್ಲಿ ಮೀನುಗಾರಿಕಾ ದೋಣಿಗಳಿಗೆ ಸಮರ್ಪಕವಾಗಿ ಡೀಸೆಲ್ ಪೂರೈಕೆಯಾಗದೆ ತೊಂದರೆ ಉಂಟಾಗಿರುವ ಬಗ್ಗೆ ಬೋಟ್ ಮಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೋಕನ್ ವ್ಯವಸ್ಥೆಯಡಿ ನಿಯಮಿತವಾಗಿ ಡೀಸೆಲ್ ಪೂರೈಕೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟ್ರಾಲ್ ಬೋಟ್ ಮಾಲಕರ ಸಂಘದ ಕೋಶಾಧಿಕಾರಿ ಅಬೂಬಕರ್ ಅಶ್ರಫ್, ಸಂಘದಡಿ ಸುಮಾರು 500 ಮೀನುಗಾರಿಕಾ ದೋಣಿಗಳು ಕಾರ್ಯನಿರ್ವಹಿಸುತ್ತಿವೆ. ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮವಾಗಿ ತೈಲ…

Read More

ಅಹ್ಲೆ ಹದೀಸ್ ಸಮ್ಮೇಳನ ಎ.18–19ರಂದು ಮಂಗಳೂರಿನಲ್ಲಿ

ಜಮೀಯತೇ ಅಹ್ಲೆ ಹದೀಸ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ನಗರದ ಪುರಭವನದಲ್ಲಿ ಎ. 18 ಮತ್ತು 19ರಂದು ಅಹ್ಲೆ ಹದೀಸ್ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಅಬ್ದುಸ್ಸಲಾಂ ಕಾಟಿಪಳ್ಳ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಎ.18ರಂದು ಬೆಳಗ್ಗೆ 10 ಗಂಟೆಗೆ ಸಮ್ಮೇಳನ ಉದ್ಘಾಟನೆ ನಡೆಯಲಿದೆ ಎಂದರು. ಅಖಿಲ ಭಾರತ ಜಮೀಯತೇ ಅಹ್ಲೆ ಹದೀಸ್ ಅಧ್ಯಕ್ಷ ಅಸ್ಗರ್ ಅಲಿ ಇನಾಮ್ ಮೆಹ್ಡಿ ಮಾರ್ಗದರ್ಶನದಲ್ಲಿ, ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್‌ ವಹಾಬ್…

Read More

ಮಂಗಳೂರಿನಲ್ಲಿ ‘ಚಾಕೊಲೇಟ್ ಸ್ಟ್ರೀಟ್’ 7ನೇ ಆವೃತ್ತಿ ಎ.11–12ರಂದು

ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಂಸ್ಥೆಯು (ನಿಕೋ) ವತಿಯಿಂದ ಕ್ಯಾಂಪ್ಕೋ ಸಹಯೋಗದಲ್ಲಿ ಮಂಗಳೂರಿನ ಅತಿದೊಡ್ಡ ಚಾಕೊಲೇಟ್ ಹಬ್ಬ ‘ಚಾಕೊಲೇಟ್ ಸ್ಟ್ರೀಟ್’ನ 7ನೇ ಆವೃತ್ತಿ ಎ.11 ಮತ್ತು 12 ರಂದು ನಗರದ ಫಿಜಾ ಬೈ ನೆಕ್ಸಸ್ ಮಾಲ್‌ನಲ್ಲಿ ಆಯೋಜಿಸಲಿದೆ ಎಂದು ನಿಟ್ಟೆ ಇನ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಮುಖ್ಯಸ್ಥೆ ಡಾ. ಮೌಲ್ಯ ಬಾಲಾಡಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಬೆಳಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸೊಲ್ಮೆಲು ಚಾಕೊಲೇಟ್ ಸಂಸ್ಥೆಯ ಸ್ಥಾಪಕ ಮಯೂರ್…

Read More

ಸೌಹಾರ್ದದ ಸಂಕೇತ: ಕಟ್ಟತ್ತಿಲ ದರ್ಗಾ–ಕಟ್ಟತ್ತಿಲ ಮಠ ಸಂಪರ್ಕ ರಸ್ತೆ ಡಾಮರೀಕರಣಕ್ಕೆ ನಾಗರಿಕರ ಮೆಚ್ಚುಗೆ

ಕೊಳ್ನಾಡು: ಇತಿಹಾಸ ಪ್ರಸಿದ್ದ ಮುಸ್ಲಿಂ ದಾರ್ಮಿಕ ಕೇಂದ್ರವಾದ ಕಟ್ಟತ್ತಿಲ ದರ್ಗಾ ಹಾಗೂ ಹಿಂದೂ ದಾರ್ಮಿಕ ಕೇಂದ್ರ ಕಟ್ಟತ್ತಿಲ ಮಠವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯ ಡಾಮರೀಕರಣ ಕಾರ್ಯ ಪೂರ್ಣಗೊಂಡಿದ್ದು, ವಿಶೇಷವಾಗಿ ಕಟ್ಟತ್ತಿಲ ಊರೂಸು ಸಮಾರಂಭದ ಸಂಧರ್ಭದಲ್ಲಿ ನಾಗರಿಕರಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಎರಡು ಸಮುದಾಯಗಳ ಸೌಹಾರ್ದತೆಯ ಸಂಕೇತವಾಗಿ ಗುರುತಿಸಿಕೊಂಡಿರುವ ಈ ರಸ್ತೆ ಇದೀಗ ಸುಧಾರಿತ ರೂಪ ಪಡೆದುಕೊಂಡಿರುವುದು ಸ್ಥಳೀಯರಿಗೆ ಸಂತೋಷ ತಂದಿದೆ. ಈ ರಸ್ತೆಯ ಇತಿಹಾಸವನ್ನು ನೆನಪಿಸಿಕೊಂಡರೆ, ಹಲವಾರು ವರ್ಷಗಳ ಹಿಂದೆ ಕೊಳ್ನಾಡು ಗ್ರಾಮ ಪಂಚಾಯತ್‌ನ ಸುದೀರ್ಘ ಅವಧಿಯ…

Read More
error: Content is protected !!