ತುಳು ಮಕ್ಕಳ ಗೀತೆ, ಕಥೆಗಳಿಗೆ ಆಹ್ವಾನ
ಮಂಗಳೂರು: ತುಳು ಭಾಷೆ ಹಾಗೂ ಸಂಸ್ಕೃತಿಯ ಉತ್ತೇಜನಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ತುಲುವೆರೆ ಕಲ ಟ್ರಸ್ಟ್ (ರಿ.) ಮಂಗಳೂರು ತನ್ನ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಸಾರ್ವಜನಿಕರಿಂದ ತುಳು ಮಕ್ಕಳ ಗೀತೆ ಹಾಗೂ ಮಕ್ಕಳ ಕಥೆಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅತ್ಯುತ್ತಮ ಮೂರು ಗೀತೆ ಹಾಗೂ ಮೂರು ಕತೆಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುವುದು. ಜೊತೆಗೆ ಮೇ ತಿಂಗಳಲ್ಲಿ ನಡೆಯುವ ಟ್ರಸ್ಟ್ನ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿಜೇತರನ್ನು ಗೌರವಿಸಲಾಗುತ್ತದೆ. ಆಯ್ಕೆಯಾದ ಬರಹಗಳನ್ನು ನಂತರ ಪುಸ್ತಕ ರೂಪದಲ್ಲಿಯೂ ಪ್ರಕಟಿಸಲಾಗುವುದು ಎಂದು ಟ್ರಸ್ಟ್ ಪ್ರಕಟಣೆಯಲ್ಲಿ…