ಕಾಸರಗೋಡು: ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯದ ರಜತ ಮಹೋತ್ಸವ ಅಂಗವಾಗಿ ಸಾಹಿತ್ಯೋತ್ಸವ

ಕಾಸರಗೋಡು: ಕಾಸರಗೋಡು ಕನ್ನಡ ಗ್ರಾಮದಲ್ಲಿರುವ ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯದ ರಜತ ಮಹೋತ್ಸವ ವರ್ಷ (2000–2026) ಅಂಗವಾಗಿ “25 ಸರಣಿ ದತ್ತಿ ಉಪನ್ಯಾಸ ಮಾಲಿಕೆ” ಹಾಗೂ “ಕಾಸರಗೋಡು ಸಾಹಿತ್ಯೋತ್ಸವ – ಕನ್ನಡೋತ್ಸವ” ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಖಾಸಗಿ ನೆಲೆಯಲ್ಲಿ ಬೃಹತ್ ಕನ್ನಡ ಪುಸ್ತಕಗಳ ಸಂಗ್ರಹವನ್ನು ಹೊಂದಿರುವ ಈ ಗ್ರಂಥಾಲಯವು ಲೇಖಕರು, ಸಾಹಿತಿಗಳು, ಕವಿಗಳು, ಮಾಧ್ಯಮದವರು, ಶಿಕ್ಷಣ ತಜ್ಞರು, ಸಂಶೋಧಕರು ಮತ್ತು ಕಲಾವಿದರಿಗೆ ಅಧ್ಯಯನಕ್ಕೆ ಅಗತ್ಯವಾದ ವಿವಿಧ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಇತಿಹಾಸಕ್ಕೆ ಸಂಬಂಧಿಸಿದ…

Read More

ಪುತ್ತೂರು: ಸೇಡಿಯಾಪಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಹಾಗೂ 300 ಹಾಸಿಗೆಗಳ ಆಸ್ಪತ್ರೆ – ವಿರೋಧದ ಮಧ್ಯೆಯೇ ಯೋಜನೆಗೆ ಬೆಂಬಲ

ಪುತ್ತೂರು: ಬನ್ನೂರು ಗ್ರಾಮದ ಸೇಡಿಯಾಪು ಪ್ರದೇಶದಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಮತ್ತು 300 ಹಾಸಿಗೆಗಳ ಆಸ್ಪತ್ರೆ ಆರಂಭಿಸಲು ರಾಜ್ಯ ಸರ್ಕಾರ ಈಗಾಗಲೇ ಅನುಮತಿ ನೀಡಿದೆ ಎಂದು ಕೋಡಿಂಬಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಹೇಳಿದರು. ಈ ಯೋಜನೆಗೆ ಬಿಜೆಪಿಯವರು ಅನಗತ್ಯವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದು “ಮೊಸರಲ್ಲಿ ಕಲ್ಲು ಹುಡುಕುವ ಕೆಲಸ” ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಘೋಷಣೆ ಮಾಡಿದ್ದು, ಶಾಸಕ ಅಶೋಕ್ ಕುಮಾರ್ ರೈ…

Read More

ಕಣ್ವತೀರ್ಥದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಆಯುರ್ವೇದ ಚಿಕಿತ್ಸಾ ಶಿಬಿರ

ಬೆಂಗ್ರೆ ಕಣ್ವತೀರ್ಥ: ಶ್ರೀ ದೇವಿ ಕೃಪಾ ಫ್ರೆಂಡ್ಸ್ ಕ್ಲಬ್ (ರಿ) ಬೆಂಗ್ರೆ ಕಣ್ವತೀರ್ಥ, ಶ್ರೀ ಭಗವತಿ ಕೃಪಾ ಬಾಲಾಂಜನೇಯ ವ್ಯಾಯಾಮ ಶಾಲೆ (ರಿ) ಬೆಂಗ್ರೆ ಕಣ್ವತೀರ್ಥ, ಜಗದ್ಗುರು ಶ್ರೀ ನಿತ್ಯಾನಂದ ಮಹಾ ಪೀಠಮ್ ಚಾರಿಟೇಬಲ್ ಟ್ರಸ್ಟ್ (ರಿ) ಕೊಂಡೇವೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರಕ್ಕೆ ಒನ್ ಸೈಟ್ ಎಸ್ಪಿಲೋರ್ ಲಕೋಟಿಕಾ ಫೌಂಡೇಶನ್, ಬೆಂಗಳೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಮಂಗಳೂರು,…

Read More

ಮಂಗಳೂರು ಜಂಕ್ಷನ್‌ನಲ್ಲಿ ಭರ್ಜರಿ ಕಾರ್ಯಾಚರಣೆ: 10 ಲಕ್ಷ ಮೌಲ್ಯದ 201 ಮೊಬೈಲ್ ವಶ

ಮಂಗಳೂರು: ಕೇರಳ ವಿಧಾನಸಭೆ ಚುನಾವಣೆಯ ಹಿನ್ನೆಲೆ ರೈಲುಗಳಲ್ಲಿ ತಪಾಸಣೆ ಬಿಗಿಗೊಳಿಸಿರುವ ರೈಲ್ವೇ ಪೊಲೀಸರು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು ರೂ.10 ಲಕ್ಷ ಮೌಲ್ಯದ 201 ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 9ರಂದು ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಆಗಮಿಸಿದ ಜಾಮ್‌ನಗರ–ತಿರುನೆಲ್ವೇಲಿ ಜಂಕ್ಷನ್ ಎಕ್ಸ್‌ಪ್ರೆಸ್ ರೈಲುದಲ್ಲಿ ತಪಾಸಣೆ ನಡೆಸಲಾಯಿತು. ಈ ವೇಳೆ ರೈಲಿನ ಸಾಮಾನ್ಯ ಬೋಗಿಯ ಮೇಲಿನ ಲಗೇಜ್ ರಾಕ್‌ನಲ್ಲಿ ವಾರೀಸುದಾರರು ಇಲ್ಲದ ಮೂರು ಬ್ಯಾಗ್‌ಗಳು…

Read More

ಮಂಗಳೂರಿನಲ್ಲಿ ಸೌಹಾರ್ದ ಇಫ್ತಾರ್ ಕೂಟ: “ಪ್ರೀತಿ ಹರಡಲಿ ಎಲ್ಲೆಡೆ” ಸಂದೇಶ

ಮಂಗಳೂರು: ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ನೇತೃತ್ವದಲ್ಲಿ “ಪ್ರೀತಿ ಹರಡಲಿ ಎಲ್ಲೆಡೆ” ಎಂಬ ಘೋಷವಾಕ್ಯದೊಂದಿಗೆ ರಮಝಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವು ಸಂತ ಅಲೋಶಿಯಸ್ ಕಾಲೇಜಿನ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಝೀಝ್ ದಾರಿಮಿ ಚೊಕ್ಕಬೆಟ್ಟು ಹಾಗೂ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹ ಕುಲಪತಿ ಫಾ. ಮೆಲ್ವಿನ್ ಡಿಕುನ್ಹಾ ಎಸ್.ಜೆ. ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ಅಧ್ಯಕ್ಷ ರೊಯ್ ಕ್ಯಾಸ್ತೆಲಿನೊ, ಖ್ಯಾತ ಸಾಹಿತಿ ಮತ್ತು ನಿವೃತ್ತ ಶಿಕ್ಷಕಿ…

Read More

ಮುಂಡೋಳಿ ನಿವಾಸಿ ಕೃಷಿಕ ಬೈಕ್ ಅಪಘಾತದಲ್ಲಿ ದಾರುಣ ಸಾವು

ಉಳ್ಳಾಲ: ಕುತಾರ್ ಸಮೀಪದ ಮದನಿ ನಗರ ಮುಖ್ಯ ರಸ್ತೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಪಾದಚಾರಿಯಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮುಂಡೋಳಿ ನಿವಾಸಿ ದಿನೇಶ್ ಗಟ್ಟಿ (50) ಮೃತಪಟ್ಟವರು. ಅವರು ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತ ದಿನೇಶ್ ಗಟ್ಟಿ ಅವರು ಕೃಷಿಕರಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್…

Read More

ಸ್ತನ ಹಾಗೂ ಬಾಯಿ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣಾ ಶಿಬಿರ

ಉಪ್ಪಳ , ಮಾ.11: ಬೀಡಿ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗಾಗಿ ಸ್ತನ ಮತ್ತು ಬಾಯಿ ಕ್ಯಾನ್ಸರ್ ಜಾಗೃತಿ ಹಾಗೂ ತಪಾಸಣಾ ಶಿಬಿರವನ್ನು ಇಂದು ಬೇಕುರಿನಲ್ಲಿ ಆಯೋಜಿಸಲಾಯಿತು.ಬೇಕುರು ಸಮೀಪದ ಸುಬಾಶ್ ನಗರದಲ್ಲಿರುವ ಯುವಶಕ್ತಿ ಫ್ರೆಂಡ್ಸ್ ಸರ್ಕಲ್ ಲೈಬ್ರರಿಯಲ್ಲಿ ಮಧ್ಯಾಹ್ನ 1.30 ಕ್ಕೆ ಶಿಬಿರ ನಡೆಯಿತು.ಈ ಶಿಬಿರವನ್ನು ಬಿಡಬ್ಲ್ಯುಡಬ್ಲ್ಯುಎಫ್ (BWWF) ಡಿಸ್ಪೆನ್ಸರಿ ಮಂಜೇಶ್ವರ ಮತ್ತು ಎಲ್‌ಡಬ್ಲ್ಯುಒ ಕೇರಳಂ ವತಿಯಿಂದ, ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಾ. ನಿವೇದಾ ಬಿ.ಆರ್ (MBBS), ಎಂಎಸ್ ಜನರಲ್…

Read More

ಆಟೋ ಗ್ಯಾಸ್ ದರ ಏರಿಕೆ ಆರೋಪ: ರಿಕ್ಷಾ ಚಾಲಕರ ಹಠಾತ್ ಪ್ರತಿಭಟನೆ

ಬಂಟ್ವಾಳ: ಇಲ್ಲಿನ ತಲಪಾಡಿ ಪ್ರದೇಶದಲ್ಲಿರುವ ಆಟೋ ಗ್ಯಾಸ್ ಪಂಪ್‌ನಲ್ಲಿ ಏಕಾಏಕಿ ಯಾವುದೇ ಸೂಚನೆ ನೀಡದೇ ರೂ.10 ಹೆಚ್ಚಳ ಮಾಡಲಾಗಿದೆ ಎಂದು ಆರೋಪಿಸಿ ರಿಕ್ಷಾ ಚಾಲಕರು ಹಠಾತ್ ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ತಾಲೂಕಿನ ಕೈಕಂಬ ಸಮೀಪದ ತಲಪಾಡಿ ಮಹಾಲಕ್ಷ್ಮಿ ಆಟೋ ಗ್ಯಾಸ್ ಪಂಪ್‌ನಲ್ಲಿ ಕೆ.ಜಿ.ಗೆ ನಿಗದಿತ ದರಕ್ಕಿಂತ ರೂ.10 ಹೆಚ್ಚುವರಿಯಾಗಿ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ರಿಕ್ಷಾ ಚಾಲಕರ-ಮಾಲಕರ ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ಅವರ ನೇತೃತ್ವದಲ್ಲಿ ಚಾಲಕರು ಪಂಪ್ ಎದುರು ಪ್ರತಿಭಟನೆ ನಡೆಸಿದರು….

Read More

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುತು ಸಿಗದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದ್ದು, ಮೃತರ ಗುರುತು ಪತ್ತೆ ಮಾಡಲು ಸಾರ್ವಜನಿಕರ ಸಹಕಾರವನ್ನು ಕಡಬ ಪೊಲೀಸರು ಕೋರಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ, ಮಾರ್ಚ್ 6ರಂದು ಮಧ್ಯಾಹ್ನ ಸುಮಾರು 1.20 ಗಂಟೆಯ ವೇಳೆಗೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಬಿಳಿನೆಲೆ ಜಂಕ್ಷನ್ ಸಮೀಪದ ಅಂಗಡಿಯ ಬಳಿ ಒಬ್ಬ ವ್ಯಕ್ತಿ ಅಸ್ವಸ್ಥಗೊಂಡು ಮಲಗಿರುವ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸ್ಥಳೀಯರ ಸಹಾಯದಿಂದ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು…

Read More

ಸರಕಾರಿ ಅಧಿಕಾರಿಗಳ ಕೇಸರಿ ನಡಿಗೆ ಸಂವಿಧಾನ ವಿರೋಧಿ: ಎಸ್‌ಡಿಪಿಐ ಆಕ್ರೋಶ”

ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಧೀನ ಸಂಸ್ಥೆಯಾಗಿರುವ ಭಾರತೀಯ ಮಜ್ದೂರು ಸಂಘದ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ್ ರೈ ಭಾಗವಹಿಸಿರುವುದನ್ನು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಸರಕಾರಿ ಅಧಿಕಾರಿಗಳು ಸಂವಿಧಾನಬದ್ಧವಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕೇ ಹೊರತು, ನಿರ್ದಿಷ್ಟ ಸಿದ್ಧಾಂತದ ಸಂಘಟನೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಿ…

Read More
error: Content is protected !!