ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಇಲಾಖೆಗೆ ದೂರು
ಬಂಟ್ವಾಳ, ಜೂ.10: ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಪ್ರದೇಶದಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದ್ದು, ಅದರ ಸಾಗಾಟವೂ ನಡೆಯುತ್ತಿದೆ ಎಂದು ಆರೋಪಿಸಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗಣೇಶ್ ನಾಯಕ್ ಅವರು ಪೊಲೀಸ್ ಇಲಾಖೆಗೆ ದೂರು ನೀಡಿದ್ದಾರೆ. ಪಾಣೆಮಂಗಳೂರಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆಗೆ ಬಳಸಲಾಗುತ್ತಿರುವ ದೋಣಿಗಳು ನಿಲ್ಲಿಸಲಾಗಿದ್ದು, ಈಗಾಗಲೇ ಅಕ್ರಮವಾಗಿ ತೆಗೆಯಲಾದ ಹತ್ತಕ್ಕೂ ಅಧಿಕ ಮರಳು ಲೋಡ್ಗಳನ್ನು ದಾಸ್ತಾನು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪಾಣೆಮಂಗಳೂರು ಸೇತುವೆ ಹಾಗೂ ರೈಲ್ವೆ ಸೇತುವೆಯಿಂದ ಕೂಗಳತೆಯ ಅಂತರದಲ್ಲಿ…