ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾ ರಾಣಿ ದಂಪತಿಗೆ “ಕನ್ನಡ ಕಟ್ಟಾಳು “ವಿಶೇಷ ಗೌರವ ಪ್ರಶಸ್ತಿ.
ಮಂಗಳೂರು: ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ನಡೆದ ಕನ್ನಡ ಭವನ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ದಂಪತಿಗೆ “ಕನ್ನಡ ಕಟ್ಟಾಳು” ವಿಶೇಷ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಶ್ರೀಮತಿ ರೇಖಾ ಸುದೇಶ್ ರಾವ್ ಅಧ್ಯಕ್ಷೆಯಾಗಿರುವ ಹಾಗೂ ಡಾ. ರವೀಂದ್ರ ಜೆಪ್ಪು ಗೌರವ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಭವನದ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಾರ್ಯಾಧ್ಯಕ್ಷ ಉಮೇಶ್ ರಾವ್ ಕುಂಬ್ಳೆ, ಕನ್ನಡ…