15 ದಿನಗಳೊಳಗೆ ಸೂಲಡ್ಪು- ಮಡಿವಾಳ ಸಾಲು ನದಿಯ ಹೂಳೆತ್ತದಿದ್ದರೆ ಬೃಹತ್ ಪ್ರತಿಭಟನೆ- ಕೋಟದ ರೈತರ ಸಂಘಟನೆ ರೈತಧ್ವನಿ ಎಚ್ಚರಿಕೆ ಕರೆ …. !
ಉಡುಪಿ:ಬ್ರಹ್ಮಾವರ ತಾಲೂಕಿನ ಏಳು ಗ್ರಾಮಗಳಲ್ಲಿ ಹಾದು ಹೋಗುವ ಸೂಲಡ್ಪು- ಮಡಿವಾಳಸಾಲು ಹೊಳೆಯ ಹೂಳೆತ್ತುವ ಕಾರ್ಯವನ್ನು 15 ದಿನಗಳೊಳಗೆ ಕೈಗೆತ್ತಿಕೊಳ್ಳಬೇಕು. ಇಲ್ಲದಿದ್ದರೆ ಬ್ರಹ್ಮಾವರ ತಾಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳುತ್ತೇವೆ ಎಂದು ಕೋಟದ ರೈತರ ಸಂಘಟನೆ ರೈತಧ್ವನಿಯ ಅಧ್ಯಕ್ಷ ಮಣೂರು ಜಯರಾಮ ಶೆಟ್ಟಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆಯ ಪದಾಧಿಕಾರಿಗಳು ಈ ಕುರಿತು ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು,15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. 15 ದಿನಗಳಲ್ಲಿ ಹೂಳೆತ್ತುವ ಪ್ರಕ್ರಿಯೆಗೆ ಸಕಾರಾತ್ಮಕ ಸ್ಪಂದನೆ ಸಿಗದಿದ್ದರೆ…