ಮಂಗಳೂರು: ಎಮ್ಮೆಮಾಡು ಮಕಾಮ್ ಶರೀಫ್ ಉರೂಸ್ ಏಪ್ರಿಲ್ 17ರಿಂದ ಭವ್ಯವಾಗಿ

ಕೊಡಗು ಜಿಲ್ಲೆಯ ಇತಿಹಾಸ ಪ್ರಸಿದ್ದ ಎಮ್ಮೆಮಾಡು ಮಕಾಮ್ ಶರೀಫ್‌ನಲ್ಲಿ ಹಜ್ರತ್ ಸೂಫಿ ಶಹೀದ್ (ರ) ಮತ್ತು ಸಯ್ಯದ್ ಹಸನ್ ಸಖಾಫ್ ಅಲ್ ಹದ್ಯಾದಿ (ರ) ಹಾಗೂ ಇತರ ಔಲಿಯಾಗಳ ಹೆಸರಿನಲ್ಲಿ ನಡೆಯುವ ಉರೂಸ್ ಮುಬಾರಕ್ ಈ ವರ್ಷ ಏಪ್ರಿಲ್ 17 ರಿಂದ ಏಪ್ರಿಲ್ 24 ರವರೆಗೆ ಅತೀ ವಿಜೃಂಭಣೆಯಿಂದ ಜರುಗಲಿದೆ ಎಂದು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಎಂ. ಹುಸೈನ್ ಸಖಾಫಿ ಅವರು ತಿಳಿಸಿದರು. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಏಪ್ರಿಲ್ 17 ರಂದು…

Read More

ಓಂ ಶ್ರೀ ಗೆಳೆಯರ ಬಳಗದ 20ನೇ ವಾರ್ಷಿಕ ಸಂಭ್ರಮ ಏಪ್ರಿಲ್ 18ರಂದು

ಬಂಟ್ವಾಳ: ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಓಂ ಶ್ರೀ ಗೆಳೆಯರ ಬಳಗ (ರಿ.), ನಾಯಿಲ ಪಾಣೆಮಂಗಳೂರು ಇದರ 20 ನೇ ವರ್ಷದ ವಾರ್ಷಿಕ ಸಂಭ್ರಮ ಎ. 18 ರಂದು ಶನಿವಾರ ಸಂಘದ ವಠಾರದಲ್ಲಿ ನಡೆಯಲಿದೆ ಎಂದು ಸಂಘದ ನಿಕಟಪೂರ್ವ ಅಧ್ಯಕ್ಷ ಕಿರಣ್ ಕುಮಾರ್ ಅಟ್ಲೂರು ತಿಳಿಸಿದ್ದಾರೆ.ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕಾರ್ಯಕ್ರಮದ ವಿವರವನ್ನು ನೀಡಿದರು. ಓಂ ಶ್ರೀ ಗೆಳೆಯರ ಬಳಗ 20 ವರ್ಷಗಳಿಂದ ನಿರಂತರವಾಗಿ ಸಾಮಾಜಿಕವಾಗಿ ಬೇರೆ ಬೇರೆ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು, ಆಸಕ್ತ ಕುಟುಂಬಗಳಿಗೆ…

Read More

ಮಂಗಳೂರು: ನಾರಿ ಶಕ್ತಿ ವಂದನ ಕಾಯ್ದೆ ಪ್ರಜಾಪ್ರಭುತ್ವಕ್ಕೆ ಮೈಲುಗಲ್ಲು—ಭಾಗೀರಥಿ ಮುರುಳ್ಯ

ಮಂಗಳೂರು: ನಾರಿ ಶಕ್ತಿ ವಂದನ ಕಾಯ್ದೆಯು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೊಂದು ಮಹತ್ವದ ಮೈಲುಗಲ್ಲಾಗಿದ್ದು, ಇದರ ಮೂಲಕ ಮಹಿಳೆಯರು ನೀತಿ ರೂಪಣೆ ಹಾಗೂ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 16ರಿಂದ ಆರಂಭವಾಗುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಮಹಿಳೆಯರ ಪ್ರಜಾಪ್ರಭುತ್ವದ ಪಾಲ್ಗೊಳ್ಳುವಿಕೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದರು. ಲೋಕಸಭೆ ಹಾಗೂ ರಾಜ್ಯ…

Read More

ಬಂಟ್ವಾಳದಲ್ಲಿ ‘ಬಂಟ್ವಾಳ ನೈಟ್ಸ್ 2k26’ ಸ್ಟಾರ್ ನೈಟ್: ಎಕ್ಸ್ ಟ್ರೀಮ್ ಡ್ಯಾನ್ಸ್ ಕ್ರೂವ್‌ನಿಂದ ಏಪ್ರಿಲ್ 18ರಂದು ಭವ್ಯ ಕಾರ್ಯಕ್ರಮ

ಬಂಟ್ವಾಳ: ಕಳೆದ 15 ವರ್ಷಗಳಿಂದ ಡ್ಯಾನ್ಸ್ ಟೀಮ್ ಮೂಲಕ ಪ್ರಸಿದ್ಧಿಯಾದ ಎಕ್ಸ್ ಟ್ರೀಮ್ ಡ್ಯಾನ್ಸ್ ಕ್ರೂವ್ ಬಿಸಿರೋಡು ಇವರ ವತಿಯಿಂದ ಬಂಟ್ವಾಳ ನೈಟ್ಸ್ 2 ಕೆ 26 ಸ್ಟಾರ್ ನೈಟ್ಸ್ ಮತ್ತು ಸಾಧಕರನ್ನು ಗುರುತಿಸುವ ಕಾರ್ಯಕ್ರಮ ಎ. 18 ರಂದು ಬಂಟ್ವಾಳದ ದೇವರಕಟ್ಟೆ ಗ್ರೌಂಡ್ ನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥ ವಿನೋದ್ ರಾಜ್ ತಿಳಿಸಿದ್ದಾರೆ.ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಡ್ಯಾನ್ಸ್ ತರಬೇತಿ ಹಾಗೂ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಪ್ರತಿ ವರ್ಷವೂ…

Read More

ಮಂಗಳೂರು: ಎಂಆರ್‌ಪಿಎಲ್ ಹಸಿರು ವಲಯ ಭೂಸ್ವಾಧೀನ ವಿಳಂಬ—ಮೇ 1ರಿಂದ ಧರಣಿ ಎಚ್ಚರಿಕೆ

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೊಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಹಸಿರು ವಲಯ ನಿರ್ಮಾಣಕ್ಕೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯನ್ನು ಹಿಂದಿನ ತೀರ್ಮಾನದಂತೆ ಜಿಲ್ಲಾಡಳಿತದ ಮೂಲಕವೇ ತಕ್ಷಣ ಆರಂಭಿಸಬೇಕು. ಒಂದು ವಾರದೊಳಗೆ ಸ್ಪಷ್ಟ ನಿರ್ಧಾರ ಪ್ರಕಟಿಸದಿದ್ದಲ್ಲಿ ಮೇ 1ರಿಂದ ಎಂಆರ್‌ಪಿಎಲ್ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ಬುಧವಾರ ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ, ಎಂಆರ್‌ಪಿಎಲ್ ಮೂರನೇ ಹಂತದ ಕೋಕ್ ಸಲ್ಪರ್ ಘಟಕದಿಂದ ಉಂಟಾಗುತ್ತಿರುವ ಮಾಲಿನ್ಯ ತಡೆಗೆ…

Read More

ಬೆಂಗಳೂರು: ಇಡಬ್ಲ್ಯೂಎಸ್ ಪ್ರಮಾಣಪತ್ರ ಅವಧಿ ವಿಸ್ತರಣೆ ಕುರಿತು ಮುಖ್ಯಮಂತ್ರಿಗಳಿಗೆ ಮನವಿ

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪಿ.ಎಂ. ಮಾಲತೇಶ ಅವರು ಸನ್ಮಾನ್ಯ ಮುಖ್ಯಮಂತ್ರಿ Siddaramaiah ಅವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಇಡಬ್ಲ್ಯೂಎಸ್ (ಆರ್ಥಿಕವಾಗಿ ಹಿಂದುಳಿದ ವರ್ಗ) ಪ್ರಮಾಣಪತ್ರದ ಅವಧಿ ಕುರಿತ ಸಮಸ್ಯೆಯನ್ನು ವಿವರಿಸಿ ಮನವಿ ಸಲ್ಲಿಸಿದರು. ಬ್ರಾಹ್ಮಣ ಸಮುದಾಯಕ್ಕೆ ಇಡಬ್ಲ್ಯೂಎಸ್ ಪ್ರಮಾಣಪತ್ರವನ್ನು ಕೇವಲ ಒಂದು ವರ್ಷಕ್ಕೆ ಸೀಮಿತಗೊಳಿಸಲಾಗಿದ್ದು, ಇತರ ವರ್ಗಗಳಲ್ಲಿ ಇದು ಐದು ವರ್ಷಗಳ ಕಾಲ ಮಾನ್ಯವಾಗಿರುವುದರಿಂದ ಅಸಮಾನತೆ ಉಂಟಾಗಿದೆ ಎಂದು ಅವರು ತಿಳಿಸಿದರು. ವಿಶೇಷವಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ…

Read More

ಮಂಗಳೂರು: ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಂಭ್ರಮ

ಮಂಗಳೂರಿನ ಪಿ.ಎ. ಪ್ರಥಮ ದರ್ಜೆ ಕಾಲೇಜು 2025–2026 ಸಾಲಿನ ವಾರ್ಷಿಕೋತ್ಸವವನ್ನು ಏಪ್ರಿಲ್ 16ರಂದು ಪೇಸ್ ಸಭಾಂಗಣದಲ್ಲಿ ಭರ್ಜರಿಯಾಗಿ ಆಚರಿಸಿತು. ಪಿ.ಎ.ಇ.ಟಿ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಅಬ್ದುಲ್ಲಾ ಇಬ್ರಾಹಿಂ ಅವರ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು, ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಹರ್ಷಭರಿತ ವಾತಾವರಣ ನಿರ್ಮಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದೈಜಿವರ್ಲ್ಡ್ ಮೀಡಿಯಾ ಮಂಗಳೂರು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ವಾಲ್ಟರ್ ನಂದಳಿಕೆ ಅವರು ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್, ವಿಶೇಷವಾಗಿ ಸಂವಹನ ಹಾಗೂ ಭಾವನಾತ್ಮಕ ಬುದ್ಧಿಮತ್ತೆಯ…

Read More

ಮಂಗಳೂರು: ಅಂಗಾಂಗ ದಾನ ಕುರಿತು ಜಾಗೃತಿ ಮೂಡಿಸಿದ ಡಾ. ರೋಹನ್ ಎಸ್. ಮೋನಿಸ್

ಮಂಗಳೂರಿನಲ್ಲಿ ಏಪ್ರಿಲ್ 11 ಮತ್ತು 12ರಂದು ನಡೆದ “ಮಂಗಳೂರು ಫಿಸಿಯೋಕಾನ್ – 2026” ಅಂತರಾಷ್ಟ್ರೀಯ ಫಿಸಿಯೋಥೆರಪಿ ಸಮ್ಮೇಳನದಲ್ಲಿ ಅಂಗಾಂಗ ದಾನದ ಮಹತ್ವದ ಬಗ್ಗೆ ವಿಶಿಷ್ಟ ಚಿಂತನೆಗಳನ್ನು ಆರ್.ಟಿ.ಎನ್ ಡಾ. ರೋಹನ್ ಎಸ್. ಮೋನಿಸ್ ಹಂಚಿಕೊಂಡರು. ಟಿ.ಎಂ.ಎ ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಈ ಸಮ್ಮೇಳನವು ದೇಶದ ಅತಿದೊಡ್ಡ ಫಿಸಿಯೋಥೆರಪಿ ಕೂಟವಾಗಿ ಗುರುತಿಸಿಕೊಂಡಿದ್ದು, 6000ಕ್ಕೂ ಹೆಚ್ಚು ಫಿಸಿಯೋಥೆರಪಿಸ್ಟ್‌ಗಳು ಹಾಗೂ ಏಷ್ಯಾದ 30ಕ್ಕೂ ಹೆಚ್ಚು ಖ್ಯಾತ ಭಾಷಣಕಾರರು ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಡಾ. ಯು.ಟಿ. ಇಫ್ತಿಕಾರ್ ಫರೀದ್ ಅವರ…

Read More

ಕಣ್ಣೂರು ವಾರ್ಡ್‌ನಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 52 ನೇ ಕಣ್ಣೂರು ವಾರ್ಡಿನ ಪೇರ್ಲ ಶ್ರೀ ದುರ್ಗಾಪರಮೇಶ್ವರೀ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ರಸ್ತೆ ಕಾಮಗಾರಿಯು ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು ಇಲ್ಲಿಯತನಕ ಇಲ್ಲಿರುವ ದೇವಸ್ಥಾನದವರೆಗೆ ನಾಲ್ಕು ಚಕ್ರದ ವಾಹನಗಳು ಹೋಗಲು ಸಾಧ್ಯವಾಗದಂತಹ ಪರಿಸ್ಥಿತಿಯಿದ್ದ ಕಾರಣ ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ನಂತರದ ದಿನಗಳಲ್ಲಿ ಶತಾಯಗತಾಯ ಇಲ್ಲಿಗೊಂದು ಸುಸಜ್ಜಿತ ರಸ್ತೆ ನಿರ್ಮಾಣ ಮಾಡಲೇಬೇಕೆಂಬ ನಮ್ಮೆಲ್ಲರ ಆಶಯಕ್ಕೆ ಆಸರೆಯಾಗಿ ನಿಂತವರು ಇಲ್ಲಿನ…

Read More

​ಮಂಜೇಶ್ವರ: ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ – ಕುಂಡುಕೊಳಕೆ ಬೀಚ್‌ನಲ್ಲಿ ಸೂತಕದ ಛಾಯೆ

​ಮಂಜೇಶ್ವರ: ಇಲ್ಲಿನ ಕುಂಡುಕೊಳಕೆ ಸಮುದ್ರ ಕಿನಾರೆಯಲ್ಲಿ ಬುಧವಾರ ಸಂಜೆ ಅಲೆಗಳ ಅಬ್ಬರಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಇಂದು (ಗುರುವಾರ) ಸಂಜೆ ಹೊಸಬೆಟ್ಟು ಕಡಪ್ಪುರದಲ್ಲಿ ಪತ್ತೆಯಾಗಿದೆ. ಮಂಜೇಶ್ವರ ಚೌಕಿ ನಿವಾಸಿಗಳಾದ ಉಮರುಲ್ ಫಾರೂಕ್ ಮತ್ತು ರಝೀನಾ ದಂಪತಿಗಳ ಪುತ್ರ ಮೊಹಮ್ಮದ್ ಝೈನುಲ್ ಹಾಬಿದ್ (18) ಬುಧವಾರ ಸಂಜೆ ತನ್ನ ಸ್ನೇಹಿತರೊಂದಿಗೆ ಕುಂಡುಕೊಳಕೆ ಬೀಚ್‌ಗೆ ವಿಹಾರಕ್ಕೆ ಬಂದಿದ್ದನು. ಈ ಸಂದರ್ಭದಲ್ಲಿ ಅಲೆಗಳ ಅಬ್ಬರಕ್ಕೆ ಸಿಲುಕಿ ಆತ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದನು. ತಕ್ಷಣವೇ ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಹುಡುಕಾಟ…

Read More
error: Content is protected !!