ಮೀನಿನ ಲಾರಿಗಳ ನೀರು ಸೋರಿಕೆ ತಡೆಗೆ ಕ್ರಮ: ತಲಪಾಡಿ, ಮುಲ್ಕಿಯಲ್ಲಿ ಸೆಪ್ಟಿಕ್ ಟ್ಯಾಂಕ್ ನಿರ್ಮಾಣಕ್ಕೆ ಪ್ರಸ್ತಾವನೆ

ಮಂಗಳೂರು, ನಗರದಲ್ಲಿ ಸಂಚರಿಸುವ ಮೀನಿನ ಲಾರಿಗಳಿಂದ ತ್ಯಾಜ್ಯ ನೀರು ಸೋರಿಕೆಯಾಗುತ್ತಿರುವುದರಿಂದ ದುರ್ವಾಸನೆ ಉಂಟಾಗಿ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುತ್ತಿರುವ ಕುರಿತು ಬಂದಿರುವ ನಿರಂತರ ದೂರುಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮೀನಿನ ಕಾರ್ಖಾನೆ ಮಾಲೀಕರು ಹಾಗೂ ಉದ್ಯಮಿಗಳ ಸಭೆ ನಡೆಸಿತು. ಸಭೆಯಲ್ಲಿ ಮಾತನಾಡಿದ ಉದ್ಯಮಿಗಳು, ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕಗಳಲ್ಲಿ ಮೀನಿನ ಲಾರಿಗಳ ತ್ಯಾಜ್ಯ ನೀರು ವಿಸರ್ಜನೆಗಾಗಿ ಸೆಪ್ಟಿಕ್ ಟ್ಯಾಂಕ್‌ಗಳನ್ನು ನಿರ್ಮಿಸಿರುವ ಮಾದರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಹಾಗೂ ಮುಲ್ಕಿ ಪ್ರದೇಶಗಳಲ್ಲಿಯೂ ವ್ಯವಸ್ಥೆ ಕಲ್ಪಿಸಬೇಕು ಎಂದು ಸಲಹೆ ನೀಡಿದರು….

Read More

65 ವರ್ಷದ ವ್ಯಕ್ತಿ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ

ಮಂಗಳೂರು, ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ನಿವಾಸಿ ಕೃಷ್ಣ ನಾಯ್ಕ್ (65) ಅವರು ಕಾಣೆಯಾಗಿದ್ದು, ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃಷ್ಣ ನಾಯ್ಕ್ ಅವರು ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಅವರು ಕಾಣೆಯಾದ ಸಂದರ್ಭದಲ್ಲಿ ಮಿಶ್ರ ಬಣ್ಣದ ಗೆರೆಗಳಿರುವ ಶರ್ಟ್ ಹಾಗೂ ಪ್ಯಾಂಟ್ ಧರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸಮೀಪದ ಪೊಲೀಸ್ ಠಾಣೆ ಅಥವಾ…

Read More

ಜಂಕ್ಷನ್‌, ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ತ್ವರಿತ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ದರ್ಶನ್ ಸೂಚನೆ

ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ಜಂಕ್ಷನ್‌ಗಳು ಮತ್ತು ವೃತ್ತಗಳಲ್ಲಿ ಸುಗಮ ವಾಹನ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸಂಬಂಧಿತ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಮುಖ ಜಂಕ್ಷನ್‌ಗಳು ಹಾಗೂ ಮುಖ್ಯ ರಸ್ತೆಗಳಲ್ಲಿ ಅಕ್ರಮ ಪಾರ್ಕಿಂಗ್, ಒತ್ತುವರಿ ಮತ್ತು ಬೀದಿ ವ್ಯಾಪಾರದಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವ ಕುರಿತು ಸಾರ್ವಜನಿಕರಿಂದ ಹಲವು ದೂರುಗಳು ಬಂದಿರುವುದಾಗಿ ಹೇಳಿದರು….

Read More

ಬಂಟ್ವಾಳದಲ್ಲಿ ಶಾಲಾ ಬಸ್‌ಗಳ ಮೇಲೆ ಟ್ರಾಫಿಕ್ ಪೊಲೀಸರ ದಾಳಿ: ಒಂದೇ ದಿನ 20 ಪ್ರಕರಣ ದಾಖಲು

ಬಂಟ್ವಾಳ, ಜೂ. 10: ಶಾಲಾ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಖಾಸಗಿ ಶಾಲಾ ಬಸ್‌ಗಳು ಕಾನೂನು ಹಾಗೂ ನಿಯಮಗಳನ್ನು ಪಾಲಿಸುತ್ತಿವೆಯೇ ಎಂಬುದನ್ನು ಪರಿಶೀಲಿಸಲು ಬಂಟ್ವಾಳ ಟ್ರಾಫಿಕ್ ಎಸ್.ಐ. ಆದರ್ಶ್ ನೇತೃತ್ವದ ತಂಡ ವಿಶೇಷ ತಪಾಸಣೆ ನಡೆಸಿತು. ಬೆಳಿಗ್ಗೆ 6 ಗಂಟೆಯಿಂದಲೇ ಬಿಸಿರೋಡು ವೃತ್ತದ ಬಳಿ ಹೆದ್ದಾರಿ ಬದಿಯಲ್ಲಿ ಶಾಲಾ ಬಸ್‌ಗಳನ್ನು ನಿಲ್ಲಿಸಿ ದಾಖಲೆಗಳು, ಸುರಕ್ಷತಾ ವ್ಯವಸ್ಥೆಗಳು ಹಾಗೂ ಇತರೆ ನಿಯಮಗಳ ಪಾಲನೆ ಕುರಿತು ಪರಿಶೀಲನೆ ನಡೆಸಲಾಯಿತು. ನಿಯಮ ಉಲ್ಲಂಘಿಸಿದ ಬಸ್‌ಗಳು ಮತ್ತು ಚಾಲಕರ ವಿರುದ್ಧ ಒಟ್ಟು 20 ಪ್ರಕರಣಗಳನ್ನು…

Read More

12 ವರ್ಷಗಳಿಂದ ಅಭಿವೃದ್ಧಿ ಕಾಣದ ದೂಮಳಿಕೆ ರಸ್ತೆ: ಹೊಂಡಗಳ ನಡುವೆ ಜನರ ನಿತ್ಯದ ಬದುಕಿನ ಹೋರಾಟ

ಬಂಟ್ವಾಳ, ಜೂ. 10: ಮಳೆ ಬಂದಾಗ ರಸ್ತೆಗಳ ನೈಜ ಸ್ಥಿತಿ ಹೊರಬೀಳುವುದು ಸಾಮಾನ್ಯ. ಆದರೆ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರವೇ ದುಸ್ತರವಾದಾಗ ಸಾರ್ವಜನಿಕರ ಆಕ್ರೋಶ ಹೆಚ್ಚಾಗುವುದು ಸಹಜ. ಇದೇ ರೀತಿಯ ದುಸ್ಥಿತಿಯೊಂದು ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಳಕಟ್ಟೆ ಬಳಿಯ ದೂಮಳಿಕೆ ರಸ್ತೆಯಲ್ಲಿ ಕಂಡುಬಂದಿದೆ. ಬಂಟ್ವಾಳ–ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿರುವ ದೂಮಳಿಕೆ ರಸ್ತೆ ಕಳೆದ ಹಲವು ವರ್ಷಗಳಿಂದ ಅಭಿವೃದ್ಧಿಯ ಸ್ಪರ್ಶ ಕಾಣದೆ ಹೊಂಡಗಳ ಸಾಗರವಾಗಿ ಮಾರ್ಪಟ್ಟಿದೆ. ಗ್ರಾಮ ಪಂಚಾಯತ್ ಕಚೇರಿಯ ಮುಂಭಾಗದಲ್ಲೇ…

Read More

ಮಳೆಯ ಅಬ್ಬರಕ್ಕೆ ಪಾಣೆಮಂಗಳೂರು ರಸ್ತೆ ಹೊಳೆಯಂತೆ: ವಾಹನ ಸವಾರರು, ಪಾದಚಾರಿಗಳ ಪರದಾಟ

ಬಂಟ್ವಾಳ, ಜೂ. 10: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ರಸ್ತೆಯ ಆರಂಭ ಭಾಗದಲ್ಲಿ ಕೃತಕ ನೆರೆ ಉಂಟಾಗಿ ವಾಹನ ಸವಾರರು ಹಾಗೂ ಪಾದಚಾರಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ರಸ್ತೆಯಲ್ಲಿ ನೀರು ನಿಂತಿರುವ ಪರಿಣಾಮ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳೀಯ ಅಂಗಡಿ ಮತ್ತು ಮುಂಗಟ್ಟುಗಳಿಗೆ ಆಗಮಿಸುವ ಗ್ರಾಹಕರು ಕೂಡ ತೊಂದರೆ ಅನುಭವಿಸುವಂತಾಗಿದೆ. ಈ ಭಾಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ಹೆದ್ದಾರಿ…

Read More

ನೆಹರೂ ದಾಖಲೆ ಮುರಿದ ಮೋದಿ: ನಿರಂತರ ಆಡಳಿತದಲ್ಲಿ ಹೊಸ ಇತಿಹಾಸ

ನವದೆಹಲಿ, ಜೂ.10: ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ ನಿರಂತರವಾಗಿ ಅಧಿಕಾರ ನಡೆಸಿದ ಪ್ರಧಾನಿಯಾಗಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ನಿರಂತರ ಆಡಳಿತದ ದಾಖಲೆಯನ್ನು ಹಿಂದಿಕ್ಕಿ 4,399 ದಿನಗಳ ಸೇವೆಯ ಮೈಲುಗಲ್ಲು ತಲುಪಿದ್ದಾರೆ. 2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಮೋದಿ ಅವರು, ಮಂಗಳವಾರಕ್ಕೆ 4,399 ದಿನಗಳ ನಿರಂತರ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ್ದಾರೆ. ಇದರೊಂದಿಗೆ ಕಳೆದ 64…

Read More

ರಾಜ್ಯದಲ್ಲಿ ಮುಂಗಾರು ಆರ್ಭಟ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ವಿಸ್ತರಣೆ

ಬೆಂಗಳೂರು, ಜೂ.10: ರಾಜ್ಯಾದ್ಯಂತ ನೈಋತ್ಯ ಮುಂಗಾರು ಮಾರುತಗಳ ಅಬ್ಬರ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಜೂನ್ 13ರವರೆಗೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಈಗಾಗಲೇ ರೆಡ್ ಅಲರ್ಟ್ ನೀಡಲಾಗಿತ್ತು. ಆದರೆ ಮಳೆಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಸೇರಿದಂತೆ ಒಟ್ಟು ಏಳು…

Read More

ಧರ್ಮಗಳಲ್ಲ, ಧರ್ಮವನ್ನು ದುರುಪಯೋಗಪಡಿಸಿಕೊಂಡು ಸಮಾಜ ವಿಭಜಿಸುವವರ ವಿರುದ್ಧ ವಿರೋಧ: ದೀಪಾ ಭಾಸ್ತಿ

ಮಂಗಳೂರು: ಹಿಂದೂ, ಕ್ರೈಸ್ತ, ಮುಸ್ಲಿಂ ಸೇರಿದಂತೆ ಯಾವುದೇ ಧರ್ಮಗಳು ಸಮಸ್ಯೆಯಲ್ಲ. ಆದರೆ ಕೆಲವರು ಧರ್ಮವನ್ನು ಅಸ್ತ್ರವನ್ನಾಗಿ ಬಳಸಿಕೊಂಡು ಸಮಾಜವನ್ನು ವಿಭಜಿಸುವ ಪ್ರಯತ್ನ ನಡೆಸುತ್ತಿರುವುದರ ವಿರುದ್ಧ ನನ್ನ ವಿರೋಧವಿದೆ ಎಂದು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಹಾಗೂ ಲೇಖಕಿ ದೀಪಾ ಭಾಸ್ತಿ ಹೇಳಿದ್ದಾರೆ. ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ಪಿ.ಪಿ. ಗೋಮತಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್, ಮಂಗಳೂರು ವಿಶ್ವವಿದ್ಯಾನಿಲಯ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ…

Read More

ವಿಟ್ಲ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ ಯಶಸ್ವಿ

ವಿಟ್ಲ, ಜೂನ್ 10: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ, ವಿಟ್ಲ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ವಿಟ್ಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಪುತ್ತೂರು ರಾಮಕೃಷ್ಣ ವಿದ್ಯಾ ಸಂಸ್ಥೆಯ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಉದ್ಘಾಟಿಸಿದರು. ಸ್ಥಳೀಯ ಸಂಸ್ಥೆ ವಿಟ್ಲ ಅಧ್ಯಕ್ಷ ಸುದರ್ಶನ ಪಡಿಯಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗೌರವಾಧ್ಯಕ್ಷ ಪ್ರಭಾಕರ ಶೆಟ್ಟಿ ದಂಬೆಕಾನ, ವಿಠ್ಠಲ ಎಜುಕೇಶನ್ ಸೊಸೈಟಿ ಸದಸ್ಯ…

Read More
error: Content is protected !!