ಸುಳ್ಯದಲ್ಲಿ ಕಾಡಾನೆಗಳ ದಾಳಿ: ಕೃಷಿ ತೋಟಗಳಿಗೆ ಭಾರೀ ಹಾನಿ
ಮಂಗಳೂರು/ಸುಳ್ಯ, ಜೂ.10: ಪಶ್ಚಿಮ ಘಟ್ಟಗಳ ತಪ್ಪಲು ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗೂನಡ್ಕ ಪರಿಸರದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಮಂಗಳವಾರ ತಡರಾತ್ರಿ 8ರಿಂದ 10 ಕಾಡಾನೆಗಳ ಬೃಹತ್ ಹಿಂಡು ಕೃಷಿ ತೋಟಗಳಿಗೆ ನುಗ್ಗಿ ಭಾರೀ ಪ್ರಮಾಣದ ಬೆಳೆ ಹಾನಿ ಉಂಟುಮಾಡಿದೆ. ಅರಣ್ಯ ಗಡಿಯಿಂದ ಹೊರಬಂದ ಕಾಡಾನೆಗಳ ಹಿಂಡು ಏಕಾಏಕಿ ನಾಡು ಪ್ರದೇಶದ ತೋಟಗಳತ್ತ ದಾಳಿ ನಡೆಸಿದ ಪರಿಣಾಮ ಸ್ಥಳೀಯ ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಆನೆಗಳನ್ನು ತಡೆಯಲು ಗ್ರಾಮಸ್ಥರು ತಕ್ಷಣ ಕಾರ್ಯಾಚರಣೆಗೆ ಇಳಿದು,…