ಅತ್ತಾವರ ದೈವಸ್ಥಾನದಲ್ಲಿ ಇಂಟರ್‌ಲಾಕ್ ಕಾಮಗಾರಿ ಉದ್ಘಾಟನೆ

ಅತ್ತಾವರದ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ಪ್ರಾಂಗಣಕ್ಕೆ ಇಂಟರ್‌ಲಾಕ್ ಅಳವಡಿಸಲಾಗಿದ್ದು ಅದರ ಉದ್ಘಾಟನಾ ಸಮಾರಂಭವನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕೆ ಹಾಗೂ ದೈವಸ್ಥಾನದ ಅನೇಕ ಕಾರ್ಯ ಚಟುವಟಿಕೆಗಳಿಗೆ ಇಂಟರ್‌ಲಾಕ್ ನ ಅಗತ್ಯವಿರುವ ಬಗ್ಗೆ ಸ್ಥಳೀಯ ಪ್ರಮುಖರು ನನ್ನ ಗಮನಕ್ಕೆ ತಂದಿದ್ದರು. ಅದರಂತೆ ಅನುದಾನಗಳನ್ನು ಜೋಡಿಸಿಕೊಂಡು ಕಾಮಗಾರಿ ಆರಂಭಿಸಲಾಗಿ, ಇದೀಗ ದೈವ ಪ್ರೇರಣೆಯಿಂದ ಪೂರ್ಣಗೊಂಡಿದೆ ಎಂದರು. ನಿಕಟಪೂರ್ವ ಮನಪಾ ಸದಸ್ಯರು ಹಾಗೂ ಮಾಜಿ ಮೇಯರ್ ದಿವಾಕರ್…

Read More

ಕಟಪಾಡಿ ಅಂಡರ್‌ಪಾಸ್ ಏಪ್ರಿಲ್ 10ರಿಂದ ಸಂಚಾರಕ್ಕೆ ಮುಕ್ತ

ಕಟಪಾಡಿ ರಾ. ಹೆ. 66ರ ಕಟಪಾಡಿ ಜಂಕ್ಷನ್‌ನಲ್ಲಿ ರಾ. ಹೆ. ಅಂಡರ್‌ಪಾಸ್ ಮತ್ತು ವೆಹಿಕಲ್ ಓವರ್‌ಪಾಸ್ ನಿರ್ಮಾಣ ಕಾಮಗಾರಿ ಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಪರಿಶೀಲಿಸಿದರು. ಸಂಸದ ಕೋಟ ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಕಟಪಾಡಿ ಜಂಕ್ಷನ್ ಭಾಗದಲ್ಲಿ ಪ್ರಥಮ ಹಂತದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಕುಂದಾಪುರ ಮಂಗಳೂರು ಮಾರ್ಗದ ರಾ. ಹೆ. ಅಂಡರ್‌ಪಾಸ್ ಕಾಮಗಾರಿ ಪೂರ್ಣಗೊಂಡಿದ್ದು, ಎ. 10 ರಂದು ಬೆಳಗ್ಗೆ 10.30ಕ್ಕೆ ವಾಹನಗಳ ಸಂಚಾರಕ್ಕೆ ಚಾಲನೆ…

Read More

33 ಬೂತ್‌ಗಳಲ್ಲಿ ಕಳ್ಳಮತದಾನ ಯತ್ನ ಆರೋಪ: ಕೆ. ಸುರೇಂದ್ರನ್

ಮಂಜೇಶ್ವರ: ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಯುಡಿಎಫ್ ಹಾಗೂ ಮುಸ್ಲಿಂ ಲೀಗ್ ವ್ಯಾಪಕವಾಗಿ ಕಳ್ಳಮತದಾನಕ್ಕೆ ಯತ್ನಿಸುತ್ತಿವೆ ಎಂದು ಎನ್‌ಡಿಎ ಅಭ್ಯರ್ಥಿ ಕೆ. ಸುರೇಂದ್ರನ್ ಆರೋಪಿಸಿದ್ದಾರೆ. ಮಂಜೇಶ್ವರದಲ್ಲಿ ಮಾತನಾಡಿದ ಅವರು, ವಿದೇಶದಲ್ಲಿರುವ ಮತದಾರರ ಸ್ಲಿಪ್‌ಗಳನ್ನು ಸಂಗ್ರಹಿಸಿ ಕಳ್ಳಮತದಾನ ಮಾಡಲು ಯತ್ನ ನಡೆಯುತ್ತಿದೆ ಎಂದು ದೂರಿದರು. ಲೀಗ್‌ನ ಬಿಎಲ್‌ಒಗಳ ಮೂಲಕ ಈ ಸ್ಲಿಪ್‌ಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಆರೋಪಿಸಿದರು. ಮುಸ್ಲಿಂ ಲೀಗ್ ಪ್ರಭಾವವಿರುವ ಸುಮಾರು 33 ಬೂತ್‌ಗಳಲ್ಲಿ ಇಂತಹ ಯತ್ನ ನಡೆಯುತ್ತಿದ್ದು, ಮಹಿಳೆಯರನ್ನು ಬಳಸಿಕೊಂಡು ಕಳ್ಳಮತದಾನ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು….

Read More

ಉಡುಪಿಯಲ್ಲಿ ಆಟೋ ಗ್ಯಾಸ್ ಕೊರತೆ ತೀವ್ರ – ಚಾಲಕರ ಸಂಕಷ್ಟ ಹೆಚ್ಚಳ

ಉಡುಪಿ: ಜಿಲ್ಲೆಯಲ್ಲಿ ಆಟೋ ಗ್ಯಾಸ್ (ಎಲ್‌ಪಿಜಿ) ಕೊರತೆ ತೀವ್ರಗೊಂಡಿದ್ದು, ಆಟೋ ಚಾಲಕರಿಗೆ ಭಾರೀ ಸಂಕಷ್ಟ ಎದುರಾಗಿದೆ. ಜಿಲ್ಲೆಯಾದ್ಯಂತ ಗ್ಯಾಸ್ ಸ್ಟಾಕ್ ಕೊರತೆಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೆಲವೆಡೆ ಸ್ವಲ್ಪ ಪ್ರಮಾಣದಲ್ಲಿ ಲಭ್ಯವಿದ್ದರೂ ದರ ಏರಿಕೆಯಿಂದ ಚಾಲಕರು ತಕರಾರು ವ್ಯಕ್ತಪಡಿಸುತ್ತಿದ್ದಾರೆ. ಉದ್ಯಾವರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಎಜೀಸ್ ಗ್ಯಾಸ್ ಏಜೆನ್ಸಿ ಹಲವು ದಿನಗಳಿಂದ ಬಂದ್ ಆಗಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಗಂಭೀರಗೊಳಿಸಿದೆ. ಹಿಂದೆ ಲೀಟರ್‌ಗೆ ಸುಮಾರು 60 ರೂ. ಇದ್ದ ಎಲ್‌ಪಿಜಿ ದರ ಇದೀಗ ದುಪ್ಪಟ್ಟಾಗಿ 105 ರೂ. ತಲುಪಿದೆ. ದರ…

Read More

ಮಂಗಳೂರಿನಲ್ಲಿ ಏ.11-12 ರಾಜ್ಯ ಮಟ್ಟದ ಪಂಜ ಕುಸ್ತಿ ಸ್ಪರ್ಧೆ

ಮಂಗಳೂರು: ದ.ಕ. ಜಿಲ್ಲಾ ಪಂಜ ಕುಸ್ತಿ ಸಂಘದ ಆಶ್ರಯದಲ್ಲಿ ಎ. 11 ಮತ್ತು 12ರಂದು ರಾಜ್ಯ ಮಟ್ಟದ ಪಂಜ ಕುಸ್ತಿ ಸ್ಪರ್ಧೆ ಪುರಭವನದಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ರೇಮಂಡ್ ಡಿಸೋಜಾ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈಗಾಗಲೇ 180 ಮಂದಿ ಕುಸ್ತಿ ಸ್ಪರ್ಧಿಗಳು ನೋಂದಾಯಿಸಿದ್ದು, 250ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಪುರುಷರು, ಮಹಿಳೆಯರು ಮತ್ತು ವಿಕಲ ಚೇತನರಿಗೆ ವಿವಿಧ ದೇಹದಾರ್ಡ್ಯ ಗಳಲ್ಲಿ ಸ್ಪರ್ಧೆ ನಡೆಯಲಿದೆ ಎಂದರು ….

Read More

ಕಾಸರಗೋಡಿನ ಪೆರಡಾಲ ಉದನೇಶ್ವರ ದೇವಸ್ಥಾನ -ಎ.17-28 ಬ್ರಹ್ಮಕಲಶೋತ್ಸವ, ವಾರ್ಷಿಕ ಉತ್ಸವ

ಪುತ್ತೂರು: ಪುತ್ತೂರಿನ ಅತೀ ಹೆಚ್ಚು ಭಕ್ತರನ್ನೊಳಗೊಂಡ ಕಾಸರಗೋಡು ತಾಲೂಕಿನ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ನವೀಕರಣ ಪುನರ್‍ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಉತ್ಸವ ಎ.17 ರಿಂದ 28ರ ತನಕ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಪೆರಡಾಲ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ಕಾಸರಗೋಡು ಜಿಲ್ಲೆಯ ಕುಂಬಳೆ ಸೀಮೆಯ ಪ್ರಮುಖ 5ನೇ ಕ್ಷೇತ್ರವಾಗಿರುವ ಪೆರಡಾಲದಲ್ಲಿ ಉದನೇಶ್ವರ ದೇವರು ನೆಲೆಯಾಗಿದ್ದಾರೆ. ಶಾಸ್ತಾರ ದೇವರು ಸ್ಥಳ ಸಾನಿಧ್ಯವಾಗಿದ್ದು, ಕ್ಷೇತ್ರದ ಒಳಗೋಪುರದಲ್ಲಿ ಕುಟ್ಟಿಚಾತ-ಕುಕ್ಷಿಶಾಸ್ತರ ಕಾರಣಿಕ ಶಕ್ತಿಯಾಗಿ ಪ್ರಸಿದ್ದಿ…

Read More

ಉಡುಪಿ: ಹಿರಿಯ ಜಾನಪದ ಕಲಾವಿದ, ಗಾಯಕ ಡಾ.ಗಣೇಶ್ ಗಂಗೊಳ್ಳಿ ನಿಧನ

ಉಡುಪಿ: ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ (64) ಅವರು ಮಂಗಳವಾರ ನಿಧನರಾದರು.ಕಳೆದ ರಾತ್ರಿ ಸಮಾರಂಭವೊಂದರಲ್ಲಿ ಗಾಯಕರಾಗಿ ಭಾಗವಹಿಸಿ ಮನೆಗೆ ಹಿಂದಿರುಗಿದ್ದ ಗಣೇಶ ಗಂಗೊಳ್ಳಿ ಅವರು ಏಕಾಏಕಿಯಾಗಿ ಕುಸಿದು ಬಿದ್ದಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಬ್ರೈನ್ ಹೆಮರೇಜ್ ತುತ್ತಾಗಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.ಮೃತರು ಪತ್ನಿ, ಇಬ್ನರು ಮಕ್ಕಳನ್ನು ‌ಅಗಲಿದ್ದಾರೆ.

Read More

ತೆಕ್ಕಟ್ಟೆ : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಮಹಿಳೆ ಮೃತ್ಯು

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ ಸಂಭವಿಸಿದೆ. ​ಕೋಟೇಶ್ವರ ಗಾಂಧಿ ನಗರದ ನಿವಾಸಿ, ದಿವಂಗತ ಉಂಙಾಕ ಅವರ ಪತ್ನಿ ಅಲಿಮಾಬಿ (62) ಮೃತಪಟ್ಟ ದುರ್ದೈವಿ.ಸೋಮವಾರ ರಾತ್ರಿ ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದ್ದ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಅಲಿಮಾಬಿ ಪಾಲ್ಗೊಂಡಿದ್ದರು. ಸಮಾರಂಭ ಮುಗಿಸಿ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಮನೆಗೆ ಮರಳಲು ಇತರ ಮೂವರು ಮಹಿಳೆಯರೊಂದಿಗೆ ರಸ್ತೆ…

Read More

ಕಾರು ವೀಲಿಂಗ್‌ಗೆ ಬ್ರೇಕ್: ಆರೋಪಿ ಸಹಿತ ವಾಹನ ವಶಕ್ಕೆ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ವೀಲಿಂಗ್ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆ, ಆರೋಪಿ ಸಹಿತ ಕಾರನ್ನು ಪೋಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ವೀಲಿಂಗ್ ಮಾಡಿದ ಸರ್ಫುದ್ದೀನ್ ಎಂಬಾತನನ್ನು ಬಂಟ್ವಾಳ ಟ್ರಾಫಿಕ್ ಎಸ್‌ಐ ಆದರ್ಶ್ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದ್ದು, ಭಾರತೀಯ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ವೈರಲ್ ಆಗಿದ್ದ ವಿಡಿಯೋದಲ್ಲಿ KL-09-R-6971 ಸಂಖ್ಯೆಯ ಕಪ್ಪು ಬಣ್ಣದ ಕಾರು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಪ್ರದೇಶದಲ್ಲಿ ವೀಲಿಂಗ್ ಮಾಡುವ…

Read More

ಮೂಲ್ಕಿ-ಹೆಜಮಾಡಿಯಲ್ಲಿ ಜಿಪಿಎಲ್ ಉತ್ಸವ ದಶಮಾನೋತ್ಸವ ಸಂಭ್ರಮ

ಮೂಲ್ಕಿ-ಹೆಜಮಾಡಿಯ ಶ್ಯಾನುಭೋಗ್ ಕುದ್ರುವಿನಲ್ಲಿ ಏಪ್ರಿಲ್ 10ರಿಂದ 12ರವರೆಗೆ ಜಿಪಿಎಲ್ ಉತ್ಸವನ್ನು ದಶಮಾನೋತ್ಸವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಪಿಎಲ್ ಉತ್ಸವ ಸಮಿತಿಯ ಸದಸ್ಯರಾದ ಕಿರಣ್ ಶೆಣೈ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , 2017ರಲ್ಲಿ ಆರಂಭವಾದ ಈ ಉತ್ಸವ ಗೌಡ ಸಾರಸ್ವತ ಬ್ರಾಹ್ಮಣ ಸಮಾಜವನ್ನು ಒಗ್ಗೂಡಿಸುವ ಉದ್ದೇಶ ಹೊಂದಿದ್ದು, ಈ ಬಾರಿ ಮೂರು ದಿನಗಳ ಕಾಲ ಕ್ರಿಕೆಟ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿದೆ ಎಂದರು . ಕರ್ನಾಟಕ, ಕೇರಳ, ಮಹಾರಾಷ್ಟ್ರ, ತೆಲಂಗಾಣ…

Read More
error: Content is protected !!