ಅತ್ತಾವರ ದೈವಸ್ಥಾನದಲ್ಲಿ ಇಂಟರ್ಲಾಕ್ ಕಾಮಗಾರಿ ಉದ್ಘಾಟನೆ
ಅತ್ತಾವರದ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ಪ್ರಾಂಗಣಕ್ಕೆ ಇಂಟರ್ಲಾಕ್ ಅಳವಡಿಸಲಾಗಿದ್ದು ಅದರ ಉದ್ಘಾಟನಾ ಸಮಾರಂಭವನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕೆ ಹಾಗೂ ದೈವಸ್ಥಾನದ ಅನೇಕ ಕಾರ್ಯ ಚಟುವಟಿಕೆಗಳಿಗೆ ಇಂಟರ್ಲಾಕ್ ನ ಅಗತ್ಯವಿರುವ ಬಗ್ಗೆ ಸ್ಥಳೀಯ ಪ್ರಮುಖರು ನನ್ನ ಗಮನಕ್ಕೆ ತಂದಿದ್ದರು. ಅದರಂತೆ ಅನುದಾನಗಳನ್ನು ಜೋಡಿಸಿಕೊಂಡು ಕಾಮಗಾರಿ ಆರಂಭಿಸಲಾಗಿ, ಇದೀಗ ದೈವ ಪ್ರೇರಣೆಯಿಂದ ಪೂರ್ಣಗೊಂಡಿದೆ ಎಂದರು. ನಿಕಟಪೂರ್ವ ಮನಪಾ ಸದಸ್ಯರು ಹಾಗೂ ಮಾಜಿ ಮೇಯರ್ ದಿವಾಕರ್…