ಯುಡಿಎಫ್ ನೇತೃತ್ವದ ಗೂಂಡಾ ತಂಡಗಳು ಎಡರಂಗದ ಕಾರ್ಯಕರ್ತರ ಮೇಲೆ ವಿನಃಕಾರಣ ಆಕ್ರಮಣ -ಕೆ ಆರ್ ಜಯಾನಂದ

ಮಂಜೇಶ್ವರ ತ್ರಿಸ್ತರ ಚುನಾವಣೆಯ ನಂತರ ಮಂಜೇಶ್ವರ ಮಂಡಲದ ವಿವಿಧ ಪ್ರದೇಶಗಳಲ್ಲಿ ಯುಡಿಎಫ್ ನೇತೃತ್ವದ ಗೂಂಡಾ ತಂಡಗಳು ಎಡರಂಗದ ಕಾರ್ಯಕರ್ತರ ಮೇಲೆ ಏನೇ ಕಾರಣ ಇಲ್ಲದೆ ಆಕ್ರಮಣ ನಡೆಸುತ್ತಿರುವುದು ಖಂಡನೀಯವಾಗಿದೆ.ಈ ಅಕ್ರಮಕಾರಿಗಳಿಗೆ ಮಂಜೇಶ್ವರ ಶಾಸಕರ ಬೆಂಬಲವು ಗೂಂಡಾ ತಂಡಗಳಿಗೆ ಅಕ್ರಮಕ್ಕೆ ಪ್ರೋತ್ಸಾಹ ನೀಡುವುದಾಗಿದೆ.ಚುನಾವಣೆಯ ನಂತರ ಜನಪ್ರತಿನಿಧಿಗಳು ಈ ರೀತಿಯ ಆಕ್ರಮಣಗಳಿಗೆ ನೇತೃತ್ವ ನೀಡುವುದು ಈ ಪರಿಸರದ ಜನರ ನೆಮ್ಮದಿಯನ್ನು ಕೆಡಿಸುವುದಾಗಿದೆ. ಸಮಾಧಾನ ಪರವಾಗಿ ಚುನಾವಣೆಯ ನಂತರ ಈ ಆಕ್ರಮಣ ನಡೆಸುವುದು ಗೂಂಡಾ ರಾಜ್ಯವನ್ನಾಗಿಸುವ ಮುಸ್ಲಿಂ ಲೀಗಿನ ತಂತ್ರವಾಗಿದೆ.ಗರ್ಭಿಣಿ ಮಹಿಳೆ…

Read More

ಡಿ.26 ರಂದು ರಾಷ್ಟ್ರೀಯ ಓಪನ್ ಪಿಡೇ ರೇಟೆಡ್ ಚೆಸ್ ಪಂದ್ಯಾವಳಿಗೆ ಮಂಗಳೂರಿನಲ್ಲಿ ಚಾಲನೆ.

ಮಂಗಳೂರು:ರಾಷ್ಟ್ರೀಯ ಓಪನ್/ಕ್ಲಾಸಿಕಲ್ ಪಿಡೇ ರೇಟೆಡ್ ಚೆಸ್ ಪಂದ್ಯಾವಳಿಯು ಡಿಸೆಂಬರ್ 26 ರಿಂದ 30 ರವರೆಗೆ ಮಂಗಳೂರಿನ ಉರ್ವಾಸ್ಟೋರ್ ಬಳಿಯಿರುವ ತುಳು ಭವನದ “ಅಮ್ರತ ಸೋಮೇಶ್ವರ” ಸಭಾಂಗಣದಲ್ಲಿ ನಿರಂತರ 5 ದಿನ 9 ಸುತ್ತುಗಳಲ್ಲಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಇದರ ಸಹಯೋಗದೊಂದಿಗೆ ನಡೆಯಲಿದೆ ಎಂದು ದ.ಕ ಜಿಲ್ಲಾ ಚೆಸ್ ಅಸೋಷಿಯೇಶನ್ ನ ಅಧ್ಯಕ್ಷೆ ಡಾ.ಅಮರಶ್ರೀ ಅಮರನಾಥ ಶೆಟ್ಟಿಯ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ನಮ್ಮ ದೇಶದಲ್ಲಿ ಚೆಸ್ ದಿನೇ ದಿನೇ…

Read More

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರನ್ನು ಬದಲಾವಣೆ ಮಾಡಿರುವುದು ಘೋರ ಅಪರಾಧ :ಮಾಜಿ ಸಚಿವ ಬಿ ಎಂ ರಾಮನಾಥ ರೈ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರನ್ನು ಬದಲಾವಣೆ ಮಾಡಿರುವುದು ಘೋರ ಅಪರಾಧ ಇದನ್ನು ಕಾಂಗ್ರೆಸ್ ಸರಕಾರ ವಿರೋಧಿಸುತ್ತದೆ. ಕೇಂದ್ರ ಸರಕಾರದ ಈ ನಡೆಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ.ಎಂದು ಕೇಂದ್ರ ಸರಕಾರದ ವಿರುದ್ಧ ಮಾಜಿ ಸಚಿವ ಬಿ ಎಂ ರಾಮನಾಥ ರೈ ಕಿಡಿಕಾರಿದರು . ಅವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಯೋಜನೆ ಮಂಡಿಸಲಾದ ಸಂದರ್ಭ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಭ್ರಷ್ಟಾಚಾರ ಕಾರ್ಯಕ್ರಮ ಎಂದು…

Read More

ಧರ್ಮತ್ತಡ್ಕ ಶಾಲಾ ಎನ್.ಎಸ್.ಎಸ್( ರಾಷ್ಟ್ರೀಯ ಸೇವಾ ಯೋಜನೆ) ಶಿಬಿರ ಸಜಂಕಿಲ ವಿದ್ಯಾಲಯದಲ್ಲಿ

ಸಜಂಕಿಲ: ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕ, ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಸಪ್ತದಿನ ಸಹವಾಸ ಶಿಬಿರವು ಡಿಸೆಂಬರ್ 26ರಿಂದ ಜನವರಿ 1ರವರೆಗೆ” ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ,ಸಜಂಕಿಲ”ಇಲ್ಲಿ ನಡೆಯಲಿದೆ.ಇಂದು ಸಜಂಕಿಲ ಶಾಲೆಯಲ್ಲಿ ನಡೆದ “ಸಂಘಟಕ ಸಮಿತಿ”ಯ ಸಭೆಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಆನಂದ.ಕೆ ಇವರು ವಹಿಸಿದರು. ಧರ್ಮತ್ತಡ್ಕ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಅಶೋಕ ಭಂಡಾರಿ ಕುಡಾಲು,ಸಜಂಕಿಲ ಶಾಲೆಯ ಮಾತೃ ಮಂಡಳಿ ಅಧ್ಯಕ್ಷೆ…

Read More

ಎಳ್ಳಮಾವಾಸ್ಯೆ ಹಿನ್ನಲೆ ಕಡಲತೀರದಲ್ಲಿ ಸಮುದ್ರಸ್ನಾನದಲ್ಲಿ ಪಾಲ್ಗೊಂಡ ತೌಳವವರು … !

ಉಡುಪಿ: ಉಡುಪಿ ಜಿಲ್ಲೆಯಲ್ಲಿಂದು ಎಳ್ಳಮಾವಾಸ್ಯೆಯನ್ನು ಸಂಪ್ರದಾಯಬದ್ಧವಾಗಿ ಆಚರಿಸಲಾಯಿತು. ಮಲ್ಪೆ ಕಡಲತೀರದಲ್ಲಿ ಬೆಳ್ಳಂ ಬೆಳಗ್ಗೆ ಚುಮು ಚುಮು ಚಳಿಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಸಮುದ್ರಕ್ಕೆ ಇಳಿದು ಸ್ನಾನ ಮಾಡಿದರು. ಮುಂಜಾನೆ 3 ಗಂಟೆಯಿಂದಲೇ ಸಮುದ್ರಸ್ನಾನಕ್ಕೆ ಕಡಲತೀರ ಬಳಿ ಜನ ಸೇರಿದ್ದರು. ಉಡುಪಿ ನಗರ ಮಾತ್ರವಲ್ಲದೆ, ಜಿಲ್ಲೆಯ ಮೂಲೆ ಮೂಲೆಗಳಿಂದಲೂ ಜನರು ಬಂದಿದ್ದರು. ಜನರ ಅನುಕೂಲಕ್ಕಾಗಿ ನೂರಾರು ವೈದಿಕರು ಹಾಜರಿದ್ದು, ಪಿಂಡಪ್ರದಾನದ ಸಂಪ್ರದಾಯಗಳನ್ನು ನಡೆಸಿಕೊಟ್ಟರು. ಪಿಂಡಪ್ರದಾನ ಮಾಡಿದ ಬಳಿಕ ಸಮುದ್ರದಲ್ಲಿ ಅರ್ಗ್ಯ ಬಿಟ್ಟು ಸ್ನಾನ ಮಾಡಿದರು. ಬಳಿಕ ಕಡಲ ತೀರದ…

Read More

ಫುಟ್ ಪಾತ್ ಜೊತೆಗೆ ರಸ್ತೆ ಬದಿಯ ಸ್ಥಳವನ್ನು ಆಕ್ರಮಿಸಿ ವ್ಯಾಪಾರ ಮಾಡುವವರಿಗೆ ಬಿಸಿ ಮುಟ್ಟಿಸಿದ ಮ.ನ.ಪಾ ಅಧಿಕಾರಿಗಳು

ಮಂಗಳೂರು : ಫುಟ್ ಪಾತ್ ಜೊತೆಗೆ ರಸ್ತೆ ಬದಿಯ ಸ್ಥಳವನ್ನು ಆಕ್ರಮಿಸಿ ವ್ಯಾಪಾರ ಮಾಡುತ್ತಿದ್ದವರನ್ನು ಮಂಗಳೂರು ಮಹಾ ನಗರ ಪಾಲಿಕೆ ಅಧಿಕಾರಿಗಳು ತೆರವು ಮಾಡಿದರು. ಈ ಸಂದರ್ಭ ಕೆಲವರು ಅಧಿಕಾರಿಗಳ ಜೊತೆ ವಾಗ್ಯುದ್ದ ನಡೆಸಿದರು. ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರಿನ ಕೆಲವು ಕಡೆಗಳಲ್ಲಿ ರಸ್ತೆ ಬದಿ ಮತ್ತು ಫುಟ್ಪಾತ್ ಅತಿಕ್ರಮಣ ಮಾಡಿ ಇಟ್ಟಿದ್ದ ಅಕ್ರಮ ಗೂಡಂಗಡಿಗಳನ್ನು ಮತ್ತು ಇತರ ಸ್ಟಾಲ್ ಗಳನ್ನ ಟೈಗರ್ ಕಾರ್ಯಾಚರಣೆ ಮೂಲಕ ತೆರವು ಮಾಡಲಾಯಿತು. ಮಂಗಳೂರು ನಗರದಲ್ಲಿ ಸಾರ್ವಜನಿಕರಿಗಾಗಿ ಸ್ಮಾರ್ಟ್ ಸಿಟಿಯಡಿ…

Read More

ಡಿಸೆಂಬರ್ 19ರಿಂದ 22ರವರೆಗೆ ಮಂಗಳೂರಿನ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ 5ನೇ ರಾಷ್ಟ್ರೀಯ ಫಿನ್‌ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ – 2025 ಸ್ಪರ್ಧೆ

ಮಂಗಳೂರು :ಅಂಡರ್‌ವಾಟರ್ ಸ್ಪೋರ್ಟ್ಸ್ ಫೆಡರೇಶನ್ ಆಫ್ ಇಂಡಿಯಾ (USFI) ವತಿಯಿಂದ 5ನೇ ರಾಷ್ಟ್ರೀಯ ಫಿನ್‌ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ – 2025 ಈಜು ಸ್ಪರ್ಧೆಯು ಡಿಸೆಂಬರ್ 19ರಿಂದ 22ರ ತನಕ ಮಂಗಳೂರಿನ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ಆಯೋಜಿಸಲಾಗಿದೆ ಎಂದು ಅಂಡರ್ ವಾಟರ್ ಸ್ಪೋರ್ಟ್ಸ್ ಫೆಡರೇಶನ್ ಆಫ್ ಇಂಡಿಯಾ ಸೆಕ್ರೆಟರಿ ಜನರಲ್ ಡಾ. ತಪನ್ ಕುಮಾರ್ ಪಾಣಿಗ್ರಾಹಿ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿ , ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ (ಭಾರತ ಸರ್ಕಾರ)ದಿಂದ ಮಾನ್ಯತೆ ಪಡೆದಿರುವ…

Read More

ಜಪ್ಪು ಮಹಾಕಾಳಿಪಡ್ಪು ರೈಲ್ವೆ ಕೆಳಸೇತುವೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಿ : ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು

ಮಂಗಳೂರು ನಗರದ ಜಪ್ಪು ಮಹಾಕಾಳಿಪಡ್ಪು ರೈಲ್ವೆ ಕೆಳಸೇತುವೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಬೇಕು ಹಾಗೂ ಕನಿಷ್ಠ ಒಂದು ವರ್ಷಗಳ ಕಾಲ ಜಪ್ಪು ಮಹಾಕಾಳಿಪಡ್ಪು ರೈಲ್ವೇ ಗೇಟ್ ಅನ್ನು ಮುಚ್ಚದೆ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಸರಕಾರವನ್ನು ಆಗ್ರಹಿಸಿದ್ದಾರೆ. ಅವರು ಗುರುವಾರ ಜಪ್ಪು ಮಹಾಕಾಳಿಪಡ್ಪು ರೈಲ್ವೇ ಗೇಟ್ ಬಳಿ ನಡೆದ ಹಕ್ಕೊತ್ತಾಯ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಜಪ್ಪು ಮಹಾಕಾಳಿಪಡ್ಪು ಪ್ರದೇಶವು ಮಂಗಳೂರಿನ ಪ್ರಮುಖ ನಗರ ಪ್ರದೇಶಗಳಲ್ಲೊಂದಾಗಿದ್ದು,…

Read More

ಮಿಸೆಸ್ ಅರ್ಥ್ ಇಂಟರ್ನ್ಯಾಷನಲ್ ಗ್ರ್ಯಾಂಡ್ ವಿನ್ನರ್ ಕಿರೀಟ ಮುಡಿಗೇರಿಸಿಕೊಂಡ ಮಂಗಳೂರಿನ ಬೆಡಗಿ ವಿದ್ಯಾ ಸಂಪತ್

ಪಿಲಿಪೈನ್ಸ್‌ನಲ್ಲಿ ಡಿ.2ರಿಂದ ಡಿ.10ರವರೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಮಿಸೆಸ್ ಅರ್ಥ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ಗ್ರ್ಯಾಂಡ್ ವಿನ್ನರ್ ಪ್ರಶಸ್ತಿಯನ್ನು ಮಂಗಳೂರು ಮೂಲದ ವಿದ್ಯಾ ಸಂಪತ್ ಪಡೆದುಕೊಂಡಿದ್ದಾರೆ.ಪಿಲಿಫೈನ್ಸ್‌ನ ನಡೆದ ಮಿಸೆಸ್ ಅರ್ಥ್ ಇಂಟರ್ನ್ಯಾಷನಲ್ ಸ್ಪರ್ಧೆಯೂ ಒಂಬತ್ತು ದಿನಗಳ ಕಾಲ ನಡೆದಿದ್ದು, 22ಕ್ಕೂ ಅಧಿಕ ಸ್ಪರ್ಧಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ನಾನಾ ದೇಶಗಳ ನಡುವೆ ಭಾರತವನ್ನು ಪ್ರತಿನಿಧಿಸಿದ ವಿದ್ಯಾ ಸಂಪತ್ ಗ್ರ್ಯಾಂಡ್ ವಿನ್ನರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಸ್ಪರ್ಧೆಯೂ ವಿವಿಧ ಹಂತಗಳಲ್ಲಿ ನಡೆದಿದ್ದು, ಟ್ಯಾಲೆಂಟ್ ರೌಂಡ್, ರಾಷ್ಟ್ರೀಯ ಕಾಸ್ಟ್ಯೂಮ್, ಕ್ಲೋಸ್ ರೂಂ ಇಂಟರ್‌ವ್ಯೂ ಸೇರಿದಂತೆ…

Read More

ನೆಲ್ಯಾಡಿ ಪೇಟೆಯಲ್ಲಿ ಸರಣಿ ಅಪಘಾತ: ಅಂಗಡಿಗೆ ನುಗ್ಗಿದ ಈಚರ್ ಗಾಡಿ

ನೆಲ್ಯಾಡಿ:ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಪೇಟೆಯ ಮಧ್ಯಭಾಗದಲ್ಲಿ ಬುಧವಾರ ಸಂಜೆ ಸರಣಿ ಅಪಘಾತ ಸಂಭವಿಸಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.ನೆಲ್ಯಾಡಿಯ ಗಣೇಶ್ ಸ್ಟೋರ್ ಬಳಿ ನಿಲ್ಲಿಸಿದ್ದ ಉಜಿರೆ ಮಹಾವೀರ ಸಂಸ್ಥೆಗೆ ಸೇರಿದ ಲೈನ್ ಸೇಲ್ಸ್ ಈಚರ್ ಗಾಡಿ, ಪಶು ಆಹಾರ ಸಾಗಿಸುತ್ತಿದ್ದ ಗೂಡ್ಸ್ ಟೆಂಪೋ ಗೆ ಎಸ್‌ಎಲ್‌ವಿ ಸಂಸ್ಥೆಗೆ ಸೇರಿದ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಈಚರ್ ಲಾರಿ ನೇರವಾಗಿ ಗಣೇಶ್ ಸ್ಟೋರ್ ಅಂಗಡಿಗೆ ನುಗ್ಗಿ ಭೀತಿಯ ವಾತಾವರಣ ನಿರ್ಮಾಣವಾಯಿತು….

Read More
error: Content is protected !!