ಜೀವ ರಕ್ಷಣೆಯ ಪಾಠ: ಅಗ್ನಿಶಾಮಕ ಠಾಣೆಗೆ ನಂದಗೋಕುಲದ ಮಕ್ಕಳು
ಮಂಗಳೂರು:ಮಕ್ಕಳಲ್ಲಿ ಅಗ್ನಿ ಸುರಕ್ಷತೆಯ ಜಾಗೃತಿ ಮೂಡಿಸುವುದು ಹಾಗೂ ತುರ್ತು ಸಂದರ್ಭಗಳಲ್ಲಿ ಜೀವ ಮತ್ತು ಆಸ್ತಿಯನ್ನು ರಕ್ಷಿಸುವ ಅಗ್ನಿಶಾಮಕ ದಳದವರ ಮಹತ್ವದ ಪಾತ್ರವನ್ನು ಪರಿಚಯಿಸುವ ಉದ್ದೇಶದಿಂದ ಕೆನರಾ ನಂದಗೋಕುಲ ಶಾಲೆ ಕೋಡಿಯಾಲ್ ಬೈಲ್ ಹಾಗೂ ಪದವಿನಂಗಡಿ ಶಾಖೆಗಳ ಮಕ್ಕಳು ಶೈಕ್ಷಣಿಕ ಕ್ಷೇತ್ರಪ್ರವಾಸದ ಅಂಗವಾಗಿ ಪಾಂಡೇಶ್ವರದ ಅಗ್ನಿಶಾಮಕ ಠಾಣೆಗೆ ಭೇಟಿ ನೀಡಿದರು . ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿ, ಅಗ್ನಿಶಾಮಕ ದಳದವರ ಕರ್ತವ್ಯಗಳು, ಅಗ್ನಿ ಸುರಕ್ಷತಾ ಸಾಧನಗಳು, ಅಗ್ನಿಶಾಮಕ ಹಾಗೂ ರಕ್ಷಣಾ ವಾಹನಗಳ ಕಾರ್ಯವಿಧಾನವನ್ನು ವಿವರಿಸಿದರು. ಬೆಂಕಿಯನ್ನು…