ಮಂಗಳೂರಿನ ಉರ್ವ ಕ್ರಿಕೇಟ್ ಮೈದಾನದಲ್ಲಿ ಮಾರ್ಚ್ 6 ರಿಂದ 8 ರ ವರೆಗೆ ಹೊನಲು ಬೆಳಕಿನ ‘ದೈವಜ್ಞ ಯೂನಿಟಿ ಕಪ್-2026’ ಕ್ರಿಕೆಟ್ ಪಂದ್ಯಾಟ …. !
ಮಂಗಳೂರು:ಎಸ್. ಎಲ್. ಶೇಟ್ ಮತ್ತು ಎಂ. ರಘುನಾಥ ಶೇಟ್ ಮೆಮೊರಿಯಲ್ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಮಾರ್ಚ್ 6 ರಿಂದ 8 ನೇ ತಾರೀಕಿನ ತನಕ ಹೊನಲು ಬೆಳಕಿನ ‘ದೈವಜ್ಞ ಯೂನಿಟಿ ಕಪ್-2026’ ಮಂಗಳೂರಿನ ಉರ್ವ ಕ್ರಿಕೇಟ್ ಮೈದಾನದಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಎಂ ಪ್ರಶಾಂತ್ ಶೇಟ್ ತಿಳಿಸಿದರು . ಅವರು ನಗರದ ಪತ್ರಿಕಾಭವದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿ , ಈ ಕ್ರೀಡಾಕೂಟವನ್ನು ದೈವಜ್ಞ ಬ್ರಾಹ್ಮಣ ಸಮಾಜದ ಬಾಂಧವರ ಸಂಘಟನೆ ಮತ್ತು ಶ್ರೇಯೋಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದೆ…..