ಕಾಸರಗೋಡು: ಚಂದ್ರಗಿರಿ ಕೊಪ್ಪಲು ಶ್ರೀ ಮಹಮ್ಮಾಯಿ ಅಮ್ಮನವರ ದೇವಳದಲ್ಲಿ 55ನೇ ಪ್ರತಿಷ್ಠಾ ಮಹೋತ್ಸವಕ್ಕೆ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಸರಗೋಡು: ಕಾಸರಗೋಡು ಜಿಲ್ಲೆಯ ಚಂದ್ರಗಿರಿ ಕೊಪ್ಪಲು ಶ್ರೀ ಮಹಮ್ಮಾಯಿ ಅಮ್ಮನವರ ದೇವಳದಲ್ಲಿ ಏಪ್ರಿಲ್ 3 ರಿಂದ 5, 2026ರವರೆಗೆ ನಡೆಯಲಿರುವ 55ನೇ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಳದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಧ್ಯಕ್ಷರಾದ ಶ್ರೀ ಲೋಕೇಶ್ ಕೊಪ್ಪಲು, ಕಾರ್ಯದರ್ಶಿ ಸೀತಾರಾಮ ಕೊಪ್ಪಲು, ಖಜಾಂಚಿ ಬಾಲಕೃಷ್ಣ ಪರಿಯಾರ, ಜೊತೆ ಕಾರ್ಯದರ್ಶಿ ಸುರೇಶ್ ತೋಟ, ಸತೀಶ್ ಪರಿಯಾರ, ಅರ್ಚಕ ದಯಾನಂದ ಕೊಪ್ಪಲು, ಹಿರಿಯ ಸದಸ್ಯರಾದ ಸತೀಶ್ ಕೆ. ದೇರೆಬೈಲು, ರವೀಂದ್ರ ಸಿ.ಹೆಚ್. ಕೊಪ್ಪಲು, ಜನಾರ್ಧನ ಪರಿಯಾರ, ಉಮೇಶ್…

Read More

ಮಂಗಳೂರು ದಕ್ಕೆಯಲ್ಲಿ ದುರ್ಘಟನೆ: ಲೈಟ್ ಕಂಬ ಮುರಿದು ಬಿದ್ದು ಮೀನು ಕಾರ್ಮಿಕ ಸಾವು

ಮಂಗಳೂರು: ಮಂಗಳೂರಿನ ದಕ್ಕೆಯಲ್ಲಿ ಲೈಟ್ ಕಂಬವೊಂದು ಏಕಾಏಕಿ ಮುರಿದು ವ್ಯಕ್ತಿಯ ಮೈಮೇಲೆ ಬಿದ್ದ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ನಡೆದಿದೆ.ಮೃತರನ್ನು ತಮಿಳುನಾಡು ಮೂಲದ ಮುರುಗನ್ (35) ಎಂದು ಗುರುತಿಸಲಾಗಿದೆ. ಅವರು ದಕ್ಕೆಯಲ್ಲಿ ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು.ಇಂದು ದಕ್ಕೆಯಲ್ಲಿ ಮೀನಿನ ಬಾಕ್ಸ್ ಹೊರುತ್ತಿದ್ದ ವೇಳೆ ಲೈಟ್ ಕಂಬ ಬುಡದಿಂದಲೇ ಮುರಿದು ಬಿದ್ದಿದೆ. ಅಚಾನಕ ಸಂಭವಿಸಿದ ಈ ಘಟನೆದಲ್ಲಿ ಕಂಬ ಮುರುಗನ್ ಅವರ ಮೇಲೆ ಬಿದ್ದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ…

Read More

​ಮಂಜೇಶ್ವರ : ಪಾವೂರು ನಿವಾಸಿಯ ಅಪಹರಣ ಪ್ರಕರಣ – ನಾಲ್ವರು ಆರೋಪಿಗಳ ಬಂಧನ

​ಮಂಜೇಶ್ವರ: ಮಂಜೇಶ್ವರ ಸಮೀಪದ ಪಾವೂರಿನಲ್ಲಿ ವ್ಯಕ್ತಿಯೊಬ್ಬರನ್ನು ಮನೆಯಿಂದ ಬಲವಂತವಾಗಿ ಕಾರಿನಲ್ಲಿ ಅಪಹರಿಸಿದ ಘಟನೆಗೆ ಸಂಬಂಧಿಸಿದಂತೆ ಮಂಜೇಶ್ವರ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ​ಪಾವೂರು ಕೊಂಬಂಗುದಿಯ ಅಬ್ದುಲ್ ರಹಮಾನ್ ಎಂಬುವವರನ್ನು ಫೆಬ್ರವರಿ 20ರಂದು ರಾತ್ರಿ 10:30 ಗಂಟೆಗೆ ಕಾರಿನಲ್ಲಿ ಬಂದ ನಾಲ್ವರ ತಂಡ ಬಲವಂತವಾಗಿ ಕರೆದೊಯ್ದಿತ್ತು. ಈ ಕುರಿತು ಅಬ್ದುಲ್ ರಹಮಾನ್ ಅವರ ಪತ್ನಿ ತಾಹಿರಾ ಪೊಲೀಸರಿಗೆ ದೂರು ನೀಡಿದ್ದರು.ಇದರಂತೆ ಮಂಜೇಶ್ವರ ಠಾಣಾಧಿಕಾರಿ ಪಿ. ಅಜಿತ್ ಕುಮಾರ್ ನೇತೃತ್ವದ ಪೊಲೀಸ್ ತಂಡವು ಕರ್ನಾಟಕದಲ್ಲಿ ಕಾರ್ಯಾಚರಣೆ ನಡೆಸಿ ​…

Read More

ತುಳುನಾಡಿನ ಪ್ರತಿಯೊಬ್ಬರೂ ಓದಲೇಬೇಕಾದ ಪುಸ್ತಕ ಕರಾವಳಿಯ ರಕ್ತ ಕಣ್ಣೀರು….

ಮಂಗಳೂರು: ಕೋಮುದ್ವೇಷದಿಂದ ನಲುಗಿದ ಕರಾವಳಿಯಲ್ಲಿ ಜೀವ ಕಳೆದುಕೊಂಡ ಅಮಾಯಕ ಯುವಕರ ಕುಟುಂಬಗಳ ಆಕ್ರಂದನವನ್ನು ಅಕ್ಷರ ರೂಪಕ್ಕಿಳಿಸಿದ ಯುವ ಪತ್ರಕರ್ತರಾದ ಇರ್ಷಾದ್ ಉಪ್ಪಿನಂಗಡಿಯವರ ಕಾರ್ಯವನ್ನು ಖಂಡಿತಕ್ಕೂ ಮೆಚ್ಚಲೇಬೇಕು. ಸ್ವಾತಂತ್ರ್ಯ ಪೂರ್ವದಿಂದಲೇ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸೌಹಾರ್ದತೆಗೆ ಕೊಳ್ಳಿ ಇಟ್ಟಿದ್ದೇ ಇಲ್ಲಿನ‌ ಸಂಘಪರಿವಾರ ಎಂಬುದರಲ್ಲಿ ಎರಡು ಮಾತಿಲ್ಲ. ಕಳೆದ 3 – 4 ದಶಕಗಳಿಂದ ತನ್ನ ರಾಜಕೀಯ ಬೇಳೆ ಬೇಯಿಸಲು ಕೋಮುವಾದದ ಅಸ್ತ್ರವನ್ನು ಉಪಯೋಗಿಸಿ ಅಮಾಯಕ ಯುವಕರ ಜೀವವನ್ನು ಬಲಿ ತೆಗೆದುಕೊಂಡು ತಾನು ಮಾತ್ರ ರಾಜಕೀಯದ…

Read More

ಅಪಘಾತಕ್ಕೀಡಾದ ಕಾರಿನಿಂದ ಬ್ಯಾಟ್ರಿ ಕದಿಯಲು ಬಂದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಮಂಜೇಶ್ವರ : ಎರಡು ದಿವಸ ಮೊದಲು ಅಪಘಾತಕ್ಕೀಡಾದ ಕಾರಿನಿಂದ ಬ್ಯಾಟ್ರಿ ಕದಿಯುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿ ಕೊಂಡಿದ್ದಾರೆ.ಶನಿವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಎರಡು ದಿವಸಕ್ಕೆ ಮೊದಲು ಮಂಜೇಶ್ವರ ಅಂಡರ್ ಪಾಸಿನಲ್ಲಿ ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಉಂಟಾಗಿತ್ತು. ಅಪಘಾತಕ್ಕೀಡಾದ ಸ್ಕೂಟರ್ ಸವಾರವನ್ನು ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತಕ್ಕೀಡಾದ ಕಾರನ್ನು ಕರೋಡಾ ಮಸೀದಿ ಪರಿಸರದಲ್ಲಿ ನಿಲುಗಡೆಗೊಳಿಸಲಾಗಿತ್ತು. ಶನಿವಾರ ಮಧ್ಯಾಹ್ನ…

Read More

ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ: 22 ಕೆ.ಜಿ 250 ಗ್ರಾಂ ತೂಕದ ಅಕ್ರಮ ಗಾಂಜಾ ವಶ

ಮಂಗಳೂರು: ಮಂಗಳೂರಲ್ಲಿ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧಿಸಲಾಗಿದೆ. ಇಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಗಾಂಜಾವನ್ನು ಮಾರಾಟ ಮಾಡಲು ಹೊರ ರಾಜ್ಯ ದಿಂದ ತಂದಿರುವ ಬಗ್ಗೆ ಮಾಹಿತಿ ಪಡೆದು ಉತ್ತರ ಉಪ ವಿಭಾಗದ ಎ.ಸಿ.ಪಿ. ರವರು ಮತ್ತು ಅವರ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಪಣಂಬೂರು ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಿತು. ಇದೇ ವೇಳೆ ಆರೋಪಿಗಳಾದ ಕರಣ್ ಬಾಬು ರಾಂ ಜಾದವ್ ,…

Read More

ತೃಶೂರ್‌ನ ಕುಖ್ಯಾತ ರೌಡಿಗಳ ಬಂಧನ – ಕುಂಬಳೆಯ ಮನೆಯ ಟೆರೇಸ್ ಮೇಲೆ ಸಿನಿಮಾ ಮಾದರಿಯ ಕಾರ್ಯಾಚರಣೆ

ಮಂಜೇಶ್ವರ : ತೃಶೂರ್‌ನಲ್ಲಿ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಕುಖ್ಯಾತ ರೌಡಿಗಳನ್ನು ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ತೃಶೂರ್ ಮತ್ತು ಕುಂಬಳೆ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಜಾಸ್ (27), ನಿಯಾಸ್ (31) ಮತ್ತು ಗೋಕುಲ್ ಕೃಷ್ಣ (27) ಎಂಬುವವರನ್ನು ಕುಂಡಂಕೆರಡ್ಕದ ಮನೆಯೊಂದರ ಟೆರೇಸ್‌ನಿಂದ ಸಾಹಸಿಕವಾಗಿ ಸೆರೆಹಿಡಿಯಲಾಗಿದೆ. ಕಳೆದ ಫೆಬ್ರವರಿ 17ರಂದು ಪೆರಿಂಜನಂ ನಿವಾಸಿ ಅನೀಸ್ ಎಂಬವರ ಮನೆಗೆ ನುಗ್ಗಿ ಕಬ್ಬಿಣದ ರಾಡ್‌ಗಳಿಂದ ಭೀಕರವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಈ ಮೂವರು ಪ್ರಮುಖ ಆರೋಪಿಗಳಾಗಿದ್ದಾರೆ.ಇಜಾಸ್ ವಿರುದ್ಧ…

Read More

ಕುಂಜತ್ತೂರು ಶಿವ ಶಕ್ತಿ ಸೀತಾರಾಮ ಭಜನಾ ಮಂದಿರದ ವಾರ್ಷಿಕ ಧಾರ್ಮಿಕ ಕಾರ್ಯಕ್ರಮ ಯಶಸ್ವಿ

ಕುಂಜತ್ತೂರು ಶಿವ ಶಕ್ತಿ ಸೀತಾರಾಮ ಭಜನಾ ಮಂದಿರದಲ್ಲಿ ನಡೆದ ವಾರ್ಷಿಕ ಧಾರ್ಮಿಕ ಕಾರ್ಯಕ್ರಮ ಭಕ್ತಿಭಾವದಿಂದ ಹಾಗೂ ಉತ್ಸಾಹಭರಿತ ವಾತಾವರಣದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಮಾಜಿ ಅಧ್ಯಕ್ಷ ಕೆ. ಸುರೇಂದ್ರನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಧಾರ್ಮಿಕ ಸಂಪ್ರದಾಯಗಳು ಸಮಾಜದ ಏಕತೆ ಹಾಗೂ ನೈತಿಕ ಮೌಲ್ಯಗಳನ್ನು ಬಲಪಡಿಸುವ ಶಕ್ತಿ ಹೊಂದಿವೆ ಎಂದು ಅವರು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ ವಿಜಯ್ ಕುಮಾರ್ ರೈ, ಆದರ್ಶ ಬಿ.ಎಂ., ಜಯರಾಮ್, ಹರೀಶ್ ಶೆಟ್ಟಿ ಮಾಡ ಸೇರಿದಂತೆ ಹಲವರು ಉಪಸ್ಥಿತರಿದ್ಧರು .ಸ್ಥಳೀಯ ಭಕ್ತರು ಹಾಗೂ ಗಣ್ಯರು…

Read More

ಅಂತರ್ ರಾಜ್ಯ ಮಾದಕವಸ್ತು ಮಾರಾಟ ಜಾಲದ ಆರೋಪಿಗಳು ವಶಕ್ಕೆ

ಪುತ್ತೂರು: ಅಂತರ್ ರಾಜ್ಯ ಮಾದಕವಸ್ತು ಮಾರಾಟ ಜಾಲದ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಂಧಿಸಲಾಗಿದೆ. ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ MDMA ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ತಡೆದು ಪರಿಶೀಲಿಸಲಾಗಿ ಆರೋಪಿಗಳಾದ ಕೇರಳದ ಮುಹಮ್ಮದ್‌ ಅಜ್ಮಲ್‌ ಸಿ @ ಅಜ್ಜು (30), ಇಸ್ಮಾಯಿಲ್‌ (28 ಹಾಗೂ ಸಂಶೀರ್‌ (27) ಎಂಬುವವರನ್ನು ಬಂಧಿಸಲಾಗಿದೆ. ಈ ಮೂವರು ವಾಹನದಲ್ಲಿ ಮಾರಾಕ ಆಯುಧವಾದ ತಲವಾರನ್ನು ಇಟ್ಟುಕೊಂಡು, ಸುಮಾರು 5,38,800 ಮೌಲ್ಯದ 53.58 ಗ್ರಾಂ MDMA ನಿಷೇದಿತ ಮಾದಕ ವಸ್ತುವನ್ನು…

Read More

ಎ.ಯು.ಪಿ ಶಾಲೆ ಆನೆಕಲ್ಲಿನಲ್ಲಿ ಸಂಭ್ರಮದ ಶಾಲಾ ವಾರ್ಷಿಕೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ.

ಎ.ಯು.ಪಿ ಶಾಲೆ ಆನೆಕಲ್ಲಿನಲ್ಲಿ ತಾರೀಕು 17/02/2026 ಮಂಗಳವಾರದಂದು ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ 10:00 ಗಂಟೆಗೆ ಸರಿಯಾಗಿ ಶಾಲಾ ಪ್ರಬಂಧಕ ಪ್ರತಿನಿಧಿ ಶ್ರೀ ಮುರಳಿ ಶ್ಯಾಮ್ ಧ್ವಜಾರೋಹಣ ನೆರವೇರಿಸಿ ಕೊಟ್ಟರು. ಮಧ್ಯಾಹ್ನ ನಂತರ 3:00ಗೆ ಸರಿಯಾಗಿ ಸಭಾ ಕಾರ್ಯಕ್ರಮ ಆರಂಭಗೊಂಡಿತು. ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ನಿವೃತ್ತ ಐ.ಎ.ಎಸ್ ಅಧಿಕಾರಿ ಶ್ರೀ ರಾಮಣ್ಣ ನಾಯ್ಕ್ ದೀಪ ಪ್ರಜ್ವಲನೆಯ ಮೂಲಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ತಮ್ಮ ಬಾಲ್ಯಕಾಲದ ನೆನಪುಗಳನ್ನು ಮೆಲುಕು ಹಾಕಿ ಮಕ್ಕಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ…

Read More
error: Content is protected !!