ಯಾದಗಿರಿಯಲ್ಲಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ

ಯಾದಗಿರಿ : ಕರ್ನಾಟಕದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಗೋಗಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಫೆಬ್ರವರಿ 26, 2026 ರಂದು ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ತಕ್ಷಣ ಪೊಲೀಸರು ಮಧ್ಯಪ್ರವೇಶಿಸಿದರು. ಸ್ವಯಂ ಘೋಷಿತ ದೇವಮಾನವ ಎಂದು ಹೇಳಿಕೊಳ್ಳುವ ಮಲ್ಲಿಕಾರ್ಜುನ…

Read More

ಏಪ್ರಿಲ್ 4, 5 , 6 ರಾಜ್ಯ ಮಟ್ಟದ “ಅಕಾಡೆಮಿಕ್ ಎಕ್ಸಲೆನ್ಸ್ & ಟೆಕ್ ಎಕ್ಸ್‌ಪೋ ಮೇಳ : ಡಾ. ಮಂಜುನಾಥ್ ಎಸ್. ರೇವಣ್ಕ

ಮಂಗಳೂರು:ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಅಕಾಡೆಮಿಕ್ ಗುಣಮಟ್ಟ, ತಂತ್ರಜ್ಞಾನ ಸಂಯೋಜನೆ ಮತ್ತು ಭವಿಷ್ಯಮುಖಿ ಕಲಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ RUPSA ಮತ್ತು KUPMA ಅವರ ಸಹಯೋಗದೊಂದಿಗೆ “ಅಕಾಡೆಮಿಕ್ ಎಕ್ಸಲೆನ್ಸ್ & ಟೆಕ್ ಎಕ್ಸ್‌ಪೋ ” ರಾಜ್ಯಮಟ್ಟದ ಮಹತ್ವದ ಕಾರ್ಯಕ್ರಮವನ್ನು ಏಪ್ರಿಲ್ 4, 5 ಮತ್ತು 6 ರಂದು ಮೈಸೂರು ನಗರದ ಮಹಾರಾಜ ಗೌಂಡ್‌ನಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷರಾದ ಡಾ. ಮಂಜುನಾಥ್ ಎಸ್. ರೇವಣ್ಕರ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ…

Read More

ಕೇರಳದಿಂದ ಅಕ್ರಮ ಕೆಂಪುಕಲ್ಲು ಸಾಗಾಟ: ವಿಟ್ಲ ಪೊಲೀಸರು 2 ಲಾರಿಗಳ ವಶ

ಬಂಟ್ವಾಳ: ಕೇರಳದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಕೆಂಪುಕಲ್ಲುಗಳನ್ನು ಸಾಗಿಸುತ್ತಿದ್ದ 2 ಲಾರಿಗಳನ್ನು ವಿಟ್ಲ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದೆ. ಫೆ. 25ರಂದು ಮಧ್ಯಾಹ್ನ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ(ಕಾ&ಸು) ರಾಮಕೃಷ್ಣ ರವರಿಗೆ ಕೇರಳ ಕಡೆಯಿಂದ ಪೆರುವಾಯಿ ಮಾರ್ಗವಾಗಿ ಲಾರಿಗಳಲ್ಲಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕ್ಕೆ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಿಬ್ಬಂದಿಗಳೊಂದಿಗೆ ಕಾರ್ಯಚರಣೆ ಮಾಡಿದಾಗ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಬೆರಿಪದವು ಎಂಬಲ್ಲಿ ಕೆಂಪುಕಲ್ಲುಗಳನ್ನು ತುಂಬಿಸಿಕೊಂಡು ಬರುತ್ತಿದ್ದ KA-21-C-0562…

Read More

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ, ವಿದೇಶದಿಂದ ಹಿಂತಿರುಗುತ್ತಿದ್ದಾಗ ವಿಮಾನ ನಿಲ್ದಾಣದಲ್ಲೇ ಬಂಧನ

ಬಂಟ್ವಾಳ; ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ವಿದೇಶದಿಂದ ಹಿಂತಿರುಗುತ್ತಿದ್ದಾಗ ವಿಮಾನ ನಿಲ್ದಾಣದಲ್ಲೇ ವಿಟ್ಲ ಪೋಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯ ಅಕ್ರ 193/2019 ಕಲಂ 427.504.394.341 lpc ಮತ್ತು 2(A)Prevention of Destruction and Loss of Property Act ಪ್ರಕರಣದಲ್ಲಿ ಆರೋಪಿಯಾಗಿ, ಸುಮಾರು ಎರಡು ವರ್ಷದಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ, ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಸ್ ಎಂಬಾತನನ್ನು, ಫೆ. 24 ರಂದು ವಿದೇಶದಿಂದ ಮರಳಿ ಬರುವಾಗ, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ…

Read More

ಬಜಾಲ್ ವಾರ್ಡಿನಲ್ಲಿ ₹75 ಲಕ್ಷ ತಡೆಗೋಡೆ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು:ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ರೋಹಿಣಿ ಮನೆ ಬಳಿಯಿಂದ ಹರಿಣಾಕ್ಷಿ ಮನೆ ತನಕ 75 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ್ ಕಾಮತ್‌ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು. ನಂತರ ಮಾತನಾಡಿದ ಶಾಸಕರು, ಇದು ಬಹಳಷ್ಟು ವರ್ಷಗಳಿಂದ ಬೇಡಿಕೆಯಿದ್ದ ಅತೀ ಅಗತ್ಯ ಕಾಮಗಾರಿಯಾಗಿದೆ. ಈ ಪ್ರದೇಶವು ಎತ್ತರ ತಗ್ಗು ಇರುವುದರಿಂದ ರಸ್ತೆ ನಿರ್ಮಾಣ ಬಹು ದೊಡ್ಡ ಸವಾಲು. ದಿನನಿತ್ಯದ ಕೆಲಸಗಳಿಗೆ ಇಲ್ಲಿನ ಜನರು ತೀವ್ರ ತೊಂದರೆ ಅನುಭವಿಸುತ್ತಿರುವುದು…

Read More

ಗೃಹಲಕ್ಷ್ಮಿ ಯೋಜನೆ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ: ಲಕ್ಷ್ಮೀ ಹೆಬ್ಬಾಳಕರ್

ಕಾರ್ಕಳ:ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ನಮ್ಮ ಸರ್ಕಾರ ಸಾಮಾಜಿಕ ನೆಲೆಗಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯನ್ನು ಮನೆ ಮನೆಗೆ ತಲುಪಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ ಬರೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಕಾರ್ಕಳದ ಕುಕ್ಕುಂದೂರಿನಲ್ಲಿ ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಡೆದ ಕಿಸಾನ್ ಸಭಾ ಸಭಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಇದುವರೆಗೂ 26 ಕಂತಿನ ಹಣವನ್ನು 1.24 ಕೋಟಿ ಮಹಿಳೆಯರಿಗೆ…

Read More

ಮಹಿಳಾ ಪೊಲೀಸ್ ಕೈಬೆರಳು ಮುರಿದು ಪರಾರಿಯಾದ ಆರೋಪಿ ಮಂಗಳೂರು ಮಾರುಕಟ್ಟೆಯಲ್ಲಿ ಬಂಧನ

ಕಾಸರಗೋಡು: ಬಂಧಿಸಲು ಪ್ರಯತ್ನಿಸುವ ವೇಳೆ ಮಹಿಳಾ ಪೊಲೀಸ್ ಅಧಿಕಾರಿಯ ಕೈಬೆರಳನ್ನು ಮುರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಹೊಸಬೆಟ್ಟು ನಿವಾಸಿ ಮೊಯ್ನುದ್ದೀನ್ ಝಮಾನ್ (33) ನನ್ನು ಮಂಜೇಶ್ವರ ಪೊಲೀಸ್ ಇನ್ಸ್‌ಪೆಕ್ಟರ್ ಪಿ. ಅಜಿತ್ ಕುಮಾರ್ ಹಾಗೂ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುರುವಾರ ಮುಂಜಾನೆ ಮಂಗಳೂರು ಕಲ್ಲಾಪು ತರಕಾರಿ ಮಾರುಕಟ್ಟೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಮಾರುಕಟ್ಟೆಯಲ್ಲಿ ಆರೋಪಿಯಿರುವ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಈ ಪ್ರಕರಣದ ಸಹಆರೋಪಿಗಳಾದ ಮಂಜೇಶ್ವರ ಪಿರಾರಮೂಲೆಯ ಹ್ಯಾರಿಸ್ (40) ಹಾಗೂ ಬಡಾಜೆ…

Read More

ಬಂಟ್ವಾಳದಲ್ಲಿ ಅಕ್ರಮ ಕಪ್ಪುಕಲ್ಲು ಗಣಿಗಾರಿಕೆ ವಿರೋಧಿಸಿ ಹಠಾತ್ ಪ್ರತಿಭಟನೆ

ಬಂಟ್ವಾಳ: ಸ್ಫೋಟಕ ವಸ್ತುಗಳನ್ನು ಬಳಸಿ ಅಕ್ರಮವಾಗಿ ಕಪ್ಪು ಕಲ್ಲಿನ ಕೋರೆಯ ವಿರುದ್ದ ಗ್ರಾಮಸ್ಥರು ಹಠಾತ್ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಿದ ಘಟನೆ ಫೆ. 24 ರಂದು ಮಂಗಳವಾರ ರಾತ್ರಿ ನಡೆದಿದೆ.ರಾಯಿ ಗ್ರಾಮದ ಲಕ್ಷ್ಮಿಕೋಡಿ ಎಂಬಲ್ಲಿ ನಡೆಯುತ್ತಿರುವ ಕಪ್ಪು‌ಕಲ್ಲಿನ ಗಣಿಗಾರಿಕೆಯಲ್ಲಿ‌ ಅಕ್ರಮ ಸ್ಪೋಟಕ ಉಪಯೋಗಿಸುವ ಬಗ್ಗೆ ಹಾಗೂ ಘನ ವಾಹನಗಳ ಸಂಚಾರಿಂದ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟವಾಗುತ್ತಿರುವ ಬಗ್ಗೆ ಆರೋಪಿಸಿ ಕೋರೆಗೆ ಬರುವ ವಾಹನಗಳನ್ನು ತಡೆದು ಹೊರಂಗಳ ಗ್ರಾಮಸ್ಥರು ರಸ್ತೆ ಮದ್ಯೆ ಪ್ರತಿಭಟಿಸಿದ್ದಾರೆ. ರಾಯಿ ಗ್ರಾಮದ ಲಕ್ಷ್ಮಿಕೋಡಿ ಎಂಬಲ್ಲಿ ಕೃಷಿ…

Read More

ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆ

ಮಂಗಳೂರು:ನಗರದ ಕದ್ರಿ ದೇವಸ್ಥಾನ ಬಳಿಯ ಡಾಕ್ಟರ್ಸ್ ಕಾಲನಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಫೆ.23ರ ಸೋಮವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಚಿರತೆ ಬಂದಿದ್ದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.ಡಾಕ್ಟರ್ಸ್ ಕಾಲನಿ ಗೇಟ್ ಮುಂಭಾಗದಲ್ಲಿ ಚಿರತೆ ಅಡ್ಡಾಡುವುದು ಅಲ್ಲಿರುವ ಎರಡು ಸಿಸಿಟಿವಿಗಳಲ್ಲಿ ದಾಖಲಾಗಿದೆ. ಕದ್ರಿ ದೇವಸ್ಥಾನ ಮೇಲ್ಬಾಗದಲ್ಲಿ ಸ್ವಲ್ಪ ಕಾಡು ಇರುವುದು ಬಿಟ್ಟರೆ ಉಳಿದೆಲ್ಲ ಕಡೆ ಕಾಂಕ್ರೀಟ್ ಕಾಡು ಮಾತ್ರ ಇದೆ. ಇದಲ್ಲದೆ ದೊಡ್ಡ ಅಪಾರ್ಟೆಂಟ್ ಗಳು, ವಿಲ್ಲಾ ರೀತಿಯ ಮನೆಗಳು ಮಾತ್ರ ಇರುವುದರಿಂದ ಚಿರತೆಗೆ ಇಲ್ಲಿ…

Read More

ಮಂಜೇಶ್ವರ :ಮತ್ತೆ ಬೆಳಗಲಿವೆ ಬೀದಿ ದೀಪಗಳು; ನಿಷ್ಕ್ರಿಯವಾಗಿದ್ದ ಹೈಮಾಸ್ಟ್ ಲೈಟ್‌ಗಳಿಗೆ ಮರುಜೀವ

​ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಕಳೆದ ಹಲವು ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಹೈಮಾಸ್ಟ್ ಮತ್ತು ಮಿನಿ ಮಾಸ್ಕ್ ದೀಪಗಳ ನವೀಕರಣಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ಶಾಸಕರ ನಿಧಿಯಿಂದ ಸ್ಥಾಪಿಸಲ್ಪಟ್ಟಿದ್ದ ಈ ದೀಪಗಳು ಸರಿಯಾದ ನಿರ್ವಹಣೆಯಿಲ್ಲದೆ ಕೇವಲ ‘ಪ್ರದರ್ಶನದ ವಸ್ತು’ಗಳಂತಾಗಿದ್ದವು. ಈಗ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾದ ಬಶೀರ್ ಕನಿಲ ಅವರ ವಿಶೇಷ ಆಸಕ್ತಿಯ ಫಲವಾಗಿ ಈ ಸಮಸ್ಯೆಗಳಿಗೆ ಮುಕ್ತಿ ಸಿಗುವ ಲಕ್ಷಣ ಕಾಣಿಸುತ್ತಿದೆ. ​’ಊಟಕ್ಕಿಲ್ಲದ ಉಪ್ಪಿನಕಾಯಿ’ಯಂತಾಗಿದ್ದ ದೀಪಗಳು​ಪಂಚಾಯತ್ ವ್ಯಾಪ್ತಿಯಲ್ಲಿ ಹೈಮಾಸ್ಟ್ ಹಾಗೂ ಮಿನಿ ಮಾಸ್ಕ್ ಸೇರಿ…

Read More
error: Content is protected !!