ಬಂಟ್ವಾಳ ಉಪವಿಭಾಗದ ನೂತನ ಎಎಸ್ಪಿ ಯವರನ್ನು ಭೇಟಿ ಮಾಡಿದ SDPI ನಾಯಕರು
ಬಂಟ್ವಾಳ : ಬಂಟ್ವಾಳ ಪೊಲೀಸ್ ಉಪ ವಿಭಾಗಕ್ಕೆ ನೂತನವಾಗಿ ನೇಮಕವಾದ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ರವರನ್ನು SDPI ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ನೇತೃತ್ವದಲ್ಲಿ ಸೌಹಾರ್ದ ಭೇಟಿಯಾಗಿ ಮಾತುಕತೆ ನಡೆಸಿದರು. ಜಿಲ್ಲೆಯಲ್ಲಿ ಶಾಂತಿ ಕಾಪಾಡುವಲ್ಲಿ ಪೊಲೀಸ್ ಇಲಾಖೆ ತೆಗೆದುಕೊಂಡ ದಿಟ್ಟ ಕ್ರಮಗಳ ಬಗ್ಗೆ ಅಭಿನಂದನೆ ಸಲ್ಲಿಸಿದರು. ಇತ್ತೀಚೆಗೆ ಒಂದು ಧರ್ಮದ ಹೆಸರಿನಲ್ಲಿ ಹಿಂದೂ ರಾಷ್ಟ್ರಸಮಿತಿ ಎಂಬ ದೇಶವಿರೋಧಿ ಕಾರ್ಯಕ್ರಮಗಳು ಬಂಟ್ವಾಳ ಸೇರಿದಂತೆ ಕೆಲವು ಕಡೆ ನಡೆಯುತ್ತಿರುವುದನ್ನು ಸಹಾಯಕ ಪೊಲೀಸ್ ವರಿಷ್ಟಾಧಿಕಾರಿಯವರ…