ದಕ್ಷಿಣ ಕನ್ನಡ ಜಿಲ್ಲಾ ಪೌರಕಾರ್ಮಿಕರ ಹಾಗೂ ನಾಲ್ಕನೇ ದರ್ಜೆ ನೌಕರರ ಸಂಘ ನೇತೃತ್ವದಲ್ಲಿ ಊರ್ವ ಪತ್ರಿಕಾ ಭವನದಿಂದ ಜಿಲ್ಲಾ ಪಂಚಾಯತ್ ಕಚೇರಿ ತನಕ ಕಾಲ್ನಡಿಗೆ ಜಾಥಾ…. !

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೌರಕಾರ್ಮಿಕರ ಹಾಗೂ ನಾಲ್ಕನೇ ದರ್ಜೆ ನೌಕರರ ಸಂಘ (ರಿ) ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್‌ಗಳಲ್ಲಿ ದುಡಿಯುತ್ತಿರುವ ಸ್ವಚ್ಛತಾ ಕಾರ್ಮಿಕರು ಮತ್ತು ಸ್ವಚ್ಛತಾ ವಾಹನ ಚಾಲಕರು ತಮ್ಮ ಬೇಡಿಕೆಗಳಿಗೆ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಮಂಗಳವಾರ ಉರ್ವಾ ಸ್ಟೋರ್‌ನಲ್ಲಿರುವ ಜಿಲ್ಲಾ ಪಂಚಾಯತ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಊರ್ವ ಪತ್ರಿಕಾ ಭವನದಿಂದ ಕಾಲ್ನಡಿಗೆ ಜಾಥಾ ಹೊರಟ ಕಾರ್ಮಿಕರು ಘೋಷಣೆ ಕೂಗುತ್ತ ಜಿಲ್ಲಾ ಪಂಚಾಯತ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ…

Read More

ಕಾಸರಗೋಡು ಸ್ಥಳೀಯಾಡಳಿತ: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಮಂಜೇಶ್ವರ: ಜಿಲ್ಲೆಯಲ್ಲಿ ಡಿ.11ರಂದು ನಡೆಯಲಿರುವ ಸ್ಥಳೀಯಾಡಳಿತ ಚುನಾವಣೆಗೆ ಸಿದ್ದತೆ ಪೂರ್ಣಗೊಂಡಿದೆ ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೆ. ಇನ್ಸಾಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಮಂಗಳವಾರ ಸಂಜೆ ತೆರೆಬೀಳಲಿದೆ. ಮಂಗಳವಾರದಂದು ಬೆಳಗ್ಗಿನಿಂದ ಎಲ್ಲೆಡೆ ಅಬ್ಬರದ ಪ್ರಚಾರ ಕಂಡು ಬಂತು. ಎಲ್ಲೆಡೆ ವಾಹನಗಳಲ್ಲಿ ಧ್ವನಿ ವರ್ಧಕಗಳನ್ನು ಕಟ್ಟಿ ಸುಮಧುರ ಹಾಡಿನೊಂದಿಗೆ ಅಭ್ಯರ್ಥಿಗಳ ಪರ ಪ್ರಚಾರ ಕಂಡು ಬಂತು. ಜಿಲ್ಲಾ ಪಂಚಾಯತ್‌ನ 18 ಡಿವಿಜನ್, 38 ಗ್ರಾಮ ಪಂಚಾಯತ್, ಮೂರು ನಗರಸಭೆ ಹಾಗೂ ಆರು ಬ್ಲಾಕ್…

Read More

ಮಂಗಳೂರು: ಅಕ್ರಮ ಎಂಡಿಎಂಎ ಮಾರಾಟ- ಮೂವರು ಆರೋಪಿಗಳ ಬಂಧನ

ಮಂಗಳೂರು : ತಲಪಾಡಿ ಗ್ರಾಮದ ತಚ್ಚಣಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟದ ಬಗ್ಗೆ “ವಿಶ್ವಾಸಾರ್ಹ ಮಾಹಿತಿ” ಆಧಾರದ ಮೇಲೆ ದಾಳಿ ನಡೆಸಿ ಉಳ್ಳಾಲ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಅಬ್ದುಲ್ ರವೂಫ್ (30), ಶರೀಫ್ ಅಲಿಯಾಸ್ ಅಮೀನ್ (34) ಮತ್ತು ನಿಯಾಜ್ (23) ಎಂದು ಗುರುತಿಸಲಾಗಿದೆ.ಆರೋಪಿಗಳಿಂದ 42 ಗ್ರಾಂ ಎಂಡಿಎಂಎ, ಒಂದು ಟೊಯೋಟಾ ಕಾರು, ಮೂರು ಮೊಬೈಲ್ ಫೋನ್ ಹ್ಯಾಂಡ್‌ಸೆಟ್‌ಗಳು ಮತ್ತು 2,500 ರೂ. ನಗದನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ತನಿಖಾಧಿಕಾರಿಗಳ ಪ್ರಕಾರ, ಪ್ರಾಥಮಿಕ ವಿಚಾರಣೆಯಲ್ಲಿ ನಿಯಾಜ್…

Read More

ಮಣಿಪಾಲ : ಕೋಳಿ ಅಂಕಕ್ಕೆ ದಾಳಿ- ಎಂಟು ಮಂದಿ ವಶಕ್ಕೆ

ಮಣಿಪಾಲ, : ಸಮೀಪದ ಮಂಚಿ ಎಂಬಲ್ಲಿ ಡಿ.7ರಂದು ಮಧ್ಯಾಹ್ನ ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಜಯ ದೇವಾಡಿಗ, ದಯಾನಂದ ಪೂಜಾರಿ, ಪ್ರಜ್ವಲ್, ಅಚ್ಚಣ್ಣ ಮೂಲ್ಯ, ಸಚಿನ್, ಪ್ರದೀಪ್, ಅಮೀರ್, ಫಾರೂಕ್ ಅಹಮ್ಮದ್ ಬಂಧಿತ ಆರೋಪಿಗಳು. ಇವರಿಂದ 6500ರೂ. ಮೌಲ್ಯದ 4 ಕೋಳಿಗಳು, 15 ವಾಹನಗಳು ಹಾಗೂ 22100ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೈಕಂಪಾಡಿ ರಿಕ್ಷಾ ನಿಲ್ದಾಣದ ಬಳಿ 2 ವರ್ಷದ ಮಗು ಪತ್ತೆ

ಮಂಗಳೂರು: ಮಂಗಳೂರು ನಗರದ ಬೈಕಂಪಾಡಿ ರಿಕ್ಷಾ ನಿಲ್ದಾಣದ ಬಳಿ ಜುಲೈ 7 ರಂದು ಅಂದಾಜು 2 ವರ್ಷದ ಗಂಡು ಮಗು ಪತ್ತೆಯಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಮಂಗಳೂರು ನಗರದ ಬೋಂದೆಲ್ ಕೃಷ್ಣ ನಗರ ಸರ್ಕಾರಿ ವಿಶೇಷ ದತ್ತು ಸಂಸ್ಥೆಯಲ್ಲಿ ದಾಖಲಿಸಲಾಗಿದೆ. ಈ ಮಗುವಿನ ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಪಡೀಲ್ ಪ್ರಜಾಸೌಧ ಕಟ್ಟಡದಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ (ದೂರವಾಣಿ ಸಂಖ್ಯೆ:0824-2440004) ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಜಾನುವಾರು ಹತ್ಯೆ ಕಾಯ್ದೆ ತಿದ್ದುಪಡಿ ಖಂಡಿಸಿ ವಿಶ್ವ ಹಿಂದು ಪರಿಷತ್ ಮಂಗಳೂರು ಪ್ರತಿಭಟನೆ…. !

ಮಂಗಳೂರು:ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ಮಾಡುವುದನ್ನು ವಿರೋಧಿಸಿ ವಿಶ್ವ ಹಿಂದು ಪರಿಷತ್ ಮಂಗಳೂರು ಗೋರಕ್ಷಾ ವಿಭಾಗ ವತಿಯಿಂದ ನಗರದ ಮಿನಿ ವಿಧಾನಸೌಧ ಎದುರು ಸೋಮವಾರ ಪ್ರತಿಭಟನೆ ನಡೆಯಿತು. ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ಈಗಿರುವ ಕಾನೂನು ಪ್ರಬಲವಾಗಿದ್ದು, ಅದನ್ನು ಯಥಾವತ್ತಾಗಿ ಜಾರಿಗೊಳಿಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಬೇಕೇ ಹೊರತು ಯಾವುದೇ ಕಾರಣಕ್ಕೂ ಕಾಯ್ದೆಯನ್ನು ಸಡಿಲಗೊಳಿಸಬಾರದು. ಆದರೆ ರಾಜ್ಯ ಸರ್ಕಾರವು ಕಾನೂನು ಸಡಿಲಗೊಳಿಸಿ ಗೋ ಕಳ್ಳರಿಗೆ ಅನುಕೂಲ ಮಾಡಿಕೊಡಲು…

Read More

ಕಲ್ಲು, ಡಾಂಬರ್, ಸಿಮೆಂಟ್ ಗೆ ಬೆಲೆಯಿದೆ ಆದರೆ ಆರೋಗ್ಯಕ್ಕೆ ಬೆಲೆ ಇಲ್ಲವೇ ಸದನದಲ್ಲಿ ವಿ.ಪ ಶಾಸಕ ಡಾ.ಸರ್ಜಿ ಪ್ರಶ್ನೆ

ಬೆಳಗಾವಿ : ರಾಜ್ಯದಲ್ಲಿ ವಿವಿಧ ಆರೋಗ್ಯ ಯೋಜನೆಗಳ ಎಂಪ್ಯಾನೆಲ್ ಆಸ್ಪತ್ರೆಗಳಲ್ಲಿ ವಿವಿಧ ಚಿಕಿತ್ಸೆಗಳಿಗೆ ಸಿ.ಜಿ.ಎಚ್.ಎಸ್ ದರಗಳನ್ನು ಸರಿಯಾಗಿ ಪರಿಷ್ಕರಿಸದೇ ಇರುವುದು ಮತ್ತು ಕೇಂದ್ರ ಸರ್ಕಾರ 2023, 2024 ಮತ್ತು 2025 ಸಿ.ಜಿ.ಎಚ್.ಎಸ್ ದರವನ್ನು ಪರಿಷ್ಕರಿಸಿದೆ ಆದರೆ ರಾಜ್ಯದಲ್ಲಿ ಚಿಕಿತ್ಸೆಗಳಿಗೆ ಸಿ.ಜಿ.ಎಚ್.ಎಸ್ ದರಗಳನ್ನು ಪರಿಸ್ಕರಿಸಿಲ್ಲ ಯಾಕೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಪ್ರಶ್ನಿಸಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತಾನಾಡಿದ ಅವರು ಸಿ.ಜಿ.ಎಚ್.ಎಸ್…

Read More

ತಟಸ್ಥವಾದ ಕರಾವಳಿ ಅಭಿವೃದ್ಧಿ ಪ್ರಾಧಿಕಾರ! ಸದನದ ಗಮನ ಸೆಳೆದ ಶಾಸಕ ಮಂಜುನಾಥ ಭಂಡಾರಿ

ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ತಟಸ್ಥವಾಗಿರುವ ಕುರಿತು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಶೂನ್ಯ ವೇಳೆಯಲ್ಲಿ ಸದನದ ಗಮನ ಸೆಳೆದರು. ಈ ವೇಳೆ ಉತ್ತರಿಸಿದ ಸಚಿವ ಡಿ.ಸುಧಾಕರ್ ಅವರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಲಿ ನಿರ್ವಹಿಸುತ್ತಿರುವ ಕಾರ್ಯಗಳ ಜೊತೆಗೆ ಅದರ ಕಾರ್ಯಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುವಾಗುವಂತೆ ಅದರ ಕಾರ್ಯಚಟುವಟಿಕೆಯನ್ನು ವಿಸ್ತರಿಸಿ ಕೆಳಕಂಡ ಪ್ರಕಾರ್ಯಗಳನ್ನು ನಿರ್ವಹಿಸಲು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರಾತಿ ನೀಡಿ ಆದೇಶಿಸಿದ್ದಾಗಿ ತಿಳಿಸಿದ್ದಾರೆ. ಕರಾವಳಿ ಭಾಗದ…

Read More

ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ‌ ಆಗ್ರಹಿಸಿ ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯಿಂದ ಬೃಹತ್ ರ‌್ಯಾಲಿ

ಜನರ ಬದುಕಿನ ಕುರಿತು ಚಿಂತಿಸದ ಬಿಜೆಪಿ, ಕಾಂಗ್ರೆಸ್ ನಾಯಕರು ಪರಸ್ಪರ ಸ್ಪರ್ಧೆಗೆ ಬಿದ್ದು ವೈಭವದ ಕಂಬಳ, ಹುಲಿ ಕುಣಿತ ಆಯೋಜಿಸುತ್ತಿದ್ದಾರೆ, ಮುನೀರ್ ಕಾಟಿಪಳ್ಳ ಆರೋಪ ಶಿಕ್ಷಣ,ಆರೋಗ್ಯ, ಉದ್ಯೋಗ, ವಸತಿ ಸಹಿತ ದ.ಕ. ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕು, ಅಭಿವೃದ್ದಿಯ ಫಲ ಜನಸಾಮಾನ್ಯರಿಗೂ ತಲುಪುವಂತೆ ಯೋಜನೆಗಳನ್ನು ರೂಪಿಸಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ‘ಜನ ಸಮಾನ್ಯರ ನಡಿಗೆ ಉತ್ತಮ ಬದುಕಿನ ಕಡೆಗೆ, ಘೋಷಣೆಯ ಅಡಿಯಲ್ಲಿ ಅಂಬೆಡ್ಕರ್ ವೃತ್ತದಿಂದ ಮಿನಿ ವಿಧಾನ ಸೌಧದ ವರಗೆ…

Read More

ಕುಂಜತ್ತೂರಿನಲ್ಲಿ ಆಂಜನೇಯ ಅಲ್ಯೂಮಿನಿಯಂ ಹಾಗೂ ಹಾರ್ಡ್ವೇರ್ ಶುಭಾರಂಭ

ಕುಂಜತ್ತೂರಿನಲ್ಲಿ ಇಂದು ಆಂಜನೇಯ ಕಣ್ವ ತೀರ್ಥ ಸಂಸ್ಥೆಯ ಸಕ್ರಿಯ ಸದ್ಯಸರಾದ ಗಣೇಶ್ ಹಾಗೂ ಸೂರಜ್ ಅವರ ಮಾಲಕತ್ವದ ಆಂಜನೇಯ ಅಲ್ಯೂಮಿನಿಯಂ ಹಾಗೂ ಹಾರ್ಡ್ವೇರ್ ಶುಭಾರಂಭಗೊಂಡಿತು. ಮಳಿಗೆಯನ್ನು ಶ್ರೀ ಸುಳಿಜನಾರ್ಧನ ದೇವಸ್ಥಾನ ಕಣ್ವತೀರ್ಥ ಅರ್ಚಕರಾದ ಶ್ರೀ ಮರಿ ಭಟ್ ಅವರು ರಿಬ್ಬನ್ ಕತ್ತರಿಸುವ ಮೂಲಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶ್ರೀ ರಾಜ ಬೆಳ್ಚಪಾಡ ಮಾಡ, ಶ್ರೀ ತಿಮೀರಿ ಬೆಳ್ಚಪಾಡ, ಶ್ರೀ ಭಗವತಿ ಕ್ಷೇತ್ರ ಉದ್ಯಾವರ ಮಾಡದ ಅಚ್ಚಮಾರರು, ಗುರಿಕಾರರು ಆಚಾರ್ಯಪಟ್ಟವರು ದಿವ್ಯ ಉಪಸ್ಥಿತರಿದ್ದರು. ರಾಜಕೀಯ ನೇತಾರಾರಾದ ಶ್ರೀ ಹರಿಶ್ಚಂದ್ರ ಮಂಜೇಶ್ವರ,…

Read More
error: Content is protected !!