ಭಾರತದಾದಂತ್ಯ ಮತ್ತೆ 450 ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನಗಳ ಹಾರಾಟದಲ್ಲಿನ ವ್ಯತ್ಯಯಕ್ಕೆ ಸದ್ಯ ಬ್ರೇಕ್ ಬೀಳುವ ಲಕ್ಷಣಗಳು ಕಾಣುತ್ತಿಲ್ಲ. ಇದೀಗ ಮತ್ತೆ ಇಂದು ವಿವಿಧ ವಿಮಾನ ನಿಲ್ದಾಣಗಳಲ್ಲಿ 450 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಭಾರತವು ಹಿಂದೆಂದೂ ಕಂಡಿರದ ಪ್ರಮಾಣದ ವಿಮಾನ ಪ್ರಯಾಣ ಬಿಕ್ಕಟ್ಟಿನಲ್ಲಿ ಸತತ ಏಳನೇ ದಿನವೂ ಅಡಚಣೆಗಳು ಮುಂದುವರೆದಿವೆ.ದೆಹಲಿ ವಿಮಾನ ನಿಲ್ದಾಣದಲ್ಲಿ, 134 ಇಂಡಿಗೋ ವಿಮಾನಗಳು – 75 ನಿರ್ಗಮನ ಮತ್ತು 59 ಆಗಮನ – ಇಂದು ರದ್ದಾಗಿವೆ, ಆದರೆ ಬೆಂಗಳೂರು ವಿಮಾನ ನಿಲ್ದಾಣವು 127 ರದ್ದತಿಗಳನ್ನು ವರದಿ ಮಾಡಿದೆ….

Read More

ಸಂಸದರಾದ ಬ್ರಿಜೇಶ್ ಚೌಟ ರವರೇ SDPI ಪಕ್ಷದ ಮೇಲೆ ಮಾಡಿದ ಆರೋಪವನ್ನು ಕೂಡಲೇ ಹಿಂಪಡಿಯಿರಿ : ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್

ಮಂಗಳೂರು: ಲೋಕ ಸಭೆಯ ಶೂನ್ಯವೇಳೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷವು ನಿಷೇಧಿತ ಸಂಘಟನೆಯೊಂದಿಗೆ ಸಂಧಿಸಿದೆ ಎಂದು ನೇರವಾಗಿ ಆರೋಪವನ್ನು ಮಾಡಿದ್ದಾರೆ . ಇದು ಅವರ ಪಕ್ಷದ ಕಾರ್ಯಕರ್ತರ ನಡುವೆ ಮೈಲೇಜ್ ಹೆಚ್ಚಿಸಿಕೊಳ್ಳುವ ಹುನ್ನಾರವಾಗಿದೆ ಅದು ಬಿಟ್ಟು ಜಿಲ್ಲೆಯ ಅಭಿವೃದ್ಧಿ ವಿಷಯಗಳನ್ನು ಲೋಕಸಭೆಯಲ್ಲಿ ಮಾತನಾಡುವುದಿಲ್ಲವೆಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಕಿಡಿಕಾರಿದ್ದಾರೆ . ಅವರು ಪಕ್ಷದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ…

Read More

ಡಿಸೆಂಬರ್ 14 ರಂದು ದಕ್ಷಿಣ ಕನ್ನಡ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಶನ್ ಮಂಗಳೂರು ಆಯೋಜಿಸುವ “ದಕ್ಷಿಣ ಕನ್ನಡ ಉಡುಪಿ ಹಾಗು ಕೊಡಗು ಅಂತರ್ ಜಿಲ್ಲಾ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟ”

ಮಂಗಳೂರು: ದಕ್ಷಿಣ ಕನ್ನಡ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಶನ್ ಮಂಗಳೂರು ಆಯೋಜಿಸುವ “ದಕ್ಷಿಣ ಕನ್ನಡ ಉಡುಪಿ ಹಾಗು ಕೊಡಗು ಅಂತರ್ ಜಿಲ್ಲಾ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟ” ವು ಡಿಸೆಂಬರ್ 14 ರಂದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಮಿತಿಯ ಉಪಾಧ್ಯಕ್ಷೆ ರೇಖಾ ಶೆಟ್ಟಿ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿ , ೩೦ ವರ್ಷ ಮೇಲ್ಪಟ್ಟವರಿಗೆ ಓಟ , ಜಿಗಿತ , ಎಸೆತದ ಆಟಗಳಿವೆ ಮತ್ತು ೧೨ ವರ್ಷ ಕೆಳಗಿನ ಮಕ್ಕಳಿಗೆ ಓಟ…

Read More

ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ ನಿಟ್ಟೆ-ಸುದ್ದಿ-ರೋಟರಿ ಎಂಸ್‌ ಎಂಇ ಹಾಗೂ ಸ್ಮಾರ್ಟ್‌ ಅಪ್ ಬೂಟ್ ಕ್ಯಾಂಪ್ – 2025

ಮಂಗಳೂರು: ಉದ್ಯಮೇನ ಹಿ ಸಿಧ್ಯಂತಿ ಕಾರ್ಯಾಣಿ” ಎಂಬ ಶೀರ್ಷಿಕೆ ಅಡಿಯಲ್ಲಿ ಎರಡು ದಿನಗಳ ಕಾರ್ಯಾಗಾರವನ್ನು ನಿಟ್ಟೆ ಇನ್ಸಿಟ್ಯೂಟ್ ಆಫ್ ಪ್ರೊಫೆಷನಲ್ ಎಜುಕೇಷನ್, ಮಂಗಳೂರು ಎಐಸಿ ನಿಟ್ಟೆ ಇನ್ಕ್ಯುಬೇಷನ್ ಸೆಂಟರ್, ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಮಂಗಳೂರು ಸೆಂಟ್ರಲ್ ರೋಟರಿ ಕ್ಲಬ್ ಜಂಟಿಯಾಗಿ ಡಿಸೆಂಬರ್ 15 ಮತ್ತು 16 ರಂದು ಮಂಗಳೂರಿನ ಪಡೀಲ್ ನಲ್ಲಿರುವ NIPE ಕ್ಯಾಂಪಸ್ ನಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮ ನಿರ್ದೇಶಕರಾದ ಸಿಎ.ಎಸ್.ಎಸ್ ನಾಯಕ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ…

Read More

ಪುತ್ತೂರಿನ ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮೆರೋಡಿ ಭೇಟಿ.

ಪುತ್ತೂರು: ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ,ಕೊಲೆಗಳನ್ನು ತನಿಖೆ ಮಾಡಲು ಸರಕಾರ ಎಸ್‌ಐಟಿ ರಚನೆ ಮಾಡಿದ್ದು, ಆದರೆ ಮೀಡಿಯಾಗಳು ಷಡ್ಯಂತ್ರ್ಯ ರೂಪಿಸಿ ಅದನ್ನು ಹಾಳು ಮಾಡಲು ನೋಡುತ್ತಿದ್ದಾರೆ. ಆದರೂ ಇದೆಲ್ಲಕ್ಕೂ ಉತ್ತರ ಮಹಾಲಿಂಗೇಶ್ವರ ದೇವರು ಮತ್ತು ಮಂಜುನಾಥ ಸ್ವಾಮಿ ಕೊಡುತ್ತಾರೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ಹೇಳಿದರು. ಈ ಹಿಂದೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಆದೇಶವಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಹೈಕೋರ್ಟ್ ನಿರ್ದೇಶನದಂತೆ ಪುತ್ತೂರು ಎಸಿಯವರು ಮತ್ತೆ ಗಡಿಪಾರು ನೋಟೀಸ್ ಜಾರಿ ಮಾಡಿದ್ದರು. ಈ ಕುರಿತು ಅವರು…

Read More

ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬುದು ಜನತೆಯ ಅಗ್ರಹ -ಆದರ್ಶ ಬಿ ಎಂ

ಪೈವಳಿಕೆ : ಬಿಜೆಪಿ ಈ ಬಾರಿಯ ಸ್ಥಳೀಯಾಡಳಿತ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲುವು ಸಾದಿಸಲಿದೆ, ಅ ಮೂಲಕ ಪೈವಳಿಕೆ, ಮೀoಜ, ವರ್ಕಾಡಿ, ಮಂಜೇಶ್ವರ ಪಂಚಾಯತ್ ಗಳ ಆಡಳಿತ ಚುಕ್ಕಾಣಿ ಹಿಡಿಯಲ್ಲಿದೆ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು. ಬಿಜೆಪಿ ಜಿಲ್ಲಾ ಪಂಚಾಯತ್ ಅಭ್ಯರ್ಥಿಗಳಾದ ವಿಜಯ್ ಕುಮಾರ ರೈ, ಮಣಿಕಂಠ ರೈ, ಯವರ ಚುನಾವಣಾ ವಾಹನ ಪ್ರಚಾರಣ ಜಾಥಾ ಉದ್ಘಾಟಿಸಿ ಮಾತನಾಡಿದರು. ಶಬರಿಮಲೆಗೆ ಅಪಚಾರ ಮಾಡಿದ ಎಡರಂಗಕ್ಕೆ vote ಇಲ್ಲ, ರೇಪ್ ಕೇಸ್…

Read More

ಕೆನರಾ ಎಂಜಿನಿಯರಿಂಗ್ ಕಾಲೇಜು ‘ಟೆಕ್ನೋವಾ 2025’ – ಅಂತರ್ ಪದವಿ ಪೂರ್ವ ಕಾಲೇಜು ವಿಜ್ಞಾನ ಉತ್ಸವ

ಮಂಗಳೂರು: ಕೆನರಾ ಎಂಜಿನಿಯರಿಂಗ್ ಕಾಲೇಜ್ (CEC) ಬೆಂಜನಪದವು ಇದರ ಆಯೋಜನೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂತರ ಕಾಲೇಜು ವಿಜ್ಞಾನ ಉತ್ಸವ ‘ಟೆಕ್ನೋವಾ 2025’ ಯಶಸ್ವಿಯಾಗಿ ನಡೆಯಿತು. ವಿವಿಧ ಪಿಯು ಕಾಲೇಜುಗಳಿಂದ 800 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಏಕದಿನ ಉತ್ಸವದಲ್ಲಿ ನವೀನತೆ, ಸೃಜನಶೀಲತೆ ಹಾಗೂ ಪ್ರಾಯೋಗಿಕ ಕಲಿಕೆಗೆ ಪ್ರಾಶಸ್ತ್ಯ ನೀಡುವ ವಿವಿಧ ಸ್ಪರ್ಧೆಗಳು, ಕಾರ್ಯಾಗಾರಗಳು ಮತ್ತು ಕ್ಯಾಂಪಸ್ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಕೆನರಾ ಪದವಿಪೂರ್ವಕಾಲೇಜ್, ಶಾರದಾ ಪಿ ಯು ಕಾಲೇಜ್ ಮತ್ತು ಕಾರ್ಮೆಲ್ ಕಾಂಪೊಸಿಟ್…

Read More

ಜಿಲ್ಲೆಯ ಜನ ಸಾಮಾನ್ಯರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಸಿಪಿಐ(ಎಂ) ನಿಂದ ಬೃಹತ್ ಮೆರವಣಿಗೆ

ಮಂಗಳೂರು: ಜಿಲ್ಲೆಯ ಜನ ಸಾಮಾನ್ಯರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ, ಜಿಲ್ಲೆಯ ಜನರ ಬದುಕಿನ ಮೌಲ್ಯಗಳ ಬಲವರ್ಧನೆಗಾಗಿ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಇಂದು “ಜನತೆಯ ನಡಿಗೆ ಉತ್ತಮ ಬದುಕಿನ ಕಡೆಗೆ” ಎಂಬ ಘೋಷಣೆ ಅಡಿಯಲ್ಲಿ ಬೃಹತ್ ಹೋರಾಟ ರೂಪಿಸಲಾಯಿತು . ಈ ಬೃಹತ್ ಹೋರಾಟದಲ್ಲಿ ಮಂಗಳೂರು ನಗರದ ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರದ ಸಾವಿರಾರು ಜನರು ಭಾಗವಹಿಸಿದ್ದರು . .ನಗರದ ಡಾ| ಬಿ.ಆರ್ ಅಂಬೇಡ್ಕರ್ (ಜ್ಯೋತಿ) ವೃತ್ತದಿಂದ ಕ್ಲಾಕ್ ಟವರ್ ತನಕ…

Read More

ಗೆಲ್ಲಿಸಿದರೆ ಅಭಿವೃದ್ಧಿ ಮಾಡಿ ತೋರಿಸುತ್ತೇವೆ -ವಿಜಯ್ ರೈ.

ದೇಶದಲ್ಲಿ ಮೋದಿ ಪ್ರಧಾನಿ ಅದ ಬಳಿಕ ಉಂಟಾಗಿರುವ ಅಭಿವೃದ್ಧಿ ಯನ್ನು ಗ್ರಾಮ ಗ್ರಾಮಗಳಲ್ಲಿ ಮಾಡಿ ತೋರಿಸುತ್ತೇವೆ. ಗ್ರಾಮ ಬ್ಲಾಕ್ ಜಿಲ್ಲಾ ಪಂಚಾಯತ್ ಗಳಲ್ಲಿ ಬಿಜೆಪಿ ಅಭ್ಯರ್ಥಿ ಗಳನ್ನು ಗೆಲ್ಲಿಸಿ ಎಂದು ಬಿಜೆಪಿ ವರ್ಕಾಡಿ ಜಿಲ್ಲಾ ಡಿವಿಶನ್ ಅಭ್ಯರ್ಥಿ ವಿಜಯ್ ರೈ ಮಜೀರ್ ಪಲ್ಲ ದಲ್ಲಿ ಜರಗಿದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಹೇಳಿದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಎನ್ ಮದೂ ಕಾರ್ಯಕ್ರಮ ಉದ್ಘಾಟಿಸಿದರು.ಮಂಡಲ ಅಧ್ಯಕ್ಷ ಆದರ್ಶ ಬಿ ಎಂ, ಸಲೀಲ್ ಮಾಸ್ಟರ್, ನಾರಾಯಣ ನಾವುಡ, ಸದಾಶಿವ ಚೇರಲ್, ವಲ್ಸರಾಜ್,…

Read More

ಕೇರಳ ಕಲೋತ್ಸವದ ಪ್ರಶಸ್ತಿ ವಿತರಣೆಯಲ್ಲಿ ಸಂಘಟಕರಿಂದ ಸ್ಪರ್ಧಾಳುಗಳಿಗೆ ಅವಮಾನ: ಭಾರೀ ವಿವಾದ

ಮಂಜೇಶ್ವರ : ಕೇರಳ ಕಲೋತ್ಸವದ ಅಂಗವಾಗಿ ಮಂಜೇಶ್ವರದಲ್ಲಿ ಆಯೋಜಿಸಲಾದ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಇದೀಗ ವಿವಾದಕ್ಕೆ ಕಾರಣವಾಗಿದೆ. ಕಲೋತ್ಸವದಲ್ಲಿ ಭಾಗವಹಿಸಿ ವಿಜೇತರಾಗಿದ್ದ ಮಕ್ಕಳಿಗೆ ಹಾಗೂ ಯುವಕರಿಗೆ ನೀಡಲಾದ ಪ್ರಮಾಣಪತ್ರ ಮತ್ತು ಟ್ರೋಫಿಗಳ ಗುಣಮಟ್ಟ ಸಂಬಂಧಿಸಿದಂತೆ ಹಲವು ಗಂಭೀರ ದೂರುಗಳು ಕೇಳಿ ಬಂದಿದೆ.ಈ ಕಾರ್ಯಕ್ರಮಕ್ಕೆ ಪಂಚಾಯತ್ ಫಂಡ್‍ನಿಂದ ರೂ. 1,50,000 ಬಜೆಟ್ ಮಂಜೂರಾಗಿದ್ದರೂ, ವಿತರಿಸಲಾದ ಪ್ರಶಸ್ತಿಗಳ ಗುಣಮಟ್ಟ ಮತ್ತು ಅವುಗಳ ಪೂರ್ಣತೆಯ ಕೊರತೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಜೇತರಿಗೆ ವಿತರಿಸಲಾದ ಪ್ರಮಾಣಪತ್ರಗಳಲ್ಲಿ ಸ್ಪರ್ಧಾಳುವಿನ ಹೆಸರು ದಾಖಲಿಸದೇ ಇರುವುದು ಬಾರೀ…

Read More
error: Content is protected !!