ಪಿಕಪ್ ವಾಹನ ಡಿಕ್ಕಿ: ಸ್ಕೂಟರ್ ಸವಾರರಿಬ್ಬರು ದುರ್ಮರಣ

ಬೆಳ್ತಂಗಡಿ, ಜೂನ್ 9: ಮಚ್ಚಿನ ಗ್ರಾಮದ ಪಾಳ್ಯರ ಪ್ರದೇಶದಲ್ಲಿ ಪಿಕಪ್ ವಾಹನ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಜೂನ್ 8ರಂದು ನಡೆದಿದೆ. ಮೃತರನ್ನು ಚಂದಪ್ಪ ಮೂಲ್ಯ (60) ಹಾಗೂ ಡಾಕಯ್ಯ ಗೌಡ ಎಂದು ಗುರುತಿಸಲಾಗಿದೆ. ಪೊಲೀಸ್ ಮಾಹಿತಿಯ ಪ್ರಕಾರ, ಪಿಕಪ್ ವಾಹನವು ಬಳ್ಳಮಂಜ ಕಡೆಯಿಂದ ಪಣಕಜೆ ಕಡೆಗೆ ಸಂಚರಿಸುತ್ತಿದ್ದ ವೇಳೆ, ಪಣಕಜೆಯಿಂದ ಬಳ್ಳಮಂಜ ಕಡೆಗೆ ಬರುತ್ತಿದ್ದ ಡಾಕಯ್ಯ ಗೌಡ ಚಲಾಯಿಸುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಡಾಕಯ್ಯ…

Read More

ಹೋಂಸ್ಟೇ ಬಾತ್‌ರೂಮ್‌ನಲ್ಲಿ ಅನಿಲ ಸೋರಿಕೆ: ಯುವತಿ ದುರ್ಮರಣ

ಸೋಮವಾರಪೇಟೆ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕಲ್ಮಂಡುವಿನ ಹೋಂಸ್ಟೇಯೊಂದರಲ್ಲಿ ವಾಟರ್ ಹೀಟರ್‌ನಿಂದ ಅನಿಲ ಸೋರಿಕೆಯಾಗಿ ಯುವತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿ ವಿನೂತ (27) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಆಕೆ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ. ತಮ್ಮ ಕಚೇರಿಯ ಸಹೋದ್ಯೋಗಿಗಳೊಂದಿಗೆ ಪ್ರವಾಸಕ್ಕೆ ಬಂದಿದ್ದ ವಿನೂತ ಅವರು ಹೋಂಸ್ಟೇಯಲ್ಲಿ ತಂಗಿದ್ದರು. ಸ್ನಾನ ಮಾಡಲು ಬಾತ್‌ರೂಮ್‌ಗೆ ತೆರಳಿದ್ದ ಅವರು ಬಹಳ ಸಮಯವಾದರೂ ಹೊರಬಾರದ ಹಿನ್ನೆಲೆಯಲ್ಲಿ ಸಹೋದ್ಯೋಗಿಗಳು ಹುಡುಕಾಟ ನಡೆಸಿದ್ದಾರೆ. ಈ ವೇಳೆ…

Read More

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಪ್ರತ್ಯೇಕ ಪ್ರಕರಣಗಳ ಇಬ್ಬರು ಆರೋಪಿಗಳನ್ನು ಬರ್ಕೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿ, ದಸ್ತಗಿರಿ ಮಾಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಬಂಟ್ವಾಳ, ನರಿಂಗಾಣ ಗ್ರಾಮದ ತೌಡಗೊಳಿ ಕ್ರಾಸ್ ನಿವಾಸಿ ಅಬ್ದುಲ್ ಖಾದರ್ ತನ್ಸಿಪ್ ಯಾನೆ ತಂಜಿ ಹಾಗೂ ಮಂಗಳೂರು, ಅಡ್ಯಾರ ಕಣ್ಣೂರಿನ ಕುಂಡಾಲ ಹೌಸ್ ನಿವಾಸಿ ಮೊಹಮ್ಮದ್ ರಾಜೀಕ್ ಬಂಧಿತ ಆರೋಪಿಗಳು. ಅಬ್ದುಲ್ ಖಾದರ್ ತನ್ಸಿಪ್ ಯಾನೆ ತಂಜಿ ಎಂಬಾತನ ವಿರುದ್ಧ…

Read More

ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ: ನೀರಿನ ಸಮಸ್ಯೆ ಖಂಡಿಸಿ ಪಂಚಾಯತ್ ಕಚೇರಿಗೆ ಮುತ್ತಿಗೆ ಯತ್ನ

ಮಂಗಳೂರು ಹೊರವಲಯದ ಎಡಪದವು ಪಂಚ್ಯಾತ್ ವ್ಯಾಪ್ತಿಯ ಕೊರ್ಡೆಲ್ , ಪದರಂಗಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಎಡಪದವು ಪಂಚ್ಯಾತ್ ಎದುರು ಪ್ರತಿಭಟನೆ ನಡೆಯಿತು. ಎಡಪದವು ಪಂಚ್ಯಾತ್ ವ್ಯಾಪ್ತಿಯ ಕೊರ್ಡೆಲ್ , ಪದರಂಗಿ ಗ್ರಾಮದಲ್ಲಿ ಕುಡಿಯುವ ನೀರು ಸಹಿತ ಇತರ ಮೂಲಭೂತ ಸೌಕರ್ಯಕ್ಕೆ ಕೊರತೆ ಇದ್ದು ಎಡಪದವು ಪಂಚ್ಯಾತ್ ಗೆ ಮನವಿ ನೀಡಿದರೂ ಸ್ಪಂದಿಸದ ಹಿನ್ನಲೆಯಲ್ಲಿ ಗ್ರಾಮಸ್ಥರುಎಡಪದವು ಪಂಚ್ಯಾತ್ ಎದುರು ಪ್ರತಿಭಟನೆಯನ್ನು ನಡೆಸಿದರು. ಅಧಿಕಾರಿಗಳ ಕೊಠಡಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭ ಪೊಲೀಸರು ಅಧಿಕಾರಿಗಳನ್ನ ಪ್ರತಿಭಟನಾ ನಿರಂತರ ಬಳಿ ಕರೆತಂದರು…

Read More

ಕಾರವಾರದಲ್ಲಿ ಹಳೆಯ ಸೇತುವೆ ಕುಸಿತ

ಕಡವಾಡ-ಸುಂಕೇರಿ ಸಂಪರ್ಕ ಸೇತುವೆ ಧರೆಗೆ; ಅದೃಷ್ಟವಶಾತ್ ಜೀವಹಾನಿ ಇಲ್ಲ ಕಾರವಾರ, ಜೂನ್ 10: ಮುಂಗಾರು ಮಳೆಯ ಆರಂಭದಲ್ಲೇ ಕಾರವಾರ ತಾಲ್ಲೂಕಿನ ಕಡವಾಡ ಪ್ರದೇಶದಲ್ಲಿರುವ ಹಳೆಯ ಸೇತುವೆಯೊಂದು ಮಂಗಳವಾರ ಏಕಾಏಕಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಅಥವಾ ಗಾಯಗಳ ಪ್ರಕರಣ ವರದಿಯಾಗಿಲ್ಲ. ಕಡವಾಡದಿಂದ ಸುಂಕೇರಿ ಮಾರ್ಗಕ್ಕೆ ಸಂಪರ್ಕ ಕಲ್ಪಿಸುತ್ತಿದ್ದ ಈ ಸೇತುವೆ ಹಲವು ದಶಕಗಳಷ್ಟು ಹಳೆಯದಾಗಿದ್ದು, ನಿರಂತರ ಮಳೆ ಹಾಗೂ ಕಾಲದ ಹೊಡೆತದಿಂದ ದುರ್ಬಲಗೊಂಡಿದ್ದ ಪರಿಣಾಮ ಕುಸಿತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸೇತುವೆಯ ಕೆಲವು ಭಾಗಗಳು ಒಡೆದು…

Read More

ಖಾತೆ ಹಂಚಿಕೆ ಅಸಮಾಧಾನ?: ದೆಹಲಿಗೆ ಕೃಷ್ಣ ಬೈರೇಗೌಡ ಭೇಟಿ ಸಾಧ್ಯತೆ

ಬೆಂಗಳೂರು, ಜೂನ್ 9: ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನ ಇನ್ನೂ ಸಂಪೂರ್ಣ ಶಮನಗೊಂಡಿಲ್ಲ ಎಂಬ ಮಾತುಗಳು ಕೇಳಿಬರುತ್ತಿರುವ ನಡುವೆಯೇ, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಖಾತೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಸುದ್ದಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಸ್ವೀಕರಿಸಲು ಕೃಷ್ಣ ಬೈರೇಗೌಡ ಅವರು ಹಿಂದೇಟು ಹಾಕಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಬಿಎಂಆರ್‌ಡಿಎ)ಗಳನ್ನು ತಮ್ಮ ಇಲಾಖೆಯ ವ್ಯಾಪ್ತಿಗೆ ತರಬೇಕೆಂದು…

Read More

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು: ಮುಸ್ತಾಕ್ ಹೆನ್ನಾಬೈಲು

ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತಿಗೆ ಸಂಪೂರ್ಣ ನಿಷೇಧಕ್ಕೆ ಆಗ್ರಹ ಉಡುಪಿ, ಜೂನ್ 9: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ವಕ್ತಾರ ಮುಸ್ತಾಕ್ ಹೆನ್ನಾಬೈಲು ಆಗ್ರಹಿಸಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಕಸಾಯಿಖಾನೆಗಳನ್ನು ಮುಚ್ಚಿ, ಗೋಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಗೋಹತ್ಯೆ ವಿಚಾರದಲ್ಲಿ ಕೇಂದ್ರ ಸರ್ಕಾರ…

Read More

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು

ಉಡುಪಿ: ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ–ಹಾಲಾಡಿ ರಸ್ತೆಯ ಅಂಡರ್‌ಪಾಸ್ ಸಮೀಪ ಸೋಮವಾರ ಸಂಜೆ ನಡೆದಿದೆ.ಮೃತರನ್ನು ಕೋಟೇಶ್ವರ ಮಾರ್ಕೋಡು ನಿವಾಸಿ ಪ್ರದೀಪ್ ಪೂಜಾರಿ (35) ಎಂದು ಗುರುತಿಸಲಾಗಿದೆ. ಅವರು ಗಾರೆ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಉಡುಪಿ ಕಡೆಯಿಂದ ಬಂದಿದ್ದ ಬೃಹತ್ ಕಂಟೇನರ್ ಲಾರಿಯೊಂದು ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಅಂಡರ್‌ಪಾಸ್ ಬಳಿ ಯು-ಟರ್ನ್ ಪಡೆಯಲು ಮುಂದಕ್ಕೆ ಸಾಗುತ್ತಿದ್ದ ವೇಳೆ, ಪೇಟೆ ಕಡೆಯಿಂದ…

Read More

ಹನಿಟ್ರ್ಯಾಪ್ ಪ್ರಕರಣದ ಸಮಗ್ರ ತನಿಖೆಗೆ ಬಿಜೆಪಿ ಯುವ ಮೋರ್ಚಾ ಆಗ್ರಹ!

ಮಂಗಳೂರು, ಮಂಗಳೂರಿನ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಹಾಗೂ ಬ್ಲ್ಯಾಕ್‌ಮೇಲ್ ಮೂಲಕ ಸುಮಾರು ₹2.77 ಕೋಟಿ ವಸೂಲಿ ಮಾಡಿದ ಆರೋಪದಲ್ಲಿ ಯುವ ಕಾಂಗ್ರೆಸ್ ಮುಖಂಡ ನಿಝಾಮ್ ಹಾಗೂ ಆತನ ಸಹಚರ ಜಿತೇಶ್ ಬಂಧನಕ್ಕೊಳಗಾಗಿರುವ ಪ್ರಕರಣವು ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ . ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಯು. ನಂದನ್ ಮಲ್ಯ, ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು…

Read More

ಆಯುಷ್ಮಾನ್ ಯೋಜನೆಯಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಬೇಡ: ಖಾಸಗಿ ಆಸ್ಪತ್ರೆಗಳಿಗೆ ಸಚಿವ ಖಾದರ್ ಎಚ್ಚರಿಕೆ

ನಿರ್ಲಕ್ಷ್ಯ ತೋರಿದ ಆರೋಗ್ಯ ಮಿತ್ರರ ವಿರುದ್ಧವೂ ಕ್ರಮದ ಎಚ್ಚರಿಕೆ ಮಂಗಳೂರು, ಜೂನ್ 8: ಆಯುಷ್ಮಾನ್ ಕರ್ನಾಟಕ ಯೋಜನೆಯಡಿ ಬಿಪಿಎಲ್ ಕಾರ್ಡ್‌ದಾರರಿಂದ ಖಾಸಗಿ ಆಸ್ಪತ್ರೆಗಳು ಯಾವುದೇ ಹೆಚ್ಚುವರಿ ಶುಲ್ಕ ವಸೂಲಿ ಮಾಡಬಾರದು. ಒಂದು ವೇಳೆ ಹೆಚ್ಚುವರಿ ಹಣ ಪಡೆಯುತ್ತಿರುವುದು ಕಂಡುಬಂದರೆ ಆರೋಗ್ಯ ಮಿತ್ರರು ತಕ್ಷಣ ಮಧ್ಯಪ್ರವೇಶಿಸಿ ಫಲಾನುಭವಿಗಳಿಗೆ ಉಚಿತ ಚಿಕಿತ್ಸೆ ದೊರಕುವಂತೆ ಕ್ರಮ ಕೈಗೊಳ್ಳಬೇಕು. ಈ ಜವಾಬ್ದಾರಿಯಲ್ಲಿ ನಿರ್ಲಕ್ಷ್ಯ ತೋರಿದ ಆರೋಗ್ಯ ಮಿತ್ರರ ವಿರುದ್ಧ ಇಲಾಖಾ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ….

Read More
error: Content is protected !!