ಸತ್ಯಸಾಯಿ ಬಾಬಾ ರ ಶತಾಬ್ದಿ ಯಂದು ಬೆಳಕು ಕನ್ನಡ ಸಂಘದ ಭಿತ್ತಿ ಪತ್ರ ಮತ್ತು ಹಸ್ತಪ್ರತಿ ಬಿಡುಗಡೆ

ಬಾಯಾರು: ಪ್ರಶಾಂತಿ ವಿದ್ಯಾ ಕೇಂದ್ರ ಬಾಯಾರಿನಲ್ಲಿ ಸತ್ಯ ಸಾಯಿ ಬಾಬಾರವರ ನೂರನೇ ಜನ್ಮ ದಿನೋತ್ಸವದಂದು ಕನ್ನಡ ಮಕ್ಕಳ ಹಸ್ತಪ್ರತಿ “ಬೆಳಕು”ಮತ್ತು ಭಿತ್ತಿ ಪತ್ರ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಗೊಂಡಿತು. “ಬೆಳಕು” ಕನ್ನಡ ಸಂಘ ದ ಭಿತ್ತಿ ಪತ್ರವನ್ನು ಅತಿಥಿ ಗಣ್ಯರ ಸಮ್ಮುಖದಲ್ಲಿ ಸತ್ಯಸಾಯಿ ಸೇವಾ ಟ್ರಸ್ಟ್ ಬಾಯಾರು ಇದರ ಉಪಾಧ್ಯಕ್ಷರಾದ ಪೆಲತಡ್ಕ ರಾಮಕೃಷ್ಣ ಭಟ್ ಇವರ ದಿವ್ಯ ಹಸ್ತದಿಂದ ಅನಾವರಣಗೊಂಡಿತು.ವಿದ್ಯಾರ್ಥಿಗಳ ಕಿರುಚಿತ್ರ ಇದೇ ಸಂಧರ್ಭದಲ್ಲಿ ಬಿಡುಗಡೆಗೊಂಡಿತು. ನಗರ ಸಂಕೀರ್ತನೆ ,ಶುಚಿತ್ವ ನಂತರ,ಸಾಯಿಪೂಜೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮ ಸಾಯಿ ಸಂದೇಶ…

Read More

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ .ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು.ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5ಲಕ್ಷ…

Read More

ತ್ರಿಮೂರ್ತಿ ಸೇವಾ ಸಮಿತಿ (ರಿ.) ಬಿಜೈ, ಆನೆಗುಂಡಿ ಇದರ ಆವರಣದಲ್ಲಿರುವ ಅಶ್ವಥ ಕಟ್ಟೆಗೆ ಮೇಲ್ಛಾವಣೆ , ಉದ್ಘಾಟನಾ ಸಮಾರಂಭ ಹಾಗೂ ಕಟ್ಟೆಯ ವಾಸ್ತು ಪೂಜೆ

ಮಂಗಳೂರು: ತ್ರಿಮೂರ್ತಿ ಸೇವಾ ಸಮಿತಿ (ರಿ.) ಬಿಜೈ, ಆನೆಗುಂಡಿ ಇದರ ಆವರಣದಲ್ಲಿರುವ ಅಶ್ವಥ ಕಟ್ಟೆಗೆ ಮೇಲ್ಛಾವಣೆ ಅಳವಡಿಸಲಾಗಿದ್ದು ಅದರ ಉದ್ಘಾಟನಾ ಸಮಾರಂಭ ಹಾಗೂ ಕಟ್ಟೆಯ ವಾಸ್ತು ಪೂಜೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭಾಗವಹಿಸಿದರು. ನಂತರ ಮಾತನಾಡಿದ ಶಾಸಕರು, ಸ್ಥಳೀಯರ ಬೇಡಿಕೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿನ ಅಶ್ವಥ ಕಟ್ಟೆಗೆ ಹಾಗೂ ಮೇಲ್ಛಾವಣಿಗೆ ಸಹಕಾರ ನೀಡಿರುವುದು ತೃಪ್ತಿ ತಂದಿದೆ. ಎಲ್ಲರಿಗೂ ಇದರಿಂದ ಉಪಯೋಗವಾದರೆ ಅದೇ ತೃಪ್ತಿ ಎಂದರು. ವಾರ್ಡ್ ಅಧ್ಯಕ್ಷ ಕೆ. ನಾರಾಯಣ ರವರು ಮಾತನಾಡಿ, ಕೆಲವು…

Read More

ಕರ್ನಾಟಕದ ಶಬರಿಮಲೆ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ ಕುರಿತು ಮುನ್ನೆಚ್ಚರಿಕೆ ವಹಿಸಲು ಸುರಕ್ಷತಾ ಮಾರ್ಗಸೂಚಿಯನ್ನು ಬಿಡುಗಡೆ

ಶಬರಿಮಲೆ : ಕರ್ನಾಟಕದ ಶಬರಿಮಲೆ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ ಕುರಿತು ಮುನ್ನೆಚ್ಚರಿಕೆ ವಹಿಸಲು ಸುರಕ್ಷತಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿನಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಶಬರಿಮಲೆ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ/ ಸುರಕ್ಷಿತಾ ಕ್ರಮಗಳನ್ನು ಪಾಲಿಸುವಂತೆ ಸಲಹೆ ನೀಡಲಾಗಿದೆ. ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು…

Read More

ದಿಲ್ಲಿ ಕಾರ್ ಸ್ಪೋಟ ಖಂಡಿಸಿ ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಪಂಜಿನ ಮೆರವಣಿಗೆ , ರಾಜಕೀಯ ನಾಯಕರ ಸಾಥ್ …. !

ಮಂಗಳೂರು : ದಿಲ್ಲಿ ಕಾರ್ ಸ್ಪೋಟ ಖಂಡಿಸಿ ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಯಿತು. ದಿಲ್ಲಿಯಲ್ಲಿ ಇತ್ತೀಚಿಗೆ ನಡೆದ ವಿಧ್ವಂಸಕ ಕೃತ್ಯ ಮತ್ತು ‘ವೋಟ್ ಚೋರಿ’ ವಿರುದ್ಧ ಬೃಹತ್ ಪಂಜಿನ ಮೆರವಣಿಗೆ ಕೃಷ್ಣಾಪುರ ಕ್ರಾಸ್ ನಿಂದ ಸುರತ್ಕಲ್ ಪೇಟೆಯವರೆಗೆ ನಡೆಯಿತು.ಬಳಿಕ ನಡೆದ ಸಭೆಯಲ್ಲಿ ಮಾತಾಡಿದ ಇನಾಯತ್ ಅಲಿ ಅವರು, “ಬಿಜೆಪಿ ದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ವಾಮಮಾರ್ಗವನ್ನು ಅನುಸರಿಸುತ್ತಿರುವುದು ಖಂಡನೀಯ. ಮತಗಳ್ಳತನ ಈಗಾಗಲೇ…

Read More

ಕರಾವಳಿಗೆ ಮೋದಿ ಭೇಟಿ ಹಿನ್ನಲೆ : ಭರದಿಂದ ಸಾಗಿದ ರಸ್ತೆ, ಹೆಲಿಪಾಡ್ ನಿರ್ಮಾಣ ಕಾರ್ಯ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರು ನ.28ರಂದು ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಸ್ವಚ್ಛತೆ ಸಹಿತ ವಿವಿಧ ಕಾಮಗಾರಿಗಳು ಚುರುಕು ಗೊಂಡಿವೆ ಮತ್ತು ಆದಿಉಡುಪಿಯಲ್ಲಿ ನಾಲ್ಕನೇ ಹೆಲಿಪ್ಯಾಡ್ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಪ್ರಧಾನಿಯವರ ಹೆಲಿಕಾಪ್ಟ‌ರ್ ಇಳಿಯಲು ಅನುಕೂಲ ಆಗುವಂತೆ ಅದಿಉಡುಪಿ ಹೆಲಿಪ್ಯಾಡ್ ಪ್ರದೇಶದಲ್ಲಿ ಹೊಸದಾಗಿ ಹೆಲಿಕಾಪ್ಟರ್‌ ಲಾಂಚರ್ ನಿರ್ಮಾಣ ಕಾಮಗಾರಿ ಈಗಾಗಲೇ ಶುರುವಾಗಿದೆ. ಹೆಲಿಪ್ಯಾಡ್ ನಿರ್ಮಾಣ ಸಂಬಂಧ ಇತ್ತೀಚಿಗೆ ನಡೆದ ಸಭೆ ಯಲ್ಲಿ ಜಿಲ್ಲಾಡಳಿತ ತೀರ್ಮಾನ ತೆಗೆದುಕೊಂಡಿತ್ತು. ಆದಿಉಡುಪಿ ಹೆಲಿಪ್ಯಾಡ್‌ನಲ್ಲಿ ಮೂರು ಹೆಲಿಕಾಪ್ಟರ್ ಲಾಂಚರ್ ಇದೆ. ಇದರ ನಿರ್ವಹಣೆ…

Read More

ಮಂಗಳೂರಿನ ಡಾ.ಟಿ.ಎಂ.ಎ. ಪೈ ಕನ್ ವೆನ್ಶನ್ ಸೆಂಟರ್ ನಲ್ಲಿ ಫಿಲಾನಮಿಸ್ಟ್ ಅಂಚೆಚೀಟಿಗಳು ಮತ್ತು ನಾಣ್ಯಗಳ ಪ್ರದರ್ಶನ

ಮಂಗಳೂರು: ದೇಶದ ಪ್ರಮುಖ ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಹಕಾರಾದ ಮಂಗಳೂರಿನ ಎಂ. ಪ್ರಶಾಂತ್ ಶೇಟ್ ಅವರಿಂದ ಫಿಲಾನಮಿಸ್ಟ್ ಅಂಚೆಚೀಟಿಗಳು ಮತ್ತು ನಾಣ್ಯಗಳ ಪ್ರದರ್ಶನ ಇಂದು ಮತ್ತು ನಾಳೆ ಮಂಗಳೂರಿನ ಡಾ.ಟಿ.ಎಂ.ಎ. ಪೈ ಕನ್ ವೆನ್ಶನ್ ಸೆಂಟರ್ ನಲ್ಲಿ ನಡೆಯುತ್ತಿದ್ದು ಇದು ಸಾರ್ವಜನಿಕರಿಗೆ ಉಚಿತ ಪ್ರವೇಶವಾಗಿದೆ . ಇತಿಹಾಸದ ಬಗ್ಗೆ ಆಸಕ್ತಿ ಉಳ್ಳವರು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ. ವಿಶೇಷತೆ ಜಗತ್ತಿನಲ್ಲೇ ಮೊದಲ ಬಾರಿಗೆ ಬಳಕೆಗೆ ಬಂದ 17 ನೇ ಶತಮಾನದ ಆಫ್ರಿಕನ್ ನಾಣ್ಯ, ಚೀನಾ, ಜಪಾನ್ ,…

Read More

ಯುವಕನ ದುರಂತ ಸಾವು ತಂದೆ-ತಾಯಿಯಂತೆಯೇ ಮಗನೂ ಆತ್ಮಹತ್ಯೆಗೆ ಶರಣು

ಪುತ್ತೂರು:ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ.ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ ಪ್ರತೀಕ್ (23) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಶೋರೂಮ್‌ ವರ್ಕ್‌ಶಾಪ್‌ ಒಂದರಲ್ಲಿ ಉದ್ಯೋಗದಲ್ಲಿದ್ದ ಪ್ರತೀಕ್, ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಗುರುವಾರ ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ನೋಡುತ್ತಾ ಕುಳಿತಿದ್ದ ಅವರು, ಏಕಾಏಕಿ ನಾಪತ್ತೆಯಾಗಿದ್ದರು. ಅನುಮಾನಗೊಂಡು ಮನೆಯವರು ಹುಡುಕಾಡಿದಾಗ, ಪ್ರತೀಕ್ ಮನೆಯ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡ…

Read More

ಪೆಟ್ರೋಲ್ ಖಾಲಿಯಾದ ಹಿನ್ನೆಲೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳವು.ಆರೋಪಿಗಳ ಬಂಧನ

ಮಂಗಳೂರು :: ಬೆಳ್ತಂಗಡಿಯ ನಿಟ್ಟಡೆ ಗ್ರಾಮದ ಪಾಣೂರು ಗುರುನಾರಾಯಣ ಸರ್ಕಲ್ ಬಳಿ ಪೆಟ್ರೋಲ್ ಖಾಲಿಯಾದ ಹಿನ್ನೆಲೆಯಲ್ಲಿ ನಿಲ್ಲಿಸಿದ್ದ ಬೈಕನ್ನು ಕಳವು ಮಾಡಿದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ವೇಣೂರು ಗ್ರಾಮದ ಕೆರೆಕೋಡಿ ನಿವಾಸಿ ಮಹಮ್ಮದ್ ಇರ್ಷಾದ್ (25) ಹಾಗೂ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ ಸಾದಿಕ್ ಖಾನ್ (26) ಬಂಧಿತರು. ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನ. 11ರಂದು ರಾತ್ರಿ ಕುಕ್ಕೇಡಿ ನಿವಾಸಿ ಸಂಪತ್ ಕುಮಾ‌ರ್ ತನ್ನ ಬೈಕಿನಲ್ಲಿ ಪೆಟ್ರೋಲ್ ಖಾಲಿಯಾದ ಕಾರಣ…

Read More

ನ.28ಕ್ಕೆ ಪ್ರಧಾನಿ ಮೋದಿ ಕೃಷ್ಣ ನಗರ ಉಡುಪಿ ಭೇಟಿ, ನಿಗದಿಯಾಗಿದ್ದ ರೋಡ್ ಶೋ ರದ್ದು!

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿಯನ್ನು ಉನ್ನತ ಮೂಲಗಳು ಖಚಿತ ಪಡಿಸಿವೆ. ಕಾರಣಾಂತರಗಳಿಂದ ಪ್ರಧಾನಿಗಳ ರೋಡ್ ಶೋ ಕಾರ್ಯಕ್ರಮ ರದ್ದುಗೊಂಡಿದೆ. ಪ್ರಧಾನಿ ಆಗಮಿಸುವ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ:ಪ್ರಧಾನಿ ಮೋದಿ ಅಂದು ಬೆಳಿಗ್ಗೆ ದೆಹಲಿಯ ಏರ್ ಪೋರ್ಟ್ ನಿಂದ ಹೊರಡಲಿದ್ದಾರೆ. ಬೆಳಿಗ್ಗೆ 11.10ಕ್ಕೆ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 11.35ಕ್ಕೆ ಉಡುಪಿಯ ಆದಿಉಡುಪಿ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬಳಿಕ ಪ್ರಧಾನಿ ಅವರು ರಸ್ತೆ…

Read More
error: Content is protected !!