ನ.28 ಬೆಳ್ಳಿ ತೆರೆಯ ಮೇಲೆ : “ಅಪರೇಷನ್ ಲಂಡನ್ ಕೆಫೆ”ರಾಜ್ಯಾದ್ಯಂತ ಭರ್ಜರಿ ಬಿಡುಗಡೆ ಸಿದ್ದ … !

ಮಂಗಳೂರು: “ಬಹು ನಿರೀಕ್ಷಿತ ಮಾಸ್ ಮತ್ತು ಆಕ್ಷನ್ ಪೋಸ್ಟರ್ಸ್, ಟೀಸರ್, ಟ್ರೈಲರ್ ಹಾಗೂ ರೈ ರೈ ರೈ ಅದ್ಭುತ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟೂ ಕುತೂಹಲ ಮೂಡಿಸಿರುವ ಅಪರೇಷನ್ ಲಂಡನ್ ಕೆಫೆ ಕನ್ನಡ ಚಿತ್ರವು ಇದೇ ನವೆಂಬ‌ರ್ 28ರಂದು ಏಕಕಾಲಕ್ಕೆ ಕನ್ನಡ ಮರಾಠಿ ಮತ್ತು ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ” ಎಂದು ನಟ ಅರ್ಜುನ್ ದೇವ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ನಿರ್ಮಾಪಕ ವಿಜಯ್ ಕುಮಾರ್ ಶೆಟ್ಟಿ ಚಿತ್ರಕ್ಕೆ ಸಾಕಷ್ಟು ಬಂಡವಾಳ ಹಾಕಿ ಸಿನಿಮಾ ಮಾಡಿದ್ದಾರೆ. ಮರಾಠಿ ಭಾಷೆ ಬಾರದೆ…

Read More

ಮಣಿಮುಂಡದಲ್ಲಿ ನೀರಸ ಮೌನಕ್ಕೆ ಜಾರಿದ ಬಿಜೆಪಿ ಹಾಗೂ ಎಡರಂಗ : ನಾಮಪತ್ರ ಸೂಕ್ಷ್ಮ ಪರಿಶೋಧನೆಗೆ ಮೊದಲೇ ಮುಸ್ಲಿಂಲೀಗ್ ಅಭ್ಯರ್ಥಿ ಅವಿರೋಧ ಆಯ್ಕೆ

ಮಂಜೇಶ್ವರ : ಸ್ಥಳೀಯಾಡಳಿತ. ಚುನಾವಣೆಯ ನಾಮಪತ್ರ ಸೂಕ್ಷ್ಮ ಪರಿಶೋಧನೆಗೆ ಮೊದಲೇ ಕಳೆದ ಸಲ ಬ್ಲಾಕ್ ಪಂಚಾಯತು ಅಧ್ಯಕ್ಷ ಪದವಿಯನ್ನು ಅಲಂಕರಿಸಿದ್ದ ಮುಸ್ಲಿಂಲೀಗ್ ಅಭ್ಯರ್ಥಿ ಮಂಗಲ್ಪಾಡಿ ಗ್ರಾ. ಪಂ. ನ ಮಣಿಮುಂಡ ವಾರ್ಡಿನಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ. ಮಂಗಲ್ಪಾಡಿ ಗ್ರಾ. ಪಂ. ನ 24ನೇ ವಾರ್ಡು ಮಣಿಮುಂಡ ದಲ್ಲಿ ಮುಸ್ಲಿಂಲೀಗ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶಮೀಮ ಟೀಚರ್ ಅವಿರೋಧವಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಗೆಲುವನ್ನು ತನ್ನದಾಗಿಸಿಕೊಂಡಿದ್ದಾರೆ.ಮೊದಲ ಬಾರಿಗೆ ಕೋಡಿಬೈಲ್ ನಿಂದ ಪಂಚಾಯತು ಸದಸ್ಯರಾಗಿ ಆಯ್ಕೆಯಾದ ಶಮೀನಾ ಟೀಚರ್ 2020 – 25…

Read More

ಉಳ್ಳಾಲ ಶ್ರೀನಿವಾಸ್ ಮಲ್ಯ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ನಡೆದ ಆಧುನಿಕ ಮಂಗಳೂರು ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ 124ನೇ ಜನ್ಮದಿನಾಚರಣೆ ಕಾರ್ಯಕ್ರಮ

ಮಂಗಳೂರು : ಮಂಗಳೂರುನಗರದ ಕದ್ರಿ ಜೋಗಿ ಮಠ ಸಮೀಪದ ಉಳ್ಳಾಲ ಶ್ರೀನಿವಾಸ ಮಲ್ಯ ಉದ್ಯಾವನದಲ್ಲಿ ಉಳ್ಳಾಲ ಶ್ರೀನಿವಾಸ್ ಮಲ್ಯ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ನಡೆದ ಆಧುನಿಕ ಮಂಗಳೂರು ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ 124ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀಯುತ ಅರ್ಜುನ್ ಭಂಡಾರ್ಕರ್ ರವರನ್ನು ಹಾಗೂ ಮಲ್ಯ ಕುಟುಂಬಸ್ಥರಾದ ಉಳ್ಳಾಲ ನರಹರಿ ಮಲ್ಯರವರನ್ನು ಗೌರವಿಸಲಾಯಿತು.ಸಮಿತಿಯ…

Read More

ನ.23ರಂದು ‘ಅಸ್ಮಿತಾ’ ಮಹಿಳೆಯರ ಕಿಕ್ ಬಾಕ್ಸಿಂಗ್ ಕ್ರೀಡಾಕೂಟ

ಮಂಗಳೂರು: ರಾಜ್ಯಮಟ್ಟದ ಖೇಲೋ ಇಂಡಿಯಾ ಮಹಿಳೆಯರ ಕಿಕ್ ಬಾಕ್ಸಿಂಗ್ ಕ್ರೀಡಾಕೂಟ ಅಸ್ಮಿತಾ’ ನ.23ರಂದು ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ದ.ಕ. ಕಿಕ್ ಬಾಕ್ಸಿಂಗ್ ಅಸೋಸಿಯೇಶನ್‌ನ ಚೇರ್‌ಮ್ಯಾನ್ ಸತ್ಯಜಿತ್ ಸುರತ್ಕಲ್ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಕ್ರೀಡಾಕೂಟವನ್ನು ಬೆಳಗ್ಗೆ 9ಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಲಿದ್ದು ಫಾದರ್ ಮುಲ್ಲ‌ರ್ ಸಂಸ್ಥೆಯ ಆಡಳಿತಾಧಿಕಾರಿ ರೆ.ಫಾ. ಮೈಕಲ್ ಸಾಂತುಮಯೋರ್ ಆಶೀರ್ವಚನ ನೀಡಲಿದ್ದಾರೆ ಎಂದರು . ದ.ಕ. ಜಿಲ್ಲೆಯ 150 ಮಂದಿ…

Read More

ನ.26ರಂದು ಕದ್ರಿ ಯುದ್ಧ ಸ್ಮಾರಕದಲ್ಲಿ ಅಸುವು ರಾಷ್ಟ್ರ ಸಮರ್ಪಿತ ಕಾರ್ಯಕ್ರಮ

ಮಂಗಳೂರು: ಮುಂಬೈ ನಗರದ ಮೇಲೆ 2008ರ ನ.26ರಂದು ನಡೆದ ಭಯೋತ್ಪಾದನಾ ದಾಳಿಯ ಸಂದರ್ಭ ಉಗ್ರರ ವಿರುದ್ಧ ವೀರಾವೇಶದಿಂದ ಹೋರಾಡಿ ನಾಗರಿಕರನ್ನು ರಕ್ಷಿಸಿದ ವೀರ ಯೋಧರನ್ನು ಸ್ಮರಿಸಿ ನುಡಿನಮನ ಸಲ್ಲಿಸುವ ಸಲುವಾಗಿ ಮಂಗಳೂರಿನ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ವತಿಯಿಂದ ಅಸುವು ರಾಷ್ಟ್ರ ಸಮರ್ಪಿತ ಕಾರ್ಯಕ್ರಮ ನ.26ರಂದು ಸಂಜೆ 4ಕ್ಕೆ ಕದ್ರಿ ಯುದ್ಧ ಸ್ಮಾರಕದಲ್ಲಿ ನಡೆಯಲಿದೆ ಎಂದು ವೇದಿಕೆಯ ಸ್ಥಾಪಕ ಫ್ರ್ಯಾಂಕ್ಲಿನ್ ಮೊಂತೆರೋ ತಿಳಿಸಿದರು. ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಸೈಂಟ್ ಅಲೋಶಿಯಸ್…

Read More

ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ದಂಪತಿಗಳಿಗೆ “ಕನ್ನಡ ರಾಜ್ಯೋತ್ಸವ ಸಾಧಕ ದಂಪತಿ ಪ್ರಶಸ್ತಿ 2025.

ಕಾಸರಗೋಡು :ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಾಯ -ಕನ್ನಡ ಭವನ “ಉಚಿತ ವಸತಿ ಸೌಕರ್ಯ “ರಜತ ಸಂಭ್ರಮ ವಿಶೇಷ ಕರ್ನಾಟಕದ ಜಿಲ್ಲೆಗಳಲ್ಲಿ ಘಟಕ ಸ್ಥಾಪನೆಯೊಂದಿಗೆ ಕನ್ನಡ ಪರ ಚಟುವಟಿಕೆಗಳಲ್ಲಿ ಸದಾ ನಿರತರಾಗಿರುವ ದಂಪತಿಗಳಿಗೆ ರೋ. ಬಿ. ಶಿವಕುಮಾರ್ ಸಾರತ್ಯದ “ಸ್ವರ್ಣಭೂಮಿ ಫೌಂಡೇಶನ್, ಕೋಲಾರ -ಕರ್ನಾಟಕ ಕನ್ನಡ ರಾಜ್ಯೋತ್ಸವ ಸಾಧಕ ಕನ್ನಡ ದಂಪತಿ ಪ್ರಶಸ್ತಿ ನೀಡಿ ಗೌರವಿಸಿತು. ಕಾಸರಗೋಡು ಕನ್ನಡ ಭವನದಲ್ಲಿ 15.11.2025.ರಂದು ಒಂದಿಡೀ ದಿನ ನಡೆದ “ಕೋಲಾರ…

Read More

ದ.ಕ. ಜಿಲ್ಲಾ ಕಾರ್ಯನಿರತ ಪತ್ರರ್ಕರಸಂಘದ ನೂತನ ಸಮಿತಿ ಪದಗ್ರಹಣ

ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 202528ನೆ ಸಾಲಿನ ನೂತನ ಸಮಿತಿಯ ಪದ್ರಹಣ ಸಮಾರಭ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆಯಿತು.ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಅವರು ನೂತನ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಕೋಶಾಧಿಕಾರಿ ವಿಜಯ್ ಕೋಟ್ಯಾನ್ ಸೇರಿದಂತೆ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಿದರು. ಸಂಘದ ಪೂರ್ವಾ‘ಕ್ಷ ಆನಂದ ಶೆಟ್ಟಿ ಕೆ., ಜಗನ್ನಾಥ ಶೆಟ್ಟಿ ಬಾಳ, ಹರ್ಷ ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳು…

Read More

ರಾಜ್ಯ ಬಜೆಟ್ ನಲ್ಲಿ ಕಂಬಳಕ್ಕೆ 5 ಕೋಟಿ ಅನುದಾನ ಬಿಡುಗಡೆ ಮಾಡಬೇಕು:ಕಂಬಳ ಅಸೋಸಿಶಿಯನ್ ಅಧ್ಯಕ್ಷರಾದ ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ

ಮಂಗಳೂರು: ಕರಾವಳಿ ಕರ್ನಾಟಕದ ಕಂಬಳ ಕ್ರೀಡೆಯು ಅಂತರಾಷ್ಟ್ರೀಯ ಮನ್ನಣೆ ಪಡೆದಿರುವ ಸಾಹಸ ಕ್ರೀಡೆ. ಕರ್ನಾಟಕ ಸರಕಾರ ಕ್ರೀಡಾ ಪ್ರಾಧಿಕಾರದಡಿ ಮಾನ್ಯತೆ ನೀಡಿ ರಾಜ್ಯ ಕಂಬಳ ಅಸೋಸಿಯೇಶನ್ (ರಿ.) ಅಸ್ಥಿತ್ವಕ್ಕೆ ಬಂದಿರುವುದರಿಂದ ಕಂಬಳದ ಗೌರವ ಹೆಚ್ಚಿದೆ. ಇದಕ್ಕಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮತ್ತು ನಮ್ಮ ಉಭಯ ಜಿಲ್ಲೆಯ ಜನಪ್ರತಿನಿಧಿಗಳಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ರಾಜ್ಯ ಕಂಬಳ ಅಸೋಸಿಶಿಯನ್ ಇದರ ಅಧ್ಯಕ್ಷರಾದ ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ ಹೇಳಿದರು. ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ…

Read More

ದೈಗೋಳಿ ಆಶ್ರಮದಲ್ಲಿ ದೀರ್ಘಕಾಲೀನ ರೋಗ ಪೀಡಿತರ ಆರೈಕೆ ಸೌಲಭ್ಯ ಹಿರಿಯ ನಾಗರಿಕರಿಗೆ ನವಚೇತನ ಕೇರ್ ಸೆಂಟರ್ ಸಾಥ್

ಮಂಗಳೂರು: ನವಚೇತನ ಕೇರ್ ಸೆಂಟರ್, ನರ ಸಂಬಂಧಿತ, ಮಾನಸಿಕ ಕಾಯಿಲೆ, ಕ್ಯಾನ್ಸ‌ರ್ ನಂತಹ ದೀರ್ಘಕಾಲೀನ ಆರೋಗ್ಯ ಸಮಸ್ಯೆಗಳಿಗೆ ಮನೆಯ ಹೊರಗೆ ಕಡಿಮೆ ವೆಚ್ಚದ ಆರೈಕೆ ವ್ಯವಸ್ಥೆಯ ಕುರಿತಂತೆ ಜಾಗೃತಿ ನಡೆಸುತ್ತಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ದೈಗೋಳಿಯಲ್ಲಿರುವ ಶ್ರೀ ಸಾಯಿ ನಿಕೇತನ ಆಶ್ರಮದಲ್ಲಿ 18 ಹಾಸಿಗೆ ಸಾಮರ್ಥ್ಯದ ಸೌಲಭ್ಯವೊಂದನ್ನು ಸ್ಥಾಪಿಸಲಾಗಿದ್ದು, ಇದರ ಉದ್ಘಾಟನೆಯು ನವೆಂಬರ್ 23, 2025ರ ಭಾನುವಾರ ಅಪರಾಹ್ನ 2ಗಂಟೆಗೆ ನಡೆಯಲಿದೆ ಎಂದು ಭಟ್ ಬಯೋಟೆಕ್, ಬೆಂಗಳೂರು ಇದರ ಚೇರ್‌ಮನ್ ಡಾ.ಶಾಮ್ ಭಟ್ ತಿಳಿಸಿದರು ….

Read More

ರಾಜ್ಯ ಕಾಂಗ್ರೇಸ್ ಸರಕಾರದ ವಿರುದ್ಧ ಗುಡುಗಿದ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ

ಮಂಗಳೂರು: ಪ್ರಸ್ತುತ ರಾಜ್ಯ ಸರ್ಕಾರವು ರಾಜಕೀಯ ಇಚ್ಛಾಶಕ್ತಿಯಿಲ್ಲದೆ ಆಡಳಿತ ನಡೆಸುತ್ತಿದ್ದು, ಅದರ ದುರಾಡಳಿತವು ಜನರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಆರೋಪಿಸಿದರು. ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಎಚ್‌ಡಿ ದೇವೇಗೌಡ ಮತ್ತು ಎಚ್‌ಡಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾಗ ಆಡಳಿತದ ದೃಷ್ಟಿಕೋನವನ್ನೇ ಬದಲಾಯಿಸುವತ್ತ ಹೆಜ್ಜೆ ಹಾಕಿದ್ದರು. ನಿರ್ದಿಷ್ಟವಾಗಿ ಹೇಳುವುದಾದರೆ, ತಮ್ಮ ಅಧಿಕಾರಾವಧಿಯಲ್ಲಿ, ಎಚ್‌ಡಿ ಕುಮಾರಸ್ವಾಮಿ ಅವರು ‘ಗ್ರಾಮ ದರ್ಶನ’ (ಗ್ರಾಮ ದರ್ಶನ) ಮತ್ತು ‘ಜನತಾ ದರ್ಶನ’ (ಸಾರ್ವಜನಿಕ ಸಂವಹನ) ದಂತಹ ಕಾರ್ಯಕ್ರಮಗಳ…

Read More
error: Content is protected !!