ಮಂಗಳೂರಿನಲ್ಲಿ ಏಪ್ರಿಲ್ 9ರಂದು “ಶ್ರೀರಾಮ್ ಸಾರಥಿ ಸಂಗಮ” — ಸಾರಿಗೆ ಕ್ಷೇತ್ರದ ಕಾರ್ಮಿಕರು, ಮಾಲಕರಿಗೆ ವಿಶೇಷ ಕಾರ್ಯಕ್ರಮ

ಮಂಗಳೂರು: ಸಾರಿಗೆ ಕ್ಷೇತ್ರದ ಕಾರ್ಮಿಕರು ಮತ್ತು ಮಾಲೀಕರಿಗಾಗಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ಏಪ್ರಿಲ್ 9 ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ “ಶ್ರೀರಾಮ್ ಸಾರಥಿ ಸಂಗಮ” ಎಂಬ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಮಂಗಳೂರು ವಲಯದ ಅಧ್ಯಕ್ಷ ಶರಶ್ಚಂದ್ರ ಭಟ್ ಕಾಕುಂಜೆ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮದಲ್ಲಿ ಪ್ರಮುಖ ಬ್ಯಾಂಡ್ ಗಳ ಹೊಸ ವಾಹನಗಳು ಮತ್ತು ಯಂತ್ರಗಳ ಪ್ರದರ್ಶನ ನಡೆಯಲಿದ್ದು, ಅಂದು ಬುಕ್ಕಿಂಗ್ ಮಾಡುವ ವಾಹನಗಳ ಮೇಲೆ ವಿಶೇಷ…

Read More

ಎಂಸಿಸಿ ಬ್ಯಾಂಕ್ ಬೆಳವಣಿಗೆಯ ಹಾದಿಯಲ್ಲಿ: ₹13 ಕೋಟಿ ಲಾಭ, 25 ಶಾಖೆಗಳ ಗುರಿ ಘೋಷಣೆ

ಮಂಗಳೂರು: ಎಂಸಿಸಿ ಬ್ಯಾಂಕ್ 2025-26 ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭವನ್ನು ಗಳಿಸಿದೆ , ನಿವ್ವಳ ಎನ್‌ಪಿಎ ಇಳಿಕೆಗೆ ನಿರಂತರ ಪ್ರಯತ್ನ ನಡೆಸಿ, ಅದನ್ನು ಒಟ್ಟು ಮುಂಗಡಗಳ 1.25% ಮಟ್ಟಕ್ಕೆ ತಗ್ಗಿಸಲು ಯಶಸ್ವಿಯಾಗಿದೆ. ಒಟ್ಟು ವ್ಯವಹಾರ ರೂ.1525 ಕೋಟಿಗೆ ತಲುಪಿದ್ದು, 23% ವೃದ್ಧಿ ಸಾಧಿಸಿದೆ ಎಂದು ಎಂಸಿಸಿ ಬ್ಯಾಂಕ್ ಇದರ ಅಧ್ಯಕ್ಷರಾದ ಅನಿಲ್ ಲೋಬೊ ತಿಳಿಸಿದರು . ಅವರು ಬ್ಯಾಂಕ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈ ಬಾರಿ ಮಂಗಳೂರಿನ ದೇರಳಕಟ್ಟೆಯಲ್ಲಿ 22ನೇ ಶಾಖೆ…

Read More

ಪೆರ್ಲ ಪೇಟೆಯಲ್ಲಿ ಬಿಜೆಪಿ ಭರ್ಜರಿ ರೋಡ್ ಶೋ: ಕೆ. ಸುರೇಂದ್ರನ್ ಪರ ಅಣ್ಣಾಮಲೈ ಪ್ರಚಾರ

ಪೆರ್ಲ (ಮಂಜೇಶ್ವರ):ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಬಹಿರಂಗ ಪ್ರಚಾರದ ಅಂತಿಮ ದಿನದ ಅಂಗವಾಗಿ ಇಂದು ಬೆಳಿಗ್ಗೆ 10 ಗಂಟೆಗೆ ಪೆರ್ಲ ಪೇಟೆಯಲ್ಲಿ ಭರ್ಜರಿ ರೋಡ್ ಶೋ ನಡೆಯಿತು. ಶ್ರೀಮಾತಾ ಆರ್ಕೇಡ್ ಚೆಕ್ ಪೋಸ್ಟ್ ಪ್ರದೇಶದಿಂದ ಆರಂಭವಾದ ಮೆರವಣಿಗೆ ಪೆರ್ಲದ ಪ್ರಮುಖ ರಾಜ ರಸ್ತೆಗಳಲ್ಲಿ ಸಂಚರಿಸಿ ಗಮನ ಸೆಳೆಯಿತು. ಈ ರೋಡ್ ಶೋಗೆ ಮುಖ್ಯ ಅತಿಥಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಣ್ಣಾಮಲೈ, ಬಿಜೆಪಿ ಅಭ್ಯರ್ಥಿ…

Read More

ಮಂಗಲ್ಪಾಡಿಯಲ್ಲಿ ಅಂಬೇಡ್ಕರ್ ಜಯಂತಿ ಹಾಗೂ ವಾರ್ಷಿಕೋತ್ಸವ: ಪೂರ್ವಭಾವಿ ಸ್ಪರ್ಧೆಗಳು ಆಯೋಜನೆ

ಮಂಜೇಶ್ವರ (ಮಂಗಲ್ಪಾಡಿ):ಡಾ. ಬಿ.ಆರ್ ಅಂಬೇಡ್ಕರ್ ಗ್ರಾಮ ವಿಕಸನ ಮತ್ತು ಕಲಾವೇದಿಕೆ, ಮಂಗಲ್ಪಾಡಿ ವತಿಯಿಂದ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ 137ನೇ ಜನ್ಮದಿನ ಹಾಗೂ ಕಲಾವೇದಿಕೆಯ 29ನೇ ವಾರ್ಷಿಕೋತ್ಸವವನ್ನು ಏಪ್ರಿಲ್ 11, 2026ರಂದು ಶನಿವಾರ ರಾತ್ರಿ 8 ಗಂಟೆಗೆ ವೈಭವದಿಂದ ಆಚರಿಸಲು ತೀರ್ಮಾನಿಸಲಾಗಿದೆ. ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಏಪ್ರಿಲ್ 5, 2026ರಂದು ಭಾನುವಾರ ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ಆಯೋಜಿಸಲಾಯಿತು. ಈ ಸ್ಪರ್ಧೆಗಳಲ್ಲಿ ಸ್ಥಳೀಯರು ಉತ್ಸಾಹದಿಂದ ಭಾಗವಹಿಸಿ ಕ್ರೀಡಾತ್ಮಕ ಮನೋಭಾವವನ್ನು ತೋರಿಸಿದರು….

Read More

ಕಾಸರಗೋಡು ಮಂಜೇಶ್ವರ ಸೇರಿದಂತೆ ಐದು ವಿಧಾನ ಸಭಾ ಕ್ಷೇತ್ರ ಸಮೀಕ್ಷೆ: ಗಡಿ ಜಿಲ್ಲೆಯಲ್ಲಿ ಹಳೆ ಆಟ, ಹಳೆ ಲೆಕ್ಕಾಚಾರ? ಐದು ಚಾನೆಲ್‌ಗಳ ಭವಿಷ್ಯ ಹೀಗಿದೆ.

​ ಮಂಜೇಶ್ವರ: ಕೇರಳ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿರುವಂತೆಯೇ ಹೊರಬಿದ್ದಿರುವ ಮಲಯಾಳಂನ ಪ್ರಮುಖ ಐದು ಸುದ್ದಿವಾಹಿನಿಗಳ ಸಮೀಕ್ಷಾ ವರದಿಗಳು ಜಿಲ್ಲೆಯಲ್ಲಿ ಹಳೆ ಫಲಿತಾಂಶವೇ ಮರುಕಳಿಸುವ ಮುನ್ಸೂಚನೆ ನೀಡಿವೆ. ಏಶ್ಯಾನೆಟ್, ಮನೋರಮಾ, ಮಾತೃಭೂಮಿ, ಬಿಗ್ ಟಿವಿ ಮತ್ತು ರಿಪೋರ್ಟರ್ ಚಾನೆಲ್‌ಗಳ ಸಮೀಕ್ಷೆಯ ಪ್ರಕಾರ, ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ಎಡರಂಗ 3 ಮತ್ತು ಯುಡಿಎಫ್ 2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿವೆ. ​ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಬದಲಾಗದ ಹವಾ!​ಎಲ್ಲರ ಕಣ್ಣು ನೆಟ್ಟಿರುವ ಮಂಜೇಶ್ವರ ಮತ್ತು ಕಾಸರಗೋಡು ಕ್ಷೇತ್ರಗಳಲ್ಲಿ ಈ ಬಾರಿಯೂ ಯಾವುದೇ…

Read More

ಲೀಗ್ ನಾಯಕರ ವಿರುದ್ಧ ಅಸಮಾಧಾನ: ಮಂಜೇಶ್ವರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಬ್ದುಲ್ಲ ಮಾಸ್ಟರ್ ಕಣಕ್ಕೆ

ಕುಂಬಳೆ (ಕಾಸರಗೋಡು):ಮುಸ್ಲಿಂ ಲೀಗ್ ನಾಯಕರು ನೀಡಿದ ಭರವಸೆಗಳನ್ನು ಈಡೇರಿಸಲಿಲ್ಲವೆಂದು ಆರೋಪಿಸಿ, ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅಬ್ದುಲ್ಲ ಮಾಸ್ಟರ್ ಕಣ್ಣೂರು ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಅಲ್ಪ ಮತಾಂತರದಲ್ಲಿ ಜಯಗಳಿಸಿದ್ದ ಮುಸ್ಲಿಂ ಲೀಗ್ ಪಕ್ಷವನ್ನು ಮತ್ತೆ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸುತ್ತಿರುವ ಸಂದರ್ಭದಲ್ಲೇ, ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ ಅಬ್ದುಲ್ಲ ಮಾಸ್ಟರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸುಮಾರು 14 ವರ್ಷಗಳ ಹಿಂದೆ ತನ್ನ ಪುತ್ರ ಮೊಹಮ್ಮದ್ ಇರ್ಷಾದ್ ಮೂಲಕ, ಲೀಗ್…

Read More

ಗಡಿನಾಡ ಕನ್ನಡ ಸೇವೆಗೆ ಡಾ. ವಾಮನ್ ರಾವ್ ಬೇಕಲ್‌ಗೆ ‘ಹೊಯ್ಸಳ ಪ್ರಶಸ್ತಿ–2025’ ಗೌರವ

ಕಾಸರಗೋಡು/ಮೈಸೂರು:ಗಡಿನಾಡ ಕಾಸರಗೋಡಿನಲ್ಲಿ ಕನ್ನಡ ಸೇವೆಗಾಗಿ ನಿರಂತರವಾಗಿ ದುಡಿಯುತ್ತಿರುವ ಕನ್ನಡ ಭವನದ ರೂವಾರಿ ಡಾ. ವಾಮನ್ ರಾವ್ ಬೇಕಲ್ ಅವರಿಗೆ ಪ್ರತಿಷ್ಠಿತ “ಹೊಯ್ಸಳ ಪ್ರಶಸ್ತಿ–2025” ಪ್ರದಾನ ಮಾಡಲಾಗಿದೆ. ಮೈಸೂರಿನ ಹೊಯ್ಸಳ ಕನ್ನಡ ಸಂಘ ಹಾಗೂ ಸವಿಗನ್ನಡ ಪತ್ರಿಕಾ ಬಳಗದ ವತಿಯಿಂದ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಏಪ್ರಿಲ್ 5, 2026ರಂದು ನಡೆದ 26ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು. ಕಾರ್ಯಕ್ರಮವನ್ನು ಪದ್ಮಶ್ರೀ ಪುರಸ್ಕೃತ ಪುಸ್ತಕಪ್ರೇಮಿ ಅಂಕೆಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ…

Read More

ಚಂದ್ರಗಿರಿ ಕೊಪ್ಪಲು ಶ್ರೀ ಮಹಾಮ್ಮಾಯಿ ಅಮ್ಮನವರ ದೇವಳದಲ್ಲಿ 55ನೇ ಪ್ರತಿಷ್ಠಾ ಮಹೋತ್ಸವ ವೈಭವ

ಕಾಸರಗೋಡು:ಜಿಲ್ಲೆಯ ಐತಿಹಾಸಿಕ ಚಂದ್ರಗಿರಿ ಕೋಟೆ ಪರಿಸರದಲ್ಲಿರುವ ಚಂದ್ರಗಿರಿ ಕೊಪ್ಪಲು ಶ್ರೀ ಮಹಾಮ್ಮಾಯಿ ಅಮ್ಮನವರ ದೇವಳದ 55ನೇ ಪ್ರತಿಷ್ಠಾ ಮಹೋತ್ಸವವು ಭಕ್ತಿಭಾವದಿಂದ ಹಾಗೂ ವೈಭವದಿಂದ ಜರಗಿತು. ಬ್ರಹ್ಮಶ್ರೀ ಅರವತ್ ಪದ್ಮನಾಭ ತಂತ್ರಿಗಳ ಉಪಸ್ಥಿತಿಯಲ್ಲಿ, ಕೀಕಾಂಗೋಡು ಪನ್ನಿಪಳ್ಳಿ ಬ್ರಹ್ಮಶ್ರೀ ಶ್ರೀಧರ ಕಾಯರ್ ತ್ತಾಯರ ನೇತೃತ್ವದಲ್ಲಿ, ಚಂದ್ರಗಿರಿ ಅವಿನಾಶ್ ಭಟ್ ಅವರ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳು ನೆರವೇರಿದವು. ಏಪ್ರಿಲ್ 3ರಿಂದ 5ರವರೆಗೆ ನಡೆದ ಈ ಮಹೋತ್ಸವದ ಅಂಗವಾಗಿ ಕುಲಪುರೋಹಿತರಾದ ನಾಗೇಶ್ ಭಟ್ ತಲ್ಲಾಣಿ ಅವರ ಪೌರೋಹಿತ್ಯದಲ್ಲಿ ಸಾಮೂಹಿಕ ಉಚಿತ ಬ್ರಹ್ಮೋಪದೇಶ, ಹರಿಸೇವೆ ಹಾಗೂ…

Read More

ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ: ಉಪಚುನಾವಣೆಯಲ್ಲಿ ಸೋಲಿಸಲು ಕರೆ – ಮಂಜುನಾಥ್ ಭಂಡಾರಿ

ಬಾಗಲಕೋಟೆ/ದಾವಣಗೆರೆ:ರಾಜ್ಯದಲ್ಲಿ ನಡೆಯಲಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವಂತೆ ಕರೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್‌ಪಿಜಿ ಗ್ಯಾಸ್ ಕೊರತೆಯಿಂದ ಹೋಟೆಲ್‌ಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಆಟೋ ಚಾಲಕರಿಗೂ ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅವರು ಆರೋಪಿಸಿದರು. “ಬಿಜೆಪಿ ಕಾರ್ಯಕರ್ತರೂ ಸಹ ಈ ಬೆಲೆ ಏರಿಕೆಯಿಂದ…

Read More

ಉರ್ವಮಾರ್ಕೆಟ್ ಉಪಕೇಂದ್ರದಲ್ಲಿ ನಿರ್ವಹಣೆ: ಇಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಮಂಗಳೂರು:ನಗರದ 33/11 ಕೆವಿ ಉರ್ವಮಾರ್ಕೆಟ್ ಜಿಐಎಸ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಇಂದು (07.04.2026) ಬೆಳಿಗ್ಗೆ 10.00 ರಿಂದ ಸಂಜೆ 5.30ರವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ. ಡೊಮಿನಿಕ್ ಚರ್ಚ್ ಮತ್ತು ಹೊಯಿಗೆಬೈಲ್ ಫೀಡರ್ ವ್ಯಾಪ್ತಿಯಲ್ಲಿ:ಲೈನ್ ನಿರ್ವಹಣೆ, ಟ್ರೀ ಕಟಿಂಗ್ ಹಾಗೂ ತುರ್ತು ಕಾಮಗಾರಿಗಳ ಕಾರಣ ಗೋಕುಲ್ ಹಾಲ್, ಅಶೋಕನಗರ, ಆಂಟೋನಿ ಕಾಲೋನಿ, ಗೋಲ್ಡನ್ ಎಂಪಾಯರ್ ರೋಡ್, ಕುಕ್ಕಾಡಿ, ಬಾಪೂಜಿನಗರ, ಸುಂಕದಕಟ್ಟೆ, ರಘು ಬಿಲ್ಡಿಂಗ್, ಕೋಡಿಕಲ್ ಕಟ್ಟೆ, ಶಾಂತಿ ಲೇನ್, ಎಸ್.ಎನ್.ಡಿ.ಪಿ, ಕಂಚಿಗಾರ ಗುತ್ತು, ನಾಗಬ್ರಹ್ಮ…

Read More
error: Content is protected !!