ಹನಿಟ್ರ್ಯಾಪ್‌ ಜಾಲ ಬಯಲು: ಉದ್ಯಮಿಯಿಂದ ₹2.77 ಕೋಟಿ ವಸೂಲಿ ಆರೋಪ

ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ; ಆತ್ಮಹತ್ಯೆ ನಾಟಕವಾಡಿ ಹಣ ದೋಚಿದ ಆರೋಪ ಮಂಗಳೂರು, ಜೂನ್ 9: ಮಂಗಳೂರಿನ ಖ್ಯಾತ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್‌ಗೆ ಒಳಪಡಿಸಿ, ಅಶ್ಲೀಲ ವಿಡಿಯೊಗಳು ಮತ್ತು ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿ ₹2.77 ಕೋಟಿ ಹಣ ವಸೂಲಿ ಮಾಡಿದ ಆರೋಪದಡಿ ಉರ್ವಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಹಾಗೂ ಆತನ ಸ್ನೇಹಿತ ಜಿತೇಶ್ ಎಂದು ಗುರುತಿಸಲಾಗಿದೆ. 2024ರಿಂದ 2026ರ ಅವಧಿಯಲ್ಲಿ ವಿವಿಧ…

Read More

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ನಿಝಾಮ್ ಉಚ್ಚಾಟನೆ

ಮಂಗಳೂರು,: ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ನಿಝಾಮ್ ಅವರನ್ನು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಉಚ್ಚಾಟನೆ ಮಾಡಲಾಗಿದೆದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ನಿಝಾಮ್ ಅವರ ವಿರುದ್ಧ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪಗಳು ಕೇಳಿಬಂದಿರುವುದು ಪಕ್ಷದ ಶಿಸ್ತು ಹಾಗೂ ಗೌರವಕ್ಕೆ ಧಕ್ಕೆ ಉಂಟುಮಾಡಿರುವುದು ಗಮನಕ್ಕೆ ಬಂದಿದೆ ಎಂದು ಹೇಳಲಾಗಿದೆ….

Read More

ಕಾಸರಗೋಡು ಕನ್ನಡ ಗ್ರಾಮದಲ್ಲಿ 8ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ-2026

ನವೆಂಬರ್ 7 ಮತ್ತು 8ರಂದು ಕೇರಳ-ಕರ್ನಾಟಕ ಉತ್ಸವ, ಕನ್ನಡ ರಾಜ್ಯೋತ್ಸವ ಸಂಭ್ರಮ ಕಾಸರಗೋಡು, ಜೂನ್ 9: ಕೇರಳ ರಾಜ್ಯದ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು ಇದರ ನೇತೃತ್ವದಲ್ಲಿ 2026ರ ನವೆಂಬರ್ 7 ಮತ್ತು 8ರಂದು ಕಾಸರಗೋಡಿನ ಮೀಪುಗುರಿ-ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ಐತಿಹಾಸಿಕ 8ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ-2026, ಕೇರಳ-ಕರ್ನಾಟಕ ಉತ್ಸವ ಹಾಗೂ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವವನ್ನು ಆಯೋಜಿಸಲಾಗಿದೆ. ಕಳೆದ 36 ವರ್ಷಗಳಿಂದ…

Read More

ಪುಂಜಾಲಕಟ್ಟೆ : ಮನೆಗೆ ನುಗ್ಗಿ ನಗ – ನಗದು ಕಳವು ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ

ಪುಂಜಾಲಕಟ್ಟೆ : ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರಾಜ್ಯ ಕಳ್ಳರನ್ನು ಪೊಲೀಸರು ಬಂದಿಸಿದ್ದಾರೆ. ಕೇರಳ ನಿವಾಸಿ ಹಮೀದ್ @ ಅಬ್ದುಲ್ ಹಮೀದ್ ಕೆ @ ಅಮ್ಮಿ (36) ಮತ್ತು ಮೊಗ್ರಾಲ್ ಪುತ್ತೂರು ಕಾಸರಗೋಡು ನಿವಾಸಿ ಅಬ್ದುಲ್ ಜಾಬೀರ್ @ ಜಾಬಿ (38) ಬಂಧಿತರು. ಬಂಧಿತರಿಂದ ಪುಂಜಾಲಕಟ್ಟೆ ಪೊಲೀಸ್‌ ಠಾಣಾ ಪ್ರಕರಣಕ್ಕೆ ಸಂಬಂಧಪಟ್ಟ ಸುಮಾರು 68.690 ಗ್ರಾಂ ಚಿನ್ನಾಭರಣ ಹಾಗೂ 2,00,000 ರೂ ನಗದು ಹಾಗೂ ಉಪ್ಪಿನಂಗಡಿ ಪೊಲೀಸ್‌ ಠಾಣಾ…

Read More

ಉಜ್ಜ್ವಲ ಯೋಜನೆ ಫಲಾನುಭವಿಗಳಿಗೆ ಸಬ್ಸಿಡಿ ಕಡಿತ

ಇನ್ನು ವರ್ಷಕ್ಕೆ ಕೇವಲ 4 ಎಲ್‌ಪಿಜಿ ಸಿಲಿಂಡರ್‌ಗಳಿಗೆ ಮಾತ್ರ ಸಹಾಯಧನ ನವದೆಹಲಿ, ಜೂನ್ 9: ಗೃಹಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಇತ್ತೀಚೆಗೆ ₹29 ಹೆಚ್ಚಿಸಿರುವ ಕೇಂದ್ರ ಸರ್ಕಾರ, ಇದೀಗ ಪ್ರಧಾನ ಮಂತ್ರಿ ಉಜ್ಜ್ವಲ ಯೋಜನೆ (ಪಿಎಂಯುವೈ) ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ಸಬ್ಸಿಡಿ ಸಿಲಿಂಡರ್‌ಗಳ ಸಂಖ್ಯೆಯನ್ನು ಮತ್ತಷ್ಟು ಕಡಿತಗೊಳಿಸಿದೆ. ಯೋಜನೆ ಆರಂಭವಾದಾಗ ಫಲಾನುಭವಿಗಳಿಗೆ ವರ್ಷಕ್ಕೆ 12 ಸಬ್ಸಿಡಿ ಸಿಲಿಂಡರ್‌ಗಳ ಸೌಲಭ್ಯ ನೀಡಲಾಗುತ್ತಿತ್ತು. ಬಳಿಕ ಈ ಸಂಖ್ಯೆಯನ್ನು 9ಕ್ಕೆ ಇಳಿಸಲಾಗಿತ್ತು. ಇದೀಗ ಹೊಸ ನಿಯಮದ ಪ್ರಕಾರ ವರ್ಷಕ್ಕೆ ಕೇವಲ…

Read More

ಮೂರ್ಜೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಎಲ್‌ಕೆಜಿ-ಯುಕೆಜಿ ಕೊಠಡಿ ಹಾಗೂ ಶೌಚಾಲಯ ಉದ್ಘಾಟನೆ

ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಸಾಮಗ್ರಿ ವಿತರಣೆ; ಶಾಲೆ ಅಭಿವೃದ್ಧಿಗೆ ಸಮುದಾಯದ ಸಹಕಾರ ಅಗತ್ಯ: ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ, ಜೂನ್ 9: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಮೂರ್ಜೆಯಲ್ಲಿ ನೂತನವಾಗಿ ನಿರ್ಮಿಸಲಾದ ಎಲ್‌ಕೆಜಿ, ಯುಕೆಜಿ ಸ್ಮಾರ್ಟ್ ಕ್ಲಾಸ್ ಕೊಠಡಿ ಹಾಗೂ ಶೌಚಾಲಯದ ಉದ್ಘಾಟನಾ ಸಮಾರಂಭ ಮತ್ತು ಯುವಸ್ಪಂದನ ವಾಮದಪದವು ವಲಯದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬರಹ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮ ಸೋಮವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಂಟ್ವಾಳ…

Read More

ಅನಂತಪುರ ಉದ್ದಿಮೆ ಪಾರ್ಕ್ ದುರ್ನಾತ ವಿರೋಧಿಸಿ ಬೃಹತ್ ಪ್ರತಿಭಟನೆ

ಮಾಲಿನ್ಯಕ್ಕೆ ಶಾಶ್ವತ ಪರಿಹಾರ, ಆರೋಗ್ಯಕ್ಕೆ ಹಾನಿಕಾರಕ ಕೈಗಾರಿಕೆಗಳ ಮುಚ್ಚುವಂತೆ ಆಗ್ರಹ ಕುಂಬಳೆ: ಅನಂತಪುರ ಉದ್ದಿಮೆ ಪಾರ್ಕ್‌ನ ಕಾರ್ಖಾನೆಗಳಿಂದ ಹೊರಸೂಸುತ್ತಿರುವ ತೀವ್ರ ದುರ್ನಾತಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಸ್ಥಳೀಯರ ಆರೋಗ್ಯಕ್ಕೆ ಮಾರಕವಾಗಿರುವ ಕೈಗಾರಿಕೆಗಳನ್ನು ಮುಚ್ಚಬೇಕು ಎಂದು ಆಗ್ರಹಿಸಿ ಸೋಮವಾರ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮಾರ್ಚ್ ನಡೆಯಿತು. ನಾಯ್ಕಾಪಿನಿoದ ಆರಂಭವಾದ ಪ್ರತಿಭಟನಾ ಜಾಥಾಕ್ಕೆ ನೂರಾರು ಮಂದಿ ಸ್ಥಳೀಯರು ಭಾಗವಹಿಸಿದ್ದು, ಮಂಜೇಶ್ವರ ಶಾಸಕ A. K. M. Ashraf ಚಾಲನೆ ನೀಡಿದರು. ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಅನಂತಪುರ…

Read More

ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅಭಿನಂದನೆ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಮೆಸ್ಕಾಂ (ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ನಿಗಮ) ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ಅವರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಇಂಧನ ಸಚಿವರಾದ ಶ್ರೀ ಕೆ.ಜೆ. ಜಾರ್ಜ್ ಅವರನ್ನೂ ಭೇಟಿಯಾಗಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ರಾಜ್ಯದ ವಿದ್ಯುತ್ ಕ್ಷೇತ್ರದ ಅಭಿವೃದ್ಧಿ, ವಿದ್ಯುತ್ ಸರಬರಾಜಿನ ಗುಣಮಟ್ಟ ವೃದ್ಧಿ ಹಾಗೂ ಜನಸ್ನೇಹಿ ಸೇವೆಗಳ ಅನುಷ್ಠಾನ ಸೇರಿದಂತೆ ವಿವಿಧ ವಿದ್ಯುತ್ ಸಂಬಂಧಿತ ವಿಷಯಗಳ…

Read More

ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317D ಮೆಗಾ ಸೇವಾ ಯೋಜನೆಗೆ ಮತ್ತೊಂದು ಮೈಲುಗಲ್ಲು

ಮಂಗಳೂರು, ಜೂನ್ 9: ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317D ವತಿಯಿಂದ ಮೆಗಾ ಸೇವಾ ಯೋಜನೆಯ ಅಂಗವಾಗಿ ಅಕ್ಷಯಪಾತ್ರ ಫೌಂಡೇಶನ್‌ಗೆ ಫುಡ್ ಟ್ರಕ್ ಹಸ್ತಾಂತರಿಸುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಮಾಜಮುಖಿ ಕಾರ್ಯಕ್ರಮವು ಜೂನ್ 10ರಂದು ಬುಧವಾರ ಸಂಜೆ 5 ಗಂಟೆಗೆ ಮಂಗಳೂರಿನ ಬೆಂಜನಪದವಿನಲ್ಲಿರುವ ಅಕ್ಷಯಪಾತ್ರ ಫೌಂಡೇಶನ್ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಫೌಂಡೇಶನ್ (ಎಲ್‌ಸಿಐಎಫ್) ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಈ ಯೋಜನೆಯು ಸಮಾಜದ ಬಡ ಹಾಗೂ ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣ ಮತ್ತು ಪೌಷ್ಟಿಕ ಆಹಾರ ಒದಗಿಸುವ…

Read More

ಮೀನುಗಾರಿಕೆ ನಿಷೇಧ: ಎರಡು ತಿಂಗಳ ಮೌನಕ್ಕೆ ಜಾರಿದ ಮಂಗಳೂರು ಬಂದರು

ಮಂಗಳೂರು, ಜೂನ್ 9: ಸೂರ್ಯ ಉದಯಿಸುವುದಕ್ಕೂ ಮುನ್ನವೇ ಹರಾಜಿನ ಕೂಗು, ಬೋಟ್‌ಗಳ ಎಂಜಿನ್‌ಗಳ ಸದ್ದು, ವಾಹನಗಳ ದಟ್ಟಣೆ ಮತ್ತು ಕಾರ್ಮಿಕರ ಓಡಾಟದಿಂದ ಕಿಕ್ಕಿರಿದು ಕಾಣುತ್ತಿದ್ದ ಮಂಗಳೂರು ಮೀನುಗಾರಿಕಾ ಬಂದರು ಇದೀಗ ಎರಡು ತಿಂಗಳ ಮೌನಕ್ಕೆ ಜಾರಿದೆ. ವಾರ್ಷಿಕ ಮೀನುಗಾರಿಕೆ ಋತು ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಬಂದರಿನ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಜೆಟ್ಟಿ ಪ್ರದೇಶ ನೀರವ ನಿಶ್ಶಬ್ದಕ್ಕೆ ಸಾಕ್ಷಿಯಾಗಿದೆ. ರಾಜ್ಯ ಸರ್ಕಾರದ ಆದೇಶದಂತೆ ಜೂನ್ 1ರಿಂದ ಜುಲೈ 31ರವರೆಗೆ ಎರಡು ತಿಂಗಳ ಕಾಲ ಯಾಂತ್ರೀಕೃತ ಹಾಗೂ ಟ್ರಾಲ್ ಬೋಟ್‌ಗಳ ಮೀನುಗಾರಿಕೆಗೆ…

Read More
error: Content is protected !!