ಸಾಮಾಜಿಕ ಪಿಡುಕನ್ನು ಹೋಗಲಾಡಿಸುವ ಕನಕದಾಸರ ಬರವಣಿಗೆ ಇಂದಿಗೂ ಪ್ರಸ್ತುತ : ದ. ಕ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕನಕದಾಸ ಜಯಂತಿ ಆಚರಣೆಯು ಮಂಗಳೂರಿನ ತುಳುಭವನದಲ್ಲಿ ನಡೆಯಿತು . ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾದ ದರ್ಶನ್ ಹೆಚ್ ವಿ , ಸಾಹಿತ್ಯವನ್ನು ತಿಳಿಯುವುದು ತುಂಬಾನೇ ಮುಖ್ಯವಾಗಿರುತ್ತದೆ . ಅದರಲ್ಲಿ ನಾನಾ ಪ್ರಕಾರಗಳು ಬರುತ್ತದೆ . ಅವುಗಳಲ್ಲಿ ಒಂದು ಪ್ರಕಾರ ದಾಸ ಸಾಹಿತ್ಯ . ದಾಸ ಸಾಹಿತ್ಯವು ಕನ್ನಡ ಸಾಹಿತ್ಯ ಲೋಕಕ್ಕೆ…