ಸಾವಯವ, ಗುಡಿ ಕೈಗಾರಿಕೆಯ ಉತ್ಪನ್ನಗಳ “ಸಪ್ತಾಚೆ ಸಾಂತ್” ಶಾಸಕ ಕಾಮತ್ ಉದ್ಘಾಟನೆ
ಮಂಗಳೂರು: ಮಂಗಳೂರಿನ ವಿ.ಟಿ. ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಅಖಂಡ ಭಜನಾ ಸಪ್ತಾಹದ ಅಂಗವಾಗಿ ಗುಡಿ ಕೈಗಾರಿಕೆ, ಸಾವಯವ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಆಡಳಿತ ಮಂಡಳಿಯ ಆಶ್ರಯದಲ್ಲಿ, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಸಹಕಾರದಲ್ಲಿ ದೇವಳದ ಸನಿಹವಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಸಪ್ತಾಚೆ ಸಾಂತ್ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಸಪ್ತಾಚೆ ಸಾಂತ್ ಮೂಲಕ ಅಖಂಡ ಭಜನಾ…