ಸಾವಯವ, ಗುಡಿ ಕೈಗಾರಿಕೆಯ ಉತ್ಪನ್ನಗಳ “ಸಪ್ತಾಚೆ ಸಾಂತ್” ಶಾಸಕ ಕಾಮತ್ ಉದ್ಘಾಟನೆ

ಮಂಗಳೂರು: ಮಂಗಳೂರಿನ ವಿ.ಟಿ. ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಅಖಂಡ ಭಜನಾ ಸಪ್ತಾಹದ ಅಂಗವಾಗಿ ಗುಡಿ ಕೈಗಾರಿಕೆ, ಸಾವಯವ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಆಡಳಿತ ಮಂಡಳಿಯ ಆಶ್ರಯದಲ್ಲಿ, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಸಹಕಾರದಲ್ಲಿ ದೇವಳದ ಸನಿಹವಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಸಪ್ತಾಚೆ ಸಾಂತ್ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಸಪ್ತಾಚೆ ಸಾಂತ್ ಮೂಲಕ ಅಖಂಡ ಭಜನಾ…

Read More

ಮಂಜೇಶ್ವರ ಗ್ರಾಮ ಪಂಚಾಯತ್ ಡಿಜಿಟಲೀಕರಣ

ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತ್ ಡಿಜಿಟಲೀಕರಣಗೊಂಡ ದಾಖಲೆಗಳ ಹಸ್ತಾಂತರ ಮತ್ತು ಕಳೆದ 5 ವರ್ಷಗಳಲ್ಲಿ ಪಂಚಾಯತಿನಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ವೀಡಿಯೋ ಬಿಡುಗಡೆ ಹಾಗೂ ಲೈಫ್ ಭವನ ಪದ್ಧತಿಯ ನೂತನ ಫಲಾನುಭವಿಗಳಿಗೆ ಮಾಹಿತಿ ಕಾರ್ಯಕ್ರಮ ಮಂಜೇಶ್ವರ ಗೋವಿಂದ ಪೈ ಗಿಳಿವಿಂಡುನಲ್ಲಿ ಅದ್ದೂರಿಯಾಗಿ ನಡೆಯಿತು. ಮಂಜೇಶ್ವರ ಗ್ರಾಮ ಪಂಚಾಯತ್‌ನ ಆಡಳಿತಾತ್ಮಕ ಪಾರದರ್ಶಕತೆ, ದಕ್ಷತೆ ಮತ್ತು ಸಾರ್ವಜನಿಕ ಸೇವಾ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಡಿಜಿಟಲೀಕರಣಗೊಂಡ ದಾಖಲೆಗಳ ಹಸ್ತಾಂತರ…

Read More

ಇಸ್ಲಾಹಿ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಕೂಟ -2025 ಸಂಭ್ರಮ

ಮಂಗಳೂರು: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ, ಇಸ್ಲಾಹಿ ಆಂಗ್ಲ ಮಾಧ್ಯಮಶಾಲೆ ಉಳ್ಳಾಲ ವತಿಯಿಂದ ಉಳ್ಳಾಲ ಹೋಬಳಿ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ 14 ಮತ್ತು 17 ವಯೋಮಾನದ ಬಾಲಕ ಬಾಲಕಿಯರ ಕ್ರೀಡಾಕೂಟ -2025 ಮಂಗಳಾ ಕ್ರೀಡಾಂಗಣದಲ್ಲಿ ಬುಧವಾರ ನಡೆಯಿತು. ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ ಜ್ಞಾನೇಶ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡೆಯ ಉದ್ದೇಶ ನಮ್ಮ ದೇಹವನ್ನು ಬಲಿಷ್ಠಗೊಳಿಸುವುದು, ದೇಹ ಬಲಿಷ್ಟ…

Read More

ಸ್ವಾತಂತ್ರ ಕಿಚ್ಚು ಭಾರತದಲ್ಲಿ ಕಾವೇರಿದಾಗ ಆರ್ ಎಸ್ ಎಸ್ ಸಂಘವು ಕಬಡ್ಡಿ ಆಡ್ತಾ ಇತ್ತು : ಕೆಪಿಸಿಸಿ ರಾಜ್ಯ ವಕ್ತಾರರಾದ ಎಂ.ಜಿ ಹೆಗ್ಡೆ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಕಟ್ಟಡಗಳಲ್ಲಿ ಆರ್ ಎಸ್ ಎಸ್ ಸಂಘಟನೆಯು ಸರಕಾರದಿಂದ ಅನುಮತಿ ಪಡೆಯಲು ಹಿಂದೇಟು ಹಾಕುವುದು ಏಕೆ ಎಂದು ಕೆಪಿಸಿಸಿ ರಾಜ್ಯ ವಕ್ತಾರರಾದ ಎಂ.ಜಿ ಹೆಗ್ಡೆ ಪ್ರಶ್ನೆ ಮಾಡಿದರು. ಅವರು ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬ್ರಿಟಿಷ್ ಆಡಳಿತದ್ದಾಗ 1940 ರಲ್ಲಿ ಯಾವುದೇ ಸಂಘಟನೆಗಳು, ಪ್ಯಾರಾ ಮಿಲಿಟರಿ ಸಮವಸ್ತ್ರ ಬಳಕೆ, ಮಿಲಿಟರಿ ಕವಾಯಿತು. ಮಾಡುವುದನ್ನು ನಿರ್ಬಂಧ ಮಾಡಿ, ಆ ರೀತಿ ಚಟುವಟಿಕೆ ಮಾಡಲು ಲೈಸನ್ಸ್ ಪಡೆಯ ಬೇಕು ಎಂದು ಆದೇಶ ಮಾಡಿತ್ತು…

Read More

ಋತುಚಕ್ರ ರಜೆ ಘೋಷಣೆ ಹಿನ್ನೆಲೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರನ್ನು ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಿದ ಮಹಿಳಾ ನೌಕರರ ಸಂಘ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ವಾರ್ಷಿಕ 12 ಋತುಚಕ್ರ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು. ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಸಂಘದ ಅಧ್ಯಕ್ಷರಾದ ರೋಷಿನಿಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಶಶಿಕಲಾ, ಈ ನಿರ್ಧಾರಕ್ಕಾಗಿ ಧನ್ಯವಾದ ಅರ್ಪಿಸಿದರು. ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಇಂತಹ ತೀರ್ಮಾನ…

Read More

ಅಕ್ಟೋಬರ್ 31 ರಿಂದ ನವೆಂಬರ್ 2, 2025 ರವರೆಗೆ ಮಂಗಳೂರಿನಲ್ಲಿ ನಡೆಯಲಿರುವ ರೇಡಿಯೋಗ್ರಾಫರ್‌ಗಳು ಮತ್ತು ಇಮೇಜಿಂಗ್ ತಂತ್ರಜ್ಞರ ರಾಷ್ಟ್ರೀಯ ಸಮ್ಮೇಳನ

ಮಂಗಳೂರು: ಮಣಿಪಾಲ ಅಕಾಡೆಮಿ ಆಫ್ ಹೈಯ‌ರ್ ಎಜುಕೇಶನ್ (MAHE) ಅಡಿಯಲ್ಲಿ ಬರುವ ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು (KMC), ಅಕ್ಟೋಬರ್ 31 ರಿಂದ ನವೆಂಬರ್ 2, 2025 ರವರೆಗೆ ಮಂಗಳೂರಿನ ಡಾ. ಟಿ.ಎಂ.ಎ. ಪೈ ಯಲ್ಲಿ IMAGINE 2025 23 ನೇ ರಾಷ್ಟ್ರೀಯ ರೇಡಿಯೋಗ್ರಾಫರ್‌ಗಳು ಮತ್ತು ಇಮೇಜಿಂಗ್ ತಂತ್ರಜ್ಞರ ಸಮ್ಮೇಳನವನ್ನು ಆಯೋಜಿಸಲಿದೆ. ಕೆಎಂಸಿ ಮಂಗಳೂರಿನ ರೇಡಿಯೋ ಡಯಾಗೋಸಿಸ್ ಮತ್ತು ಇಮೇಜಿಂಗ್ ವಿಭಾಗವು ರಾಷ್ಟ್ರೀಯ ಭಾರತೀಯ ರೇಡಿಯೋಗ್ರಾಫರ್‌ಗಳ ಸಂಘ (SIR) ಸಹಯೋಗದೊಂದಿಗೆ ಆಯೋಜಿಸಿರುವ ಈ ಸಮ್ಮೇಳನವು ಭಾರತದಾದ್ಯಂತದ 700…

Read More

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಬೆಂಗಳೂರು : ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಮ್ಮ ಯುವ ಶಕ್ತಿ, ವಿದ್ಯಾರ್ಥಿ ಯುವಜನರ ಚೈತನ್ಯ…

Read More

ಕಾಸರಗೋಡು ಜಿಲ್ಲಾ ವಿಜ್ಞಾನೋತ್ಸವ : ಮಂಜೇಶ್ವರದ ಇಬ್ರಾಹಿಂ ಶಾಹಿದ್ ರಾಜ್ಯ ಮಟ್ಟಕ್ಕೆ ಆಯ್ಕೆ

ಮಂಜೇಶ್ವರ: ಮಂಜೇಶ್ವರ ಸಿರಾಜುಲ್ ಹುದಾ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಇಬ್ರಾಹಿಂ ಶಾಹಿದ್ ಎಚ್ 2025–26 ಶೈಕ್ಷಣಿಕ ವರ್ಷದ ಕಾಸರಗೋಡು ಜಿಲ್ಲಾ ಮಟ್ಟದ ಶಾಸ್ತ್ರೋತ್ಸವದಲ್ಲಿ ವೆಬ್‌ಪೇಜ್ ಡಿಸೈನಿಂಗ್ ವಿಭಾಗದಲ್ಲಿ ವಿಜಯ ಸಾಧಿಸಿ. ಇದೀಗ ಈ ಪೋರ ಕೇರಳ ರಾಜ್ಯ ಮಟ್ಟದ ಐಟಿ ಫೇರ್ ಗೆ ಆಯ್ಕೆಗೊಂಡಿದ್ದಾನೆ. ಮಂಜೇಶ್ವರ ಚೌಕಿ ನಿವಾಸಿ, ಸಮಾಜ ಸೇವಕ ಹಾಗೂ ದೃಶ್ಯ ಮಾಧ್ಯಮ ಕ್ಯಾಮರಾಮ್ಯಾನ್ ಮೊಹಮ್ಮದ್ ಹನೀಫ್ ಶಾರ್ಜಾ ಹಾಗೂ ಕದೀಜಾ ದಂಪತಿಗಳ ಪುತ್ರನಾದ ಇಬ್ರಾಹಿಂ ಶಾಹಿದ್, ಬಾಲ್ಯದಿಂದಲೇ ತಾಂತ್ರಿಕ ಕ್ಷೇತ್ರದ ಮೇಲೆ…

Read More

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್.ರಘುನಾಥ್ಜಿಲ್ಲಾ ಪ್ರತಿನಿಧಿ ನ್ಯಾಯವಾದಿ ಮಹೇಶ್ ಕಜೆ ಗೃಹ ಭೇಟಿ….!

ಪುತ್ತೂರು:ಕರ್ನಾಟಕ ಬ್ರಾಹ್ಮಣ ಸಮುದಾಯದ ಸಂಘಟನೆಯಾದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ಎಕೆಬಿಎಂಎಸ್)ದ ನೂತನ ಅಧ್ಯಕ್ಷ ಎಸ್.ರಘುನಾಥ್‌ರವರು ಅ.೨೫ರಂದು ಸಂಜೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಪ್ರತಿನಿಧಿ,ಪುತ್ತೂರು ಕಜೆ ಲಾ ಛೇಂಬರ‍್ಸ್‌ನ ಮುಖ್ಯಸ್ಥರಾಗಿರುವ ನ್ಯಾಯವಾದಿ ಮಹೇಶ್ ಕಜೆ ಅವರ ಮನೆಗೆ ಭೇಟಿ ನೀಡಿದರು.ಮಹೇಶ್ ಕಜೆ ಮತ್ತು ದೀಪಿಕಾ ಕಜೆ ದಂಪತಿ ಎಸ್.ರಘುನಾಥ್‌ರವರನ್ನು ಸ್ವಾಗತಿಸಿ ಶಾಲು, ಹೂಗುಚ್ಚ ನೀಡಿ ಸನ್ಮಾನಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಘುನಾಥ್ ಎಸ್.ಅವರು ಈ ಸಂದರ್ಭ ಮಾತನಾಡಿ, ಅಖಿಲ ಕರ್ನಾಟಕ ಮಹಾಸಭಾಕ್ಕೆ ಚುನಾವಣೆ…

Read More

ಅಡಿಕೆಗೆ ಹಳದಿ ರೋಗ ಬಾಧಿತ ಪ್ರದೇಶದಲ್ಲಿ ಪರ್ಯಾಯ ಬೆಳೆ ಬೆಳೆಸುವುದೇ ಸವಾಲು; ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶತರುದ್ರ ಸೇವೆಯಲ್ಲಿ ಪಾಲ್ಗೊಂಡ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಅವರು,ದೇವಳದ ಹೊರಾಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ,ಅಡಿಕೆ ವಿಚಾರವಾಗಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ ಚೌಹಾಣ್‌ ಅವರು ಉನ್ನತ ಮಟ್ಟದ ಸಭೆಯನ್ನು ಈಗಾಗಲೇ ನಡೆಸಿದ್ದಾರೆ. ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗದ ಸಮಸ್ಯೆಯನ್ನೂ ಸಭೆಯಲ್ಲಿ ಉಲ್ಲೇಖಿಸಲಾಗಿದೆ. ರೋಗ ಬಾಧಿತ ಪ್ರದೇಶದಲ್ಲಿ ಮತ್ತೆ ಅಡಿಕೆ ಬೆಳೆಯುವುದಕ್ಕೆ ಸಮಸ್ಯೆಯಿದ್ದು,ಪರಿಹಾರವಾಗಿ ಒನ್ ಟೈಮ್ ಪ್ಯಾಕೇಜ್ ಘೋಷಿಸಬೇಕು ಮತ್ತು ಪರ್ಯಾಯ ಬೆಳೆಯ ಬಗ್ಗೆ ಪ್ರಯತ್ನ ನಡೆಸಬೇಕೆಂಬ ಬೇಡಿಕೆಗಳಿವೆ….

Read More
error: Content is protected !!