ಜೋಡಿ ಕೊಲೆಗೆ ಬೆಚ್ಚಿ ಬಿದ್ದ ಮಂಜೇಶ್ವರ …! : ಮಗಳ ಹತ್ಯೆ ತಡೆಯಲು ಹೋದ ಚಿಕ್ಕಪ್ಪನ ಪ್ರಾಣ ಹಾರಿತು ….?

ಕಾಸರಗೋಡು:ಮಂಜೇಶ್ವರ ತಾಲೂಕಿನ ತೂಮಿನಾಡು ಪ್ರದೇಶದಲ್ಲಿ ನಡೆದ ಭೀಕರ ಘಟನೆಯಲ್ಲಿ, ವ್ಯಕ್ತಿಯೊಬ್ಬ ತನ್ನ ಹದಿಹರೆಯದ ಮಗಳನ್ನು ಚಾಕುವಿನಿಂದ ಕೊಂದಿದ್ದು, ಆ ದಾಳಿಯನ್ನು ತಡೆಯಲು ಯತ್ನಿಸಿದ ಚಿಕ್ಕಪ್ಪನೂ ಗಂಭೀರ ಗಾಯಗಳಿಂದ ಇದೀಗ ಮೃತಪಟ್ಟಿದ್ದಾರೆ. ಇದರಿಂದ ಪ್ರಕರಣ ಜೋಡಿ ಕೊಲೆಯಾಗಿ ಮಾರ್ಪಟ್ಟಿದೆ. ಸೋಮವಾರ ಸಂಜೆ ನಡೆದ ಈ ಘಟನೆಯಲ್ಲಿ, ಉಮ್ಮರ್ ಫಾರೂಕ್ ಎಂಬವರು ತಮ್ಮ ಪುತ್ರಿ ಕೆ.ಯು. ಮರಿಯಮತ್ ಜುಮೈಲಾ (18) ಅವರ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಈ ವೇಳೆ ದಾಳಿಯನ್ನು ತಡೆಯಲು ಮುಂದಾದ ಷೇಕುಂಞ (50) ಎಂಬವರು…

Read More

ತುಕ್ಕು ಹಿಡಿದ ಪಂಜರ, ಅಶುದ್ಧ ಪರಿಸರ – ಪಿಲಿಕುಳ ಮೃಗಾಲಯದ ಮೇಲೆ ಹೈಕೋರ್ಟ್ ಅಕ್ರೋಶ

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಪಿಳಿಕುಳ ನಿಸರ್ಗಧಾಮವೆಂದರೆ ಮಕ್ಕಳ ಅಚ್ಚುಮೆಚ್ಚಿನ ತಾಣ. ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಕರಾವಳಿಯ ಪ್ರಸಿದ್ಧ ಮೃಗಾಲಯದ ಅವ್ಯವವಸ್ಥೆ ಕಂಡು ಹೈ ಕೋರ್ಟ್ ನ್ಯಾಯಾಧೀಶರೇ ದಿಗ್ಭ್ರಮೆಗೊಂಡಿದ್ದಾರೆ.ತಕ್ಷಣ ಬಂದ್ ಮಾಡುವುದು ಒಳಿತು ಎಂದು ಹೈಕೋರ್ಟ್ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಇದೀಗ ಅಧಿಕಾರಿಗಳ ಬೇಜಾಬ್ದಾರಿಯಿಂದ ಮಂಗಳೂರಿನ ಪಿಲಿಕುಳ ಮೃಗಾಲಯಕ್ಕೆ ಸಂಕಷ್ಟ ಶುರುವಾಗಿದೆ. ಪಿಲಿಕುಳ ಮೃಗಾಲಯದಲ್ಲಿರುವ ಪ್ರಾಣಿಗಳ ಫೋಟೋ ನೋಡಿ ಹೈಕೋರ್ಟ್ ನ್ಯಾಯಧೀಶರು ಗರಂ ಆಗಿದ್ದಾರೆ. ಉದ್ಯಾನವನದ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಹೈಕೋರ್ಟ್ ಅಕ್ರೋಶ…

Read More

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ … !

ಮಂಗಳೂರು: “ಜಯಕಿರಣ ಫಿಲಂಸ್ ಲಾಂಛನದಲ್ಲಿ , ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಭುತವಾಗಿ ಸಿದ್ಧಗೊಂಡಿರುವ ನಾನ್‌ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ, ಈ ಸಿನಿಮಾವನ್ನು ಎಲ್ಲ ಮಲ್ಟಿಪ್ಲೆಕ್ಸ್‌ನಲ್ಲೂ ಕೇವಲ 99 ರೂ.ಗೆ ನೋಡಬಹುದಾಗಿದೆ. ದುಬಾರಿ ಟಿಕೆಟ್‌ ಕೊಟ್ಟು ಸಿನಿಮಾ ನೋಡಲು ಸಾಧ್ಯವಾಗದವರು ಇಂಥದ್ದೊಂದು ಸುಂದರ ಹಾಗೂ ಅತ್ಯುತ್ತಮ ಸಿನಿಮಾವನ್ನು ನೋಡದೆ ಇರಬಾರದು ಎಂಬ ಉದ್ದೇಶದಿಂದ ಕೇವಲ 99 ರೂ. ಟಿಕೆಟ್‌ ನಿಗದಿಪಡಿಸಿದ್ದು, ಇದು ತುಳುಚಿತ್ರರಂಗದಲ್ಲಿ…

Read More

ಎಸ್.ಆರ್. ಎಫ್.ಸಿ ಪಲ್ಲೇದಪಡ್ಪು ನೇತೃತ್ವದಲ್ಲಿ ಕ್ರಿಕೆಟ್ ಪಂದ್ಯಕೂಟ.

ಪಲ್ಲೇದಪಡ್ಪು: ಗ್ರಾಮೀಣ ಪ್ರದೇಶದ ಯುವಕರನ್ನು ಒಟ್ಟುಸೇರಿಕೊಂಡು ಕ್ರೀಡಾಸಕ್ತರ ಅಂಡರ್ ಆರ್ಮ್ ಪಿ ಪಿ ಎಲ್ ಕ್ರಿಕೆಟ್ ಪಂದ್ಯಕೂಟ ವರ್ಕಾಡಿ ಪಂಚಾಯತ್ ಮೈದಾನ ಸುಂಕದಕಟ್ಟೆಯಲ್ಲಿ ಜರಗಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಯುವ ಉದ್ಯಮಿ ಕಾರ್ತಿಕ್ ಎಂಟರ್ಪ್ರೈಸಸ್ ಮಾಲಕ ಪ್ರಕಾಶ್ ಪೊಯ್ಯತ್ತಬೈಲ್ ನೆರವೇರಿಸಿದರು. ಕ್ಲಬ್ ನ ಅಧ್ಯಕ್ಷರಾದ ವಜ್ರೇಶ್ ಕಣಿಯೂರುರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ರಾಜರಾಜೇಶ್ವರಿ ಭಜನಾ ಮಂಡಳಿ ಪಲ್ಲೇದಪಡ್ಪು ಇದರ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ,ಗೋಪಾಲ ಶೆಟ್ಟಿ ಬಗಂಬಿಲ,ರಮೇಶ್ ಆಚಾರ್ಯ,ರಾಜೇಶ್ ಪರಂದಳ,ಸುರೇಶ್,ಮನೋಜ್ ಶೆಟ್ಟಿ,ಚಂದ್ರ ಶೇಖರ ಪಜ್ವ ಮೊದಲಾದವರು ಉಪಸ್ಥಿತರಿದ್ದರು. ಸಂಜೆ ಜರಗಿದ…

Read More

ನರೇಗಾ ಬಚಾವೋ ಸಂಗ್ರಾಮ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕನ್ಯಾನದಲ್ಲಿ ಬ್ರಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಹೆಸರು ಹಾಗೂ ಅದರ ಮೂಲ ಸ್ವರೂಪವನ್ನು ಬದಲಾಯಿಸಿರುವ ಕ್ರಮವನ್ನು ಖಂಡಿಸಿ, ಕನ್ಯಾನ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ “ನರೇಗಾ ಬಚಾವೋ ಸಂಗ್ರಾಮ” ದಡಿ ಕನ್ಯಾನ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಇವತ್ತು ಬ್ರಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ಮಜೀದ್ ಕನ್ಯಾನ ಸ್ವಾಗತಿಸಿ ಮಾತನಾಡಿದರು.ಮುಖ್ಯ ಭಾಷಣ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ…

Read More

ಅಂಗಡಿ, ಹೋಟೆಲ್, ಕಂಪೆನಿ, ಕಚೇರಿ ಸಹಿತ ಎಲ್ಲ ಕಡೆಗಳಲ್ಲೂ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪೆನಿ, ಕಚೇರಿಗಳು, ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಫೆ 2 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ…

Read More

ಮಧೂರು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜ್ಞಾನಿ ಶ್ಯಾನುಭೋಗ ಅವರಿಗೆ ಸನ್ಮಾನ

ಮಧೂರು: ಮಧೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜ್ಞಾನಿ ಶ್ಯಾನುಭೋಗ್ ಅವರಿಗೆ ಮಧೂರು ಸಮೀಪದ ಬೈನಡ್ಕದ ಯುವ ಶಕ್ತಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬೈನಡ್ಕದಲ್ಲಿರುವ ಯುವ ಶಕ್ತಿ ಕ್ಲಬ್ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರಾಗಿ ಸಲ್ಲಿಸುತ್ತಿರುವ ಸೇವೆಯನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಯುವ ಶಕ್ತಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀ ಚಂದ್ರ ಪಾಟಾಳಿ, ಗೌರವ ಅಧ್ಯಕ್ಷರಾದ ಶ್ರೀ ರಾಜೇಶ್ ಹೊಳ್ಳ, ಸಂಯೋಜಕರಾದ ಶ್ರೀ ಅಖಿಲೇಶ್,…

Read More

ರಸ್ತೆ ಸುರಕ್ಷತಾ ಜಾಥಾ….. !

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ, ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಇಲಾಖೆ ಮಂಗಳೂರು ಹಾಗೂ ದಿ ಭಾರತ್ ಸೈಟ್ಸ್ ಮತ್ತು ಗೈಡ್ಸ್ ಇವರ ಸಂಯುಕ್ತ ಆಶ್ರಯದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ–2026ರ ಅಂಗವಾಗಿ ಇಂದು ರಸ್ತೆ ಸುರಕ್ಷತಾ ಜಾಥಾ ಕಾರ್ಯಕ್ರಮವು ನಗರದ ಪುರಭವನದಿಂದ ಸ್ಟೇಟ್ ಬ್ಯಾಂಕ್ ವರೆಗೆ ಜಾಥಾ ನಡೆಯಿತು. ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ…

Read More

ಫೆ.7 ಮತ್ತು 8ರಂದು ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳ : ಐಕಳ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್‌ ಶೆಟ್ಟಿ

ಮಂಗಳೂರು: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳವು ಫೆ.7 ಮತ್ತು 8ರಂದು ನಡೆಯಲಿದ್ದು ಇದರ ಪೂರ್ವಬಾವಿ ಸಿದ್ದತೆಗಳು ಬಹುತೇಕ ಪೂರ್ಣಗೊಂಡಿದೆ. ಐಕಳ ಕಂಬಳದಲ್ಲಿ ಜೂಜು ನಿಯಂತ್ರಣ ಹಾಗೂ ಸಮಯಪಾಲನೆಗೆ ವಿಶೇಷ ಒತ್ತನ್ನು ನೀಡಲಾಗುವುದು ಎಂದು ಕಂಬಳ ಅಸೋಸಿಯೇಶನ್ ಮತ್ತು ಐಕಳ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್‌ ಶೆಟ್ಟಿ ತಿಳಿಸಿದರು. ಅವರು ನಗರದ ಖಾಸಗಿ ಹೊಟೇಲ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಂಬಳದಲ್ಲಿ ಜೂಜು ಸಕ್ರಿಯವಾಗಿರುವ ಬಗ್ಗೆ ಈಗಾಗಲೇ ದೂರುಗಳು ಬಂದಿದೆ. ಐಕಳ ಕಂಬಳದಲ್ಲಿ…

Read More

ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ-2026ಸ್ವಾಗತ ಸಮಿತಿ ರೂಪೀಕರಣಕನ್ನಡ ತಾಯಿಯ ನಿಸ್ವಾರ್ಥ ಸೇವೆಗೆ ಸಂಪೂರ್ಣವಾಗಿ ಸಹಕರಿಸಿ -ಡಾ| ಕೆ.ಎನ್. ವೆಂಕಟ್ರಮಣ ಹೊಳ್ಳ

ನುಳ್ಳಿಪ್ಪಾಡಿ: ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಗ್ರಂಥಾಲಯದಿಂದ ಸ್ಥಾಪಿತವಾಗಿ ಕಾಸರಗೋಡು ಜಿಲ್ಲೆಯಲ್ಲದೆ ಕರ್ನಾಟಕದ ದ.ಕ ಜಿಲ್ಲೆ, ಕೊಡಗು, ಮೈಸೂರು, ಕೋಲಾರ, ಗದಗ, ಚಿತ್ರದುರ್ಗ, ಕೊಪ್ಪಳ, ಉಡುಪಿ, ಬೆಂಗಳೂರು ಜಿಲ್ಲೆಗಳಲ್ಲಿ ಕಾರ್ಯಾಚರಿಸುತ್ತಿರುವ ಕೇರಳ ರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಅಂಗವಾಗಿ ಕೇಂದ್ರ ಸಮಿತಿ ಕಾಸರಗೋಡು ಕನ್ನಡ ಭವನದ ಪ್ರಾಯೋಜಕತ್ವದಲ್ಲಿ ಇದೇ ಬರುವ 22.02.2026 ಭಾನುವಾರದಂದು ಕನ್ನಡ ಭವನದ “ಚುಟುಕು ಯುಗಾಚಾರ್ಯ ಎಂ.ಜಿ.ಆರ್. ಅರಸ್” ವೇದಿಕೆಯಲ್ಲಿ ನಡೆಯುವ “ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ-2026ರ ಸ್ವಾಗತ…

Read More
error: Content is protected !!