ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ ಹಾನಿಯಾದರೆ ಇಂಜಿನಿಯರ್ ಗಳೇ ಹೊಣೆ – ಯು.ಟಿ ಖಾದರ್

ಮಂಗಳೂರು, ಜೂನ್ 9: ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ U. T. Khader ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆಗಳ ಕುರಿತು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಸ್ತೆಗಳಲ್ಲಿ ನೀರು ನಿಲ್ಲುವ ಸಮಸ್ಯೆಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆ ಸಮನ್ವಯದಿಂದ ನಿರ್ವಹಿಸಬೇಕು ಎಂದು ತಿಳಿಸಿದರು. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು…

Read More

ರಾಜ್ಯಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ; ಜೂನ್ 9ರಿಂದ ಪರಿಷ್ಕೃತ ದರ ಜಾರಿ

ಉಡುಪಿ, ಜೂನ್ 8: ರಾಜ್ಯಾದ್ಯಂತ ಖಾಸಗಿ ಬಸ್‌ಗಳ ಪ್ರಯಾಣ ದರವನ್ನು ಶೇ.5ರಿಂದ 8ರಷ್ಟು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರವು ಜೂನ್ 9ರಿಂದ ಜಾರಿಗೆ ಬರಲಿದೆ ಎಂದು ರಾಜ್ಯ ಖಾಸಗಿ ಮಜಲು ವಾಹನ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ನಗರದ ಡಯಾನ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೀಸೆಲ್ ದರ ಏರಿಕೆ, ವಾಹನಗಳ ನಿರ್ವಹಣಾ ವೆಚ್ಚ, ಬಿಡಿಭಾಗಗಳ ಬೆಲೆ ಹಾಗೂ ನೌಕರರ ವೇತನ ಹೆಚ್ಚಳದಿಂದ ಬಸ್ ಉದ್ಯಮ ತೀವ್ರ ಆರ್ಥಿಕ ಒತ್ತಡಕ್ಕೆ…

Read More

ಮೋದಿ ಸರಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ – ಸುಕುಮಾರ್ ತೊಕ್ಕೋಟು

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿಗಳು ಕಾರ್ಪೊರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆಯೇ ಹೊರತು ಈ ದೇಶದ ದುಡಿಯುವ ವರ್ಗದಲ್ಲ. ಇದರಿಂದಾಗಿ ಸಮಾಜದಲ್ಲಿ ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕ ವರ್ಗ ತೀವ್ರ ಸಂಕಷ್ಟಕ್ಕೊಳಗಾಗಿದೆ ಹಾಗೂ ಬದುಕು ವಿನಾಶದತ್ತ ಸಾಗುತ್ತಿದೆ ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೋಟುರವರು ಅಭಿಪ್ರಾಯಪಟ್ಟರು. ಅವರು ಕಳೆದ ಎರಡು ದಿನಗಳಿಂದ ಕುತ್ತಾರ್ ನಲ್ಲಿರುವ ಮುನ್ನೂರು ಯುವಕ ಮಂಡಲದಲ್ಲಿ ಜರುಗಿದ CPIM ಉಳ್ಳಾಲ ವಲಯ ಮಟ್ಟದ ಅಧ್ಯಯನ ಶಿಬಿರವನ್ನು ಸಮಾರೋಪಗೊಳಿಸುತ್ತಾ ಈ…

Read More

ನ್ಯಾಷನಲ್ ಸಬ್ -ಜೂನಿಯರ್ ಗೋಲ್ಡ್ ಮೆಡೆಲ್ ಪಡೆದ ಶಿವಾನಿಗೆ ಕನ್ನಡ ಭವನದ ಡಾ ವಾಮನ್ ರಾವ್ ಬೇಕಲ್ ಅಭಿನಂದನೆ

ರಾಮಕ್ಷತ್ರಿಯ ಸಮಾಜದ ಶಿವಾನಿ ಕಿರಣ್ ರಾವ್ ನ್ಯಾಷನಲ್ 20ಕಿಲೋ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಗೋಲ್ಡ್ ಮೆಡಲ್ ಪಡೆದು ಸಮಾಜಕ್ಕೆ ಹಾಗೂ ಕುಟುಂಬ ಕ್ಕೆ ಕೀರ್ತಿ ತಂದಿರುವುದು ಹೆಮ್ಮೆಯ ವಿಷಯ. ಇವರು ಕೆ. ಡಿ. ಎಫ್. ಕರಾಟೆ ಅಂಡ್ ಫಿಟ್ನೆಸ್ ಅಕಾಡೆಮಿ, ಕುಂದಾಪುರ ಇದರ ವಿದ್ಯಾರ್ಥಿಯಾಗಿದ್ದಾರೆ. ಇವರೀಗೆ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ದ ಹೆಮ್ಮೆಯ ಗೌರವ ಅಭಿನಂದನೆಗಳು. ಶಿವಾನಿಯ ಅಪ್ರತಿಮ ಸಾಧನೆ ಉಳಿದವರೇಗೆ ಪ್ರೇರಣೆ ಯಾಗಲಿ ಎಂದು ಕನ್ನಡ ಭವನದ ಸ್ಥಾಪಕ…

Read More

ಜೆಇಇ ಅಡ್ವಾನ್ಸ್‌ನಲ್ಲಿ AIR 79: ಮಂಗಳೂರಿನ ವಿಶ್ರುತ್ ಕೃಷ್ಣ ಭಟ್‌ಗೆ ಶಾಸಕ ವೇದವ್ಯಾಸ ಕಾಮತ್ ಅಭಿನಂದನೆ

ಜೆಇಇ ಅಡ್ವಾನ್ಸ್ 2026ರಲ್ಲಿ ಆಲ್ ಇಂಡಿಯಾ(ಎಐಆರ್) 79ನೇ ರ‍್ಯಾಂಕ್ ಮತ್ತು ಜೆಇಇ ಮೈನ್ಸ್ 2026ರಲ್ಲಿ ಆಲ್ ಇಂಡಿಯಾ 335ನೇ ರ‍್ಯಾಂಕ್ ಗಳಿಸಿದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಂದೂರ್ ವೆಲ್ ನಿವಾಸಿ ಬಿ.ವಿಶ್ರುತ್‌ ಕೃಷ್ಣ ಆರ್.ಭಟ್‌ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿ ಸನ್ಮಾನಿಸಿದರು. ಸುರತ್ಕಲ್ ಎನ್‌ಐಟಿಕೆ ಯಲ್ಲಿ ಪ್ರಾಧ್ಯಾಪಕರಾಗಿರುವ ಡಾ.ಬಡೆಕೈ ರಾಮಚಂದ್ರ ಭಟ್ ಮತ್ತು ಮಂಗಳೂರಿನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ, ಡಾ.ಪೂರ್ಣಿಮಾ ಆರ್.ಭಟ್ ದಂಪತಿಗಳ ಪುತ್ರನಾಗಿರುವ ಈ…

Read More

​ಮಂಜೇಶ್ವರದಲ್ಲಿ ಕಳಪೆ ಕಾಮಗಾರಿಯ ಅಟ್ಟಹಾಸ: 6 ತಿಂಗಳಲ್ಲೇ ಕಿತ್ತುಬಂದ 14 ಲಕ್ಷದ ರಸ್ತೆ

​ಮಂಜೇಶ್ವರ: ಮಂಜೇಶ್ವರ ಬ್ಲಾಕ್ ಪಂಚಾಯತ್ ಅನುದಾನದಲ್ಲಿ ಸುಮಾರು 14 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ‘ಮಂಜೇಶ್ವರ ಓಲ್ಡ್ ಎಂ.ಸಿ.ಸಿ’ ಕಾಂಕ್ರೀಟ್ ರಸ್ತೆ, ಇಂಟರ್‌ಲಾಕ್ ಮತ್ತು ಚರಂಡಿ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದೀಗ ಮೊದಲ ಮಾನ್ಸೂನ್ ಮಳೆಗೆ ತನ್ನ ಅಸಲಿ ಬಣ್ಣವನ್ನು ಹೊರಹಾಕಿದೆ.​ಕಾಮಗಾರಿ ಮುಗಿದು ಕೇವಲ 6 ತಿಂಗಳು ಕಳೆಯುವಷ್ಟರಲ್ಲೇ ರಸ್ತೆಯ ಕಾಂಕ್ರೀಟ್ ಜಲ್ಲಿಕಲ್ಲುಗಳು ಸಂಪೂರ್ಣವಾಗಿ ಕೊಚ್ಚಿಹೋಗಿವೆ. ಚರಂಡಿಯ ಅಕ್ಕಪಕ್ಕದ ಭಾಗಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ರಸ್ತೆ ಯಾವುದೇ ಕ್ಷಣದಲ್ಲೂ ಕುಸಿಯುವ ಭೀತಿಯಲ್ಲಿದೆ. ಈ ಅವ್ಯವಸ್ಥೆಯನ್ನು ಕಂಡು ಸಾರ್ವಜನಿಕರು…

Read More

ಮುಂಗಾರು ಮಳೆ ಹಿನ್ನೆಲೆ: ಪುತ್ತೂರಿನಲ್ಲಿ ಎನ್‌ಡಿಆರ್‌ಎಫ್ ತಂಡ ಮೊಕ್ಕಾಂ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡಿರುವ ಹಿನ್ನೆಲೆ ಹಾಗೂ ಭಾರೀ ಮಳೆಯ ಮುನ್ಸೂಚನೆಯ ಕಾರಣ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವನ್ನು ಜಿಲ್ಲೆಗೆ ನಿಯೋಜಿಸಲಾಗಿದೆ. ಬೆಂಗಳೂರಿನಿಂದ ಆಗಮಿಸಿರುವ ಎನ್‌ಡಿಆರ್‌ಎಫ್ ತಂಡವು ಪುತ್ತೂರಿನಲ್ಲಿ ಮೊಕ್ಕಾಂ ಹೂಡಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿದೆ. ಒಟ್ಟು 30 ಸದಸ್ಯರನ್ನು ಒಳಗೊಂಡಿರುವ ಈ ವಿಶೇಷ ತಂಡವು ಪ್ರವಾಹ, ಭೂಕುಸಿತ, ಕಟ್ಟಡ ಕುಸಿತ, ರಾಸಾಯನಿಕ ದುರಂತ, ವಿಕಿರಣ ಸೋರಿಕೆ ಸೇರಿದಂತೆ ವಿವಿಧ ರೀತಿಯ ವಿಪತ್ತು ಸಂದರ್ಭಗಳಲ್ಲಿ ರಕ್ಷಣಾ ಮತ್ತು…

Read More

ಹಿರಿಯ ಶಿಕ್ಷಕಿ ವೀಣಾ ಡಿಸೋಜ ನಿಧನಶಿಕ್ಷಣ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿದ್ದ ಶಿಕ್ಷಕಿಯ ಅಗಲಿಕೆಗೆ ಸಂತಾಪ

ಮುನ್ನೂರು, ಜೂ. 8: ರಾಣಿಪುರ ನಿವಾಸಿ ಹಾಗೂ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕಿ ವೀಣಾ ಡಿಸೋಜಾ (49) ಅವರು ಜೂನ್ 7ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಅವರು ವಿದ್ಯಾರ್ಥಿಗಳು, ಪೋಷಕರು ಹಾಗೂ ಸಹೋದ್ಯೋಗಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ನಿಧನವು ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸ್ಥಳೀಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಪತಿ ಅರ್ಬನ್ ಡಿಸೋಜ, ಪುತ್ರ ವಿನ್ಸ್ಟನ್ ಬ್ರಯಾನ್ ಡಿಸೋಜ ಹಾಗೂ ಅಪಾರ ಬಂಧು-ಬಳಗವನ್ನು…

Read More

ಜೂನ್ 13ರಂದು ಕೆರೆಕಟ್ಟೆ ಸಂತ ಅಂತೋನಿಯವರ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ, ನಿರ್ಗತಿಕರ ಆಶ್ರಮದ ಉದ್ಘಾಟನೆ

ಉಡುಪಿ: ಸಿದ್ದಾಪುರ ಹೊಸಂಗಡಿ ಸಮೀಪದ ಕೆರೆಕಟ್ಟೆ ಸಂತ ಅಂತೋನಿಯವರ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಹಾಗೂ ನಿರ್ಗತಿಕರಿಗಾಗಿ ನಿರ್ಮಿಸಲಾಗಿರುವ ಆಶ್ರಮದ ಉದ್ಘಾಟನೆ ಮತ್ತು ಆಶೀರ್ವಚನ ಕಾರ್ಯಕ್ರಮ ಜೂನ್ 13 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಜರುಗಲಿದೆ.‘ಬಡವರ ಸೇವೆ ಕ್ರಿಸ್ತರ ಸೇವೆ’ ಹಬ್ಬದ ಸಂದೇಶ ವಾಕ್ಯವಾಗಿದ್ದು, ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ನೂತನ ಆಶ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಲಿದ್ದು ಬಳಿಕ ಮಹೋತ್ಸವದ ಬಲಿಪೂಜೆಯ ನೇತೃತ್ವ ವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಕನ್ನಡ ಭಾಷೆಯಲ್ಲಿ…

Read More

ಅಂಬಾಗಿಲು: ರಸ್ತೆ ಬದಿಯ ಮಣ್ಣು ಕುಸಿತ: ಮಣ್ಣಿನಲ್ಲಿ ಸಿಲುಕಿದ ತಂಪುಪಾನೀಯ‌ ಸಾಗಾಟದ ವಾಹನ

ಉಡುಪಿ: ರಸ್ತೆ ಬದಿಯ ಮಣ್ಣು ಕುಸಿದ ಪರಿಣಾಮ ತಂಪು ಪಾನೀಯ ಸಾಗಾಟದ ವಾಹನವೊಂದು ಮಣ್ಣಿನಲ್ಲಿ ಸಿಲುಕಿಕೊಂಡ ಘಟನೆ ಅಂಬಾಗಿಲು–ಮಣಿಪಾಲ ರಸ್ತೆಯ ಸುಜಾತಾ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಶನಿವಾರ ನಡೆದಿದೆ. ಮಣ್ಣಿನಲ್ಲಿ ಸಿಲುಕಿದ ವಾಹನವನ್ನು ಸ್ಥಳೀಯರ ಸಹಾಯದಿಂದ ಹೊರತೆಗೆಯಲಾಯಿತು. ಚರಂಡಿ ಕಾಮಗಾರಿಗಾಗಿ ರಸ್ತೆ ಬದಿಯಲ್ಲಿ ಹೊಂಡವನ್ನು ತೋಡಲಾಗಿದ್ದು, ಕಾಮಗಾರಿ ಬಳಿಕ ಅದನ್ನು ಸಮರ್ಪಕವಾಗಿ ಮುಚ್ಚದಿರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇತ್ತೀಚಿನ ಮಳೆಯಿಂದ ನೀರು ಹರಿದು ಮಣ್ಣು ಸಡಿಲಗೊಂಡಿದ್ದು, ರಸ್ತೆಯ ಅಂಚಿನಲ್ಲಿ ದೊಡ್ಡ ಗುಂಡಿ ನಿರ್ಮಾಣವಾಗಿದೆ. ರಸ್ತೆಯ ಅಂಚಿನ…

Read More
error: Content is protected !!