ಕಾಸರಗೋಡು ಆಡಳಿತ ಕೇಂದ್ರಗಳಿಗೆ ಬಾಂಬ್ ಬೆದರಿಕೆ: ತನಿಖೆ ತೀವ್ರ

ಕಾಸರಗೋಡು: ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಶುಕ್ರವಾರ ಸಂಜೆ ಬಂದ ಬಾಂಬ್ ಬೆದರಿಕೆ ಇ-ಮೇಲ್ ಹಿನ್ನೆಲೆಯಲ್ಲಿ ಪೊಲೀಸ್‌, ಡಾಗ್ ಸ್ಕ್ವಾಡ್ ಹಾಗೂ ಬಾಂಬ್ ಸ್ಕ್ವಾಡ್ ತಂಡಗಳು ಸಿವಿಲ್ ಸ್ಟೇಷನ್‌ನಲ್ಲಿ ವ್ಯಾಪಕ ತಪಾಸಣೆ ನಡೆಸಿದವು. ಪರಿಶೀಲನೆಯಲ್ಲಿ ಬಾಂಬ್‌ಗೆ ಸಂಬಂಧಿಸಿದ ಯಾವುದೇ ಸುಳಿವುಗಳು ಪತ್ತೆಯಾಗದಿದ್ದರೂ, ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಎಚ್ಚರಿಕೆಯಿಂದ ಮುಂದುವರಿದಿದ್ದಾರೆ. ಉಕ್ರೇನ್‌ನಿಂದ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಸಂದೇಶದ ಮೂಲವನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಇತ್ತೀಚೆಗೆ ಕಾಸರಗೋಡು ನ್ಯಾಯಾಲಯ ಸಂಕೀರ್ಣಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ…

Read More

ಅನಂತಪುರ ಕೈಗಾರಿಕಾ ಪ್ರದೇಶದ ಪ್ರೈವುಡ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ

ಮಂಜೇಶ್ವರ: ಅನಂತಪುರ ಕೈಗಾರಿಕಾ ಪ್ರದೇಶದಲ್ಲಿರುವ ಮಾರ್ಕ್ ವುಡ್ ಪ್ರೈವುಡ್ ಕಾರ್ಖಾನೆಯಲ್ಲಿ ಇಂದು ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಪೇರಾಲ್ ಕಣ್ಣೂರಿನ ಅಬ್ದುಲ್ ರಹಿಮಾನ್ ಅವರಿಗೆ ಸೇರಿದ ಈ ಕಾರ್ಖಾನೆಯಲ್ಲಿ ಬೆಳಗಿನ ಜಾವ ಸುಮಾರು ನಾಲ್ಕು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಗೆ ಮುನ್ನ ನಿನ್ನೆ ರಾತ್ರಿ ಸುಮಾರು 12 ಗಂಟೆಯವರೆಗೆ ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸಿ ಬಳಿಕ ಮನೆಗೆ ತೆರಳಿದ್ದರು. ಬೆಂಕಿಯ ತೀವ್ರತೆ ಹೆಚ್ಚಿದ ಹಿನ್ನೆಲೆ ಕಾಸರಗೋಡು, ಉಪ್ಪಳ, ಕಾಞಂಗಾಡು ಸೇರಿದಂತೆ ವಿವಿಧ ಕಡೆಗಳಿಂದ ಎಂಟು…

Read More

ಮಂಜೇಶ್ವರ: ವಸತಿಗೃಹ ದಾಳಿ–ಬೆದರಿಕೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಪೊಲೀಸ್ ವಶ

ಮಂಜೇಶ್ವರ: ವಸತಿಗೃಹಕ್ಕೆ ಅತಿಕ್ರಮಿಸಿ ನುಗ್ಗಿ ಯುವಕ ಹಾಗೂ ಗೆಳತಿಯ ಅರೆನಗ್ನ ವೀಡಿಯೋ–ಫೋಟೋ ಚಿತ್ರೀಕರಿಸಿ ಬೆದರಿಸಿ ಹಣ ಮತ್ತು ಮೊಬೈಲ್ ಅಪಹರಿಸಿದ ಪ್ರಕರಣದಲ್ಲಿ ಮತ್ತೊಬ್ಬನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಡಾಜೆ ಕಾಜೂರ್ ಮಾಲಿ ನಿವಾಸಿ ಟಿ.ಕೆ. ಮೊಹಮ್ಮದ್ ಫೈಸಲ್ (42) ಬಂಧಿತ ಆರೋಪಿ. ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಮಂಜೇಶ್ವರ ಪಿರಾರಮೂಲೆ ನಿವಾಸಿ ಕೆ.ಎ. ಹಾರಿಸ್ (40) ಬಂಧಿತನಾಗಿದ್ದ. ಜನವರಿ 14ರಂದು ನಡೆದ ಘಟನೆಯಲ್ಲಿ ನಾಲ್ಕು ಮಂದಿಯ ತಂಡ…

Read More

ಮಂಜೇಶ್ವರ: ಕಾರು–ಬೈಕ್ ಡಿಕ್ಕಿ; ಇಬ್ಬರು ಯುವಕರು ಗಂಭೀರ ಗಾಯ

ಮಂಜೇಶ್ವರ : ಕಾರು ಹಾಗೂ ಬೈಕ್ ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.ಬೈಕ್ ಸವಾರ ಬೇಳ ಪೆರಿಯಡ್ಕ ನಿವಾಸಿ ಶಶಿಕುಮಾರ್ (24) ಹಾಗೂ ಕಿಣ್ಣಂಗಾರಿನ ಕಿರಣ್ ರಾಜ್ (27) ಎಂಬಿವರನ್ನು ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಬಳೆ ಕೃಷ್ಣ ಭವಣ್ ಹೋಟೆಲಿನ ಸಮೀಪದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಬ್ಬರು ಸಂಚರಿಸುತ್ತಿದ್ದ ಬೈಕ್ ಗೆ ಎದುರಿನಿಂದ ಆಗಮಿಸಿದ ಕಾರು ಡಿಕ್ಕಿ ಹೊಡೆದಿದೆ.ರಸ್ತೆಗೆಸೆಯಲ್ಪಟ್ಟ ಇಬ್ಬರ ತಲೆಗೂ ಗಂಭೀರ ಗಾಯ ಉಂಟಾಗಿದೆ.

Read More

ಕನ್ನಡ ಗ್ರಾಮದಲ್ಲಿ ಕಾಸರಗೋಡು ಗೋ-ಕುಟೀರದ ನಿರ್ಮಾಣಕ್ಕೆ ಚಾಲನೆ

ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕರಾದ ಶಿವರಾಮ ಕಾಸರಗೋಡು ಅವರ 60ನೇ ಜನ್ಮ ವರ್ಷಾಚರಣೆಯನ್ನು ಗೋ-ಸೇವೆಯ ಮೂಲಕ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಮಹತ್ವದ ಧಾರ್ಮಿಕ ಕಾರ್ಯಕ್ಕೆ ಚಾಲನೆ ನೀಡಲಾಯಿತು. 2025ರ ನವೆಂಬರ್ 4ರಂದು ಕಾಸರಗೋಡು ಕನ್ನಡ ಗ್ರಾಮದ ಆವರಣದಲ್ಲಿ ನಿರ್ಮಾಣಗೊಳ್ಳಲಿರುವ **“ಕಾಸರಗೋಡು ಗೋ-ಕುಟೀರ”**ಕ್ಕೆ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಭೂಮಿ ಪೂಜೆ ನೆರವೇರಿಸಿ, ಗೋ-ಕುಟೀರ…

Read More

ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು.ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ ಶೆಟ್ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕದ ಜನತೆಯ ಆಹಾರ ಅಭಿರುಚಿಯು ಬಹಳ ವಿಶಿಷ್ಟವಾಗಿದೆ. ತಿಂಡಿ ತಿನಿಸುಗಳ ಬಗ್ಗೆ ಇಲ್ಲಿನ ಜನರ ಪ್ರೀತಿಯು ಆಹಾರ ಸಂಸ್ಕೃತಿಯನ್ನು ಎತ್ತರಕ್ಕೆ ಕೊಂಡೊಯ್ದಿದೆ. ವೈವಿಧ್ಯಮಯ ಖಾದ್ಯಗಳಿಗೆ ಕರಾವಳಿಯು ಹೆಸರುವಾಸಿಯಾಗಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ದರ್ಶನ್ ಎಚ್…

Read More

ಗಾಂಧಿ ಹೆಸರಿನಲ್ಲಿ ಬಿಜೆಪಿ ರಾಜಕೀಯ, ಚಿಂತನೆಗಳನ್ನು ನಿತ್ಯ ಕೊಲ್ಲುತ್ತಿದೆ: ರಮಾನಾಥ ರೈ ಆರೋಪ

ಮಂಗಳೂರು: ಪ್ರಧಾನಿ ಮೋದಿ ಅವರು ವಿದೇಶಗಳಿಗೆ ಹೋದಾಗ ಮಹಾತ್ಮ ಗಾಂಧಿ ಅವರನ್ನು ಕೊಂಡಾಡುತ್ತಾರೆ. ಆದರೆ ತಮ್ಮದೇ ದೇಶದಲ್ಲಿ ಗಾಂಧಿ ಹೆಸರಿಗೆ ಅಪಚಾರ ಮಾಡುತ್ತಾರೆ. ಇದು ಹಿಪೊಕ್ರೆಸಿಯ ಒಂದು ಭಾಗ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.ಶುಕ್ರವಾರ ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬಳಿಕ ಅವರು ಮಾತನಾಡುತ್ತಿದ್ದರು. ಗಾಂಧೀಜಿಯವರು ಅಹಿಂಸಾ ಮಾರ್ಗದ ಮೂಲಕ ಬ್ರಿಟಿಷರ ವಿರುದ್ಧ ಹೋರಾಡಿದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ…

Read More

ಬ್ಯಾಗ್ ಕಳ್ಳತನ: ಅಂತರ್ ಜಿಲ್ಲೆ ಕಳ್ಳನ ಬಂಧನ

ಮಂಗಳೂರು: ಬಸ್ ನಿಲ್ದಾಣಗಳಲ್ಲಿ ಒಟ್ಟು 11 ಬ್ಯಾಗ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲೆ ಕಳ್ಳನನ್ನು ಮಂಗಳೂರು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ದಿನಾಂಕ: 23-01-2026 ರಂದು ಸಂಜೆ ಸಮಯ ಸುಮಾರು 7-00 ಗಂಟೆಗೆ ಪ್ರಾಯಸ್ಥ ಇಬ್ಬರು ಮಹಿಳೆಯರು ಮತ್ತು ಹಿರಿಯ ನಾಗರಿಕರು ಬೆಂಗಳೂರಿಗೆ ಹೋಗುವ ಬಸ್ಸಿನಲ್ಲಿ ಸುಮಾರು 45 ಗ್ರಾಂ ಚಿನ್ನಾಭರಣ ಹಾಗೂ ರೂ.20,000 ನಗದು ಹಣ ಇರುವ ಟ್ರಾಯಲಿ ಬ್ಯಾಗ್ ನ್ನು ಇಟ್ಟು ಕುಳಿತುಕೊಂಡಿದ್ದ…

Read More

ಫೆ. 6ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾಸರಗೋಡಿನ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ‘ಗಣ್ಯರೆಡೆಗೆ ಬೊಂಬೆ ನಡಿಗೆ’ ಪರಿಕಲ್ಪನೆಗೆ ಚಾಲನೆ

ತೊಕ್ಕೊಟ್ಟು:ಕಾಸರಗೋಡಿನ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ‘ಗಣ್ಯರೆಡೆಗೆ ಬೊಂಬೆ ನಡಿಗೆ’ ಪರಿಕಲ್ಪನೆಗೆ ಇದೇ ಫೆಬ್ರವರಿ 2ರಂದು ಸಂಜೆ 6 ಗಂಟೆಗೆ ಧರ್ಮಸ್ಥಳ ಶ್ರೀ ಕ್ಷೇತ್ರದ ಮುಂಭಾಗದಲ್ಲಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ವಿದ್ಯುಕ್ತ ಚಾಲನೆ ನೀಡಲಿದ್ದು ಅದೇ ಸಂದರ್ಭದಲ್ಲಿ ಯಕ್ಷಗಾನ ಬೊಂಬೆಯಾಟ ಪ್ರದರ್ಶನವನ್ನು ಆಯೋಜಿಸಿರುವುದಾಗಿ ಕಾಸರಗೋಡು ಶ್ರೀ ಗೋಪಾಲಕೃಷ್ಣ ಬೊಂಬೆಯಾಟ ಸಂಘದ ನಿರ್ದೇಶಕ, ಪ್ರಧಾನ ಸೂತ್ರಧಾರಿ ಕೆ. ವಿ. ರಮೇಶ ತಿಳಿಸಿದ್ದಾರೆ. ತೊಕ್ಕೊಟ್ಟು ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ತೆಂಕುತಿಟ್ಟು ಯಕ್ಷಗಾನವನ್ನು ಬೊಂಬೆಯಾಟದ ಮೂಲಕ ಪ್ರದರ್ಶಿಸುತ್ತಿರುವ ಕಾಸರಗೋಡಿನ…

Read More

ಕುದ್ಮುಲ್ ರಂಗರಾವ್ ಪುಣ್ಯಸ್ಮರಣೆ: ಬಾಬುಗುಡ್ಡೆಯಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾದಿಂದ ಪುಷ್ಪ ನಮನ

ದಲಿತೋದ್ಧಾರಕ, ಸಾಮಾಜಿಕ ಸುಧಾರಣೆಯ ಹರಿಕಾರ ಕುದ್ಮುಲ್ ರಂಗರಾವ್ ರವರ ಪುಣ್ಯಸ್ಮರಣೆಯ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಎಸ್ ಸಿ ಮೋರ್ಚಾ ವತಿಯಿಂದ ಬಾಬುಗುಡ್ಡೆಯಲ್ಲಿರುವ ಅವರ ಸಮಾಧಿಗೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ದಕ್ಷಿಣ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಹಿರಿಯ ನಾಯಕರಾದ ಮೋನಪ್ಪ ಭಂಡಾರಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ, ಮಂಡಲದ ಯುವ ಮೋರ್ಚಾ ಅಧ್ಯಕ್ಷರಾದ ಅಶ್ವಿತ್ ಕೊಟ್ಟಾರಿ, ನಿಕಟ ಪೂರ್ವ ಕಾರ್ಪೊರೇಟರ್ ಗಳಾದ ಭರತ್ ಕುಮಾರ್, ವೀಣಾ…

Read More
error: Content is protected !!