ನಡೆದಾಡುವ ದಾರಿಯಿಲ್ಲದೆ ನರಕಯಾತನೆ ಅನುಭವಿಸುತ್ತಿರುವ ಬಾವುಟಿ ಮೂಲೆ ಸುರುಮತ್ತೋಡ್ ನಿವಾಸಿಗಳು
ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತು ವ್ಯಾಪ್ತಿಯ 17ನೇ ವಾರ್ಡ್ನ ಬಾವುಟಿ ಮೂಲೆ ಸುರುಮತ್ತೋಡ್ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 10 ಕುಟುಂಬಗಳ ಬದುಕು ಇಂದು ಆಡಳಿತದ ನಿರ್ಲಕ್ಷ್ಯದ ಸಂಕೇತವಾಗಿ ಮಾರ್ಪಟ್ಟಿದೆ. ಮೂಲಭೂತ ಸೌಲಭ್ಯವೆನಿಸುವ ನಡೆಯಲು ಸರಿಯಾದ ದಾರಿಯೇ ಇಲ್ಲದ ಸ್ಥಿತಿಯಲ್ಲಿ ಈ ಕುಟುಂಬಗಳು ದಿನನಿತ್ಯದ ಜೀವನವನ್ನು ಕಳೆಯುವಂತಾಗಿದೆ. ಈ ಪ್ರದೇಶದಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಜೀವ ಪಣಕ್ಕಿಡಬೇಕಾದ ಸ್ಥಿತಿ ಎದುರಿಸುತ್ತಿದ್ದಾರೆ. ಗರ್ಭಿಣಿಯರು ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ತೆರಳುವುದು ಅಸಾಧ್ಯಕ್ಕೆ ಸಮಾನವಾಗಿದ್ದು, ವೃದ್ಧರು ಹಾಗೂ ಭಿನ್ನಚೇತನರು ಮನೆಯೊಳಗೆ…