ಧರ್ಮಸ್ಥಳ ಪ್ರಕರಣ ಅಸ್ಥಿಪಂಜರಕ್ಕೆ ಸೀಮಿತ ಮಾಡದೆ ದೌರ್ಜನ್ಯದ ದೃಷ್ಠಿಯಲ್ಲಿ ನೋಡಬೇಕಾಗಿದೆ: ಪತ್ರಕರ್ತ ನವೀನ್ ಸೂರಿಂಜೆ ಹೇಳಿಕೆ .
ಉಡುಪಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಚಿನ್ನಯ್ಯ ತನ್ನ ದೂರನ್ನು ಯಾಕೆ ವಾಪಾಸ್ಸು ಪಡೆದುಕೊಂಡರು ಮತ್ತು ಅದರಿಂದ ಯಾಕೆ ಹಿಂದಕ್ಕೆ ಸರಿದರು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಅದರ ಹಿಂದಿನ ಕೈಗಳು ಬಯಲು ಆಗುತ್ತದೆ. ಈ ಇಡೀ ಪ್ರಕರಣವನ್ನು ಬುರುಡೆ, ಅಸ್ಥಿಪಂಜರಕ್ಕೆ ಮಾತ್ರ ಸ್ಥೀಮಿತ ಗೊಳಿಸದೆ ಭೂಮಿ, ಮೈಕ್ರೋ ಫೈನಾನ್ಸ್ ದೌರ್ಜನ್ಯ, ಜಮೀನ್ದಾರಿ ಅದೃಷ್ಟ ಸರಕಾರದ ದೌರ್ಜನ್ಯದ ಹಿನ್ನೆಲೆಯಲ್ಲಿ ನೋಡಬೇಕಾಗಿದೆ ಎಂದು ಪತ್ರಕರ್ತ ನವೀನ್ ಸೂರಿಂಜೆ ಹೇಳಿದ್ದಾರೆ. ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಉಡುಪಿ ಜಿಲ್ಲೆ…